Homeಕರೋನಾ ತಲ್ಲಣನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

ನಿರುದ್ಯೋಗಿಗಳ ಬೆನ್ನಿಗೆ ನಿಂತ ನಟ ಸೋನು ಸೂದ್: ಇ-ಆಟೋ ಹಂಚಲು ನಿರ್ಧಾರ

’ಜನರ ಬೇಡಿಕೆಗಳನ್ನು ಈಡೇರಿಸುವುದಕ್ಕಿಂತಲೂ ಅವರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಹೆಚ್ಚು ಮುಖ್ಯ ಎಂದು ನಾನು ನಂಬುತ್ತೇನೆ’

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ನಿಯಂತ್ರಣ ಮಾಡಲು ಏಕಾಏಕಿ ಲಾಕ್‌ಡೌನ್ ಘೋಷಿಸಿದ್ದ ಕೇಂದ್ರ ಸರ್ಕಾರದ ಕ್ರಮದಿಂದ ನಿರ್ಗತಿಕರಾದ ಲಕ್ಷಾಂತರ ಜನರ ಪಾಲಿಗೆ ಆಪತ್ಬಾಂದವರಾಗಿದ್ದು ನಟ ಸೋನು ಸೂದ್. ಈಗ ಮತ್ತೊಂದು ಕಾರ್ಯಕ್ಕೆ ಕೈ ಹಾಕಿದ್ದು, ನಿರುದ್ಯೋಗಿಗಳಿಗೆ ಇ-ಆಟೋಗಳನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ.

ಖುದ್ ಕಮಾವೋ ಘರ್​ ಚಲಾವೋ (ನೀವೇ ಗಳಿಸಿ ಮನೆ ನಡೆಸಿ) ಎಂಬ ಹೆಸರಿನಲ್ಲಿ ಹೊಸದೊಂದು ಯೋಜನೆ ಆರಂಭಿಸಲು ಮುಂದಾಗಿರುವ ಸೋನು ಸೂದ್, ಲಾಕ್​ಡೌನ್ ಸಮಯದಲ್ಲಿ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾದವರಿಗೆ ಎಲೆಕ್ಟ್ರಾನಿಕ್ ಆಟೋಗಳನ್ನ ನೀಡಲು ಮುಂದಾಗಿದ್ದಾರೆ.

ಇ- ಆಟೋಗಳ ಮೂಲಕ ನಿರುದ್ಯೋಗಿಗಳು ಸ್ವ ಉದ್ಯೋಗಿಗಳಾಗಲಿದ್ದು ತಮ್ಮ ಮನೆ ನಡೆಸಲು ತಾವೇ ದುಡಿಯಬಹುದು. ಈ ಮೂಲಕ ಅವರಿಗೆ ಸಹಾಯವಾಗಲಿದೆ ಎಂದು ಈ ಯೋಜನೆ ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

View this post on Instagram

 

“ಕಳೆದ ಕೆಲವು ತಿಂಗಳುಗಳಿಂದ ನಾನು ಜನರಿಂದ ಸಾಕಷ್ಟು ಪ್ರೀತಿಯನ್ನು ಪಡೆದುಕೊಂಡಿದ್ದೇನೆ. ಅದು ಅವರಿಗಾಗಿ ಮುಂದುವರಿಯಲು ನನಗೆ ಪ್ರೇರಣೆ ನೀಡಿದೆ. ಆದ್ದರಿಂದ, ನಾನು ’ಖುದ್ ಕಮಾವೋ ಘರ್ ಚಾಲಾವೋ’ ಯೋಜನೆ ಆರಂಭಿಸಿದ್ದೇನೆ ಎಂದು 47 ವರ್ಷದ ನಟ ಹೇಳಿದ್ದಾರೆ.

“ಜನರ ಬೇಡಿಕೆಗಳನ್ನು ಈಡೇರಿಸುವುದಕ್ಕಿಂತಲೂ ಅವರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಹೆಚ್ಚು ಮುಖ್ಯ ಎಂದು ನಾನು ನಂಬುತ್ತೇನೆ. ಈ ಯೋಜನೆ ಅವರನ್ನು ಸ್ವಾವಲಂಬಿಗಳಾಗಿ ಮಾಡುವ ಮೂಲಕ ಮತ್ತೆ ತಮ್ಮ ಕಾಲುಗಳ ಮೇಲೆ ನಿಲ್ಲಲು ಸಹಾಯ ಮಾಡುತ್ತದೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೋನು ಸೂದ್ ನಮ್ಮ ಪಾಲಿಗೆ ದೇವರಿದ್ದಂತೆ: ಟ್ರಾಕ್ಟರ್ ಉಡುಗೊರೆ ಪಡೆದ ರೈತನ ಕೃತಜ್ಞತೆ

ಈ ವರ್ಷದ ಆರಂಭದಲ್ಲಿ, ಸೋನು ಸೂದ್ ಅವರು ಪ್ರವಾಸಿ ರೋಜ್​ಗಾರ್ ಆ್ಯಪ್ ಬಿಡುಗಡೆ ಮಾಡಿದ್ದರು. ಇದರಿಂದ ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕ ಹೊಡೆತದಿಂದ ಕೆಲಸ ಕಳೆದುಕೊಂಡವರಲ್ಲಿ 50,000 ಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಿತು. ಪ್ರವಾಸಿ ರೋಜ್​ಗಾರ್ ಆ್ಯಪ್, ಅನೇಕ ಕಂಪನಿಗಳೊಂದಿಗೆ ಸಂಪರ್ಕದಲ್ಲಿದ್ದು,ಕಂಪನಿಗಳಲ್ಲಿ ಖಾಲಿ ಇರುವ ಕೆಲಸದ ಬಗ್ಗೆ ಮಾಹಿತಿ ನೀಡುತ್ತದೆ.

ಲಾಕ್‌ಡೌನ್ ಸಂಕಷ್ಟದಲ್ಲಿ ತೊಂದರೆಗೊಳಗಾಗಿದ್ದ ವಲಸೆ ಕಾರ್ಮಿಕರಿಗೆ ನಟ ಸೋನುಸೂದ್ ಆಹಾರ ವಿತರಿಸಿದ್ದರು. ಬಸ್‌ಗಳು, ರೈಲುಗಳು ಮತ್ತು ಚಾರ್ಟರ್ಡ್ ವಿಮಾನಗಳ ಮೂಲಕ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ತಲುಪಿಸಿದ್ದರು. ಇಷ್ಟೇ ಅಲ್ಲದೆ ಉತ್ತಮ ಜೀವನೋಪಾಯಕ್ಕಾಗಿ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ನಿಸ್ವಾರ್ಥವಾಗಿ ಸಹಾಯ ಮಾಡಿದ್ದಕ್ಕಾಗಿ ನಟ ಸೋನು ಸೂದ್ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ.


ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...