Homeಮುಖಪುಟಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ‘ಮಹಾರಾಷ್ಟ್ರವನ್ನು ಅಪಖ್ಯಾತಿಗೆ ಗುರಿ ಮಾಡಿದ ವ್ಯಕ್ತಿಗೆ ವೈ-ಪ್ಲಸ್ ಭದ್ರತಾ ರಕ್ಷಣೆ ಒದಗಿಸಿರುವುದು ನೋವಿನ ಮತ್ತು ಆಶ್ಚರ್ಯಕರ ವಿಷಯ' ಎಂದಿದ್ದಾರೆ.

- Advertisement -
- Advertisement -

ನಟಿ ಕಂಗನಾ ರಾಣಾವತ್ ಟ್ವಿಟ್ಟರ್ ಪೋಸ್ಟ್‌ಗಳು, ವಿವಾದಿತ ಹೇಳಿಕೆಗಳು ಶಿವಸೇನೆ ಮತ್ತು ಬಿಜೆಪಿಗೆ ಕೆಸರೆರಚಾಟಕ್ಕೆ ಹೊಸ ಕಾರಣ ನೀಡಿದೆ. ಮುಂಬೈ ಪೊಲೀಸರ ಬಗ್ಗೆ ನಟಿ ಕಂಗನಾ ಇತ್ತಿಚಿನ ಹೇಳಿಕೆಗಳು, ಮುಂಬೈಯನ್ನು ಪಾಕ್ ಆಕ್ರಮಿತ ಪ್ರದೇಶಕ್ಕೆ ಹೋಲಿಸಿದ್ದು, ಬಿಜೆಪಿ ಮತ್ತು ಸೇನಾ-ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟವು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳಲು ಕಾರಣವಾಗಿವೆ.

ಮಹಾರಾಷ್ಟ್ರದ ಆಡಳಿತ ಪಕ್ಷ ಶಿವಸೇನೆ ನಟಿ ಕಂಗನಾ ಹೇಳಿಕೆ ವಿರುದ್ಧ ತಿರುಗಿಬಿದ್ದಿದ್ದರೇ, ಅದೇ ಬಿಜೆಪಿ ಆಕೆಯ ಸುರಕ್ಷತೆ ಬಗ್ಗೆ ಯೋಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.

ಶಿವಸೇನೆ ಮುಖ್ಯಸ್ಥ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಟಿ ಕಂಗನಾ ಪಿಒಕೆ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವು ಜನರು ತಮಗೆ ಜೀವನಾಧಾರವಾದ ನಗರದ ಬಗ್ಗೆ ಕೃತಜ್ಞತೆ ಹೊಂದಿರುವುದಿಲ್ಲ ಎಂದಿದ್ದಾರೆ.

PC: Times of India

ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ-ಕಾಶ್ಮೀರಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದರು. ತಾನು ‘ಮೂವಿ ಮಾಫಿಯಾ’ಗಿಂತ ಹೆಚ್ಚು ಮುಂಬೈ ಪೊಲೀಸರಿಗೆ ಹೆದರುತ್ತಿದ್ದೆ ಮತ್ತು “ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ” ಬಗ್ಗೆ ಮಾತಾಡಿದ್ದರಿಂದ ನಾನು ಕೇಂದ್ರ ಅಥವಾ ಹಿಮಾಚಲ ಪ್ರದೇಶದಿಂದ ರಕ್ಷಣೆ ಪಡೆಯುವುದಾಗಿ ರಾಣಾವತ್ ಹೇಳಿದ್ದಾರೆ.

ವಿಶೇಷವೆಂದರೆ, ಕೇಂದ್ರವು ಸೋಮವಾರ ಕಂಗನಾಕ್ಕೆ ವೈ-ಪ್ಲಸ್ ಭದ್ರತೆಯನ್ನು ನೀಡಿತು. ಜೊತೆಗೆ ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ‘ಕಂಗನಾಕ್ಕೆ ಖಂಡಿತವಾಗಿಯೂ ರಕ್ಷಣೆ ಬೇಕು’ ಎಂದಿದ್ದಾರೆ.

ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಟಿಯ ಹೇಳಿಕೆ ವಿಚಾರದ ಕುರಿತು “ಕಂಗನಾ ಹೇಳಿದ್ದನ್ನು ಯಾರೂ ಬೆಂಬಲಿಸುವುದಿಲ್ಲ. ನಾವು ಅದನ್ನು ಖಂಡಿಸಿದ್ದೇವೆ. ಆದರೆ ಇದರರ್ಥ ನಾವು ಪರಾವಲಂಬಿ ರಾಷ್ಟ್ರದಲ್ಲಿ ವಾಸಿಸುತ್ತಿದ್ದೇವೆ ಎಂದಲ್ಲ. ಆಕೆಯ ಹೇಳಿಕೆ ಒಪ್ಪದಿದ್ದೂ, ಪ್ರತಿಯೊಬ್ಬ ನಾಗರಿಕನನ್ನು ರಕ್ಷಿಸುವುದು ರಾಜ್ಯದ ಜವಾಬ್ದಾರಿಯಾಗಿದೆ. ಎಂದು ಫಡ್ನವಿಸ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ‘ಮಹಾರಾಷ್ಟ್ರವನ್ನು ಅಪಖ್ಯಾತಿಗೆ ಗುರಿ ಮಾಡಿದ ವ್ಯಕ್ತಿಗೆ ವೈ-ಪ್ಲಸ್ ಭದ್ರತಾ ರಕ್ಷಣೆ ಒದಗಿಸಿರುವುದು ನೋವಿನ ಮತ್ತು ಆಶ್ಚರ್ಯಕರ ವಿಷಯ’ ಎಂದಿದ್ದಾರೆ.

ಇನ್ನೊಬ್ಬ ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ವಿಜಯ್ ವಾಡೆಟ್ಟಿವಾರ್, ತಮ್ಮ ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರವು ಅವರಿಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಮತ್ತು ಕಂಗನಾ ರಾಣಾವತ್ ವಿವಾದಗಳು ಬಿಹಾರ ಚುನಾವಣೆ ನಡೆಯುವವರೆಗೂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಮಾತನಾಡಿ, “ಮೋದಿ ಸರ್ಕಾರವು ತನ್ನ ಬೆಂಬಲಿಗರನ್ನು ಮತ್ತು ಜನರನ್ನು ತಮ್ಮ ಅಜೆಂಡಾ ಮುಂದುವರಿಸುವುದಕ್ಕಾಗಿ ಚೆನ್ನಾಗಿ ನೋಡಿಕೊಳ್ಳುತ್ತದೆ” ಎಂದು ಹೇಳಿದರು. ಜೊತೆಗೆ “ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ” ಇರುವ ಬಗ್ಗೆ ಕಂಗನಾ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗೆ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಸಾವಂತ್ ಒತ್ತಾಯಿಸಿದ್ದಾರೆ.

ಒಟ್ಟಾರೆ ಬಿಜೆಪಿ ಸರ್ಕಾರ ರಾಣಾವತ್‌ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಲೇ ಆಕೆಗೆ ಭದ್ರತೆ ಒದಗಿಸಿದೆ. ಆಕೆಗೆ ಬೆಂಬಲವಾಗಿ ನಿಂತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಶಿವಸೇನೆ, ಕಾಂಗ್ರೆಸ್ ಮಾತ್ರ ಆಕೆಯ ಹೇಳಿಕೆ ವಿರುದ್ಧ ಕೆಂಡಾಮಂಡಲವಾಗಿದ್ದು, ಒಬ್ಬರಲ್ಲ ಒಬ್ಬರೂ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಮಹಾರಾಷ್ಟರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ವತಃ ಹೇಳಿಕೆ ನೀಡಿ ಕಂಗನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಇನ್ನೊಂದೆಡೆ ಬಿಹಾರದ ಚುನಾವಣೆಗೆ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ. ಬಿಜೆಪಿಯು ತನ್ನ ಕರಪತ್ರಗಳಲ್ಲಿ ಸುಶಾಂತ್ ಫೋಟೊ ಜೊತೆಗೆ “#JusticeForSushanth” ಎಂದು ಬರೆದಿರುವ ಪೋಸ್ಟರ್, ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಿದೆ.

ನಟನ ಸಾವನ್ನು ಮತಗಳಿಗಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯ ನಿಲುವನ್ನು ಖಂಡಿಸಿ ಆಲ್ ಇಂಡಿಯಾ ಪ್ರೊಫೆಷನಲ್ ಕಾಂಗ್ರೆಸ್ ಸೌತ್ ಮುಂಬೈ ನಿನ್ನೆ ಟ್ವೀಟ್ ಮಾಡಿದೆ. ಜೊತೆಗೆ ಸಾರ್ವಜನಿಕರು ಸಹ ಛೀಮಾರಿ ಹಾಕಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೇ, ಏನೇ ಇದ್ದರೂ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಮತ್ತು ಕಂಗನಾ ರಾಣಾವತ್ ವಿವಾದಗಳು ಬಿಹಾರ ಚುನಾವಣೆ ನಡೆಯುವವರೆಗೂ ಮುಂದುವರಿಯಲಿದೆ ಎಂಬ ಸಚಿವ ವಿಜಯ್ ವಾಡೆಟ್ಟಿವಾರ್ ಮಾತು ನಿಜವಾಗುವುದರಲ್ಲಿ ಆಶ್ಚರ್ಯವಿಲ್ಲ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....