Homeಮುಖಪುಟಕಾಂಗ್ರೆಸ್‌ಗೆ ನಟಿ ಖುಷ್ಬೂ ರಾಜೀನಾಮೆ: ಇಂದು ಬಿಜೆಪಿ ಸೇರುವ ಸಾಧ್ಯತೆ

ಕಾಂಗ್ರೆಸ್‌ಗೆ ನಟಿ ಖುಷ್ಬೂ ರಾಜೀನಾಮೆ: ಇಂದು ಬಿಜೆಪಿ ಸೇರುವ ಸಾಧ್ಯತೆ

ಹತ್ರಾಸ್‌‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಖುಷ್ಬೂ ತೀವ್ರವಾಗಿ ಟೀಕಿಸಿದ್ದರು.

- Advertisement -
- Advertisement -

ಬಹುಭಾಷಾ ನಟಿ, ರಾಜಕಾರಣಿ ಖುಷ್ಬೂ ಸುಂದರ್‌ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಹೇಳಿಕೆಗಳ ಬೆನ್ನಲ್ಲೇ ಎಐಸಿಸಿ ವಕ್ತಾರ ಸ್ಥಾನದಿಂದ ಕೈಬಿಡಲಾಗಿತ್ತು. ಈಗ ನಟಿ ಖುಷ್ಬೂ ತಾವೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದು ಅವರು ಬಿಜೆಪಿ ಸೇರುವ ಸಾಧ್ಯತೆಯನ್ನು ದಟ್ಟಗೊಳಿಸಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ಇನ್ನು ಎಂಟು ತಿಂಗಳು ಬಾಕಿ ಇರುವಾಗ ಇವರ ನಡೆ ಕುತೂಹಲ ಮೂಡಿಸಿದೆ.

ಇಂದು ಬಿಜೆಪಿಗೆ ಸೇರುವ ಸಾಧ್ಯತೆ ಇರುವುದಾಗಿ ವರದಿಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾದ ಖುಷ್ಬೂ ಸುಂದರ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ’ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಬಯಸುವ ನನ್ನಂತಹ ಜನರನ್ನು ತುಳಿಯಲಾಗುತ್ತಿದೆ ಎಂದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಖುಷ್ಬೂ, ’ಕಾಂಗ್ರೆಸ್ ಪಕ್ಷ 2014 ರ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿ ಅತ್ಯಂತ ಹೀನಾಯ ಸಮಯದಲ್ಲಿ ನಾನು ಪಕ್ಷಕ್ಕೆ ಸೇರ್ಪಡೆಯಾದೆ. ಯಾವುದೇ ಹಣಕಾಸಿನ ಲಾಭಕ್ಕಾಗಿ ಅಥವಾ ಹೆಸರು, ಖ್ಯಾತಿಗಾಗಿ ಪಕ್ಷಕ್ಕೆ ಬರಲಿಲ್ಲ’ ಎಂದು ತಿಳಿಸಿದ್ದಾರೆ. ಪಕ್ಷದಲ್ಲಿ ವಾಸ್ತವ ಪರಿಸ್ಥಿತಿಯ ಸಂಪರ್ಕ ಇಲ್ಲದವರು ಅಥವಾ ಸಾರ್ವಜನಿಕವಾಗಿ ಗುರುತಿಸಿಕೊಳ್ಳದ ವ್ಯಕ್ತಿಗಳು ನಿಯಂತ್ರಣ ಹೇರುತ್ತಿದ್ದಾರೆ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.  ಪತ್ರದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಜೊತೆಗಿನ ಆರು ವರ್ಷಗಳ ನಂಟು ಮುರಿದುಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು: AIADMK ಪಕ್ಷದಿಂದ ಇ.ಪಳನಿಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ; ಅಧಿಕೃತ ಘೋಷಣೆ

2014ರಲ್ಲಿ ಸೋನಿಯಾ ಗಾಂಧಿ ಜೊತೆಗಿನ ಭೇಟಿ ಬಳಿಕ ನಟಿ ಡಿಎಂಕೆ ತೊರೆದ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಆದರೆ 2019ರ ಲೋಕಸಭಾ ಚುನಾವಣೆಯ ಡಿಎಂಕೆ–ಕಾಂಗ್ರೆಸ್‌ ಮೈತ್ರಿಯಲ್ಲಿ ಅವರಿಗೆ ಟಿಕೆಟ್‌ ಸಿಗಲಿಲ್ಲ, ಅಲ್ಲದೇ ರಾಜ್ಯಸಭೆಗೂ ಆಯ್ಕೆ ಮಾಡಲಿಲ್ಲ.

ಕಳೆದ ವಾರ, ಖುಷ್ಬೂ ಸುಂದರ್ ಬಿಜೆಪಿ ಸೇರುವ ವದಂತಿಗಳನ್ನು ತಳ್ಳಿ ಹಾಕಿದ್ದರು. ತಾನು ಕಾಂಗ್ರೆಸ್ ನಿಂದ ಎಲ್ಲಿಯೂ ಹೋಗುತ್ತಿಲ್ಲ ಮತ್ತು ಬಿಜೆಪಿಗೆ ಸೇರುವ ವದಂತಿಗಳು 2014 ರಿಂದ ಸುತ್ತುತ್ತಿವೆ ಎಂದು ದಿ ಹಿಂದೂಗೆ ತಿಳಿಸಿದ್ದರು.

ನಟಿ ಪಕ್ಷಕ್ಕೆ ಸೇರಲಿದ್ದಾರೆ ಎಂದು ತಮಿಳುನಾಡಿನ ಬಿಜೆಪಿ ಮೂಲಗಳು ತಿಳಿಸಿವೆ. ಟಿಎನ್‌ಸಿಸಿಯ ಹಿರಿಯ ನಾಯಕಿ ಕೂಡ ಅವರು (ಖುಷ್ಬೂ) ದೆಹಲಿಗೆ ತೆರಳಿದ ನಂತರ ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಧೃಢಪಡಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್‌.ಮುರುಗನ್‌ ಶನಿವಾರದಿಂದಲೂ ನವದೆಹಲಿಯಲ್ಲೇ ಇದ್ದಾರೆ. ನಟಿ ಖುಷ್ಬೂ ಭಾನುವಾರ ರಾತ್ರಿ ದೆಹಲಿಗೆ ತೆರಳಿದ್ದಾರೆ. ಅವರ ದೆಹಲಿ ಭೇಟಿ ಮತ್ತಷ್ಟು ಊಹಾಪೊಹಗಳಿಗೆ ಕಾರಣವಾಗಿದೆ.

90ರ ದಶಕದಲ್ಲಿ ತಮಿಳುನಾಡಿನ ಅತ್ಯಂತ ಜನಪ್ರಿಯ ಸ್ಟಾರ್‌ ನಟ-ನಟಿಯರಲ್ಲಿ ಖುಷ್ಬೂ ಸಹ ಒಬ್ಬರಾಗಿದ್ದರು. ಆ ಸಮಯದಲ್ಲಿ ಅಭಿಮಾನಿಗಳು ಅವರಿಗಾಗಿಯೇ ದೇವಾಲಯವನ್ನೂ ಕಟ್ಟಿದ್ದರು. ಅವರು ಹಿರಿತೆರೆಯ ಜೊತೆಗೆ ಕಿರುತೆರೆಗಳಲ್ಲೂ ಕಾಣಿಸಿಕೊಂಡಿದ್ದಾರೆ.

ಹತ್ರಾಸ್‌‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಅವರು ತೀವ್ರವಾಗಿ ಟೀಕಿಸಿದ್ದರು.


ಇದನ್ನೂ ಓದಿ: ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....