Homeಮುಖಪುಟತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ಮಹಿಳೆಯರನ್ನು ಅವರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ?

- Advertisement -
- Advertisement -

“ಸೀರೆ ಅಲ್ಲ, ಗೌನೂ ಅಲ್ಲ ಉಟ್ಟ ಬಟ್ಟೆಲೇನೈತೇ, ನೋಡೋದ್ರಾಗೆ ಎಲ್ಲ ಐತೆ, ನಿಮ್ಮ ಬುದ್ಧಿ ಇಲ್ಲ ಸುದ್ದಿ” ಎಂದು ‘ಪುಷ್ಪ’ ಸಿನಿಮಾದ ‘ಹೂಂ ಅಂತೀಯಾ’ ಹಾಡಿನಲ್ಲಿ ಹೇಳಲಾಗಿತ್ತು. ಈ ಹಾಡಿಗೆ ಹೆಜ್ಜೆ ಹಾಕಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಸುಮಂತಾ ರುತ್‌ಪ್ರಭು ಅವರೀಗ, ತೊಟ್ಟ ಬಟ್ಟೆಯ ಕುರಿತ ಆಕ್ಷೇಪಗಳಿಗೆ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ತಾನು ಧರಿಸಿದ ಬಟ್ಟೆಯ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಎದುರಿಸಿದ ದಕ್ಷಿಣ ಭಾರತದ ಹೆಸರಾಂತ ನಟಿ ಸಮಂತಾ ರುತ್ ಪ್ರಭು, “ಹೆಣ್ಣು ಮಕ್ಕಳು ಧರಿಸುವ ಉಡುಪಿನ ಆಧಾರದಲ್ಲಿ ಅವರನ್ನು ಅಳೆಯಬೇಡಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮುನ್ನ ಸಮಂತಾ ರುತ್ ಪ್ರಭು ತನ್ನ ಹಲವು ಸುಂದರ ಫೋಟೊಗಳನ್ನು ತೆಗೆದು Instagram ನಲ್ಲಿ ಪೋಸ್ಟ್‌ ಮಾಡಿದ್ದರು. ಕಪ್ಪು ಮತ್ತು ಪಚ್ಚೆ ಹಸಿರು ಬಣ್ಣದ, ನೆಲದವರೆಗೂ ತಾಗುವಂತಹ ಗೌನ್ ಧರಿಸಿ ಫೋಟೊಗೆ ಪೋಸ್ ನೀಡಿದ್ದರು. ಆ ಫೋಟೊಗಳನ್ನು Instagramನಲ್ಲಿ ಹಂಚಿಕೊಳ್ಳುವಾಗ “ನನ್ನ ಅತ್ಯಂತ ನೆಚ್ಚಿನ ನೋಟಗಳಲ್ಲಿ ಒಂದು” ಎಂದು ಬರೆದಿದ್ದರು. ಆದರೆ ಕೆಲವರು ಅದನ್ನೂ ಟೀಕಿಸಿ ಟ್ರೋಲ್ ಮಾಡಿದ್ದರು.

 

View this post on Instagram

 

A post shared by Samantha (@samantharuthprabhuoffl)

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಮಂತಾ “ಮಹಿಳೆಯರನ್ನು ಅವರು ಧರಿಸುವ ಬಟ್ಟೆ, ಅವರ ಜನಾಂಗ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ನೋಟ, ಚರ್ಮದ ಬಣ್ಣ… ಇತ್ಯಾದಿಗಳನ್ನು ಆಧರಿಸಿ ಅಳೆಯಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಅವರು ಧರಿಸುವ ಬಟ್ಟೆಗಳನ್ನು ಆಧರಿಸಿ ಅಳೆಯುವುದು ಯಾರೇ ಆದರೂ ತಕ್ಷಣವೇ ಮಾಡಬಹುದಾದ ಸುಲಭದ ಕೆಲಸವಾಗಿದೆ. ಒಬ್ಬ ಮಹಿಳೆಯಾಗಿ, ಈ ರೀತಿ ಅಳೆಯುವುದರ ಅರ್ಥವೇನೆಂಬುದನ್ನು ನಾನು ಪ್ರತ್ಯಕ್ಷವಾಗಿ ತಿಳಿದುಕೊಂಡಿದ್ದೇನೆ” ಎಂದು ಹೇಳಿದ್ದಾರೆ.

