Homeಮುಖಪುಟಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ರಾಜಕೀಯಕ್ಕೆ ಬಲಿಪಶುವಾಗದಿರಿ. ಅಧಿಕಾರ ಮತ್ತು ನಿಯಂತ್ರಣಕ್ಕಾಗಿ ಅದು ಸೃಷ್ಟಿಸುವ ಅಸ್ಮಿತೆಯ (ಗುರುತಿನ) ಬಿಕ್ಕಟ್ಟಿಗೆ ಈಡಾಗದಿರಿ. ಪ್ರಶ್ನಿಸಿ, ಅರ್ಥೈಸಿಕೊಳ್ಳಿ (ಕಂಡುಕೊಳ್ಳಿ) ಮತ್ತು ಅದರಿಂದ ಮೇಲೆದ್ದು ನಿಲ್ಲಿ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದ ಕುರಿತು ಹಲವು ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿವೆ. ಪ್ರಿಯಾಂಕ ಗಾಂಧಿ, ಕಮಲ್‌ನಾಥ್‌ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಮಂದಿರ ನಿರ್ಮಾಣಕ್ಕೆ ಶುಭಹಾರೈಸಿರುವುದು ಟೀಕೆಗೆ ಗುರಿಯಾಗಿದೆ. ಇಂತಹ ಸಂದರ್ಭದಲ್ಲಿ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನ ಈ ಕುರಿತು ಫೇಸ್‌ಬುಕ್‌ನಲ್ಲಿ ಹಾಕಿರುವ ಪೋಸ್ಟ್‌ ತೀವ್ರ ಚರ್ಚೆಗೆ ಒಳಗಾಗಿದೆ.

ಮಂದಿರ, ಮಸೀದಿ ನಿರ್ಮಾಣದ ವಿಚಾರದಲ್ಲಿ ರಮ್ಯಾರವರ ನಿಲುವನ್ನು ಬಹಳಷ್ಟು ಜನ ಸ್ವಾಗತಿಸಿದ್ದಾರೆ. ರಮ್ಯಾರವರಷ್ಟು ಸೂಕ್ಷ್ಮವಾಗಿ ಯೋಚಿಸುವ ಮನಸ್ಥಿತಿ ಎಲ್ಲಾ ರಾಜಕಾರಣಿಗಳಿಗೂ ಬರಲಿ ಎಂದು ಆಶಿಸಿದ್ದಾರೆ. ಇನ್ನು ಕೆಲವರು ಅವರ ನಿಲುವನ್ನು ವಿರೋಧಿಸಿದ್ದಾರೆ. ಮತ್ತಷ್ಟು ಜನ ಕನ್ನಡದಲ್ಲಿ ಪೋಸ್ಟ್‌ ಮಾಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ರಮ್ಯಾ ಹೇಳಿದ್ದೇನು? ಇಲ್ಲಿದೆ ನೋಡಿ.

“ರಾಮಮಂದಿರ ಕಟ್ಟಲಾಗುತ್ತಿರುವುದರಿಂದ ಹಿಂದೂಗಳಿಗೆ ಸಂತಸವಾಗಿದೆ ಎಂದು ನನಗೆ ಸಂತಸ. ಮಸೀದಿ ಕಟ್ಟಲಾಗುವುದು ಎಂದು ಮುಸ್ಲಿಮರಿಗೆ ಸಂತಸವಾದಾಗಲೂ ನನಗೂ ಸಂತಸ. ಸಂತಸದಿಂದಿರಲು ಅಥವಾ ದೇವರನ್ನು ತಿಳಿದುಕೊಳ್ಳಲು ಮಂದಿರ, ಮಸೀದಿಗಳು ಬೇಕಾಗಿಲ್ಲವೆಂದು ಅವರಿಬ್ಬರೂ ತಿಳಿದುಕೊಂಡರೆ ನನಗೆ ಅತ್ಯಂತ ಹೆಚ್ಚು ಸಂತಸ. ಸಂತಸವು ಒಗ್ಗಟ್ಟು, ಏಕತೆ, ಜೊತೆಜೊತೆಗೆ ಬದುಕುವುದರಲ್ಲಿದೆ. ಬಾಹ್ಯವಾದುದನ್ನು ತಿರಸ್ಕರಿಸಿ. ನಿಮ್ಮೊಳಗೆ ಇಣುಕಿ ನೋಡಿ. ಅಲ್ಲಿ ನಿಮ್ಮ ನಿಜವಾದ ದೇವರಿರುತ್ತಾನೆ ಮತ್ತು ನಿಜವಾದ ನೀವಿರುತ್ತೀರಿ.” ಎಂದು ರಮ್ಯಾ ಬರೆದಿದ್ದಾರೆ.

Don't be a victim to politics. Don't succumb to the identity crisis it creates for power and control. Question, look through it & rise above.

Posted by Divya Spandana/Ramya on Thursday, August 6, 2020

ಜೊತೆಗೆ “ರಾಜಕೀಯಕ್ಕೆ ಬಲಿಪಶುವಾಗದಿರಿ. ಅಧಿಕಾರ ಮತ್ತು ನಿಯಂತ್ರಣಕ್ಕಾಗಿ ಅದು ಸೃಷ್ಟಿಸುವ ಅಸ್ಮಿತೆಯ (ಗುರುತಿನ) ಬಿಕ್ಕಟ್ಟಿಗೆ ಈಡಾಗದಿರಿ. ಪ್ರಶ್ನಿಸಿ, ಅರ್ಥೈಸಿಕೊಳ್ಳಿ (ಕಂಡುಕೊಳ್ಳಿ) ಮತ್ತು ಅದರಿಂದ ಮೇಲೆದ್ದು ನಿಲ್ಲಿ (ಅದನ್ನು ಮೆಟ್ಟಿನಿಲ್ಲಿ.) ಎಂದು ರಮ್ಯಾ ದಿವ್ಯಸ್ಪಂದನ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

0
ಯೂಟ್ಯೂಬರ್ ಮನೀಶ್ ಕಶ್ಯಪ್ ಇಂದು ಬಿಜೆಪಿ ಸಂಸದ ಮನೋಜ್ ತಿವಾರಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಹಾರ ಮೂಲದ ಯೂಟ್ಯೂಬರ್ ಕಶ್ಯಪ್ ಕಳೆದ ವರ್ಷ ನಕಲಿ ಮಾಹಿತಿ ಹರಡಿದ್ದಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ...