Homeಮುಖಪುಟಸ್ವಾತಂತ್ರ್ಯ ಹೋರಾಟಗಾರರಿಗೆ ನಟಿ ಕಂಗನಾ ಅವಮಾನ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

ಸ್ವಾತಂತ್ರ್ಯ ಹೋರಾಟಗಾರರಿಗೆ ನಟಿ ಕಂಗನಾ ಅವಮಾನ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ದೇಶದ ಅತ್ಯುನ್ನತ ಪ್ರಶಸ್ತಿ ಪಡೆದು ಎರಡು ದಿನಗಳಲ್ಲೇ ಇಂತಹ ಹೇಳಿಎ ನೀಡುವ ಮೂಲಕ ದೇಶದ ಸ್ವತಂತ್ರಕ್ಕಾಗಿ ಬಲಿದಾನ ಮಾಡಿದವರನ್ನು ಅವಮಾನಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಲಾಗುತ್ತಿದೆ. ದೇಶಕ್ಕೆ ಅಪಮಾನ ಮಾಡಿದ ನಟಿ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡಬೇಕು ಎಂದು #कंगना_पद्मश्री_वापस_करो, #कंगना_देश_से_माफी_मांगो #कंगना_रनौत_देशद्रोही_है ಹ್ಯಾಶ್‌ಟ್ಯಾಗ್ ಬಳಸಿ ಟ್ವಿಟರ್‌ ಟ್ರೆಂಡ್ ಮಾಡಲಾಗುತ್ತಿದೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಅದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು.

ಇದನ್ನೂ ಓದಿ: ದೇಶದ ಸ್ವಾತಂತ್ಯ್ರದ ಕುರಿತು ವಿವಾದಾತ್ಮಕ ಹೇಳಿಕೆ: ನಟಿ ಕಂಗನಾ ವಿರುದ್ದ ದೂರು ದಾಖಲು

ನಟಿ ಕಂಗನಾ ರಣಾವತ್ ಸ್ವತಂತ್ರ ಬಂದಿದ್ದು 2014ರ ನಂತರ ಎಂಬ ಹೇಳಿಕೆ ಸಾವಿರಾರು ಮಂದಿ ಹೋರಾಟಗಾರರಿಗೆ ಮಾಡಿದ ಅವಮಾನವಲ್ಲವೇ…? ಇದು ರಾಜಕೀಯವನ್ನು ಬದಿಗೊತ್ತಿ ಚರ್ಚೆಸಬೇಕಾದ ವಿಷಯ…ದೇಶದ ಗೌರವ ಉಳಿಸಲು ಮೊದಲು ಈಕೆಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯಿರಿ ಎಂದು ಸಾವಿರಾರು ಮಂದಿ ಟ್ವೀಟ್ ಮಾಡಿದ್ದಾರೆ.

ಜೆಎನ್‌ಯು ಕನ್ನಡ ಅಧ್ಯಯನಪೀಠದ ಮುಖ್ಯಸ್ಥರಾಗಿದ್ದ ಪ್ರೊ. ಪುರುಷೋತ್ತಮ್ ಬಿಳಿಮಲೆಯವರು ಈ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವುದು ಹೀಗೆ: “ಕಂಗನಾ ಭಾರತದ ಸ್ವಾತಂತ್ರ್ಯ ಹೋರಾಟದ ಬಗ್ಗೆ ಹೇಳಿದ್ದು 2014ರ ಆನಂತರ ಬಲಪಂಥೀಯರು ಬರೆಯಬಯಸಿದ ಮತ್ತು ಬರೆಯುತ್ತಿರುವ ಇತಿಹಾಸದ ಒಂದು ಸಣ್ಣ ಭಾಗ ಅಷ್ಟೇ. ಸರಕಾರದ ಜೊತೆ ಕೈಜೋಡಿಸಿರುವ ನಕಲಿ ಇತಿಹಾಸಕಾರರು ಈಗಾಗಲೇ ‘ ನಮ್ಮಲ್ಲಿ ಜಾತಿ ಪದ್ಧತಿ ಮೊದಲು ಇರಲಿಲ್ಲ, ಮುಸ್ಲಿಮರು ಬಂದಮೇಲೆ ಅದು ಹುಟ್ಟಿಕೊಂಡಿತು’,’ ಕುರುಕ್ಷೇತ್ರ ಯುದ್ಧದಲ್ಲಿ ಕ್ಷಿಪಣಿಗಳ ಬಳಕೆಯಾಗಿತ್ತು’ ಎಂಬಿತ್ಯಾದಿ ವಿವರಗಳಿರುವ ಚರಿತ್ರೆಯನ್ನು ಬರೆಯುತ್ತಿದ್ದಾರೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈ ಬಗೆಯ ಸಂಶೋಧನೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಸರಕಾರವೇ ‘ ನಿಜವಾದ ಚರಿತ್ರೆ’ ಬರೆಯಲು ಸಮಿತಿ ನೇಮಕ ಮಾಡಿದೆ. ಸುಳ್ಳು ಇತಿಹಾಸದ ಪ್ರಚಾರಕ್ಕೆ ನೂರಾರು ಗುಂಪುಗಳು ಕೆಲಸಮಾಡುತ್ತಿವೆ. ಕಂಗನಾ ಹೇಳಿಕೆಗೆ ಸರಕಾರವಾಗಲೀ ಬಲಪಂಥೀಯ ಇತಿಹಾಸಕಾರರಾಗಲೀ, ಐಸಿಎಚ್ಆರ್ ( ಭಾರತೀಯ ಇತಿಹಾಸ ಸಂಸ್ಥೆ) . ಮೊದಲಾದ ಸಂಸ್ಥೆಗಳು ಪ್ರತಿಕ್ರಿಯಿಸಿಲ್ಲ ಎಂಬುದನ್ನು ಗಮನಿಸಿ. ಕಂಗನಾ ಹೇಳಿಕೆಗೆ ಸಭೆಯಲ್ಲಿ ಬಿದ್ದ ಚಪ್ಪಾಳೆ ಬೌದ್ಧಿಕ ಅಧ:ಪತನದ ಸಂಕೇತವೇ ಸರಿ” ಎಂದಿದ್ದಾರೆ.

ಇನ್ನು ನಟಿ ಕಂಗನಾರ ಅದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ ಎಂಬ ದೇಶದ್ರೋಹ ಹೇಳಿಕೆ ಹಿನ್ನೆಲೆ ಆಕೆಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಒತ್ತಾಯಿಸಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಇತ್ತೀಚೆಗೆ ಕಂಗನಾ ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ. ದೇಶದ ಕಾನೂನು, ಭಾರತದ ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವವಿಲ್ಲದ ಇಂತಹ ವ್ಯಕ್ತಿ ಪದ್ಮಶ್ರೀಯಂತಹ ಶ್ರೇಷ್ಠ ಪ್ರಶಸ್ತಿಗೆ ಅರ್ಹರಲ್ಲ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಬರೆದಿದ್ದಾರೆ.

ನಟಿ ಕಂಗನಾ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ವ್ಯಂಗ್ಯಚಿತ್ರಗಳು, ಮೀಮ್‌ಗಳು ಹರಿದಾಡುತ್ತಿವೆ.


ಇದನ್ನೂ ಓದಿ: ’ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ..ಕೆಚ್ಚೆದೆಯಿಂದ ಹೋರಾಡಿದವರಿಗೆ ಸ್ವಾತಂತ್ರ್ಯ ಸಿಕ್ಕಿದೆ: ಕಂಗನಾಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...