“ನಾವೀಗ 2022 ರ ಇಸವಿಯಲ್ಲಿದ್ದೇವೆ. ಅಂತಿಮವಾಗಿ ಮಹಿಳೆಯರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅವರನ್ನು ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ? ಇನ್ನೊಬ್ಬರನ್ನು ಅಳೆಯುವುದರ ಬದಲು ನಮ್ಮನ್ನು ನಾವು ನೋಡಿಕೊಳ್ಳಲು ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬಹುದೇ? ನಮ್ಮ ವಿಚಾರಗಳನ್ನು ಬೇರೆಯವರ ಮೇಲೆ ಹೇರುವುದು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ನಾವು ಒಬ್ಬ ವ್ಯಕ್ತಿಯನ್ನು ಅಳೆಯುವ ಮತ್ತು ಅರ್ಥಮಾಡಿಕೊಳ್ಳುವ ವಿಧಾನವನ್ನು ಮರುರೂಪಿಸಬಹುದೆ?” ಎಂದು ಸಮಂತಾ ಬರೆದಿದ್ದಾರೆ.

 

View this post on Instagram

 

A post shared by Samantha (@samantharuthprabhuoffl)

ನಟಿ ಸಮಂತಾರವರು ನಾಗಚೈತನ್ಯರಿಂದ ವಿಚ್ಚೇದನ ಪಡೆದ ಮೇಲೆ ಸಾಕಷ್ಟು ಆನ್‌ಲೈನ್ ಟ್ರೋಲ್‌ಗಳನ್ನು ಎದುರಿಸಬೇಕಾಗಿದೆ. ಅವರು ವಿಚ್ಛೇದನ ಪಡೆದುದ್ದೇ ತಪ್ಪು ಎನ್ನುವ ರೀತಿಯಲ್ಲಿ ಕೆಲವರು ಮಾತನಾಡಿದ್ದರು. ಇನ್ನು ಸಾಕಷ್ಟು ಹೆಸರು ಗಳಿಸಿದ ಪುಷ್ಪ ಸಿನಿಮಾದಲ್ಲಿ ಸಮಂತಾ ಹಾಡೊಂದಕ್ಕೆ ನೃತ್ಯ ಮಾಡಿದ್ದಕ್ಕೂ ಅವರನ್ನು ಟ್ರೋಲ್ ಮಾಡಲಾಗಿತ್ತು.

ಸ್ನೇಹಿತೆಯೊಂದಿಗೆ ಸ್ವಿಮ್ ಸೂಟ್ ನಲ್ಲಿರುವ ಫೋಟೊ ಹಂಚಿಕೊಂಡಿದ್ದಕ್ಕೆ ಸಹ ನಿಮಗ್ಯಾಕೆ ಇದೆಲ್ಲಾ, ನೆಟ್ಟಗೆ ಬಟ್ಟೆ ಹಾಕಲು ಆಗೊಲ್ವೆ ಎಂದು ಟೀಕಿಸಲಾಯಿತು. ಈಗ ಅವರ ಸುಂದರ ಫೋಟೋಗೂ ಕೆಲ ಪುರುಷರು ಕ್ಯಾತೆ ತೆಗೆದಿದ್ದಾರೆ. ತಿನ್ನುವ ಆಹಾರ, ಉಡುಗೆ ಮತ್ತು ಜೀವನ ಶೈಲಿ ಪ್ರತಿಯೊಬ್ಬರ ವೈಯಕ್ತಿಕ ಹಕ್ಕಾಗಿದೆ. ಅದರಿಂದ ಬೇರೆಯವರಿಗೆ ಯಾವ ರೀತಿಯಲ್ಲಿಯೂ ತೊಂದರೆಯಾಗುವುದಿಲ್ಲ. ಆದರೂ ಇನ್ನೊಬ್ಬರ ಉಡುಪು-ಜೀವನ ಶೈಲಿಯ ಬಗ್ಗೆ ಕೆಲವರು ಏಕೆ ದಾಳಿ ಮಾಡುತ್ತಾರೆ? ಇಂಥವರಿಗೆ ನಟಿ ಸಮಂತಾ ಪ್ರಭು ಬಹಳ ಪ್ರಬುದ್ಧತೆಯಿಂದ ಉತ್ತರಿಸಿದ್ದಾರೆ. ಟ್ರೋಲ್ ಮಾಡಿದವರು ಇದನ್ನು ಈಗಲಾದರೂ ಅರ್ಥ ಮಾಡಿಕೊಳ್ಳುವರೆ?


ಇದನ್ನೂ ಓದಿ; ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...