Homeಕರ್ನಾಟಕಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

- Advertisement -
- Advertisement -

ಕೆಎಸ್‌ಆ‌ರ್‌ಟಿಸಿ ಸಾರಿಗೆ ನೌಕರರ ಮುಷ್ಕರ ಒಂಬತ್ತನೆ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಒಕ್ಕೂಟವು ಖ್ಯಾತ ಕನ್ನಡ ಚಲನಚಿತ್ರ ನಟ ಯಶ್ ಅವರಿಗೆ ತಮ್ಮ ಮುಷ್ಕರವನ್ನು ಬೆಂಬಲಿಸುವಂತೆ ವಿನಂತಿಸಿ ಬರೆದಿರುವ ಪತ್ರಕ್ಕೆ ಪ್ರತ್ಯುತ್ತರ ನೀಡಿದ್ದು, ಅವರ ಹೋರಾಟವನ್ನು ಬೆಂಬಲಿಸಿದ್ದಾರೆ.

ನೌಕರರ ಪತ್ರಕ್ಕೆ ನೀಡಿರುವ ಪ್ರತ್ಯುತ್ತರದ ಪತ್ರವನ್ನು ಗುರುವಾರ ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಯಶ್‌, “ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಆರನೇ ದಿನಕ್ಕೆ-ತಟ್ಟೆ, ಲೋಟ ಬಡಿದು ನೌಕರರ ಪ್ರತಿಭಟನೆ!

ಅವರು ತಮ್ಮ ಪತ್ರದಲ್ಲಿ, “ಇಂದು ನಿಮ್ಮ ಯಶ್‌ ಏನೇ ಆಗಿರಬಹುದು, ಆದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ. ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿಯೇ ಬರೋ ಪ್ರಯಾಣಿಕರಿಗೆ ಟ್ರೈನ್‌ ಮಿಸ್‌ ಆಗುತ್ತೇನೋ, ಆಫೀಸ್‌ ಗೆ ಲೇಟ್‌ ಆಗುತ್ತೇನೋ ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೇ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ” ಎಂದು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಮುಂದುವರೆದು ಬರೆದಿರುವ ಅವರು, “ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ, ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಾರಿಗೆ ನೌಕರರುಗಳ ದಿನಚರಿ ಹೀಗೆ ಇರುತ್ತೆ. ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್‌ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾಳೆಯು ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

“ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ನೌಕರರ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು! ವಿಡಿಯೋ ನೋಡಿ

“ಸಮಾಧಾನದ ವಿಷಯ ಅಂದ್ರೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ. ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡ್ತು” ಎಂದ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ” ಎಂದು ಅವರು ತಮ್ಮ ಪತ್ರದಲ್ಲಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...