Homeಮುಖಪುಟನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

- Advertisement -
- Advertisement -

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಪ್ರಕರಣದ 8ನೇ ಆರೋಪಿಯಾಗಿದ್ದ ದಿಲೀಪ್ ಜೊತೆಗೆ, ಅಪರಾಧ ಮಾಡಲು ಕ್ರಿಮಿನಲ್ ಪಿತೂರಿ ನಡೆಸಿದ ಆರೋಪ ಹೊತ್ತಿದ್ದ 7ನೇ ಆರೋಪಿಯಾಗಿದ್ದ ಚಾರ್ಲಿ ಥಾಮಸ್, 9 ಆರೋಪಿಯಾಗಿದ್ದ ಸನಿಲ್ ಕುಮಾರ್ ಯಾನೆ ಮೇಸ್ತ್ರಿ ಸನಿಲ್ ಮತ್ತು 15ನೇ ಆರೋಪಿಯಾಗಿದ್ದ ಶರತ್ ಜಿ. ನಾಯರ್ ಅವರ ಖುಲಾಸೆಯನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ.

ವಿಚಾರಣಾ ನ್ಯಾಯಾಲಯವು ಪ್ರಕರಣದ ಇತರ ಆರೋಪಿಗಳಾಗಿದ್ದ ಪಲ್ಸರ್ ಸುನಿ (ಎ1), ಮಾರ್ಟಿಂಗ್ ಆಂಟನಿ (ಎ2), ಬಿ. ಮಣಿಕಂದನ್ (ಎ3), ವಿಪಿ ವಿಜೀಶ್ (ಎ4), ಎಚ್. ಸಲೀಮ್ (ಎ5), ಸಿ. ಪ್ರದೀಪ್ (ಎ 6) ಅವರನ್ನು ಅತ್ಯಾಚಾರ, ಪಿತೂರಿ, ಅಪಹರಣ ಮತ್ತು ಇತರ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ, 340, 354, 366, 354 ಬಿ ಮತ್ತು 376 ಡಿ ಅಡಿಯ ಅಪರಾಧಗಳಲ್ಲಿ ಇವರನ್ನು ತಪ್ಪಿತಸ್ಥರೆಂದು ಘೋಷಣೆ ಮಾಡಲಾಗಿದೆ.

ಅಪರಾಧಿಗಳಿಗೆ ಸಾಮೂಹಿಕ ಅತ್ಯಾಚಾರದ ಅಪರಾಧಕ್ಕಾಗಿ 20 ವರ್ಷಗಳ ಕಠಿಣ ಸಜೆ ವಿಧಿಸಲಾಗಿದ್ದು, ಇತರ ಸಂಬಂಧಿತ ಅಪರಾಧಗಳಿಗಾಗಿ ಏಕಕಾಲದಲ್ಲಿ ಅನುಭವಿಸಬೇಕಾದ ಹೆಚ್ಚುವರಿ ಶಿಕ್ಷೆಗಳನ್ನು ನೀಡಲಾಗಿದೆ. ಅಲ್ಲದೆ, ಆಪರಾಧಿಗಳಿಗೆ ವಿಧಿಸಲಾದ ದಂಡದ ಮೊತ್ತದಲ್ಲಿ 5 ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯವು ನಿರ್ದೇಶಿಸಿದೆ.

ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯಲ್ಲಿ, 1 ರಿಂದ 6 ರವರೆಗಿನ ಅಪರಾಧಿಗಳಿಗೆ ವಿಧಿಸಲಾದ ಶಿಕ್ಷೆಯನ್ನು ಹೆಚ್ಚಿಸುವಂತೆ ಕೋರಿದೆ. ಅಪರಾಧದ ಗಂಭೀರತೆ ಮತ್ತು ಸಮಾಜದ ಮೇಲೆ ಅದು ಬೀರುವ ಪರಿಣಾಮವನ್ನು ಪರಿಗಣಿಸಿದರೆ, ಪ್ರಸ್ತುತ ನೀಡಿರುವ ಶಿಕ್ಷೆಯು ಅಸಮರ್ಪಕವಾಗಿದೆ ಎಂದು ವಾದಿಸಿದೆ.

