Homeಮುಖಪುಟಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು ಎಂದು ವಿಜಯ್ ಸೇತುಪಥಿ ಉಲ್ಲೇಖಿಸಿದ್ದಾರೆ.

- Advertisement -
- Advertisement -

ಕಾಶ್ಮೀರ ಜನತೆಯ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ತೀವ್ರವಾಗಿ ಖಂಡಿಸಿದ್ದಾರೆ.

‘ಎಸ್‌ಬಿಎಸ್ ಆಸ್ಟ್ರೇಲಿಯಾ ತಮಿಳು’ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಅವರು, “ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು. ನಿಮ್ಮ ಮನೆಯ ವ್ಯವಹಾರಗಳಲ್ಲಿ ನಾನು ಹಸ್ತಕ್ಷೇಪ ಮಾಡಬಹುದೇ? ನೀವು ಅಲ್ಲಿ ವಾಸಿಸುವವರು… ನಾನು ನಿಮ್ಮ ಬಗ್ಗೆ ಕಾಳಜಿ ವಹಿಸಬಹುದು, ಆದರೆ ನನ್ನ ನಿರ್ಧಾರಗಳನ್ನು ನಿಮ್ಮ ಮೇಲೆ ಹೇರಲು ಸಾಧ್ಯವಿಲ್ಲ ಅಲ್ಲವೇ? ಕಾಳಜಿ ತೋರುವುದು ಬೇರೆ, ತಲೆಹಾಕುವುದು ಬೇರೆ. ಇವೆರಡೂ ಬೇರೆ ಬೇರೆಯೆಂದು ಕೇಂದ್ರ ಸರ್ಕಾರಕ್ಕೆ ಗೊತ್ತಿಲ್ಲವೇ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೆಲ್ಬೋರ್ನ್ 2019 ರ ಭಾರತೀಯ ಚಲನಚಿತ್ರೋತ್ಸವದಲ್ಲಿ ಇತ್ತೀಚೆಗೆ ತಮಿಳು ಚಿತ್ರ ‘ಸೂಪರ್ ಡಿಲಕ್ಸ್’ ಗಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಪಡೆದ ನಟ, ಕಾಶ್ಮೀರದ ಬಗ್ಗೆ ತಾನು ಓದಿದ ವರದಿಗಳು ತನಗೆ ತುಂಬಾ ನೋವು ತಂದಿದೆ ಎಂದಿದ್ದಾರೆ. ಕಾಶ್ಮೀರದ ಹೊರಗಿನವರು ಕಾಶ್ಮೀರದ ಬಗ್ಗೆ ಕಾಳಜಿ ವಹಿಸಬಹುದು ಆದರೆ ಜಮ್ಮು ಮತ್ತು ಕಾಶ್ಮೀರದ ಪ್ರದೇಶದಲ್ಲಿನ ವ್ಯವಹಾರಗಳ ಮೇ ಮತ್ತು ಅದರ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ತಿಳಿಸಿದ್ದಾರೆ.

ಭಾನುವಾರ ಚೆನ್ನೈನಲ್ಲಿ ನಟ ರಜನಿಕಾಂತ್ ಮಾಡಿದ ಭಾಷಣದಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ-ಷಾ ಜೋಡಿಯನ್ನು ಅಭಿನಂದಿಸುತ್ತಾ ಎನ್‌ಡಿಎ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿದ ಬೆನ್ನಲ್ಲೇ ವಿಜಯ್ ಸೇತುಪತಿ ಅವರು ಈ ನಿರ್ಧಾರವನ್ನು ಖಂಡಿಸಿದ್ದಾರೆ.

ನಟ ರಜನಿಕಾಂತ್ ಅವರು, “ನಿಮ್ಮ ಮಿಷನ್ ಕಾಶ್ಮೀರ ಕಾರ್ಯಾಚರಣೆಗೆ ನಿಜವಾಗಿಯೂ ನನ್ನ ಹೃತ್ಪೂರ್ವಕ ಅಭಿನಂದನೆಗಳು, ಸರ್. ನೀವು ಅದನ್ನು ನಡೆಸಿದ ರೀತಿ, ಹ್ಯಾಟ್ಸ್ ಆಫ್, ವಿಶೇಷವಾಗಿ ನೀವು ಸಂಸತ್ತಿನಲ್ಲಿ ಮಾಡಿದ ಭಾಷಣ, ಅದ್ಭುತ ಸರ್, ಅದ್ಭುತ. ಎಂದು ಮೋದಿ ಅಮಿತ್ ಶಾರನ್ನು ಕೊಂಡಾಡಿದ್ದರು.

ಹಾಗೆಯೇ ಮತ್ತೊರ್ವ ಖ್ಯಾತ ನಟ ಕಮಲ್ ಹಾಸನ್ ಸೇರಿದಂತೆ ಹಲವರು “ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂತೆಗೆದುಕೊಳ್ಳುವಿಕೆ ಮತ್ತು ವಿಭಜನೆಯನ್ನು ಘೋಷಿಸುವ ಮೊದಲು ಕಾಶ್ಮೀರಿ ನಾಯಕರನ್ನು ಗೃಹಬಂಧನದಲ್ಲಿರಿಸುವುದು ಮತ್ತು ಸಂವಹನ ಮಾರ್ಗಗಳನ್ನು ಕಡಿತಗೊಳಿಸಿರುವುದರ ಬಗ್ಗೆ ಅನೇಕರು ಟೀಕಿಸಿದ್ದಾರೆ.

ಕಳೆದ ವಾರ ಸಂಸತ್ತಿನಲ್ಲಿ ನಡೆದ ಕ್ರಮವನ್ನು ತಮಿಳುನಾಡಿನ ಆಡಳಿತ ಪಕ್ಷ ಎಐಎಡಿಎಂಕೆ ಸ್ವಾಗತಿಸಿದರೆ, ವಿರೋಧ ಪಕ್ಷದ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಇದನ್ನು ತೀವ್ರವಾಗಿ ಖಂಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

    • Please let me know how many more years we should keep article 370? So far 60 years situation in J&K is not improved, then y should we take different chance?

  1. Modi is right.that is not only Kashmir internal issue.the issue is Jammu people and ladak people.ladak is fight for there rights from the freedom to till now no one talking ……… …..
    Vijay sethupathi don’t know what is really going on there simply he stiing reading book and telling……First he listen ladak Mp speech in Rajyasabha how that people happy that UT .

  2. ೬೦-೭೦ ವರ್ಷಗಳಿಂದ ಕಾಶ್ಮೀರವನ್ನು ಉಗ್ರಗಾಮಿಗಳ ಸ್ವರ್ಗವನ್ನಾಗಿಸಿದ್ದು ಸಾಕು, ಇನ್ನಾದರೂ ವೋಟ್ ಬ್ಯಾಂಕ್ ರಾಜಕಾರಣವನ್ನು ಬಿಟ್ಟು ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣಗೊಳಿಸುವುದು ನಮ್ಮ ಆದ್ಯತೆ ಆದರೆ ಇಷ್ಟು ವರ್ಷ ಹುತಾತ್ಮ ರಾದ ಯೋಧರ ಮತ್ತು ಕಾಶ್ಮೀರಿಗರ ತ್ಯಾಗಕ್ಕೆ ಅರ್ಥ ಬರಬಹುದು. ಆಂತರಿಕ ದೇಶದ್ರೋಹಕ್ಕೆ ಧಿಕ್ಕಾರ.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...