Homeಮುಖಪುಟನಟಿಯ ಅಪಹರಣ, ಅತ್ಯಾಚಾರ ಪ್ರಕರಣ | ಸಂಚುಕೋರನಿಗೆ ಶಿಕ್ಷೆಯಾಗಿಲ್ಲ, ನ್ಯಾಯ ಇನ್ನೂ ಅಪೂರ್ಣ : ನಟಿ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ | ಸಂಚುಕೋರನಿಗೆ ಶಿಕ್ಷೆಯಾಗಿಲ್ಲ, ನ್ಯಾಯ ಇನ್ನೂ ಅಪೂರ್ಣ : ನಟಿ ಮಂಜು ವಾರಿಯರ್

- Advertisement -
- Advertisement -

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ, ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಸೋಮವಾರ (ಡಿ.8) ನ್ಯಾಯಾಲಯ ಖುಲಾಸೆಗೊಳಿಸಿದೆ.

ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ್ದ ದಿಲೀಪ್, ಮಾಜಿ ಪತ್ನಿ ಮಂಜು ವಾರಿಯರ್ ತನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಕುರಿತು ಮಂಜು ವಾರಿಯರ್ ಭಾನುವಾರ (ಡಿ.14) ಪ್ರತಿಕ್ರಿಯಿಸಿದ್ದು, “ಪ್ರಕರಣದ ಸಂಚುಕೋರನಿಗೆ ಇನ್ನೂ ಶಿಕ್ಷೆಯಾಗಿಲ್ಲ, ಹಾಗಾಗಿ ನ್ಯಾಯ ಇನ್ನೂ ಅಪೂರ್ಣವಾಗಿದೆ” ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಮಂಜು ವಾರಿಯರ್, “ಗೌರವಾನ್ವಿತ ನ್ಯಾಯಾಲಯದ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಈ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಇನ್ನೂ ಅಪೂರ್ಣವಾಗಿದೆ. ದೈಹಿಕವಾಗಿ ಅಪರಾಧ ಎಸಗಿದವರಿಗೆ ಮಾತ್ರ ಶಿಕ್ಷೆಯಾಗಿದೆ. ಆದರೆ, ಈ ಹೇಯ ಕೃತ್ಯಕ್ಕೆ ಸಂಚು ರೂಪಿಸಿದವರು, ಅದು ಯಾರೇ ಆಗಿರಲಿ, ಇನ್ನೂ ಮುಕ್ತವಾಗಿ ಓಡಾಡುತ್ತಿದ್ದಾರೆ. ಇದು ಅತ್ಯಂತ ಭಯಾನಕ ವಿಚಾರ. ಈ ಅಪರಾಧದ ಹಿಂದಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿದಾಗ ಸರಿಯಾದ ನ್ಯಾಯ ಸಿಗುತ್ತದೆ”ಎಂದು ಬರೆದುಕೊಂಡಿದ್ದಾರೆ.

“ಇದು ಕೇವಲ ಒಬ್ಬ ಸಂತ್ರಸ್ತೆಯ ಪ್ರಶ್ನೆಯಲ್ಲ. ಪ್ರತಿಯೊಬ್ಬ ಹುಡುಗಿ, ಪ್ರತಿಯೊಬ್ಬ ಮಹಿಳೆ ಹಾಗೂ ಪ್ರತಿಯೊಬ್ಬ ಮನುಷ್ಯರು ಭಯವಿಲ್ಲದೆ ಕೆಲಸದ ಸ್ಥಳಗಳಲ್ಲಿ, ಬೀದಿಗಳಲ್ಲಿ ಹಾಗೂ ತಮ್ಮ ಜೀವನದಲ್ಲಿ ತಲೆಯೆತ್ತಿ ನಡೆಯುವ ಹಕ್ಕಿನ ವಿಷಯವಾಗಿದೆ” ಎಂದು ಮಂಜು ವಾರಿಯರ್ ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಲಯ ಖುಲಾಸೆಗೊಳಿಸಿದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದ ದಿಲೀಪ್, “ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಪಿತೂರಿ ನಡೆಸಲಾಗಿದೆ. ನಾನೇ ಈ ಪ್ರಕರಣದ ನಿಜವಾದ ಬಲಿಪಶು. ನನ್ನ ವೃತ್ತಿ ಜೀವನ, ಪ್ರತಿಷ್ಠೆ ಮತ್ತು ಸಮಾಜದಲ್ಲಿ ನನ್ನ ಜೀವನವನ್ನು ನಾಶಮಾಡುವ ಉದ್ದೇಶದಿಂದ ಈ ಪಿತೂರಿ ನಡೆಸಲಾಗಿದೆ. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ ಇದೆ ಎಂದು ಮೊದಲು ಹೇಳಿದ್ದೇ ಮಂಜು ವಾರಿಯರ್. ಅವರು ಹೀಗೆ ಹೇಳಿದ ದಿನದಿಂದಲೇ ನನ್ನ ವಿರುದ್ಧದ ಪಿತೂರಿ ಶುರುವಾಯಿತು” ಎಂದು ಹೇಳಿದ್ದರು.

