Homeಮುಖಪುಟನಟಿಯ ಅಪಹರಣ, ಅತ್ಯಾಚಾರ ಪ್ರಕರಣ | ಸಂಚುಕೋರನಿಗೆ ಶಿಕ್ಷೆಯಾಗಿಲ್ಲ, ನ್ಯಾಯ ಇನ್ನೂ ಅಪೂರ್ಣ : ನಟಿ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ | ಸಂಚುಕೋರನಿಗೆ ಶಿಕ್ಷೆಯಾಗಿಲ್ಲ, ನ್ಯಾಯ ಇನ್ನೂ ಅಪೂರ್ಣ : ನಟಿ ಮಂಜು ವಾರಿಯರ್

- Advertisement -
- Advertisement -

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ, ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಸೋಮವಾರ (ಡಿ.8) ನ್ಯಾಯಾಲಯ ಖುಲಾಸೆಗೊಳಿಸಿದೆ.

ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ್ದ ದಿಲೀಪ್, ಮಾಜಿ ಪತ್ನಿ ಮಂಜು ವಾರಿಯರ್ ತನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಕುರಿತು ಮಂಜು ವಾರಿಯರ್ ಭಾನುವಾರ (ಡಿ.14) ಪ್ರತಿಕ್ರಿಯಿಸಿದ್ದು, “ಪ್ರಕರಣದ ಸಂಚುಕೋರನಿಗೆ ಇನ್ನೂ ಶಿಕ್ಷೆಯಾಗಿಲ್ಲ, ಹಾಗಾಗಿ ನ್ಯಾಯ ಇನ್ನೂ ಅಪೂರ್ಣವಾಗಿದೆ” ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಮಂಜು ವಾರಿಯರ್, “ಗೌರವಾನ್ವಿತ ನ್ಯಾಯಾಲಯದ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಈ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಇನ್ನೂ ಅಪೂರ್ಣವಾಗಿದೆ. ದೈಹಿಕವಾಗಿ ಅಪರಾಧ ಎಸಗಿದವರಿಗೆ ಮಾತ್ರ ಶಿಕ್ಷೆಯಾಗಿದೆ. ಆದರೆ, ಈ ಹೇಯ ಕೃತ್ಯಕ್ಕೆ ಸಂಚು ರೂಪಿಸಿದವರು, ಅದು ಯಾರೇ ಆಗಿರಲಿ, ಇನ್ನೂ ಮುಕ್ತವಾಗಿ ಓಡಾಡುತ್ತಿದ್ದಾರೆ. ಇದು ಅತ್ಯಂತ ಭಯಾನಕ ವಿಚಾರ. ಈ ಅಪರಾಧದ ಹಿಂದಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿದಾಗ ಸರಿಯಾದ ನ್ಯಾಯ ಸಿಗುತ್ತದೆ”ಎಂದು ಬರೆದುಕೊಂಡಿದ್ದಾರೆ.

“ಇದು ಕೇವಲ ಒಬ್ಬ ಸಂತ್ರಸ್ತೆಯ ಪ್ರಶ್ನೆಯಲ್ಲ. ಪ್ರತಿಯೊಬ್ಬ ಹುಡುಗಿ, ಪ್ರತಿಯೊಬ್ಬ ಮಹಿಳೆ ಹಾಗೂ ಪ್ರತಿಯೊಬ್ಬ ಮನುಷ್ಯರು ಭಯವಿಲ್ಲದೆ ಕೆಲಸದ ಸ್ಥಳಗಳಲ್ಲಿ, ಬೀದಿಗಳಲ್ಲಿ ಹಾಗೂ ತಮ್ಮ ಜೀವನದಲ್ಲಿ ತಲೆಯೆತ್ತಿ ನಡೆಯುವ ಹಕ್ಕಿನ ವಿಷಯವಾಗಿದೆ” ಎಂದು ಮಂಜು ವಾರಿಯರ್ ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಲಯ ಖುಲಾಸೆಗೊಳಿಸಿದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದ ದಿಲೀಪ್, “ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಪಿತೂರಿ ನಡೆಸಲಾಗಿದೆ. ನಾನೇ ಈ ಪ್ರಕರಣದ ನಿಜವಾದ ಬಲಿಪಶು. ನನ್ನ ವೃತ್ತಿ ಜೀವನ, ಪ್ರತಿಷ್ಠೆ ಮತ್ತು ಸಮಾಜದಲ್ಲಿ ನನ್ನ ಜೀವನವನ್ನು ನಾಶಮಾಡುವ ಉದ್ದೇಶದಿಂದ ಈ ಪಿತೂರಿ ನಡೆಸಲಾಗಿದೆ. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ ಇದೆ ಎಂದು ಮೊದಲು ಹೇಳಿದ್ದೇ ಮಂಜು ವಾರಿಯರ್. ಅವರು ಹೀಗೆ ಹೇಳಿದ ದಿನದಿಂದಲೇ ನನ್ನ ವಿರುದ್ಧದ ಪಿತೂರಿ ಶುರುವಾಯಿತು” ಎಂದು ಹೇಳಿದ್ದರು.

2017ರಲ್ಲಿ ಕೊಚ್ಚಿಯ ಹೊರವಲಯದಲ್ಲಿ ನಡೆದ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ತೀರ್ಪನ್ನು ಡಿಸೆಂಬರ್ 8ರಂದು ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಹನಿ ಎಂ.ವರ್ಗೀಸ್ ಪ್ರಕಟಿಸಿದ್ದು, 8ನೇ ಆರೋಪಿಯಾಗಿದ್ದ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ್ದರು.

ಉಳಿದ ಆರೋಪಿಗಳಾದ ಸುನಿಲ್ ಎನ್.ಎಸ್ ಅಲಿಯಾಸ್‌ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಮಣಿಕಂಠನ್ ಬಿ, ವಿಜೀಶ್ ವಿಪಿ, ಸಲೀಂ ಎಚ್ ಅಲಿಯಾಸ್ ವಡಿವಲ್ ಸಲೀಂ ಹಾಗೂ ಪ್ರದೀಪ್ ಅವರನ್ನು ದೋಷಿಗಳೆಂದು ಘೋಷಿಸಿದ್ದರು. ಈ ಎಲ್ಲಾ ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...