Homeಮುಖಪುಟಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು ಎಂದು ವಿಜಯ್ ಸೇತುಪಥಿ ಉಲ್ಲೇಖಿಸಿದ್ದಾರೆ.

- Advertisement -
- Advertisement -

ಕಾಶ್ಮೀರ ಜನತೆಯ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ತೀವ್ರವಾಗಿ ಖಂಡಿಸಿದ್ದಾರೆ.

‘ಎಸ್‌ಬಿಎಸ್ ಆಸ್ಟ್ರೇಲಿಯಾ ತಮಿಳು’ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಅವರು, “ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು. ನಿಮ್ಮ ಮನೆಯ ವ್ಯವಹಾರಗಳಲ್ಲಿ ನಾನು ಹಸ್ತಕ್ಷೇಪ ಮಾಡಬಹುದೇ? ನೀವು ಅಲ್ಲಿ ವಾಸಿಸುವವರು… ನಾನು ನಿಮ್ಮ ಬಗ್ಗೆ ಕಾಳಜಿ ವಹಿಸಬಹುದು, ಆದರೆ ನನ್ನ ನಿರ್ಧಾರಗಳನ್ನು ನಿಮ್ಮ ಮೇಲೆ ಹೇರಲು ಸಾಧ್ಯವಿಲ್ಲ ಅಲ್ಲವೇ? ಕಾಳಜಿ ತೋರುವುದು ಬೇರೆ, ತಲೆಹಾಕುವುದು ಬೇರೆ. ಇವೆರಡೂ ಬೇರೆ ಬೇರೆಯೆಂದು ಕೇಂದ್ರ ಸರ್ಕಾರಕ್ಕೆ ಗೊತ್ತಿಲ್ಲವೇ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೆಲ್ಬೋರ್ನ್ 2019 ರ ಭಾರತೀಯ ಚಲನಚಿತ್ರೋತ್ಸವದಲ್ಲಿ ಇತ್ತೀಚೆಗೆ ತಮಿಳು ಚಿತ್ರ ‘ಸೂಪರ್ ಡಿಲಕ್ಸ್’ ಗಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಪಡೆದ ನಟ, ಕಾಶ್ಮೀರದ ಬಗ್ಗೆ ತಾನು ಓದಿದ ವರದಿಗಳು ತನಗೆ ತುಂಬಾ ನೋವು ತಂದಿದೆ ಎಂದಿದ್ದಾರೆ. ಕಾಶ್ಮೀರದ ಹೊರಗಿನವರು ಕಾಶ್ಮೀರದ ಬಗ್ಗೆ ಕಾಳಜಿ ವಹಿಸಬಹುದು ಆದರೆ ಜಮ್ಮು ಮತ್ತು ಕಾಶ್ಮೀರದ ಪ್ರದೇಶದಲ್ಲಿನ ವ್ಯವಹಾರಗಳ ಮೇ ಮತ್ತು ಅದರ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ತಿಳಿಸಿದ್ದಾರೆ.

ಭಾನುವಾರ ಚೆನ್ನೈನಲ್ಲಿ ನಟ ರಜನಿಕಾಂತ್ ಮಾಡಿದ ಭಾಷಣದಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ-ಷಾ ಜೋಡಿಯನ್ನು ಅಭಿನಂದಿಸುತ್ತಾ ಎನ್‌ಡಿಎ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿದ ಬೆನ್ನಲ್ಲೇ ವಿಜಯ್ ಸೇತುಪತಿ ಅವರು ಈ ನಿರ್ಧಾರವನ್ನು ಖಂಡಿಸಿದ್ದಾರೆ.

ನಟ ರಜನಿಕಾಂತ್ ಅವರು, “ನಿಮ್ಮ ಮಿಷನ್ ಕಾಶ್ಮೀರ ಕಾರ್ಯಾಚರಣೆಗೆ ನಿಜವಾಗಿಯೂ ನನ್ನ ಹೃತ್ಪೂರ್ವಕ ಅಭಿನಂದನೆಗಳು, ಸರ್. ನೀವು ಅದನ್ನು ನಡೆಸಿದ ರೀತಿ, ಹ್ಯಾಟ್ಸ್ ಆಫ್, ವಿಶೇಷವಾಗಿ ನೀವು ಸಂಸತ್ತಿನಲ್ಲಿ ಮಾಡಿದ ಭಾಷಣ, ಅದ್ಭುತ ಸರ್, ಅದ್ಭುತ. ಎಂದು ಮೋದಿ ಅಮಿತ್ ಶಾರನ್ನು ಕೊಂಡಾಡಿದ್ದರು.

ಹಾಗೆಯೇ ಮತ್ತೊರ್ವ ಖ್ಯಾತ ನಟ ಕಮಲ್ ಹಾಸನ್ ಸೇರಿದಂತೆ ಹಲವರು “ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂತೆಗೆದುಕೊಳ್ಳುವಿಕೆ ಮತ್ತು ವಿಭಜನೆಯನ್ನು ಘೋಷಿಸುವ ಮೊದಲು ಕಾಶ್ಮೀರಿ ನಾಯಕರನ್ನು ಗೃಹಬಂಧನದಲ್ಲಿರಿಸುವುದು ಮತ್ತು ಸಂವಹನ ಮಾರ್ಗಗಳನ್ನು ಕಡಿತಗೊಳಿಸಿರುವುದರ ಬಗ್ಗೆ ಅನೇಕರು ಟೀಕಿಸಿದ್ದಾರೆ.

ಕಳೆದ ವಾರ ಸಂಸತ್ತಿನಲ್ಲಿ ನಡೆದ ಕ್ರಮವನ್ನು ತಮಿಳುನಾಡಿನ ಆಡಳಿತ ಪಕ್ಷ ಎಐಎಡಿಎಂಕೆ ಸ್ವಾಗತಿಸಿದರೆ, ವಿರೋಧ ಪಕ್ಷದ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಇದನ್ನು ತೀವ್ರವಾಗಿ ಖಂಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

    • Please let me know how many more years we should keep article 370? So far 60 years situation in J&K is not improved, then y should we take different chance?

  1. Modi is right.that is not only Kashmir internal issue.the issue is Jammu people and ladak people.ladak is fight for there rights from the freedom to till now no one talking ……… …..
    Vijay sethupathi don’t know what is really going on there simply he stiing reading book and telling……First he listen ladak Mp speech in Rajyasabha how that people happy that UT .

  2. ೬೦-೭೦ ವರ್ಷಗಳಿಂದ ಕಾಶ್ಮೀರವನ್ನು ಉಗ್ರಗಾಮಿಗಳ ಸ್ವರ್ಗವನ್ನಾಗಿಸಿದ್ದು ಸಾಕು, ಇನ್ನಾದರೂ ವೋಟ್ ಬ್ಯಾಂಕ್ ರಾಜಕಾರಣವನ್ನು ಬಿಟ್ಟು ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣಗೊಳಿಸುವುದು ನಮ್ಮ ಆದ್ಯತೆ ಆದರೆ ಇಷ್ಟು ವರ್ಷ ಹುತಾತ್ಮ ರಾದ ಯೋಧರ ಮತ್ತು ಕಾಶ್ಮೀರಿಗರ ತ್ಯಾಗಕ್ಕೆ ಅರ್ಥ ಬರಬಹುದು. ಆಂತರಿಕ ದೇಶದ್ರೋಹಕ್ಕೆ ಧಿಕ್ಕಾರ.

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...