Homeಮುಖಪುಟಸ್ವಾತಂತ್ರ್ಯ ಹೋರಾಟಗಾರರಿಗೆ ನಟಿ ಕಂಗನಾ ಅವಮಾನ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

ಸ್ವಾತಂತ್ರ್ಯ ಹೋರಾಟಗಾರರಿಗೆ ನಟಿ ಕಂಗನಾ ಅವಮಾನ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ

- Advertisement -
- Advertisement -

ಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ದೇಶದ ಅತ್ಯುನ್ನತ ಪ್ರಶಸ್ತಿ ಪಡೆದು ಎರಡು ದಿನಗಳಲ್ಲೇ ಇಂತಹ ಹೇಳಿಎ ನೀಡುವ ಮೂಲಕ ದೇಶದ ಸ್ವತಂತ್ರಕ್ಕಾಗಿ ಬಲಿದಾನ ಮಾಡಿದವರನ್ನು ಅವಮಾನಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಲಾಗುತ್ತಿದೆ. ದೇಶಕ್ಕೆ ಅಪಮಾನ ಮಾಡಿದ ನಟಿ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ನೀಡಬೇಕು ಎಂದು #कंगना_पद्मश्री_वापस_करो, #कंगना_देश_से_माफी_मांगो #कंगना_रनौत_देशद्रोही_है ಹ್ಯಾಶ್‌ಟ್ಯಾಗ್ ಬಳಸಿ ಟ್ವಿಟರ್‌ ಟ್ರೆಂಡ್ ಮಾಡಲಾಗುತ್ತಿದೆ.

ಬುಧವಾರ (ನ.10) ಖಾಸಗಿ ಟೆಲಿವಿಷನ್ ಚಾನೆಲ್ ಟೈಮ್ಸ್ ನೌ ಆಯೋಜಿಸಿದ್ದ ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದ್ದ ನಟಿ ಕಂಗನಾ ರಣಾವತ್ ಹಿಂದಿಯಲ್ಲಿ ಮಾತನಾಡುತ್ತಾ, “1947 ರಲ್ಲಿ ಸಿಕ್ಕಿದ್ದು ಅದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ. ದೇಶಕ್ಕೆ ನಿಜವಾದ ಸ್ವಾತಂತ್ರ್ಯ 2014 ರಲ್ಲಿ ಬಂದಿದೆ” ಎಂದಿದ್ದರು.

ಇದನ್ನೂ ಓದಿ: ದೇಶದ ಸ್ವಾತಂತ್ಯ್ರದ ಕುರಿತು ವಿವಾದಾತ್ಮಕ ಹೇಳಿಕೆ: ನಟಿ ಕಂಗನಾ ವಿರುದ್ದ ದೂರು ದಾಖಲು

ನಟಿ ಕಂಗನಾ ರಣಾವತ್ ಸ್ವತಂತ್ರ ಬಂದಿದ್ದು 2014ರ ನಂತರ ಎಂಬ ಹೇಳಿಕೆ ಸಾವಿರಾರು ಮಂದಿ ಹೋರಾಟಗಾರರಿಗೆ ಮಾಡಿದ ಅವಮಾನವಲ್ಲವೇ…? ಇದು ರಾಜಕೀಯವನ್ನು ಬದಿಗೊತ್ತಿ ಚರ್ಚೆಸಬೇಕಾದ ವಿಷಯ…ದೇಶದ ಗೌರವ ಉಳಿಸಲು ಮೊದಲು ಈಕೆಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯಿರಿ ಎಂದು ಸಾವಿರಾರು ಮಂದಿ ಟ್ವೀಟ್ ಮಾಡಿದ್ದಾರೆ.

