Homeಮುಖಪುಟನಟಿಯ ಅಪಹರಣ, ಅತ್ಯಾಚಾರ ಪ್ರಕರಣ | ಸಂಚುಕೋರನಿಗೆ ಶಿಕ್ಷೆಯಾಗಿಲ್ಲ, ನ್ಯಾಯ ಇನ್ನೂ ಅಪೂರ್ಣ : ನಟಿ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ | ಸಂಚುಕೋರನಿಗೆ ಶಿಕ್ಷೆಯಾಗಿಲ್ಲ, ನ್ಯಾಯ ಇನ್ನೂ ಅಪೂರ್ಣ : ನಟಿ ಮಂಜು ವಾರಿಯರ್

- Advertisement -
- Advertisement -

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ, ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಸೋಮವಾರ (ಡಿ.8) ನ್ಯಾಯಾಲಯ ಖುಲಾಸೆಗೊಳಿಸಿದೆ.

ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ್ದ ದಿಲೀಪ್, ಮಾಜಿ ಪತ್ನಿ ಮಂಜು ವಾರಿಯರ್ ತನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಕುರಿತು ಮಂಜು ವಾರಿಯರ್ ಭಾನುವಾರ (ಡಿ.14) ಪ್ರತಿಕ್ರಿಯಿಸಿದ್ದು, “ಪ್ರಕರಣದ ಸಂಚುಕೋರನಿಗೆ ಇನ್ನೂ ಶಿಕ್ಷೆಯಾಗಿಲ್ಲ, ಹಾಗಾಗಿ ನ್ಯಾಯ ಇನ್ನೂ ಅಪೂರ್ಣವಾಗಿದೆ” ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಮಂಜು ವಾರಿಯರ್, “ಗೌರವಾನ್ವಿತ ನ್ಯಾಯಾಲಯದ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಈ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಇನ್ನೂ ಅಪೂರ್ಣವಾಗಿದೆ. ದೈಹಿಕವಾಗಿ ಅಪರಾಧ ಎಸಗಿದವರಿಗೆ ಮಾತ್ರ ಶಿಕ್ಷೆಯಾಗಿದೆ. ಆದರೆ, ಈ ಹೇಯ ಕೃತ್ಯಕ್ಕೆ ಸಂಚು ರೂಪಿಸಿದವರು, ಅದು ಯಾರೇ ಆಗಿರಲಿ, ಇನ್ನೂ ಮುಕ್ತವಾಗಿ ಓಡಾಡುತ್ತಿದ್ದಾರೆ. ಇದು ಅತ್ಯಂತ ಭಯಾನಕ ವಿಚಾರ. ಈ ಅಪರಾಧದ ಹಿಂದಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿದಾಗ ಸರಿಯಾದ ನ್ಯಾಯ ಸಿಗುತ್ತದೆ”ಎಂದು ಬರೆದುಕೊಂಡಿದ್ದಾರೆ.

“ಇದು ಕೇವಲ ಒಬ್ಬ ಸಂತ್ರಸ್ತೆಯ ಪ್ರಶ್ನೆಯಲ್ಲ. ಪ್ರತಿಯೊಬ್ಬ ಹುಡುಗಿ, ಪ್ರತಿಯೊಬ್ಬ ಮಹಿಳೆ ಹಾಗೂ ಪ್ರತಿಯೊಬ್ಬ ಮನುಷ್ಯರು ಭಯವಿಲ್ಲದೆ ಕೆಲಸದ ಸ್ಥಳಗಳಲ್ಲಿ, ಬೀದಿಗಳಲ್ಲಿ ಹಾಗೂ ತಮ್ಮ ಜೀವನದಲ್ಲಿ ತಲೆಯೆತ್ತಿ ನಡೆಯುವ ಹಕ್ಕಿನ ವಿಷಯವಾಗಿದೆ” ಎಂದು ಮಂಜು ವಾರಿಯರ್ ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಲಯ ಖುಲಾಸೆಗೊಳಿಸಿದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದ ದಿಲೀಪ್, “ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಪಿತೂರಿ ನಡೆಸಲಾಗಿದೆ. ನಾನೇ ಈ ಪ್ರಕರಣದ ನಿಜವಾದ ಬಲಿಪಶು. ನನ್ನ ವೃತ್ತಿ ಜೀವನ, ಪ್ರತಿಷ್ಠೆ ಮತ್ತು ಸಮಾಜದಲ್ಲಿ ನನ್ನ ಜೀವನವನ್ನು ನಾಶಮಾಡುವ ಉದ್ದೇಶದಿಂದ ಈ ಪಿತೂರಿ ನಡೆಸಲಾಗಿದೆ. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ ಇದೆ ಎಂದು ಮೊದಲು ಹೇಳಿದ್ದೇ ಮಂಜು ವಾರಿಯರ್. ಅವರು ಹೀಗೆ ಹೇಳಿದ ದಿನದಿಂದಲೇ ನನ್ನ ವಿರುದ್ಧದ ಪಿತೂರಿ ಶುರುವಾಯಿತು” ಎಂದು ಹೇಳಿದ್ದರು.

2017ರಲ್ಲಿ ಕೊಚ್ಚಿಯ ಹೊರವಲಯದಲ್ಲಿ ನಡೆದ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ತೀರ್ಪನ್ನು ಡಿಸೆಂಬರ್ 8ರಂದು ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಹನಿ ಎಂ.ವರ್ಗೀಸ್ ಪ್ರಕಟಿಸಿದ್ದು, 8ನೇ ಆರೋಪಿಯಾಗಿದ್ದ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ್ದರು.

ಉಳಿದ ಆರೋಪಿಗಳಾದ ಸುನಿಲ್ ಎನ್.ಎಸ್ ಅಲಿಯಾಸ್‌ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಮಣಿಕಂಠನ್ ಬಿ, ವಿಜೀಶ್ ವಿಪಿ, ಸಲೀಂ ಎಚ್ ಅಲಿಯಾಸ್ ವಡಿವಲ್ ಸಲೀಂ ಹಾಗೂ ಪ್ರದೀಪ್ ಅವರನ್ನು ದೋಷಿಗಳೆಂದು ಘೋಷಿಸಿದ್ದರು. ಈ ಎಲ್ಲಾ ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....