2017ರಲ್ಲಿ ಕೊಚ್ಚಿಯ ಹೊರವಲಯದಲ್ಲಿ ನಡೆದ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ತೀರ್ಪನ್ನು ಡಿಸೆಂಬರ್ 8ರಂದು ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಹನಿ ಎಂ.ವರ್ಗೀಸ್ ಪ್ರಕಟಿಸಿದ್ದು, 8ನೇ ಆರೋಪಿಯಾಗಿದ್ದ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ್ದರು.

ಉಳಿದ ಆರೋಪಿಗಳಾದ ಸುನಿಲ್ ಎನ್.ಎಸ್ ಅಲಿಯಾಸ್‌ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಮಣಿಕಂಠನ್ ಬಿ, ವಿಜೀಶ್ ವಿಪಿ, ಸಲೀಂ ಎಚ್ ಅಲಿಯಾಸ್ ವಡಿವಲ್ ಸಲೀಂ ಹಾಗೂ ಪ್ರದೀಪ್ ಅವರನ್ನು ದೋಷಿಗಳೆಂದು ಘೋಷಿಸಿದ್ದರು. ಈ ಎಲ್ಲಾ ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಟ ದಿಲೀಪ್ ಖುಲಾಸೆ: ತೀರ್ಪು ಹೊರಬಿದ್ದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಂತ್ರಸ್ತೆ: ನ್ಯಾಯಾಲದಲ್ಲಿ ನಂಬಿಕೆ ಕಳೆದುಕೊಂಡಿದ್ದೇನೆ ಎಂದ ನಟಿ

ಕೊಚ್ಚಿ: ಕೇರಳ ನಟಿಯ ಮೇಲೆ ಹಲ್ಲೆ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿ, ಇತರ ಆರು ಮಂದಿಯನ್ನು ದೋಷಿಗಳು ಎಂದು ಘೋಷಿಸಿದ ತೀರ್ಪು ಹೊರಬಿದ್ದ ಸುಮಾರು ಒಂದು ವಾರದ ನಂತರ, ಸಂತ್ರಸ್ತ ನಟಿ ...

ಪಿತೂರಿ ಆರೋಪದಲ್ಲಿ ಜಿಮ್ಮಿ ಲೈ ದೋಷಿ ಎಂದು ತೀರ್ಪು ನೀಡಿದ ಹಾಂಗ್ ಕಾಂಗ್ ಹೈಕೋರ್ಟ್: ಇದು  “ನ್ಯಾಯದ ಗರ್ಭಪಾತ” ಎಂದ ಸಂಘಟನೆಗಳು

ಹಾಂಗ್ ಕಾಂಗ್ ಹೈಕೋರ್ಟ್ ಪ್ರಜಾಪ್ರಭುತ್ವ ಕಾರ್ಯಕರ್ತ, ಪತ್ರಕರ್ತ ಜಿಮ್ಮಿ ಲೈ ಅವರನ್ನು ಪಿತೂರಿ ಆರೋಪದ ಮೇಲೆ ದೋಷಿ ಎಂದು ತೀರ್ಪು ನೀಡಿದೆ.  ಚೀನಾದ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಮೂರು ಆರೋಪಗಳಲ್ಲಿ ಪ್ರಜಾಪ್ರಭುತ್ವ ಕಾರ್ಯಕರ್ತ ಮತ್ತು...

ವಿದೇಶದಲ್ಲಿದ್ದಾಗ ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಪೋಸ್ಟ್; ಮಂಗಳೂರಿನ ಯುವಕ ಕೇರಳ ಏರ್‌ಪೋರ್ಟ್‌ನಲ್ಲಿ ಬಂಧನ

ವಿದೇಶದಲ್ಲಿದ್ದಾಗ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ವಿಷಯವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಭಾರತಕ್ಕೆ ಬಂದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ ಎಂದು 'ಫ್ರೀ ಪ್ರೆಸ್‌...

ಉತ್ತರ ಪ್ರದೇಶ| ದಲಿತ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದ ಬಿಜೆಪಿ ಮುಖಂಡನಿಗೆ ಜಾಮೀನು; ಬೆಂಬಲಿಗರಿಂದ ಸಂಭ್ರಮಾಚರಣೆ

ವಿದ್ಯುತ್ ಇಲಾಖೆಯ ದಲಿತ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಸ್ಥಳೀಯ ಬಿಜೆಪಿ ಮುಖಂಡ ಮೌ ಜಿಲ್ಲಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಆತನಿಗೆ ಭವ್ಯ ಸ್ವಾಗತ ನೀಡಲಾಗಿದೆ. ಸಂಭ್ರಮಾಚರಣೆ...

