Homeಮುಖಪುಟತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ಮಹಿಳೆಯರನ್ನು ಅವರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ?

- Advertisement -
- Advertisement -

“ಸೀರೆ ಅಲ್ಲ, ಗೌನೂ ಅಲ್ಲ ಉಟ್ಟ ಬಟ್ಟೆಲೇನೈತೇ, ನೋಡೋದ್ರಾಗೆ ಎಲ್ಲ ಐತೆ, ನಿಮ್ಮ ಬುದ್ಧಿ ಇಲ್ಲ ಸುದ್ದಿ” ಎಂದು ‘ಪುಷ್ಪ’ ಸಿನಿಮಾದ ‘ಹೂಂ ಅಂತೀಯಾ’ ಹಾಡಿನಲ್ಲಿ ಹೇಳಲಾಗಿತ್ತು. ಈ ಹಾಡಿಗೆ ಹೆಜ್ಜೆ ಹಾಕಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಸುಮಂತಾ ರುತ್‌ಪ್ರಭು ಅವರೀಗ, ತೊಟ್ಟ ಬಟ್ಟೆಯ ಕುರಿತ ಆಕ್ಷೇಪಗಳಿಗೆ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ತಾನು ಧರಿಸಿದ ಬಟ್ಟೆಯ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಎದುರಿಸಿದ ದಕ್ಷಿಣ ಭಾರತದ ಹೆಸರಾಂತ ನಟಿ ಸಮಂತಾ ರುತ್ ಪ್ರಭು, “ಹೆಣ್ಣು ಮಕ್ಕಳು ಧರಿಸುವ ಉಡುಪಿನ ಆಧಾರದಲ್ಲಿ ಅವರನ್ನು ಅಳೆಯಬೇಡಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮುನ್ನ ಸಮಂತಾ ರುತ್ ಪ್ರಭು ತನ್ನ ಹಲವು ಸುಂದರ ಫೋಟೊಗಳನ್ನು ತೆಗೆದು Instagram ನಲ್ಲಿ ಪೋಸ್ಟ್‌ ಮಾಡಿದ್ದರು. ಕಪ್ಪು ಮತ್ತು ಪಚ್ಚೆ ಹಸಿರು ಬಣ್ಣದ, ನೆಲದವರೆಗೂ ತಾಗುವಂತಹ ಗೌನ್ ಧರಿಸಿ ಫೋಟೊಗೆ ಪೋಸ್ ನೀಡಿದ್ದರು. ಆ ಫೋಟೊಗಳನ್ನು Instagramನಲ್ಲಿ ಹಂಚಿಕೊಳ್ಳುವಾಗ “ನನ್ನ ಅತ್ಯಂತ ನೆಚ್ಚಿನ ನೋಟಗಳಲ್ಲಿ ಒಂದು” ಎಂದು ಬರೆದಿದ್ದರು. ಆದರೆ ಕೆಲವರು ಅದನ್ನೂ ಟೀಕಿಸಿ ಟ್ರೋಲ್ ಮಾಡಿದ್ದರು.

 

View this post on Instagram

 

A post shared by Samantha (@samantharuthprabhuoffl)

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಮಂತಾ “ಮಹಿಳೆಯರನ್ನು ಅವರು ಧರಿಸುವ ಬಟ್ಟೆ, ಅವರ ಜನಾಂಗ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ನೋಟ, ಚರ್ಮದ ಬಣ್ಣ… ಇತ್ಯಾದಿಗಳನ್ನು ಆಧರಿಸಿ ಅಳೆಯಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಅವರು ಧರಿಸುವ ಬಟ್ಟೆಗಳನ್ನು ಆಧರಿಸಿ ಅಳೆಯುವುದು ಯಾರೇ ಆದರೂ ತಕ್ಷಣವೇ ಮಾಡಬಹುದಾದ ಸುಲಭದ ಕೆಲಸವಾಗಿದೆ. ಒಬ್ಬ ಮಹಿಳೆಯಾಗಿ, ಈ ರೀತಿ ಅಳೆಯುವುದರ ಅರ್ಥವೇನೆಂಬುದನ್ನು ನಾನು ಪ್ರತ್ಯಕ್ಷವಾಗಿ ತಿಳಿದುಕೊಂಡಿದ್ದೇನೆ” ಎಂದು ಹೇಳಿದ್ದಾರೆ.

