Homeಮುಖಪುಟಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಪೆರಿಯಾರ್ ಹೇಳಿಕೆ ಉಲ್ಲೇಖಿಸಿ 370 ನೇ ವಿಧಿ ರದ್ದತಿಯನ್ನು ಖಂಡಿಸಿದ ನಟ ವಿಜಯ್ ಸೇತುಪಥಿ.

ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು ಎಂದು ವಿಜಯ್ ಸೇತುಪಥಿ ಉಲ್ಲೇಖಿಸಿದ್ದಾರೆ.

- Advertisement -
- Advertisement -

ಕಾಶ್ಮೀರ ಜನತೆಯ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ತೀವ್ರವಾಗಿ ಖಂಡಿಸಿದ್ದಾರೆ.

‘ಎಸ್‌ಬಿಎಸ್ ಆಸ್ಟ್ರೇಲಿಯಾ ತಮಿಳು’ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಅವರು, “ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಜನರು ತಮ್ಮ ವಿಷಯಗಳು ಮತ್ತು ಸಮಸ್ಯೆಗಳ ಬಗ್ಗೆ ಸ್ವತಃ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪೆರಿಯಾರ್ ಮೊದಲೇ ಹೇಳಿದ್ದರು. ನಿಮ್ಮ ಮನೆಯ ವ್ಯವಹಾರಗಳಲ್ಲಿ ನಾನು ಹಸ್ತಕ್ಷೇಪ ಮಾಡಬಹುದೇ? ನೀವು ಅಲ್ಲಿ ವಾಸಿಸುವವರು… ನಾನು ನಿಮ್ಮ ಬಗ್ಗೆ ಕಾಳಜಿ ವಹಿಸಬಹುದು, ಆದರೆ ನನ್ನ ನಿರ್ಧಾರಗಳನ್ನು ನಿಮ್ಮ ಮೇಲೆ ಹೇರಲು ಸಾಧ್ಯವಿಲ್ಲ ಅಲ್ಲವೇ? ಕಾಳಜಿ ತೋರುವುದು ಬೇರೆ, ತಲೆಹಾಕುವುದು ಬೇರೆ. ಇವೆರಡೂ ಬೇರೆ ಬೇರೆಯೆಂದು ಕೇಂದ್ರ ಸರ್ಕಾರಕ್ಕೆ ಗೊತ್ತಿಲ್ಲವೇ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೆಲ್ಬೋರ್ನ್ 2019 ರ ಭಾರತೀಯ ಚಲನಚಿತ್ರೋತ್ಸವದಲ್ಲಿ ಇತ್ತೀಚೆಗೆ ತಮಿಳು ಚಿತ್ರ ‘ಸೂಪರ್ ಡಿಲಕ್ಸ್’ ಗಾಗಿ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಪಡೆದ ನಟ, ಕಾಶ್ಮೀರದ ಬಗ್ಗೆ ತಾನು ಓದಿದ ವರದಿಗಳು ತನಗೆ ತುಂಬಾ ನೋವು ತಂದಿದೆ ಎಂದಿದ್ದಾರೆ. ಕಾಶ್ಮೀರದ ಹೊರಗಿನವರು ಕಾಶ್ಮೀರದ ಬಗ್ಗೆ ಕಾಳಜಿ ವಹಿಸಬಹುದು ಆದರೆ ಜಮ್ಮು ಮತ್ತು ಕಾಶ್ಮೀರದ ಪ್ರದೇಶದಲ್ಲಿನ ವ್ಯವಹಾರಗಳ ಮೇ ಮತ್ತು ಅದರ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ತಿಳಿಸಿದ್ದಾರೆ.

ಭಾನುವಾರ ಚೆನ್ನೈನಲ್ಲಿ ನಟ ರಜನಿಕಾಂತ್ ಮಾಡಿದ ಭಾಷಣದಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ-ಷಾ ಜೋಡಿಯನ್ನು ಅಭಿನಂದಿಸುತ್ತಾ ಎನ್‌ಡಿಎ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿದ ಬೆನ್ನಲ್ಲೇ ವಿಜಯ್ ಸೇತುಪತಿ ಅವರು ಈ ನಿರ್ಧಾರವನ್ನು ಖಂಡಿಸಿದ್ದಾರೆ.

