Homeಮುಖಪುಟಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿ: 1 ಲಕ್ಷ ರೂ ಬಾಂಡ್‌ಗೆ ಸಹಿ

ಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿ: 1 ಲಕ್ಷ ರೂ ಬಾಂಡ್‌ಗೆ ಸಹಿ

- Advertisement -
- Advertisement -

ಮುಂಬೈ ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಮೂರು ವಾರಗಳ ಜೈಲು ವಾಸದ ನಂತರ ಆರೋಪಿ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದು, ಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿಯಾಗಿದ್ದು ಇಂದು ಸಂಜೆ ಎನ್‌ಡಿಪಿಸ್ ಕೋರ್ಟಿಗೆ ಹಾಜರಾಗಿ 1 ಲಕ್ಷ ರೂ ಬಾಂಡ್‌ಗೆ ಸಹಿ ಹಾಕಲಿದ್ದಾರೆ.

ಶಾರೂಕ್ ಖಾನ್‌ರವರ ಹಲವು ವರ್ಷದ ಸ್ನೇಹಿತೆಯಾದ ಜೂಹಿ ಚಾವ್ಲ ಆರ್ಯನ್ ಖಾನ್‌ರನ್ನು ಹುಟ್ಟಿದಾಗಿನಿಂದಲೇ ಬಲ್ಲವರು. ಶಾರೂಕ್ ಮತ್ತು ಚಾವ್ಲ ಹಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ.

ಬಾಂಬೆ ಹೈಕೋರ್ಟ್‌ನ ಆದೇಶದ ಆಪರೇಟಿವ್ ಭಾಗ ನಮಗೆ ಸಿಕ್ಕಿದೆ. ನಾವು ಶ್ಯೂರಿಟಿಗಳಂತಹ ಇತರ ವಿಧಿವಿಧಾನಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ನಮ್ಮ ಕಾನೂನು ತಂಡವು ಕೆಲಸ ಮಾಡುತ್ತಿದೆ. ನಾವು ಇಂದು ಬಿಡುಗಡೆಗೆ ಪ್ರಯತ್ನಿಸುತ್ತಿದ್ದೇವೆ,” ಜಾಮೀನು ಷರತ್ತುಗಳು ಲಭ್ಯವಾದ ಕೂಡಲೆ ನಟಿ ಜೂಹಿ ಚಾವ್ಲಾ ಅವರು ಆರ್ಯನ್ ಖಾನ್‌ಗೆ ಶ್ಯೂರಿಟಿಯಾಗಲು ನ್ಯಾಯಾಲಯಕ್ಕೆ ಬಂದರು ಎಂದು ಆರ್ಯನ್ ಖಾನ್ ಪರ ವಕೀಲ ಸತೀಶ್ ಮಾನೆಶಿಂಧೆ ತಿಳಿಸಿದ್ದಾರೆ.

“ಜೂಹಿ ಚಾವ್ಲಾ ಜಾಮೀನು ಆಗಿದ್ದಾರೆ. ಪಾಸ್‌ಪೋರ್ಟ್‌ನಲ್ಲಿ ಅವರ ಹೆಸರಿದೆ. ಆಧಾರ್ ಕಾರ್ಡ್ ಇದೆ” ಎಂದು ಆರ್ಯನ್ ಖಾನ್ ಅವರ ಶ್ಯೂರಿಟಿಯನ್ನು ಮಾನೆಶಿಂಧೆ ಹಾಜರುಪಡಿಸಿದರು. ಜೂಹಿ ಚಾವ್ಲಾ ಸಾಕ್ಷಿ ಪೆಟ್ಟಿಗೆಯನ್ನು ಪ್ರವೇಶಿಸಿದರು. ಅರ್ಬಾಜ್ ಮರ್ಚೆಂಟ್ ಮತ್ತು ಮುನ್‌ಮುನ್ ಧಮೇಚಾ ಅವರ ಪರವಾಗಿ ಹಾಜರಾಗದಿದ್ದರೂ ಅವರನ್ನು ಬಿಡುಗಡೆ ಮಾಡುವಂತೆ ಮನೇಶಿಂಡೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಆರ್ಯನ್ ಖಾನ್ ಮತ್ತು ಆತನ ಸಹ ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದರೂ ಆದೇಶ ಜೈಲು ತಲುಪಲು ಸಮಯ ತೆಗೆದುಕೊಳ್ಳುತ್ತಿದೆ. ಇಂದು ಸಂಜೆ 5.30ರೊಳಗೆ ಜೈಲು ಅಧಿಕಾರಿಗಳಿಗೆ ತಲುಪಿದರೆ ಆರ್ಯನ್ ಖಾನ್ ಇಂದೇ ಬಿಡುಗಡೆಯಾಗುತ್ತದೆ. ಇಲ್ಲದಿದ್ದಲ್ಲಿ  ಇಂದು ರಾತ್ರಿ ಸಹ ಜೈಲಿನಲ್ಲೆ ಉಳಿಯಬೇಕಾಗುತ್ತದೆ.