“ನಾವೀಗ 2022 ರ ಇಸವಿಯಲ್ಲಿದ್ದೇವೆ. ಅಂತಿಮವಾಗಿ ಮಹಿಳೆಯರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅವರನ್ನು ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ? ಇನ್ನೊಬ್ಬರನ್ನು ಅಳೆಯುವುದರ ಬದಲು ನಮ್ಮನ್ನು ನಾವು ನೋಡಿಕೊಳ್ಳಲು ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬಹುದೇ? ನಮ್ಮ ವಿಚಾರಗಳನ್ನು ಬೇರೆಯವರ ಮೇಲೆ ಹೇರುವುದು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ನಾವು ಒಬ್ಬ ವ್ಯಕ್ತಿಯನ್ನು ಅಳೆಯುವ ಮತ್ತು ಅರ್ಥಮಾಡಿಕೊಳ್ಳುವ ವಿಧಾನವನ್ನು ಮರುರೂಪಿಸಬಹುದೆ?” ಎಂದು ಸಮಂತಾ ಬರೆದಿದ್ದಾರೆ.

 

View this post on Instagram

 

A post shared by Samantha (@samantharuthprabhuoffl)

ನಟಿ ಸಮಂತಾರವರು ನಾಗಚೈತನ್ಯರಿಂದ ವಿಚ್ಚೇದನ ಪಡೆದ ಮೇಲೆ ಸಾಕಷ್ಟು ಆನ್‌ಲೈನ್ ಟ್ರೋಲ್‌ಗಳನ್ನು ಎದುರಿಸಬೇಕಾಗಿದೆ. ಅವರು ವಿಚ್ಛೇದನ ಪಡೆದುದ್ದೇ ತಪ್ಪು ಎನ್ನುವ ರೀತಿಯಲ್ಲಿ ಕೆಲವರು ಮಾತನಾಡಿದ್ದರು. ಇನ್ನು ಸಾಕಷ್ಟು ಹೆಸರು ಗಳಿಸಿದ ಪುಷ್ಪ ಸಿನಿಮಾದಲ್ಲಿ ಸಮಂತಾ ಹಾಡೊಂದಕ್ಕೆ ನೃತ್ಯ ಮಾಡಿದ್ದಕ್ಕೂ ಅವರನ್ನು ಟ್ರೋಲ್ ಮಾಡಲಾಗಿತ್ತು.

ಸ್ನೇಹಿತೆಯೊಂದಿಗೆ ಸ್ವಿಮ್ ಸೂಟ್ ನಲ್ಲಿರುವ ಫೋಟೊ ಹಂಚಿಕೊಂಡಿದ್ದಕ್ಕೆ ಸಹ ನಿಮಗ್ಯಾಕೆ ಇದೆಲ್ಲಾ, ನೆಟ್ಟಗೆ ಬಟ್ಟೆ ಹಾಕಲು ಆಗೊಲ್ವೆ ಎಂದು ಟೀಕಿಸಲಾಯಿತು. ಈಗ ಅವರ ಸುಂದರ ಫೋಟೋಗೂ ಕೆಲ ಪುರುಷರು ಕ್ಯಾತೆ ತೆಗೆದಿದ್ದಾರೆ. ತಿನ್ನುವ ಆಹಾರ, ಉಡುಗೆ ಮತ್ತು ಜೀವನ ಶೈಲಿ ಪ್ರತಿಯೊಬ್ಬರ ವೈಯಕ್ತಿಕ ಹಕ್ಕಾಗಿದೆ. ಅದರಿಂದ ಬೇರೆಯವರಿಗೆ ಯಾವ ರೀತಿಯಲ್ಲಿಯೂ ತೊಂದರೆಯಾಗುವುದಿಲ್ಲ. ಆದರೂ ಇನ್ನೊಬ್ಬರ ಉಡುಪು-ಜೀವನ ಶೈಲಿಯ ಬಗ್ಗೆ ಕೆಲವರು ಏಕೆ ದಾಳಿ ಮಾಡುತ್ತಾರೆ? ಇಂಥವರಿಗೆ ನಟಿ ಸಮಂತಾ ಪ್ರಭು ಬಹಳ ಪ್ರಬುದ್ಧತೆಯಿಂದ ಉತ್ತರಿಸಿದ್ದಾರೆ. ಟ್ರೋಲ್ ಮಾಡಿದವರು ಇದನ್ನು ಈಗಲಾದರೂ ಅರ್ಥ ಮಾಡಿಕೊಳ್ಳುವರೆ?


ಇದನ್ನೂ ಓದಿ; ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...