ಸೆಷನ್ಸ್ ನ್ಯಾಯಾಲಯವು ಅಪರಾಧಿಗಳಿಗೆ ಆಶ್ರಯ ನೀಡಿದ್ದ ಆರೋಪದಿಂದ ಚಾರ್ಲಿ ಥಾಮಸ್ ಅವರನ್ನು ಖುಲಾಸೆಗೊಳಿಸಿದೆ ಮತ್ತು ನಟ ದಿಲೀಪ್ ಅವರ ಮೇಲಿದ್ದ ಎಲ್ಲಾ ಆರೋಪಗಳನ್ನು ವಜಾಗೊಳಿಸಿ ಅವರನ್ನು ಮುಕ್ತಗೊಳಿಸಿದೆ. ಸನಿಲ್ ಕುಮಾರ್ ಮತ್ತು ಶರತ್ ನಾಯರ್ ಅವರ ಮೇಲಿದ್ದ ಪಿತೂರಿ, ಪ್ರಚೋದನೆ ಮತ್ತು ಸಾಕ್ಷ್ಯ ನಾಶಪಡಿಸಿದ ಆರೋಪಗಳಿಂದಲೂ ನ್ಯಾಯಾಲಯ ಅವರನ್ನು ಖುಲಾಸೆಗೊಳಿಸಿದೆ.

ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ, ಆರೋಪಿಗಳ ಖುಲಾಸೆಯು ಕಾನೂನುಬಾಹಿರ ಮತ್ತು ಅಸಮರ್ಥನೀಯ ಎಂದು ಪ್ರತಿಪಾದಿಸಿದೆ. ಪ್ರಕರಣದ ಹಿಂದಿನ ದೊಡ್ಡ ಮಟ್ಟದ ಪಿತೂರಿಗೆ ಸಂಬಂಧಿಸಿದ ಪುರಾವೆಗಳನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುವಲ್ಲಿ ವಿಚಾರಣಾ ನ್ಯಾಯಾಲಯವು ವಿಫಲವಾಗಿದೆ ಎಂದು ವಾದಿಸಿದೆ. ದಾಖಲಾಗಿರುವ ಸಾಕ್ಷ್ಯಾಧಾರಗಳ ಪ್ರಕಾರ, ಸಂತ್ರಸ್ತೆಯ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ 2013 ರಲ್ಲೇ ಎಂಟನೇ ಆರೋಪಿ (ಎ8) ಮತ್ತು ಮೊದಲನೇ ಆರೋಪಿ (ಎ1) ನಡುವೆ ಮುಖ್ಯ ಪಿತೂರಿ ನಡೆದಿತ್ತು. ಆ ನಂತರ 1 ರಿಂದ 6 ರವರೆಗಿನ ಆರೋಪಿಗಳು ಮಾಡಿದ ಕೃತ್ಯಗಳು ಅದೇ ಪಿತೂರಿಯ ಮುಂದುವರಿದ ಭಾಗವಾಗಿವೆ ಎಂದಿದೆ.

ವಿಚಾರಣಾ ನ್ಯಾಯಾಲಯವು ತನಿಖಾ ತಂಡದ ವಿರುದ್ಧ ನೀಡಿರುವ ಕೆಲವು ಪ್ರತಿಕೂಲ ಅಭಿಪ್ರಾಯಗಳನ್ನು ಸಹ ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ ಪ್ರಶ್ನಿಸಿದೆ. ವಿಶೇಷ ತನಿಖಾ ತಂಡವು (ಎಸ್‌ಐಟಿ) ಅತ್ಯಂತ ಸಮಗ್ರವಾದ ಮತ್ತು ನ್ಯಾಯಸಮ್ಮತವಾದ ತನಿಖೆಯನ್ನು ನಡೆಸಿದೆ ಎಂದು ಸರ್ಕಾರ ಪ್ರತಿಪಾದಿಸಿದೆ. ತನಿಖೆಯಲ್ಲಿ ಒಂದು ವೇಳೆ ಸಣ್ಣಪುಟ್ಟ ನ್ಯೂನತೆಗಳಿದ್ದರೂ ಸಹ, ಅವುಗಳಿಂದ ಆರೋಪಿಗಳಿಗೆ ಅನ್ಯಾಯವಾಗಿದೆ ಎಂದು ಸಾಬೀತಾಗದ ಹೊರತು, ಅಂತಹ ನ್ಯೂನತೆಗಳನ್ನೇ ಖುಲಾಸೆಗೆ ಆಧಾರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...