Homeಕರ್ನಾಟಕಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ ಚೇತನ್...

ಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ ಚೇತನ್ ಕಿಡಿ

ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ? ಎಂದು ನಟ ಚೇತನ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ದೇಶದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕನ್ನಡ ಚಲನಚಿತ್ರ ನಟ ಚೇತನ್ ಅಹಿಂಸಾ, “ಕನ್ನಡ ಚಲನಚಿತ್ರ ನಟರು ಚುನಾವಣಾ ಪ್ರಚಾರಕ್ಕೆ ವೇಗವಾಗಿ ಸ್ಪಂಧಿಸುತ್ತಾರೆ. ಆದರೆ ರೈತರ ಪರವಾಗಿ ಒಂದೂ ಮಾತನ್ನು ಆಡಿಲ್ಲ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ಈ ಕುರಿತು ಹೇಳಿಕೆಯನ್ನು ಹಂಚಿಕೊಂಡಿರುವ ಚೇತನ್, “ದೇಶಾದ್ಯಂತ ರೈತರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಚುನಾವಣಾ ಪ್ರಚಾರದ ಬ್ಯಾಂಡ್‌ವ್ಯಾಗನ್‌ಗಳ ಮೇಲೆ ವೇಗವಾಗಿ ನೆಗೆಯುವ ಕನ್ನಡ ಚಲನಚಿತ್ರ ನಟರು ರೈತರಿಗೆ ಬೆಂಬಲವಾಗಿ ಒಂದು ಮಾತನ್ನೂ ಹೇಳಿಲ್ಲ. ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ? ಅಹಿಂಸಾ…” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹೋರಾಟ ಹತ್ತಿಕ್ಕಲು ಸುಪ್ರೀಂಕೋರ್ಟ್‌ ಬಳಕೆ: ರೈತ ಸಂಘಟನೆಗಳ ಒಕ್ಕೂಟ ಖಂಡನೆ

ಇದನ್ನೂ ಓದಿ: ’ಐಕ್ಯ ಹೋರಾಟ ವೇದಿಕೆ’ಯಿಂದ ರೈತರ ಮೇಲಿನ ದೌರ್ಜನ್ಯ ವಿರೋಧಿಸಿ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಅನಿರ್ದಿಷ್ಟಾವಧಿ…

ಮೊದಲಿನಿಂದಲೂ ಕೇವಲ ನಟನೆ ಮಾತ್ರವಲ್ಲದೇ ಜನಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡು ವೈಚಾರಿಕವಾಗಿ ಚಿಂತಿಸುವ ನಟ ಚೇತನ್ ಇದೀಗ ರೈತರ ಪರವಾಗಿ ದನಿಯೆತ್ತಿದ್ದಾರೆ. ಇಷ್ಟೇ ಅಲ್ಲದೇ ತಾವು ಪ್ರತಿನಿಧಿಸುತ್ತಿರುವ ಕನ್ನಡ ಚಿತ್ರರಂಗದ ಇತರ ನಟರ ಮೇಲೂ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ಕೇಂದ್ರದ ಬಿಜೆಪಿ ಸರ್ಕಾರವು ಮೂರು ಪ್ರಮುಖ ಕೃಷಿ ಮಸೂದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆ ಜಾರಿಗೊಳಿಸಲು ಮುಂದಾಗಿತ್ತು. ಇದನ್ನು ವಿರೋಧಿಸಿ ದೇಶದಾದ್ಯಂತ ಲಕ್ಷಾಂತರ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದೀಗ ಲಕ್ಷಾಂತರ ಪಂಜಾಬ್ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದು 12 ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಾಕಷ್ಟು ಸುತ್ತಿನ ಮಾತುಕತೆಗಳು ನಡೆದರೂ ಅವುಗಳೆಲ್ಲಾ ವಿಫಲವಾಗಿವೆ.

ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಮಾನವೀಯ ಕ್ರಮಗಳನ್ನು ಕೈಗೊಂಡಿತ್ತು. ಇವುಗಳನ್ನೆಲ್ಲಾ ಲೆಕ್ಕಿಸದ ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಇಂದಿನಿಂದ ಕರ್ನಾಟಕದಲ್ಲೂ ಸಹ ರೈತರ ಪ್ರತಿಭಟನೆ ಆರಂಭವಾಗಿದೆ.


ಇದನ್ನೂ ಓದಿ: ದರ್ಪ ಮುಂದುವರೆಸಿದ ಟೊಯೋಟಾ ಕಿರ್ಲೋಸ್ಕರ್; ಮತ್ತೇ 20 ಕಾರ್ಮಿಕರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...