Homeಮುಖಪುಟಆರ್ಯನ್‌ ಖಾನ್‌ಗೆ ಡ್ರಗ್ಸ್ ಪೂರೈಕೆ ಆರೋಪ ನಿರಾಕರಿಸಿದ ನಟಿ ಅನನ್ಯ ಪಾಂಡೆ: ವರದಿ

ಆರ್ಯನ್‌ ಖಾನ್‌ಗೆ ಡ್ರಗ್ಸ್ ಪೂರೈಕೆ ಆರೋಪ ನಿರಾಕರಿಸಿದ ನಟಿ ಅನನ್ಯ ಪಾಂಡೆ: ವರದಿ

- Advertisement -
- Advertisement -

ಮುಂಬೈ ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಂದು ಬಾಲಿವುಡ್ ಯುವನಟಿ ಅನನ್ಯ ಪಾಂಡೆಯವರನ್ನು ವಿಚಾರಣೆ ನಡೆಸಿದೆ. ಡ್ರಗ್ಸ್ ಪೂರೈಕೆ ಅಥವಾ ಡ್ರಗ್ಸ್ ಬಳಸಿದ ಆರೋಪವನ್ನು ನಟಿ ನಿರಾಕರಿಸಿದ್ದಾರೆ.

ಪ್ರಕರಣದಲ್ಲಿ ಬಂಧೀಸಲಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಫೋನಿನಲ್ಲಿ ಪತ್ತೆಯಾದ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ನಟಿಯನ್ನು ವಿಚಾರಣೆಗೆ ಕರೆಸಿಕೊಳ್ಳಲಾಗಿದೆ. ಗುರುವಾರ ಸಂಜೆಯೂ ವಿಚಾರಣೆ ನಡೆಸಿದ್ದ ಎನ್‌ಸಿಬಿ, ಇಂದು ಮತ್ತೆ ವಿಚಾರಣೆಗೆ ಕರೆಸಿತ್ತು.

ಅಕ್ಟೋಬರ್‌ 8 ರಿಂದ ಜೈಲಿನಲ್ಲಿರುವ ಆರ್ಯನ್ ಖಾನ್ ಅವರ ವಾಟ್ಸಾಪ್‌ ಚಾಟ್‌ಗಳನ್ನು ಇಟ್ಟುಕೊಂಡು ನಟಿಯನ್ನು ಪ್ರಶ್ನೆ ಮಾಡಲಾಗಿದೆ ಎಂದು ವರದಿಯಾಗಿದೆ. ಚಾಟ್‌ಗಳಲ್ಲಿ ಆರ್ಯನ್ ಖಾನ್‌ಗೆ ಗಾಂಜಾ ಪೂರೈಸಲು ಸಹಾಯ ಮಾಡಿರುವುದು ಸೂಚಿಸುತ್ತದೆ ಎಂದು ಎನ್‌ಸಿಬಿ ಮೂಲಗಳು ಹೇಳಿವೆ.

“2018-19ರಲ್ಲಿ ಆರ್ಯನ್ ಖಾನ್‌ಗೆ ಡ್ರಗ್ ಡೀಲರ್‌ಗಳ ಮೊಬೈಲ್ ಸಂಖ್ಯೆಯನ್ನು ಒದಗಿಸುವ ಮೂಲಕ ಮೂರು ಬಾರಿ ಡ್ರಗ್ಸ್ ಪೂರೈಸಲು ನಟಿ ಸಹಾಯ ಮಾಡಿದ್ದಾರೆ ಎಂಬುದು ಆರ್ಯನ್ ಅವರ ಮೊಬೈಲ್ ಫೋನ್‌ನ ಚಾಟ್‌ಗಳು ತಿಳಿಸಿವೆ” ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: NCB ಅಧಿಕಾರಿ ಸಮೀರ್ ವಾಂಖೆಡೆ ಚಿತ್ರೋದ್ಯಮವನ್ನು ಸುಲಿಗೆ ಮಾಡುತ್ತಿದ್ದಾರೆ: ನವಾಬ್ ಮಲಿಕ್

ಚಾಟ್‌ನಲ್ಲಿ ಅನನ್ಯ ಪಾಂಡೆ ಹೆಸರು ಉಲ್ಲೇಖಗೊಂಡಿದ್ದು, ಒಮ್ಮೆ ಜನಪ್ರಿಯ ಗೆಟ್ ಟುಗೆದರ್ ಸೇರಿದಂತೆ ಒಟ್ಟು ಮೂರು ಬಾರಿ ಗಾಂಜಾ ಪೂರೈಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ.

