Homeಮುಖಪುಟಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು ಎಂದು ವಿಜಯ್ ಸೇತುಪಥಿ ಉಲ್ಲೇಖಿಸಿದ್ದಾರೆ.

- Advertisement -
- Advertisement -

ಕಾಶ್ಮೀರ ಜನತೆಯ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ತೀವ್ರವಾಗಿ ಖಂಡಿಸಿದ್ದಾರೆ.

‘ಎಸ್‌ಬಿಎಸ್ ಆಸ್ಟ್ರೇಲಿಯಾ ತಮಿಳು’ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಅವರು, “ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು. ನಿಮ್ಮ ಮನೆಯ ವ್ಯವಹಾರಗಳಲ್ಲಿ ನಾನು ಹಸ್ತಕ್ಷೇಪ ಮಾಡಬಹುದೇ? ನೀವು ಅಲ್ಲಿ ವಾಸಿಸುವವರು… ನಾನು ನಿಮ್ಮ ಬಗ್ಗೆ ಕಾಳಜಿ ವಹಿಸಬಹುದು, ಆದರೆ ನನ್ನ ನಿರ್ಧಾರಗಳನ್ನು ನಿಮ್ಮ ಮೇಲೆ ಹೇರಲು ಸಾಧ್ಯವಿಲ್ಲ ಅಲ್ಲವೇ? ಕಾಳಜಿ ತೋರುವುದು ಬೇರೆ, ತಲೆಹಾಕುವುದು ಬೇರೆ. ಇವೆರಡೂ ಬೇರೆ ಬೇರೆಯೆಂದು ಕೇಂದ್ರ ಸರ್ಕಾರಕ್ಕೆ ಗೊತ್ತಿಲ್ಲವೇ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೆಲ್ಬೋರ್ನ್ 2019 ರ ಭಾರತೀಯ ಚಲನಚಿತ್ರೋತ್ಸವದಲ್ಲಿ ಇತ್ತೀಚೆಗೆ ತಮಿಳು ಚಿತ್ರ ‘ಸೂಪರ್ ಡಿಲಕ್ಸ್’ ಗಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಪಡೆದ ನಟ, ಕಾಶ್ಮೀರದ ಬಗ್ಗೆ ತಾನು ಓದಿದ ವರದಿಗಳು ತನಗೆ ತುಂಬಾ ನೋವು ತಂದಿದೆ ಎಂದಿದ್ದಾರೆ. ಕಾಶ್ಮೀರದ ಹೊರಗಿನವರು ಕಾಶ್ಮೀರದ ಬಗ್ಗೆ ಕಾಳಜಿ ವಹಿಸಬಹುದು ಆದರೆ ಜಮ್ಮು ಮತ್ತು ಕಾಶ್ಮೀರದ ಪ್ರದೇಶದಲ್ಲಿನ ವ್ಯವಹಾರಗಳ ಮೇ ಮತ್ತು ಅದರ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ತಿಳಿಸಿದ್ದಾರೆ.

ಭಾನುವಾರ ಚೆನ್ನೈನಲ್ಲಿ ನಟ ರಜನಿಕಾಂತ್ ಮಾಡಿದ ಭಾಷಣದಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ-ಷಾ ಜೋಡಿಯನ್ನು ಅಭಿನಂದಿಸುತ್ತಾ ಎನ್‌ಡಿಎ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿದ ಬೆನ್ನಲ್ಲೇ ವಿಜಯ್ ಸೇತುಪತಿ ಅವರು ಈ ನಿರ್ಧಾರವನ್ನು ಖಂಡಿಸಿದ್ದಾರೆ.

ನಟ ರಜನಿಕಾಂತ್ ಅವರು, “ನಿಮ್ಮ ಮಿಷನ್ ಕಾಶ್ಮೀರ ಕಾರ್ಯಾಚರಣೆಗೆ ನಿಜವಾಗಿಯೂ ನನ್ನ ಹೃತ್ಪೂರ್ವಕ ಅಭಿನಂದನೆಗಳು, ಸರ್. ನೀವು ಅದನ್ನು ನಡೆಸಿದ ರೀತಿ, ಹ್ಯಾಟ್ಸ್ ಆಫ್, ವಿಶೇಷವಾಗಿ ನೀವು ಸಂಸತ್ತಿನಲ್ಲಿ ಮಾಡಿದ ಭಾಷಣ, ಅದ್ಭುತ ಸರ್, ಅದ್ಭುತ. ಎಂದು ಮೋದಿ ಅಮಿತ್ ಶಾರನ್ನು ಕೊಂಡಾಡಿದ್ದರು.

ಹಾಗೆಯೇ ಮತ್ತೊರ್ವ ಖ್ಯಾತ ನಟ ಕಮಲ್ ಹಾಸನ್ ಸೇರಿದಂತೆ ಹಲವರು “ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂತೆಗೆದುಕೊಳ್ಳುವಿಕೆ ಮತ್ತು ವಿಭಜನೆಯನ್ನು ಘೋಷಿಸುವ ಮೊದಲು ಕಾಶ್ಮೀರಿ ನಾಯಕರನ್ನು ಗೃಹಬಂಧನದಲ್ಲಿರಿಸುವುದು ಮತ್ತು ಸಂವಹನ ಮಾರ್ಗಗಳನ್ನು ಕಡಿತಗೊಳಿಸಿರುವುದರ ಬಗ್ಗೆ ಅನೇಕರು ಟೀಕಿಸಿದ್ದಾರೆ.

ಕಳೆದ ವಾರ ಸಂಸತ್ತಿನಲ್ಲಿ ನಡೆದ ಕ್ರಮವನ್ನು ತಮಿಳುನಾಡಿನ ಆಡಳಿತ ಪಕ್ಷ ಎಐಎಡಿಎಂಕೆ ಸ್ವಾಗತಿಸಿದರೆ, ವಿರೋಧ ಪಕ್ಷದ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಇದನ್ನು ತೀವ್ರವಾಗಿ ಖಂಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

    • Please let me know how many more years we should keep article 370? So far 60 years situation in J&K is not improved, then y should we take different chance?

  1. Modi is right.that is not only Kashmir internal issue.the issue is Jammu people and ladak people.ladak is fight for there rights from the freedom to till now no one talking ……… …..
    Vijay sethupathi don’t know what is really going on there simply he stiing reading book and telling……First he listen ladak Mp speech in Rajyasabha how that people happy that UT .

  2. ೬೦-೭೦ ವರ್ಷಗಳಿಂದ ಕಾಶ್ಮೀರವನ್ನು ಉಗ್ರಗಾಮಿಗಳ ಸ್ವರ್ಗವನ್ನಾಗಿಸಿದ್ದು ಸಾಕು, ಇನ್ನಾದರೂ ವೋಟ್ ಬ್ಯಾಂಕ್ ರಾಜಕಾರಣವನ್ನು ಬಿಟ್ಟು ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣಗೊಳಿಸುವುದು ನಮ್ಮ ಆದ್ಯತೆ ಆದರೆ ಇಷ್ಟು ವರ್ಷ ಹುತಾತ್ಮ ರಾದ ಯೋಧರ ಮತ್ತು ಕಾಶ್ಮೀರಿಗರ ತ್ಯಾಗಕ್ಕೆ ಅರ್ಥ ಬರಬಹುದು. ಆಂತರಿಕ ದೇಶದ್ರೋಹಕ್ಕೆ ಧಿಕ್ಕಾರ.

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...