ನಟ ರಜನಿಕಾಂತ್ ಅವರು, “ನಿಮ್ಮ ಮಿಷನ್ ಕಾಶ್ಮೀರ ಕಾರ್ಯಾಚರಣೆಗೆ ನಿಜವಾಗಿಯೂ ನನ್ನ ಹೃತ್ಪೂರ್ವಕ ಅಭಿನಂದನೆಗಳು, ಸರ್. ನೀವು ಅದನ್ನು ನಡೆಸಿದ ರೀತಿ, ಹ್ಯಾಟ್ಸ್ ಆಫ್, ವಿಶೇಷವಾಗಿ ನೀವು ಸಂಸತ್ತಿನಲ್ಲಿ ಮಾಡಿದ ಭಾಷಣ, ಅದ್ಭುತ ಸರ್, ಅದ್ಭುತ. ಎಂದು ಮೋದಿ ಅಮಿತ್ ಶಾರನ್ನು ಕೊಂಡಾಡಿದ್ದರು.

ಹಾಗೆಯೇ ಮತ್ತೊರ್ವ ಖ್ಯಾತ ನಟ ಕಮಲ್ ಹಾಸನ್ ಸೇರಿದಂತೆ ಹಲವರು “ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂತೆಗೆದುಕೊಳ್ಳುವಿಕೆ ಮತ್ತು ವಿಭಜನೆಯನ್ನು ಘೋಷಿಸುವ ಮೊದಲು ಕಾಶ್ಮೀರಿ ನಾಯಕರನ್ನು ಗೃಹಬಂಧನದಲ್ಲಿರಿಸುವುದು ಮತ್ತು ಸಂವಹನ ಮಾರ್ಗಗಳನ್ನು ಕಡಿತಗೊಳಿಸಿರುವುದರ ಬಗ್ಗೆ ಅನೇಕರು ಟೀಕಿಸಿದ್ದಾರೆ.

ಕಳೆದ ವಾರ ಸಂಸತ್ತಿನಲ್ಲಿ ನಡೆದ ಕ್ರಮವನ್ನು ತಮಿಳುನಾಡಿನ ಆಡಳಿತ ಪಕ್ಷ ಎಐಎಡಿಎಂಕೆ ಸ್ವಾಗತಿಸಿದರೆ, ವಿರೋಧ ಪಕ್ಷದ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳು ಇದನ್ನು ತೀವ್ರವಾಗಿ ಖಂಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

    • Please let me know how many more years we should keep article 370? So far 60 years situation in J&K is not improved, then y should we take different chance?

  1. Modi is right.that is not only Kashmir internal issue.the issue is Jammu people and ladak people.ladak is fight for there rights from the freedom to till now no one talking ……… …..
    Vijay sethupathi don’t know what is really going on there simply he stiing reading book and telling……First he listen ladak Mp speech in Rajyasabha how that people happy that UT .

  2. ೬೦-೭೦ ವರ್ಷಗಳಿಂದ ಕಾಶ್ಮೀರವನ್ನು ಉಗ್ರಗಾಮಿಗಳ ಸ್ವರ್ಗವನ್ನಾಗಿಸಿದ್ದು ಸಾಕು, ಇನ್ನಾದರೂ ವೋಟ್ ಬ್ಯಾಂಕ್ ರಾಜಕಾರಣವನ್ನು ಬಿಟ್ಟು ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣಗೊಳಿಸುವುದು ನಮ್ಮ ಆದ್ಯತೆ ಆದರೆ ಇಷ್ಟು ವರ್ಷ ಹುತಾತ್ಮ ರಾದ ಯೋಧರ ಮತ್ತು ಕಾಶ್ಮೀರಿಗರ ತ್ಯಾಗಕ್ಕೆ ಅರ್ಥ ಬರಬಹುದು. ಆಂತರಿಕ ದೇಶದ್ರೋಹಕ್ಕೆ ಧಿಕ್ಕಾರ.

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...