ಜೆಎನ್‌ಯು ಕನ್ನಡ ಅಧ್ಯಯನಪೀಠದ ಮುಖ್ಯಸ್ಥರಾಗಿದ್ದ ಪ್ರೊ. ಪುರುಷೋತ್ತಮ್ ಬಿಳಿಮಲೆಯವರು ಈ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವುದು ಹೀಗೆ: “ಕಂಗನಾ ಭಾರತದ ಸ್ವಾತಂತ್ರ್ಯ ಹೋರಾಟದ ಬಗ್ಗೆ ಹೇಳಿದ್ದು 2014ರ ಆನಂತರ ಬಲಪಂಥೀಯರು ಬರೆಯಬಯಸಿದ ಮತ್ತು ಬರೆಯುತ್ತಿರುವ ಇತಿಹಾಸದ ಒಂದು ಸಣ್ಣ ಭಾಗ ಅಷ್ಟೇ. ಸರಕಾರದ ಜೊತೆ ಕೈಜೋಡಿಸಿರುವ ನಕಲಿ ಇತಿಹಾಸಕಾರರು ಈಗಾಗಲೇ ‘ ನಮ್ಮಲ್ಲಿ ಜಾತಿ ಪದ್ಧತಿ ಮೊದಲು ಇರಲಿಲ್ಲ, ಮುಸ್ಲಿಮರು ಬಂದಮೇಲೆ ಅದು ಹುಟ್ಟಿಕೊಂಡಿತು’,’ ಕುರುಕ್ಷೇತ್ರ ಯುದ್ಧದಲ್ಲಿ ಕ್ಷಿಪಣಿಗಳ ಬಳಕೆಯಾಗಿತ್ತು’ ಎಂಬಿತ್ಯಾದಿ ವಿವರಗಳಿರುವ ಚರಿತ್ರೆಯನ್ನು ಬರೆಯುತ್ತಿದ್ದಾರೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈ ಬಗೆಯ ಸಂಶೋಧನೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಸರಕಾರವೇ ‘ ನಿಜವಾದ ಚರಿತ್ರೆ’ ಬರೆಯಲು ಸಮಿತಿ ನೇಮಕ ಮಾಡಿದೆ. ಸುಳ್ಳು ಇತಿಹಾಸದ ಪ್ರಚಾರಕ್ಕೆ ನೂರಾರು ಗುಂಪುಗಳು ಕೆಲಸಮಾಡುತ್ತಿವೆ. ಕಂಗನಾ ಹೇಳಿಕೆಗೆ ಸರಕಾರವಾಗಲೀ ಬಲಪಂಥೀಯ ಇತಿಹಾಸಕಾರರಾಗಲೀ, ಐಸಿಎಚ್ಆರ್ ( ಭಾರತೀಯ ಇತಿಹಾಸ ಸಂಸ್ಥೆ) . ಮೊದಲಾದ ಸಂಸ್ಥೆಗಳು ಪ್ರತಿಕ್ರಿಯಿಸಿಲ್ಲ ಎಂಬುದನ್ನು ಗಮನಿಸಿ. ಕಂಗನಾ ಹೇಳಿಕೆಗೆ ಸಭೆಯಲ್ಲಿ ಬಿದ್ದ ಚಪ್ಪಾಳೆ ಬೌದ್ಧಿಕ ಅಧ:ಪತನದ ಸಂಕೇತವೇ ಸರಿ” ಎಂದಿದ್ದಾರೆ.

ಇನ್ನು ನಟಿ ಕಂಗನಾರ ಅದು ಸ್ವಾತಂತ್ರ್ಯವಲ್ಲ ಅದು ಭಿಕ್ಷೆ ಎಂಬ ದೇಶದ್ರೋಹ ಹೇಳಿಕೆ ಹಿನ್ನೆಲೆ ಆಕೆಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹಿಂಪಡೆಯಬೇಕು ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಒತ್ತಾಯಿಸಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಇತ್ತೀಚೆಗೆ ಕಂಗನಾ ಅವರಿಗೆ ನೀಡಲಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ. ದೇಶದ ಕಾನೂನು, ಭಾರತದ ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವವಿಲ್ಲದ ಇಂತಹ ವ್ಯಕ್ತಿ ಪದ್ಮಶ್ರೀಯಂತಹ ಶ್ರೇಷ್ಠ ಪ್ರಶಸ್ತಿಗೆ ಅರ್ಹರಲ್ಲ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಬರೆದಿದ್ದಾರೆ.

ನಟಿ ಕಂಗನಾ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ವ್ಯಂಗ್ಯಚಿತ್ರಗಳು, ಮೀಮ್‌ಗಳು ಹರಿದಾಡುತ್ತಿವೆ.


ಇದನ್ನೂ ಓದಿ: ’ಭಿಕ್ಷೆ ಬೇಡಿದವರಿಗೆ ಕ್ಷಮೆ ಸಿಕ್ಕಿದೆ..ಕೆಚ್ಚೆದೆಯಿಂದ ಹೋರಾಡಿದವರಿಗೆ ಸ್ವಾತಂತ್ರ್ಯ ಸಿಕ್ಕಿದೆ: ಕಂಗನಾಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...