Homeಮುಖಪುಟಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿ: 1 ಲಕ್ಷ ರೂ ಬಾಂಡ್‌ಗೆ ಸಹಿ

ಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿ: 1 ಲಕ್ಷ ರೂ ಬಾಂಡ್‌ಗೆ ಸಹಿ

- Advertisement -
- Advertisement -

ಮುಂಬೈ ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಮೂರು ವಾರಗಳ ಜೈಲು ವಾಸದ ನಂತರ ಆರೋಪಿ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದು, ಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿಯಾಗಿದ್ದು ಇಂದು ಸಂಜೆ ಎನ್‌ಡಿಪಿಸ್ ಕೋರ್ಟಿಗೆ ಹಾಜರಾಗಿ 1 ಲಕ್ಷ ರೂ ಬಾಂಡ್‌ಗೆ ಸಹಿ ಹಾಕಲಿದ್ದಾರೆ.

ಶಾರೂಕ್ ಖಾನ್‌ರವರ ಹಲವು ವರ್ಷದ ಸ್ನೇಹಿತೆಯಾದ ಜೂಹಿ ಚಾವ್ಲ ಆರ್ಯನ್ ಖಾನ್‌ರನ್ನು ಹುಟ್ಟಿದಾಗಿನಿಂದಲೇ ಬಲ್ಲವರು. ಶಾರೂಕ್ ಮತ್ತು ಚಾವ್ಲ ಹಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ.

ಬಾಂಬೆ ಹೈಕೋರ್ಟ್‌ನ ಆದೇಶದ ಆಪರೇಟಿವ್ ಭಾಗ ನಮಗೆ ಸಿಕ್ಕಿದೆ. ನಾವು ಶ್ಯೂರಿಟಿಗಳಂತಹ ಇತರ ವಿಧಿವಿಧಾನಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ನಮ್ಮ ಕಾನೂನು ತಂಡವು ಕೆಲಸ ಮಾಡುತ್ತಿದೆ. ನಾವು ಇಂದು ಬಿಡುಗಡೆಗೆ ಪ್ರಯತ್ನಿಸುತ್ತಿದ್ದೇವೆ,” ಜಾಮೀನು ಷರತ್ತುಗಳು ಲಭ್ಯವಾದ ಕೂಡಲೆ ನಟಿ ಜೂಹಿ ಚಾವ್ಲಾ ಅವರು ಆರ್ಯನ್ ಖಾನ್‌ಗೆ ಶ್ಯೂರಿಟಿಯಾಗಲು ನ್ಯಾಯಾಲಯಕ್ಕೆ ಬಂದರು ಎಂದು ಆರ್ಯನ್ ಖಾನ್ ಪರ ವಕೀಲ ಸತೀಶ್ ಮಾನೆಶಿಂಧೆ ತಿಳಿಸಿದ್ದಾರೆ.

“ಜೂಹಿ ಚಾವ್ಲಾ ಜಾಮೀನು ಆಗಿದ್ದಾರೆ. ಪಾಸ್‌ಪೋರ್ಟ್‌ನಲ್ಲಿ ಅವರ ಹೆಸರಿದೆ. ಆಧಾರ್ ಕಾರ್ಡ್ ಇದೆ” ಎಂದು ಆರ್ಯನ್ ಖಾನ್ ಅವರ ಶ್ಯೂರಿಟಿಯನ್ನು ಮಾನೆಶಿಂಧೆ ಹಾಜರುಪಡಿಸಿದರು. ಜೂಹಿ ಚಾವ್ಲಾ ಸಾಕ್ಷಿ ಪೆಟ್ಟಿಗೆಯನ್ನು ಪ್ರವೇಶಿಸಿದರು. ಅರ್ಬಾಜ್ ಮರ್ಚೆಂಟ್ ಮತ್ತು ಮುನ್‌ಮುನ್ ಧಮೇಚಾ ಅವರ ಪರವಾಗಿ ಹಾಜರಾಗದಿದ್ದರೂ ಅವರನ್ನು ಬಿಡುಗಡೆ ಮಾಡುವಂತೆ ಮನೇಶಿಂಡೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಆರ್ಯನ್ ಖಾನ್ ಮತ್ತು ಆತನ ಸಹ ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದರೂ ಆದೇಶ ಜೈಲು ತಲುಪಲು ಸಮಯ ತೆಗೆದುಕೊಳ್ಳುತ್ತಿದೆ. ಇಂದು ಸಂಜೆ 5.30ರೊಳಗೆ ಜೈಲು ಅಧಿಕಾರಿಗಳಿಗೆ ತಲುಪಿದರೆ ಆರ್ಯನ್ ಖಾನ್ ಇಂದೇ ಬಿಡುಗಡೆಯಾಗುತ್ತದೆ. ಇಲ್ಲದಿದ್ದಲ್ಲಿ  ಇಂದು ರಾತ್ರಿ ಸಹ ಜೈಲಿನಲ್ಲೆ ಉಳಿಯಬೇಕಾಗುತ್ತದೆ.

