Homeಮುಖಪುಟಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಬಿಹಾರ ಚುನಾವಣೆವರೆಗೂ ಮುಂದುವರೆಯಲಿದೆ ಸುಶಾಂತ್ ಸಿಂಗ್- ಕಂಗನಾ ವಿವಾದಗಳು

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ‘ಮಹಾರಾಷ್ಟ್ರವನ್ನು ಅಪಖ್ಯಾತಿಗೆ ಗುರಿ ಮಾಡಿದ ವ್ಯಕ್ತಿಗೆ ವೈ-ಪ್ಲಸ್ ಭದ್ರತಾ ರಕ್ಷಣೆ ಒದಗಿಸಿರುವುದು ನೋವಿನ ಮತ್ತು ಆಶ್ಚರ್ಯಕರ ವಿಷಯ' ಎಂದಿದ್ದಾರೆ.

- Advertisement -
- Advertisement -

ನಟಿ ಕಂಗನಾ ರಾಣಾವತ್ ಟ್ವಿಟ್ಟರ್ ಪೋಸ್ಟ್‌ಗಳು, ವಿವಾದಿತ ಹೇಳಿಕೆಗಳು ಶಿವಸೇನೆ ಮತ್ತು ಬಿಜೆಪಿಗೆ ಕೆಸರೆರಚಾಟಕ್ಕೆ ಹೊಸ ಕಾರಣ ನೀಡಿದೆ. ಮುಂಬೈ ಪೊಲೀಸರ ಬಗ್ಗೆ ನಟಿ ಕಂಗನಾ ಇತ್ತಿಚಿನ ಹೇಳಿಕೆಗಳು, ಮುಂಬೈಯನ್ನು ಪಾಕ್ ಆಕ್ರಮಿತ ಪ್ರದೇಶಕ್ಕೆ ಹೋಲಿಸಿದ್ದು, ಬಿಜೆಪಿ ಮತ್ತು ಸೇನಾ-ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟವು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳಲು ಕಾರಣವಾಗಿವೆ.

ಮಹಾರಾಷ್ಟ್ರದ ಆಡಳಿತ ಪಕ್ಷ ಶಿವಸೇನೆ ನಟಿ ಕಂಗನಾ ಹೇಳಿಕೆ ವಿರುದ್ಧ ತಿರುಗಿಬಿದ್ದಿದ್ದರೇ, ಅದೇ ಬಿಜೆಪಿ ಆಕೆಯ ಸುರಕ್ಷತೆ ಬಗ್ಗೆ ಯೋಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.

ಶಿವಸೇನೆ ಮುಖ್ಯಸ್ಥ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಟಿ ಕಂಗನಾ ಪಿಒಕೆ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವು ಜನರು ತಮಗೆ ಜೀವನಾಧಾರವಾದ ನಗರದ ಬಗ್ಗೆ ಕೃತಜ್ಞತೆ ಹೊಂದಿರುವುದಿಲ್ಲ ಎಂದಿದ್ದಾರೆ.

PC: Times of India

ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ-ಕಾಶ್ಮೀರಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದರು. ತಾನು ‘ಮೂವಿ ಮಾಫಿಯಾ’ಗಿಂತ ಹೆಚ್ಚು ಮುಂಬೈ ಪೊಲೀಸರಿಗೆ ಹೆದರುತ್ತಿದ್ದೆ ಮತ್ತು “ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ” ಬಗ್ಗೆ ಮಾತಾಡಿದ್ದರಿಂದ ನಾನು ಕೇಂದ್ರ ಅಥವಾ ಹಿಮಾಚಲ ಪ್ರದೇಶದಿಂದ ರಕ್ಷಣೆ ಪಡೆಯುವುದಾಗಿ ರಾಣಾವತ್ ಹೇಳಿದ್ದಾರೆ.

ವಿಶೇಷವೆಂದರೆ, ಕೇಂದ್ರವು ಸೋಮವಾರ ಕಂಗನಾಕ್ಕೆ ವೈ-ಪ್ಲಸ್ ಭದ್ರತೆಯನ್ನು ನೀಡಿತು. ಜೊತೆಗೆ ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ‘ಕಂಗನಾಕ್ಕೆ ಖಂಡಿತವಾಗಿಯೂ ರಕ್ಷಣೆ ಬೇಕು’ ಎಂದಿದ್ದಾರೆ.

