Homeಕರ್ನಾಟಕಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ ಚೇತನ್...

ಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ ಚೇತನ್ ಕಿಡಿ

ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ? ಎಂದು ನಟ ಚೇತನ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ದೇಶದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕನ್ನಡ ಚಲನಚಿತ್ರ ನಟ ಚೇತನ್ ಅಹಿಂಸಾ, “ಕನ್ನಡ ಚಲನಚಿತ್ರ ನಟರು ಚುನಾವಣಾ ಪ್ರಚಾರಕ್ಕೆ ವೇಗವಾಗಿ ಸ್ಪಂಧಿಸುತ್ತಾರೆ. ಆದರೆ ರೈತರ ಪರವಾಗಿ ಒಂದೂ ಮಾತನ್ನು ಆಡಿಲ್ಲ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 8ಕ್ಕೆ ರೈತರಿಂದ ಭಾರತ್ ಬಂದ್: ಎಲ್ಲೆಡೆ ಹರಿದುಬರುತ್ತಿರುವ ಬೆಂಬಲದ ಮಹಾಪೂರ

ತಮ್ಮ ಫೇಸ್‌ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ಈ ಕುರಿತು ಹೇಳಿಕೆಯನ್ನು ಹಂಚಿಕೊಂಡಿರುವ ಚೇತನ್, “ದೇಶಾದ್ಯಂತ ರೈತರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಚುನಾವಣಾ ಪ್ರಚಾರದ ಬ್ಯಾಂಡ್‌ವ್ಯಾಗನ್‌ಗಳ ಮೇಲೆ ವೇಗವಾಗಿ ನೆಗೆಯುವ ಕನ್ನಡ ಚಲನಚಿತ್ರ ನಟರು ರೈತರಿಗೆ ಬೆಂಬಲವಾಗಿ ಒಂದು ಮಾತನ್ನೂ ಹೇಳಿಲ್ಲ. ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ? ಅಹಿಂಸಾ…” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹೋರಾಟ ಹತ್ತಿಕ್ಕಲು ಸುಪ್ರೀಂಕೋರ್ಟ್‌ ಬಳಕೆ: ರೈತ ಸಂಘಟನೆಗಳ ಒಕ್ಕೂಟ ಖಂಡನೆ

ಇದನ್ನೂ ಓದಿ: ’ಐಕ್ಯ ಹೋರಾಟ ವೇದಿಕೆ’ಯಿಂದ ರೈತರ ಮೇಲಿನ ದೌರ್ಜನ್ಯ ವಿರೋಧಿಸಿ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಅನಿರ್ದಿಷ್ಟಾವಧಿ…

ಮೊದಲಿನಿಂದಲೂ ಕೇವಲ ನಟನೆ ಮಾತ್ರವಲ್ಲದೇ ಜನಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡು ವೈಚಾರಿಕವಾಗಿ ಚಿಂತಿಸುವ ನಟ ಚೇತನ್ ಇದೀಗ ರೈತರ ಪರವಾಗಿ ದನಿಯೆತ್ತಿದ್ದಾರೆ. ಇಷ್ಟೇ ಅಲ್ಲದೇ ತಾವು ಪ್ರತಿನಿಧಿಸುತ್ತಿರುವ ಕನ್ನಡ ಚಿತ್ರರಂಗದ ಇತರ ನಟರ ಮೇಲೂ ಕಿಡಿಕಾರಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ಕೇಂದ್ರದ ಬಿಜೆಪಿ ಸರ್ಕಾರವು ಮೂರು ಪ್ರಮುಖ ಕೃಷಿ ಮಸೂದೆಗಳಿಗೆ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆ ಜಾರಿಗೊಳಿಸಲು ಮುಂದಾಗಿತ್ತು. ಇದನ್ನು ವಿರೋಧಿಸಿ ದೇಶದಾದ್ಯಂತ ಲಕ್ಷಾಂತರ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಇದೀಗ ಲಕ್ಷಾಂತರ ಪಂಜಾಬ್ ರೈತರು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದು 12 ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಕೇಂದ್ರ ಸರ್ಕಾರ ಮತ್ತು ರೈತರ ನಡುವೆ ಸಾಕಷ್ಟು ಸುತ್ತಿನ ಮಾತುಕತೆಗಳು ನಡೆದರೂ ಅವುಗಳೆಲ್ಲಾ ವಿಫಲವಾಗಿವೆ.

ಇದನ್ನೂ ಓದಿ: ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ರೈತರ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರವು ಅಮಾನವೀಯ ಕ್ರಮಗಳನ್ನು ಕೈಗೊಂಡಿತ್ತು. ಇವುಗಳನ್ನೆಲ್ಲಾ ಲೆಕ್ಕಿಸದ ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಇಂದಿನಿಂದ ಕರ್ನಾಟಕದಲ್ಲೂ ಸಹ ರೈತರ ಪ್ರತಿಭಟನೆ ಆರಂಭವಾಗಿದೆ.


ಇದನ್ನೂ ಓದಿ: ದರ್ಪ ಮುಂದುವರೆಸಿದ ಟೊಯೋಟಾ ಕಿರ್ಲೋಸ್ಕರ್; ಮತ್ತೇ 20 ಕಾರ್ಮಿಕರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...