Homeಮುಖಪುಟಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿ: 1 ಲಕ್ಷ ರೂ ಬಾಂಡ್‌ಗೆ ಸಹಿ

ಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿ: 1 ಲಕ್ಷ ರೂ ಬಾಂಡ್‌ಗೆ ಸಹಿ

- Advertisement -
- Advertisement -

ಮುಂಬೈ ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಮೂರು ವಾರಗಳ ಜೈಲು ವಾಸದ ನಂತರ ಆರೋಪಿ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದು, ಆರ್ಯನ್ ಖಾನ್ ಜಾಮೀನಿಗೆ ನಟಿ ಜೂಹಿ ಚಾವ್ಲ ಶ್ಯೂರಿಟಿಯಾಗಿದ್ದು ಇಂದು ಸಂಜೆ ಎನ್‌ಡಿಪಿಸ್ ಕೋರ್ಟಿಗೆ ಹಾಜರಾಗಿ 1 ಲಕ್ಷ ರೂ ಬಾಂಡ್‌ಗೆ ಸಹಿ ಹಾಕಲಿದ್ದಾರೆ.

ಶಾರೂಕ್ ಖಾನ್‌ರವರ ಹಲವು ವರ್ಷದ ಸ್ನೇಹಿತೆಯಾದ ಜೂಹಿ ಚಾವ್ಲ ಆರ್ಯನ್ ಖಾನ್‌ರನ್ನು ಹುಟ್ಟಿದಾಗಿನಿಂದಲೇ ಬಲ್ಲವರು. ಶಾರೂಕ್ ಮತ್ತು ಚಾವ್ಲ ಹಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ.

ಬಾಂಬೆ ಹೈಕೋರ್ಟ್‌ನ ಆದೇಶದ ಆಪರೇಟಿವ್ ಭಾಗ ನಮಗೆ ಸಿಕ್ಕಿದೆ. ನಾವು ಶ್ಯೂರಿಟಿಗಳಂತಹ ಇತರ ವಿಧಿವಿಧಾನಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ನಮ್ಮ ಕಾನೂನು ತಂಡವು ಕೆಲಸ ಮಾಡುತ್ತಿದೆ. ನಾವು ಇಂದು ಬಿಡುಗಡೆಗೆ ಪ್ರಯತ್ನಿಸುತ್ತಿದ್ದೇವೆ,” ಜಾಮೀನು ಷರತ್ತುಗಳು ಲಭ್ಯವಾದ ಕೂಡಲೆ ನಟಿ ಜೂಹಿ ಚಾವ್ಲಾ ಅವರು ಆರ್ಯನ್ ಖಾನ್‌ಗೆ ಶ್ಯೂರಿಟಿಯಾಗಲು ನ್ಯಾಯಾಲಯಕ್ಕೆ ಬಂದರು ಎಂದು ಆರ್ಯನ್ ಖಾನ್ ಪರ ವಕೀಲ ಸತೀಶ್ ಮಾನೆಶಿಂಧೆ ತಿಳಿಸಿದ್ದಾರೆ.

“ಜೂಹಿ ಚಾವ್ಲಾ ಜಾಮೀನು ಆಗಿದ್ದಾರೆ. ಪಾಸ್‌ಪೋರ್ಟ್‌ನಲ್ಲಿ ಅವರ ಹೆಸರಿದೆ. ಆಧಾರ್ ಕಾರ್ಡ್ ಇದೆ” ಎಂದು ಆರ್ಯನ್ ಖಾನ್ ಅವರ ಶ್ಯೂರಿಟಿಯನ್ನು ಮಾನೆಶಿಂಧೆ ಹಾಜರುಪಡಿಸಿದರು. ಜೂಹಿ ಚಾವ್ಲಾ ಸಾಕ್ಷಿ ಪೆಟ್ಟಿಗೆಯನ್ನು ಪ್ರವೇಶಿಸಿದರು. ಅರ್ಬಾಜ್ ಮರ್ಚೆಂಟ್ ಮತ್ತು ಮುನ್‌ಮುನ್ ಧಮೇಚಾ ಅವರ ಪರವಾಗಿ ಹಾಜರಾಗದಿದ್ದರೂ ಅವರನ್ನು ಬಿಡುಗಡೆ ಮಾಡುವಂತೆ ಮನೇಶಿಂಡೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಆರ್ಯನ್ ಖಾನ್ ಮತ್ತು ಆತನ ಸಹ ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದರೂ ಆದೇಶ ಜೈಲು ತಲುಪಲು ಸಮಯ ತೆಗೆದುಕೊಳ್ಳುತ್ತಿದೆ. ಇಂದು ಸಂಜೆ 5.30ರೊಳಗೆ ಜೈಲು ಅಧಿಕಾರಿಗಳಿಗೆ ತಲುಪಿದರೆ ಆರ್ಯನ್ ಖಾನ್ ಇಂದೇ ಬಿಡುಗಡೆಯಾಗುತ್ತದೆ. ಇಲ್ಲದಿದ್ದಲ್ಲಿ  ಇಂದು ರಾತ್ರಿ ಸಹ ಜೈಲಿನಲ್ಲೆ ಉಳಿಯಬೇಕಾಗುತ್ತದೆ.

