Homeಕರ್ನಾಟಕಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

- Advertisement -
- Advertisement -

ಕೆಎಸ್‌ಆ‌ರ್‌ಟಿಸಿ ಸಾರಿಗೆ ನೌಕರರ ಮುಷ್ಕರ ಒಂಬತ್ತನೆ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಒಕ್ಕೂಟವು ಖ್ಯಾತ ಕನ್ನಡ ಚಲನಚಿತ್ರ ನಟ ಯಶ್ ಅವರಿಗೆ ತಮ್ಮ ಮುಷ್ಕರವನ್ನು ಬೆಂಬಲಿಸುವಂತೆ ವಿನಂತಿಸಿ ಬರೆದಿರುವ ಪತ್ರಕ್ಕೆ ಪ್ರತ್ಯುತ್ತರ ನೀಡಿದ್ದು, ಅವರ ಹೋರಾಟವನ್ನು ಬೆಂಬಲಿಸಿದ್ದಾರೆ.

ನೌಕರರ ಪತ್ರಕ್ಕೆ ನೀಡಿರುವ ಪ್ರತ್ಯುತ್ತರದ ಪತ್ರವನ್ನು ಗುರುವಾರ ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಯಶ್‌, “ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಆರನೇ ದಿನಕ್ಕೆ-ತಟ್ಟೆ, ಲೋಟ ಬಡಿದು ನೌಕರರ ಪ್ರತಿಭಟನೆ!

ಅವರು ತಮ್ಮ ಪತ್ರದಲ್ಲಿ, “ಇಂದು ನಿಮ್ಮ ಯಶ್‌ ಏನೇ ಆಗಿರಬಹುದು, ಆದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ. ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿಯೇ ಬರೋ ಪ್ರಯಾಣಿಕರಿಗೆ ಟ್ರೈನ್‌ ಮಿಸ್‌ ಆಗುತ್ತೇನೋ, ಆಫೀಸ್‌ ಗೆ ಲೇಟ್‌ ಆಗುತ್ತೇನೋ ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೇ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ” ಎಂದು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಮುಂದುವರೆದು ಬರೆದಿರುವ ಅವರು, “ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ, ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಾರಿಗೆ ನೌಕರರುಗಳ ದಿನಚರಿ ಹೀಗೆ ಇರುತ್ತೆ. ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್‌ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾಳೆಯು ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

“ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ನೌಕರರ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು! ವಿಡಿಯೋ ನೋಡಿ

“ಸಮಾಧಾನದ ವಿಷಯ ಅಂದ್ರೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ. ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡ್ತು” ಎಂದ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ” ಎಂದು ಅವರು ತಮ್ಮ ಪತ್ರದಲ್ಲಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...