“ಚಾಟ್ ಸಂಭಾಷಣೆಯಲ್ಲಿ ನಟಿ ಡ್ರಗ್ಸ್ ಪೂರೈಕೆ ಸಂಬಂಧಿತ ಮಾತುಕತೆಗಳನ್ನು ನಿರಾಕರಿಸಿದ್ದಾರೆ. ತಾನು ಎಂದಿಗೂ ಡ್ರಗ್ಸ್ ಸೇವಿಸಿಲ್ಲ, ಸರಬರಾಜು ಮಾಡಿಲ್ಲ ಎಂದು NCB ಅಧಿಕಾರಿಗಳಿಗೆ ಹೇಳಿದ್ದಾರೆ” ಎಂದು ಮೂಲಗಳು ತಿಳಿಸಿವೆ.

“ನಟಿಯ ಎರಡೂ ಫೋನ್‌ಗಳನ್ನು ನಾವು ವಶಪಡಿಸಿಕೊಂಡಿದ್ದೇವೆ, ಅದರಲ್ಲಿ ಹಳೆಯ ಹ್ಯಾಂಡ್‌ಸೆಟ್ ಮತ್ತು ಕೆಲವು ತಿಂಗಳ ಹಿಂದೆ ಅವರು ಖರೀದಿಸಿದ ಹೊಸ ಫೋನ್ ಕೂಡ ಸೇರಿದೆ” ಎಂದು ಎನ್‌ಸಿಬಿ ಮೂಲಗಳು ಎಎನ್‌ಐಗೆ ತಿಳಿಸಿವೆ.

ಮುಂಬೈ ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ 22 ವರ್ಷದ ಬಾಲಿವುಡ್ ನಟಿ ಅನನ್ಯ ಪಾಂಡೆಯವರ ಮುಂಬೈನ  ಬಾಂದ್ರಾದಲ್ಲಿರುವ ಮನೆಯ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಗುರುವಾರ ದಾಳಿ ನಡೆಸಿತ್ತು. ದಾಳಿಯಲ್ಲಿ ನಟಿಯ ಲ್ಯಾಪ್ ಟಾಪ್ ಮತ್ತು ಮೊಬೈಲ್ ಫೋನ್ ಎನ್‌ಸಿಬಿ ವಶಪಡಿಸಿಕೊಂಡಿದೆ.

ಅನನ್ಯ ಪಾಂಡೆ ಮತ್ತು ಆರ್ಯನ್ ಖಾನ್  ಕಾಮನ್ ಫ್ರೆಂಡ್ಸ್ ಸರ್ಕಲ್‌ ಹೊಂದಿದ್ದಾರೆ. ಅನನ್ಯ ಮತ್ತು ಆರ್ಯನ್ ಸಹೋದರಿ ಸುಹಾನಾ ಉತ್ತಮ ಸ್ನೇಹಿತರಾಗಿದ್ದಾರೆ. ಅನನ್ಯ ಪಾಂಡೆ 2019 ರಲ್ಲಿ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. ಈಕೆ  ಬಾಲಿವುಡ್ ನಟ ಚಂಕಿ ಪಾಂಡೆ ಮತ್ತು ಭಾವನಾ ಪಾಂಡೆ ಅವರ ಪುತ್ರಿ.

ಈ ತಿಂಗಳ ಆರಂಭದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್‌ ಮಗ ಆರ್ಯನ್ ಖಾನ್ ಮತ್ತು ಇತರರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಬಂಧಿಸಿದೆ.


ಇದನ್ನೂ ಓದಿ: ಡ್ರಗ್ಸ್ ಕೇಸ್: ನಟಿ ಅನನ್ಯ ಪಾಂಡೆಯ ಲ್ಯಾಪ್‌ಟಾಪ್, ಮೊಬೈಲ್ ಎನ್‌ಸಿಬಿ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...