ಇದನ್ನೂ ಓದಿ: ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ನಟಿಯ ಹೇಳಿಕೆ ವಿಚಾರದ ಕುರಿತು “ಕಂಗನಾ ಹೇಳಿದ್ದನ್ನು ಯಾರೂ ಬೆಂಬಲಿಸುವುದಿಲ್ಲ. ನಾವು ಅದನ್ನು ಖಂಡಿಸಿದ್ದೇವೆ. ಆದರೆ ಇದರರ್ಥ ನಾವು ಪರಾವಲಂಬಿ ರಾಷ್ಟ್ರದಲ್ಲಿ ವಾಸಿಸುತ್ತಿದ್ದೇವೆ ಎಂದಲ್ಲ. ಆಕೆಯ ಹೇಳಿಕೆ ಒಪ್ಪದಿದ್ದೂ, ಪ್ರತಿಯೊಬ್ಬ ನಾಗರಿಕನನ್ನು ರಕ್ಷಿಸುವುದು ರಾಜ್ಯದ ಜವಾಬ್ದಾರಿಯಾಗಿದೆ. ಎಂದು ಫಡ್ನವಿಸ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ‘ಮಹಾರಾಷ್ಟ್ರವನ್ನು ಅಪಖ್ಯಾತಿಗೆ ಗುರಿ ಮಾಡಿದ ವ್ಯಕ್ತಿಗೆ ವೈ-ಪ್ಲಸ್ ಭದ್ರತಾ ರಕ್ಷಣೆ ಒದಗಿಸಿರುವುದು ನೋವಿನ ಮತ್ತು ಆಶ್ಚರ್ಯಕರ ವಿಷಯ’ ಎಂದಿದ್ದಾರೆ.

ಇನ್ನೊಬ್ಬ ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ವಿಜಯ್ ವಾಡೆಟ್ಟಿವಾರ್, ತಮ್ಮ ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರವು ಅವರಿಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಮತ್ತು ಕಂಗನಾ ರಾಣಾವತ್ ವಿವಾದಗಳು ಬಿಹಾರ ಚುನಾವಣೆ ನಡೆಯುವವರೆಗೂ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಮಾತನಾಡಿ, “ಮೋದಿ ಸರ್ಕಾರವು ತನ್ನ ಬೆಂಬಲಿಗರನ್ನು ಮತ್ತು ಜನರನ್ನು ತಮ್ಮ ಅಜೆಂಡಾ ಮುಂದುವರಿಸುವುದಕ್ಕಾಗಿ ಚೆನ್ನಾಗಿ ನೋಡಿಕೊಳ್ಳುತ್ತದೆ” ಎಂದು ಹೇಳಿದರು. ಜೊತೆಗೆ “ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ” ಇರುವ ಬಗ್ಗೆ ಕಂಗನಾ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗೆ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಸಾವಂತ್ ಒತ್ತಾಯಿಸಿದ್ದಾರೆ.

ಒಟ್ಟಾರೆ ಬಿಜೆಪಿ ಸರ್ಕಾರ ರಾಣಾವತ್‌ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಲೇ ಆಕೆಗೆ ಭದ್ರತೆ ಒದಗಿಸಿದೆ. ಆಕೆಗೆ ಬೆಂಬಲವಾಗಿ ನಿಂತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಆದರೆ ಶಿವಸೇನೆ, ಕಾಂಗ್ರೆಸ್ ಮಾತ್ರ ಆಕೆಯ ಹೇಳಿಕೆ ವಿರುದ್ಧ ಕೆಂಡಾಮಂಡಲವಾಗಿದ್ದು, ಒಬ್ಬರಲ್ಲ ಒಬ್ಬರೂ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಮಹಾರಾಷ್ಟರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ವತಃ ಹೇಳಿಕೆ ನೀಡಿ ಕಂಗನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ಸಿಬಿಐ

ಇನ್ನೊಂದೆಡೆ ಬಿಹಾರದ ಚುನಾವಣೆಗೆ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ. ಬಿಜೆಪಿಯು ತನ್ನ ಕರಪತ್ರಗಳಲ್ಲಿ ಸುಶಾಂತ್ ಫೋಟೊ ಜೊತೆಗೆ “#JusticeForSushanth” ಎಂದು ಬರೆದಿರುವ ಪೋಸ್ಟರ್, ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಿದೆ.

ನಟನ ಸಾವನ್ನು ಮತಗಳಿಗಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯ ನಿಲುವನ್ನು ಖಂಡಿಸಿ ಆಲ್ ಇಂಡಿಯಾ ಪ್ರೊಫೆಷನಲ್ ಕಾಂಗ್ರೆಸ್ ಸೌತ್ ಮುಂಬೈ ನಿನ್ನೆ ಟ್ವೀಟ್ ಮಾಡಿದೆ. ಜೊತೆಗೆ ಸಾರ್ವಜನಿಕರು ಸಹ ಛೀಮಾರಿ ಹಾಕಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೇ, ಏನೇ ಇದ್ದರೂ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಮತ್ತು ಕಂಗನಾ ರಾಣಾವತ್ ವಿವಾದಗಳು ಬಿಹಾರ ಚುನಾವಣೆ ನಡೆಯುವವರೆಗೂ ಮುಂದುವರಿಯಲಿದೆ ಎಂಬ ಸಚಿವ ವಿಜಯ್ ವಾಡೆಟ್ಟಿವಾರ್ ಮಾತು ನಿಜವಾಗುವುದರಲ್ಲಿ ಆಶ್ಚರ್ಯವಿಲ್ಲ.


ಇದನ್ನೂ ಓದಿ: ಸುಶಾಂತ್ ಸಾವನ್ನು ಬಿಹಾರ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...