ನಿನ್ನೆ ಜಾಮೀನು ನೀಡಿರುವ ಮುಂಬೈ ಹೈಕೋರ್ಟ್ 14 ಷರತ್ತುಗಳನ್ನು ವಿಧಿಸಿದೆ. ಆದೇಶದ ಪ್ರಕಾರ ಅವರು ₹ 1 ಲಕ್ಷದ ವೈಯಕ್ತಿಕ ಬಾಂಡ್ ಅನ್ನು ಸಲ್ಲಿಸಬೇಕು ಮತ್ತು ಅವರ ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು.

ಅನುಮತಿಯಿಲ್ಲದೆ ದೇಶವನ್ನು ತೊರೆಯಬಾರದು, ಇದೇ ರೀತಿಯ ಚಟುವಟಿಕೆಗಳಲ್ಲಿ ತೊಡಗಬಾರದು, ಅವನ ಸ್ನೇಹಿತ ಅರ್ಬಾಜ್ ಮರ್ಚೆಂಟ್‌ನಂತಹ ಇತರ ಆರೋಪಿಗಳೊಂದಿಗೆ ಸಂವಹನ ಮಾಡಬಾರದು ಮತ್ತು ಮಾಧ್ಯಮಗಳೊಂದಿಗೆ ಮಾತನಾಡಬಾರದು” ಎಂಬ ಷರತ್ತುಗಳು ಸೇರಿವೆ.

ಆರ್ಯನ್ ಖಾನ್ ಪ್ರತಿ ಶುಕ್ರವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರ ನಡುವೆ ಎನ್‌ಸಿಬಿ ಕಚೇರಿಗೆ ಹೋಗಬೇಕು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಮತ್ತು ಅಗತ್ಯವಿದ್ದಾಗ ತನಿಖೆಗೆ ಸಹಕರಿಸಬೇಕಿದೆ. ಇವುಗಳಲ್ಲಿ ಯಾವುದಾದರೂ ಷರತ್ತುಗಳನ್ನು ಉಲ್ಲಂಘಿಸಿದರೆ, ಎನ್‌ಸಿಬಿಯು ಜಾಮೀನು ರದ್ದುಗೊಳಿಸುವಂತೆ ಕೋರಬಹುದು ಎಂದು ನ್ಯಾಯಾಲಯ ಹೇಳಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ರೂಸ್ ಹಗಡಿನಲ್ಲಿ ನಡೆಯುತ್ತಿದ್ದ ಪಾರ್ಟಿಯ ಮೇಲೆ ದಾಳಿ ನಡೆಸಿದ ಕೆಲವು ಗಂಟೆಗಳ ನಂತರ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್‌ರನ್ನು ಅಕ್ಟೋಬರ್ 3 ರಂದು ಬಂಧಿಸಲಾಗಿತ್ತು.

ಅಕ್ಟೋಬರ್ 8 ರಿಂದ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿರುವ ಆರ್ಯನ್ ಖಾನ್ ಅವರಿಗೆ ಈ ಹಿಂದೆ ಎರಡು ಬಾರಿ ಜಾಮೀನು ನಿರಾಕರಿಸಲಾಗಿತ್ತು.


ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಮೂರು ವಾರಗಳ ಬಳಿಕ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...