Homeಮುಖಪುಟಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು ಎಂದು ವಿಜಯ್ ಸೇತುಪಥಿ ಉಲ್ಲೇಖಿಸಿದ್ದಾರೆ.

- Advertisement -
- Advertisement -

ಕಾಶ್ಮೀರ ಜನತೆಯ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ತೀವ್ರವಾಗಿ ಖಂಡಿಸಿದ್ದಾರೆ.

‘ಎಸ್‌ಬಿಎಸ್ ಆಸ್ಟ್ರೇಲಿಯಾ ತಮಿಳು’ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಅವರು, “ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು. ನಿಮ್ಮ ಮನೆಯ ವ್ಯವಹಾರಗಳಲ್ಲಿ ನಾನು ಹಸ್ತಕ್ಷೇಪ ಮಾಡಬಹುದೇ? ನೀವು ಅಲ್ಲಿ ವಾಸಿಸುವವರು… ನಾನು ನಿಮ್ಮ ಬಗ್ಗೆ ಕಾಳಜಿ ವಹಿಸಬಹುದು, ಆದರೆ ನನ್ನ ನಿರ್ಧಾರಗಳನ್ನು ನಿಮ್ಮ ಮೇಲೆ ಹೇರಲು ಸಾಧ್ಯವಿಲ್ಲ ಅಲ್ಲವೇ? ಕಾಳಜಿ ತೋರುವುದು ಬೇರೆ, ತಲೆಹಾಕುವುದು ಬೇರೆ. ಇವೆರಡೂ ಬೇರೆ ಬೇರೆಯೆಂದು ಕೇಂದ್ರ ಸರ್ಕಾರಕ್ಕೆ ಗೊತ್ತಿಲ್ಲವೇ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೆಲ್ಬೋರ್ನ್ 2019 ರ ಭಾರತೀಯ ಚಲನಚಿತ್ರೋತ್ಸವದಲ್ಲಿ ಇತ್ತೀಚೆಗೆ ತಮಿಳು ಚಿತ್ರ ‘ಸೂಪರ್ ಡಿಲಕ್ಸ್’ ಗಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಪಡೆದ ನಟ, ಕಾಶ್ಮೀರದ ಬಗ್ಗೆ ತಾನು ಓದಿದ ವರದಿಗಳು ತನಗೆ ತುಂಬಾ ನೋವು ತಂದಿದೆ ಎಂದಿದ್ದಾರೆ. ಕಾಶ್ಮೀರದ ಹೊರಗಿನವರು ಕಾಶ್ಮೀರದ ಬಗ್ಗೆ ಕಾಳಜಿ ವಹಿಸಬಹುದು ಆದರೆ ಜಮ್ಮು ಮತ್ತು ಕಾಶ್ಮೀರದ ಪ್ರದೇಶದಲ್ಲಿನ ವ್ಯವಹಾರಗಳ ಮೇ ಮತ್ತು ಅದರ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ತಿಳಿಸಿದ್ದಾರೆ.

ಭಾನುವಾರ ಚೆನ್ನೈನಲ್ಲಿ ನಟ ರಜನಿಕಾಂತ್ ಮಾಡಿದ ಭಾಷಣದಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ-ಷಾ ಜೋಡಿಯನ್ನು ಅಭಿನಂದಿಸುತ್ತಾ ಎನ್‌ಡಿಎ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿದ ಬೆನ್ನಲ್ಲೇ ವಿಜಯ್ ಸೇತುಪತಿ ಅವರು ಈ ನಿರ್ಧಾರವನ್ನು ಖಂಡಿಸಿದ್ದಾರೆ.

ನಟ ರಜನಿಕಾಂತ್ ಅವರು, “ನಿಮ್ಮ ಮಿಷನ್ ಕಾಶ್ಮೀರ ಕಾರ್ಯಾಚರಣೆಗೆ ನಿಜವಾಗಿಯೂ ನನ್ನ ಹೃತ್ಪೂರ್ವಕ ಅಭಿನಂದನೆಗಳು, ಸರ್. ನೀವು ಅದನ್ನು ನಡೆಸಿದ ರೀತಿ, ಹ್ಯಾಟ್ಸ್ ಆಫ್, ವಿಶೇಷವಾಗಿ ನೀವು ಸಂಸತ್ತಿನಲ್ಲಿ ಮಾಡಿದ ಭಾಷಣ, ಅದ್ಭುತ ಸರ್, ಅದ್ಭುತ. ಎಂದು ಮೋದಿ ಅಮಿತ್ ಶಾರನ್ನು ಕೊಂಡಾಡಿದ್ದರು.

ಹಾಗೆಯೇ ಮತ್ತೊರ್ವ ಖ್ಯಾತ ನಟ ಕಮಲ್ ಹಾಸನ್ ಸೇರಿದಂತೆ ಹಲವರು “ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂತೆಗೆದುಕೊಳ್ಳುವಿಕೆ ಮತ್ತು ವಿಭಜನೆಯನ್ನು ಘೋಷಿಸುವ ಮೊದಲು ಕಾಶ್ಮೀರಿ ನಾಯಕರನ್ನು ಗೃಹಬಂಧನದಲ್ಲಿರಿಸುವುದು ಮತ್ತು ಸಂವಹನ ಮಾರ್ಗಗಳನ್ನು ಕಡಿತಗೊಳಿಸಿರುವುದರ ಬಗ್ಗೆ ಅನೇಕರು ಟೀಕಿಸಿದ್ದಾರೆ.

ಕಳೆದ ವಾರ ಸಂಸತ್ತಿನಲ್ಲಿ ನಡೆದ ಕ್ರಮವನ್ನು ತಮಿಳುನಾಡಿನ ಆಡಳಿತ ಪಕ್ಷ ಎಐಎಡಿಎಂಕೆ ಸ್ವಾಗತಿಸಿದರೆ, ವಿರೋಧ ಪಕ್ಷದ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಇದನ್ನು ತೀವ್ರವಾಗಿ ಖಂಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

    • Please let me know how many more years we should keep article 370? So far 60 years situation in J&K is not improved, then y should we take different chance?

  1. Modi is right.that is not only Kashmir internal issue.the issue is Jammu people and ladak people.ladak is fight for there rights from the freedom to till now no one talking ……… …..
    Vijay sethupathi don’t know what is really going on there simply he stiing reading book and telling……First he listen ladak Mp speech in Rajyasabha how that people happy that UT .

  2. ೬೦-೭೦ ವರ್ಷಗಳಿಂದ ಕಾಶ್ಮೀರವನ್ನು ಉಗ್ರಗಾಮಿಗಳ ಸ್ವರ್ಗವನ್ನಾಗಿಸಿದ್ದು ಸಾಕು, ಇನ್ನಾದರೂ ವೋಟ್ ಬ್ಯಾಂಕ್ ರಾಜಕಾರಣವನ್ನು ಬಿಟ್ಟು ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣಗೊಳಿಸುವುದು ನಮ್ಮ ಆದ್ಯತೆ ಆದರೆ ಇಷ್ಟು ವರ್ಷ ಹುತಾತ್ಮ ರಾದ ಯೋಧರ ಮತ್ತು ಕಾಶ್ಮೀರಿಗರ ತ್ಯಾಗಕ್ಕೆ ಅರ್ಥ ಬರಬಹುದು. ಆಂತರಿಕ ದೇಶದ್ರೋಹಕ್ಕೆ ಧಿಕ್ಕಾರ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...