Homeಕರ್ನಾಟಕಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

- Advertisement -
- Advertisement -

ಕೆಎಸ್‌ಆ‌ರ್‌ಟಿಸಿ ಸಾರಿಗೆ ನೌಕರರ ಮುಷ್ಕರ ಒಂಬತ್ತನೆ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಒಕ್ಕೂಟವು ಖ್ಯಾತ ಕನ್ನಡ ಚಲನಚಿತ್ರ ನಟ ಯಶ್ ಅವರಿಗೆ ತಮ್ಮ ಮುಷ್ಕರವನ್ನು ಬೆಂಬಲಿಸುವಂತೆ ವಿನಂತಿಸಿ ಬರೆದಿರುವ ಪತ್ರಕ್ಕೆ ಪ್ರತ್ಯುತ್ತರ ನೀಡಿದ್ದು, ಅವರ ಹೋರಾಟವನ್ನು ಬೆಂಬಲಿಸಿದ್ದಾರೆ.

ನೌಕರರ ಪತ್ರಕ್ಕೆ ನೀಡಿರುವ ಪ್ರತ್ಯುತ್ತರದ ಪತ್ರವನ್ನು ಗುರುವಾರ ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಯಶ್‌, “ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಆರನೇ ದಿನಕ್ಕೆ-ತಟ್ಟೆ, ಲೋಟ ಬಡಿದು ನೌಕರರ ಪ್ರತಿಭಟನೆ!

ಅವರು ತಮ್ಮ ಪತ್ರದಲ್ಲಿ, “ಇಂದು ನಿಮ್ಮ ಯಶ್‌ ಏನೇ ಆಗಿರಬಹುದು, ಆದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ. ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿಯೇ ಬರೋ ಪ್ರಯಾಣಿಕರಿಗೆ ಟ್ರೈನ್‌ ಮಿಸ್‌ ಆಗುತ್ತೇನೋ, ಆಫೀಸ್‌ ಗೆ ಲೇಟ್‌ ಆಗುತ್ತೇನೋ ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೇ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ” ಎಂದು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಮುಂದುವರೆದು ಬರೆದಿರುವ ಅವರು, “ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ, ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಾರಿಗೆ ನೌಕರರುಗಳ ದಿನಚರಿ ಹೀಗೆ ಇರುತ್ತೆ. ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್‌ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾಳೆಯು ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

“ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ನೌಕರರ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು! ವಿಡಿಯೋ ನೋಡಿ

“ಸಮಾಧಾನದ ವಿಷಯ ಅಂದ್ರೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ. ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡ್ತು” ಎಂದ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ” ಎಂದು ಅವರು ತಮ್ಮ ಪತ್ರದಲ್ಲಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...