Homeಮುಖಪುಟನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

- Advertisement -
- Advertisement -

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಪ್ರಕರಣದ 8ನೇ ಆರೋಪಿಯಾಗಿದ್ದ ದಿಲೀಪ್ ಜೊತೆಗೆ, ಅಪರಾಧ ಮಾಡಲು ಕ್ರಿಮಿನಲ್ ಪಿತೂರಿ ನಡೆಸಿದ ಆರೋಪ ಹೊತ್ತಿದ್ದ 7ನೇ ಆರೋಪಿಯಾಗಿದ್ದ ಚಾರ್ಲಿ ಥಾಮಸ್, 9 ಆರೋಪಿಯಾಗಿದ್ದ ಸನಿಲ್ ಕುಮಾರ್ ಯಾನೆ ಮೇಸ್ತ್ರಿ ಸನಿಲ್ ಮತ್ತು 15ನೇ ಆರೋಪಿಯಾಗಿದ್ದ ಶರತ್ ಜಿ. ನಾಯರ್ ಅವರ ಖುಲಾಸೆಯನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ.

ವಿಚಾರಣಾ ನ್ಯಾಯಾಲಯವು ಪ್ರಕರಣದ ಇತರ ಆರೋಪಿಗಳಾಗಿದ್ದ ಪಲ್ಸರ್ ಸುನಿ (ಎ1), ಮಾರ್ಟಿಂಗ್ ಆಂಟನಿ (ಎ2), ಬಿ. ಮಣಿಕಂದನ್ (ಎ3), ವಿಪಿ ವಿಜೀಶ್ (ಎ4), ಎಚ್. ಸಲೀಮ್ (ಎ5), ಸಿ. ಪ್ರದೀಪ್ (ಎ 6) ಅವರನ್ನು ಅತ್ಯಾಚಾರ, ಪಿತೂರಿ, ಅಪಹರಣ ಮತ್ತು ಇತರ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ, 340, 354, 366, 354 ಬಿ ಮತ್ತು 376 ಡಿ ಅಡಿಯ ಅಪರಾಧಗಳಲ್ಲಿ ಇವರನ್ನು ತಪ್ಪಿತಸ್ಥರೆಂದು ಘೋಷಣೆ ಮಾಡಲಾಗಿದೆ.

ಅಪರಾಧಿಗಳಿಗೆ ಸಾಮೂಹಿಕ ಅತ್ಯಾಚಾರದ ಅಪರಾಧಕ್ಕಾಗಿ 20 ವರ್ಷಗಳ ಕಠಿಣ ಸಜೆ ವಿಧಿಸಲಾಗಿದ್ದು, ಇತರ ಸಂಬಂಧಿತ ಅಪರಾಧಗಳಿಗಾಗಿ ಏಕಕಾಲದಲ್ಲಿ ಅನುಭವಿಸಬೇಕಾದ ಹೆಚ್ಚುವರಿ ಶಿಕ್ಷೆಗಳನ್ನು ನೀಡಲಾಗಿದೆ. ಅಲ್ಲದೆ, ಆಪರಾಧಿಗಳಿಗೆ ವಿಧಿಸಲಾದ ದಂಡದ ಮೊತ್ತದಲ್ಲಿ 5 ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯವು ನಿರ್ದೇಶಿಸಿದೆ.

ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ, 1 ರಿಂದ 6 ರವರೆಗಿನ ಅಪರಾಧಿಗಳಿಗೆ ವಿಧಿಸಲಾದ ಶಿಕ್ಷೆಯನ್ನು ಹೆಚ್ಚಿಸುವಂತೆ ಕೋರಿದೆ. ಅಪರಾಧದ ಗಂಭೀರತೆ ಮತ್ತು ಸಮಾಜದ ಮೇಲೆ ಅದು ಬೀರುವ ಪರಿಣಾಮವನ್ನು ಪರಿಗಣಿಸಿದರೆ, ಪ್ರಸ್ತುತ ನೀಡಿರುವ ಶಿಕ್ಷೆಯು ಅಸಮರ್ಪಕವಾಗಿದೆ ಎಂದು ವಾದಿಸಿದೆ.

ಸೆಷನ್ಸ್ ನ್ಯಾಯಾಲಯವು ಅಪರಾಧಿಗಳಿಗೆ ಆಶ್ರಯ ನೀಡಿದ್ದ ಆರೋಪದಿಂದ ಚಾರ್ಲಿ ಥಾಮಸ್ ಅವರನ್ನು ಖುಲಾಸೆಗೊಳಿಸಿದೆ ಮತ್ತು ನಟ ದಿಲೀಪ್ ಅವರ ಮೇಲಿದ್ದ ಎಲ್ಲಾ ಆರೋಪಗಳನ್ನು ವಜಾಗೊಳಿಸಿ ಅವರನ್ನು ಮುಕ್ತಗೊಳಿಸಿದೆ. ಸನಿಲ್ ಕುಮಾರ್ ಮತ್ತು ಶರತ್ ನಾಯರ್ ಅವರ ಮೇಲಿದ್ದ ಪಿತೂರಿ, ಪ್ರಚೋದನೆ ಮತ್ತು ಸಾಕ್ಷ್ಯ ನಾಶಪಡಿಸಿದ ಆರೋಪಗಳಿಂದಲೂ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದೆ.

ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ, ಆರೋಪಿಗಳ ಖುಲಾಸೆಯು ಕಾನೂನುಬಾಹಿರ ಮತ್ತು ಅಸಮರ್ಥನೀಯ ಎಂದು ಪ್ರತಿಪಾದಿಸಿದೆ. ಪ್ರಕರಣದ ಹಿಂದಿನ ದೊಡ್ಡ ಮಟ್ಟದ ಪಿತೂರಿಗೆ ಸಂಬಂಧಿಸಿದ ಪುರಾವೆಗಳನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುವಲ್ಲಿ ವಿಚಾರಣಾ ನ್ಯಾಯಾಲಯವು ವಿಫಲವಾಗಿದೆ ಎಂದು ವಾದಿಸಿದೆ. ದಾಖಲಾಗಿರುವ ಸಾಕ್ಷ್ಯಾಧಾರಗಳ ಪ್ರಕಾರ, ಸಂತ್ರಸ್ತೆಯ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ 2013 ರಲ್ಲೇ ಎಂಟನೇ ಆರೋಪಿ (ಎ8) ಮತ್ತು ಮೊದಲನೇ ಆರೋಪಿ (ಎ1) ನಡುವೆ ಮುಖ್ಯ ಪಿತೂರಿ ನಡೆದಿತ್ತು. ಆ ನಂತರ 1 ರಿಂದ 6 ರವರೆಗಿನ ಆರೋಪಿಗಳು ಮಾಡಿದ ಕೃತ್ಯಗಳು ಅದೇ ಪಿತೂರಿಯ ಮುಂದುವರಿದ ಭಾಗವಾಗಿವೆ ಎಂದಿದೆ.

ವಿಚಾರಣಾ ನ್ಯಾಯಾಲಯವು ತನಿಖಾ ತಂಡದ ವಿರುದ್ಧ ನೀಡಿರುವ ಕೆಲವು ಪ್ರತಿಕೂಲ ಅಭಿಪ್ರಾಯಗಳನ್ನು ಸಹ ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ ಪ್ರಶ್ನಿಸಿದೆ. ವಿಶೇಷ ತನಿಖಾ ತಂಡವು (ಎಸ್‌ಐಟಿ) ಅತ್ಯಂತ ಸಮಗ್ರವಾದ ಮತ್ತು ನ್ಯಾಯಸಮ್ಮತವಾದ ತನಿಖೆಯನ್ನು ನಡೆಸಿದೆ ಎಂದು ಸರ್ಕಾರ ಪ್ರತಿಪಾದಿಸಿದೆ. ತನಿಖೆಯಲ್ಲಿ ಒಂದು ವೇಳೆ ಸಣ್ಣಪುಟ್ಟ ನ್ಯೂನತೆಗಳಿದ್ದರೂ ಸಹ, ಅವುಗಳಿಂದ ಆರೋಪಿಗಳಿಗೆ ಅನ್ಯಾಯವಾಗಿದೆ ಎಂದು ಸಾಬೀತಾಗದ ಹೊರತು, ಅಂತಹ ನ್ಯೂನತೆಗಳನ್ನೇ ಖುಲಾಸೆಗೆ ಆಧಾರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....