ನಿನ್ನೆ ಜಾಮೀನು ನೀಡಿರುವ ಮುಂಬೈ ಹೈಕೋರ್ಟ್ 14 ಷರತ್ತುಗಳನ್ನು ವಿಧಿಸಿದೆ. ಆದೇಶದ ಪ್ರಕಾರ ಅವರು ₹ 1 ಲಕ್ಷದ ವೈಯಕ್ತಿಕ ಬಾಂಡ್ ಅನ್ನು ಸಲ್ಲಿಸಬೇಕು ಮತ್ತು ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು.

ಅನುಮತಿಯಿಲ್ಲದೆ ದೇಶವನ್ನು ತೊರೆಯಬಾರದು, ಇದೇ ರೀತಿಯ ಚಟುವಟಿಕೆಗಳಲ್ಲಿ ತೊಡಗಬಾರದು, ಅವನ ಸ್ನೇಹಿತ ಅರ್ಬಾಜ್ ಮರ್ಚೆಂಟ್‌ನಂತಹ ಇತರ ಆರೋಪಿಗಳೊಂದಿಗೆ ಸಂವಹನ ಮಾಡಬಾರದು ಮತ್ತು ಮಾಧ್ಯಮಗಳೊಂದಿಗೆ ಮಾತನಾಡಬಾರದು” ಎಂಬ ಷರತ್ತುಗಳು ಸೇರಿವೆ.

ಆರ್ಯನ್ ಖಾನ್ ಪ್ರತಿ ಶುಕ್ರವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರ ನಡುವೆ ಎನ್‌ಸಿಬಿ ಕಚೇರಿಗೆ ಹೋಗಬೇಕು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಮತ್ತು ಅಗತ್ಯವಿದ್ದಾಗ ತನಿಖೆಗೆ ಸಹಕರಿಸಬೇಕಿದೆ. ಇವುಗಳಲ್ಲಿ ಯಾವುದಾದರೂ ಷರತ್ತುಗಳನ್ನು ಉಲ್ಲಂಘಿಸಿದರೆ, ಎನ್‌ಸಿಬಿಯು ಜಾಮೀನು ರದ್ದುಗೊಳಿಸುವಂತೆ ಕೋರಬಹುದು ಎಂದು ನ್ಯಾಯಾಲಯ ಹೇಳಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ರೂಸ್ ಹಗಡಿನಲ್ಲಿ ನಡೆಯುತ್ತಿದ್ದ ಪಾರ್ಟಿಯ ಮೇಲೆ ದಾಳಿ ನಡೆಸಿದ ಕೆಲವು ಗಂಟೆಗಳ ನಂತರ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್‌ರನ್ನು ಅಕ್ಟೋಬರ್ 3 ರಂದು ಬಂಧಿಸಲಾಗಿತ್ತು.

ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಖಾನ್ ಅವರಿಗೆ ಈ ಹಿಂದೆ ಎರಡು ಬಾರಿ ಜಾಮೀನು ನಿರಾಕರಿಸಲಾಗಿತ್ತು.


ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...