ನಿನ್ನೆ ಜಾಮೀನು ನೀಡಿರುವ ಮುಂಬೈ ಹೈಕೋರ್ಟ್ 14 ಷರತ್ತುಗಳನ್ನು ವಿಧಿಸಿದೆ. ಆದೇಶದ ಪ್ರಕಾರ ಅವರು ₹ 1 ಲಕ್ಷದ ವೈಯಕ್ತಿಕ ಬಾಂಡ್ ಅನ್ನು ಸಲ್ಲಿಸಬೇಕು ಮತ್ತು ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು.

ಅನುಮತಿಯಿಲ್ಲದೆ ದೇಶವನ್ನು ತೊರೆಯಬಾರದು, ಇದೇ ರೀತಿಯ ಚಟುವಟಿಕೆಗಳಲ್ಲಿ ತೊಡಗಬಾರದು, ಅವನ ಸ್ನೇಹಿತ ಅರ್ಬಾಜ್ ಮರ್ಚೆಂಟ್‌ನಂತಹ ಇತರ ಆರೋಪಿಗಳೊಂದಿಗೆ ಸಂವಹನ ಮಾಡಬಾರದು ಮತ್ತು ಮಾಧ್ಯಮಗಳೊಂದಿಗೆ ಮಾತನಾಡಬಾರದು” ಎಂಬ ಷರತ್ತುಗಳು ಸೇರಿವೆ.

ಆರ್ಯನ್ ಖಾನ್ ಪ್ರತಿ ಶುಕ್ರವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರ ನಡುವೆ ಎನ್‌ಸಿಬಿ ಕಚೇರಿಗೆ ಹೋಗಬೇಕು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಮತ್ತು ಅಗತ್ಯವಿದ್ದಾಗ ತನಿಖೆಗೆ ಸಹಕರಿಸಬೇಕಿದೆ. ಇವುಗಳಲ್ಲಿ ಯಾವುದಾದರೂ ಷರತ್ತುಗಳನ್ನು ಉಲ್ಲಂಘಿಸಿದರೆ, ಎನ್‌ಸಿಬಿಯು ಜಾಮೀನು ರದ್ದುಗೊಳಿಸುವಂತೆ ಕೋರಬಹುದು ಎಂದು ನ್ಯಾಯಾಲಯ ಹೇಳಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ರೂಸ್ ಹಗಡಿನಲ್ಲಿ ನಡೆಯುತ್ತಿದ್ದ ಪಾರ್ಟಿಯ ಮೇಲೆ ದಾಳಿ ನಡೆಸಿದ ಕೆಲವು ಗಂಟೆಗಳ ನಂತರ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್‌ರನ್ನು ಅಕ್ಟೋಬರ್ 3 ರಂದು ಬಂಧಿಸಲಾಗಿತ್ತು.

ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಖಾನ್ ಅವರಿಗೆ ಈ ಹಿಂದೆ ಎರಡು ಬಾರಿ ಜಾಮೀನು ನಿರಾಕರಿಸಲಾಗಿತ್ತು.


ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...