15 ಜನರ ಸಾವಿಗೆ ಕಾರಣವಾದ ಬೋಂಡಿ ಬೀಚ್ ಹತ್ಯಾಕಾಂಡದ ಹಿಂದೆ ಪಾಕ್ ಮೂಲದ ತಂದೆ, ಮಗನ ಕೈವಾಡ

ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಹನುಕ್ಕಾ ಕಾರ್ಯಕ್ರಮದಲ್ಲಿ ನಡೆದ ಮಾರಕ ಗುಂಡಿನ ದಾಳಿಯ ಹಿಂದೆ ಪಾಕಿಸ್ತಾನದ ತಂದೆ ಮತ್ತು ಮಗನ ಕೈವಾಡ ಇದೆ ಎಂದು ಹೇಳಿರುವ ಅಮೆರಿಕದ ಗುಪ್ತಚರ ಅಧಿಕಾರಿಗಳ ಮಾತುಗಳನ್ನು ಉಲ್ಲೇಖಿಸಿ ಸಿಬಿಎಸ್...

ಅತ್ಯಂತ ‘ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಶಾಲೆ, ನ್ಯಾಯಾಲಯಗಳು ವರ್ಚುವಲ್ ಮೋಡ್‌ನಲ್ಲಿ ಕಾರ್ಯಾಚರಣೆ

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ಸೋಮವಾರ (ಡಿಸೆಂಬರ್ 15) 'ಅತ್ಯಂತ ಅಪಾಯಕಾರಿ' (Severe Category)ಮಟ್ಟ ತಲುಪಿದೆ. ಸಂಪೂರ್ಣ ನಗರ ದಟ್ಟವಾದ ಹೊಗೆಯಿಂದ (ಮಂಜು ಮತ್ತು ಧೂಳಿನ ಪದರ) ಅವೃತ್ತವಾಗಿದೆ. ಸರಾಸರಿ ವಾಯು ಗುಣಮಟ್ಟ...

ಕೋವಿಡ್-19 ಲಸಿಕೆ ಮತ್ತು ಯುವ ವಯಸ್ಕರ ಹಠಾತ್ ಸಾವುಗಳ ನಡುವೆ ಯಾವುದೇ ವೈಜ್ಞಾನಿಕ ಸಂಬಂಧ ಕಂಡುಬಂದಿಲ್ಲ: ಏಮ್ಸ್ ಅಧ್ಯಯನ

ನವದೆಹಲಿ: ದೆಹಲಿಯ ಏಮ್ಸ್‌ನಲ್ಲಿ ನಡೆಸಿದ ಒಂದು ವರ್ಷದ ಸಮಗ್ರ, ಶವಪರೀಕ್ಷೆ ಆಧಾರಿತ ವೀಕ್ಷಣಾ ಅಧ್ಯಯನವು, ಯುವ ವಯಸ್ಕರಲ್ಲಿ ಕೋವಿಡ್-19 ಲಸಿಕೆಯನ್ನು ಹಠಾತ್ ಸಾವುಗಳೊಂದಿಗೆ ಸಂಪರ್ಕಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ, ಇದು ಕೋವಿಡ್ ಲಸಿಕೆಗಳ...

ಬಿಜೆಪಿ ಜನ ನಾಟಕೀಯರು, ದೇಶದ್ರೋಹಿಗಳು; ಅವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಮಲ್ಲಿಕಾರ್ಜುನ ಖರ್ಗೆ

"ಬಿಜೆಪಿಯವರು 'ಗದ್ದಾರ್‌ಗಳು' (ದೇಶದ್ರೋಹಿಗಳು) ಮತ್ತು 'ಡ್ರಮೆಬಾಜ್' (ನಾಟಕೀಯದಲ್ಲಿ ತೊಡಗಿಸಿಕೊಳ್ಳುವವರು). ಅವರನ್ನು ಅಧಿಕಾರದಿಂದ ತೆಗೆದುಹಾಕಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ಕೊಟ್ಟಿದ್ದಾರೆ.  ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ವೋಟ್ ಚೋರಿ ಕುರಿತ...

ಆಸ್ಟ್ರೇಲಿಯಾ | ಸಿಡ್ನಿಯ ಬೋಂಡಿ ಬೀಚ್‌ನಲ್ಲಿ ಗುಂಡಿನ ದಾಳಿ : 12 ಜನರು ಸಾವು

ಭಾನುವಾರ (ಡಿ.14) ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬೋಂಡಿ ಬೀಚ್‌ನಲ್ಲಿ ಆಯೋಜಿಸಿದ್ದ ಯಹೂದಿ ಸಮುದಾಯದ 'ಹನುಕ್ಕಾ' ಕಾರ್ಯಕ್ರಮದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ....

ಕೋಲ್ಕತ್ತಾದಲ್ಲಿ ನಡೆದ ಅವ್ಯವಸ್ಥೆ: ‘ಮೆಸ್ಸಿ ಭಾರತ ಪ್ರವಾಸ 2025’ರ ಪ್ರಮುಖ ಆಯೋಜಕರಿಗೆ 14 ದಿನಗಳ ಕಸ್ಟಡಿ

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ಅವ್ಯವಸ್ಥೆ ಉಂಟಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಲಿಯೋನೆಲ್ ಮೆಸ್ಸಿ ಅವರ ಇಂಡಿಯಾ ಟೂರ್ 2025 ರ ಪ್ರಮುಖ ಆಯೋಜಕರನ್ನು ವಶಕ್ಕೆ ಪಡೆದಿದ್ದಾರೆ.  ಈ ಘಟನೆಯು ಪ್ರತಿಭಟನೆಗಳಿಗೆ...