Homeಮುಖಪುಟತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ಮಹಿಳೆಯರನ್ನು ಅವರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ?

- Advertisement -
- Advertisement -

“ಸೀರೆ ಅಲ್ಲ, ಗೌನೂ ಅಲ್ಲ ಉಟ್ಟ ಬಟ್ಟೆಲೇನೈತೇ, ನೋಡೋದ್ರಾಗೆ ಎಲ್ಲ ಐತೆ, ನಿಮ್ಮ ಬುದ್ಧಿ ಇಲ್ಲ ಸುದ್ದಿ” ಎಂದು ‘ಪುಷ್ಪ’ ಸಿನಿಮಾದ ‘ಹೂಂ ಅಂತೀಯಾ’ ಹಾಡಿನಲ್ಲಿ ಹೇಳಲಾಗಿತ್ತು. ಈ ಹಾಡಿಗೆ ಹೆಜ್ಜೆ ಹಾಕಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಸುಮಂತಾ ರುತ್‌ಪ್ರಭು ಅವರೀಗ, ತೊಟ್ಟ ಬಟ್ಟೆಯ ಕುರಿತ ಆಕ್ಷೇಪಗಳಿಗೆ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ತಾನು ಧರಿಸಿದ ಬಟ್ಟೆಯ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಎದುರಿಸಿದ ದಕ್ಷಿಣ ಭಾರತದ ಹೆಸರಾಂತ ನಟಿ ಸಮಂತಾ ರುತ್ ಪ್ರಭು, “ಹೆಣ್ಣು ಮಕ್ಕಳು ಧರಿಸುವ ಉಡುಪಿನ ಆಧಾರದಲ್ಲಿ ಅವರನ್ನು ಅಳೆಯಬೇಡಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮುನ್ನ ಸಮಂತಾ ರುತ್ ಪ್ರಭು ತನ್ನ ಹಲವು ಸುಂದರ ಫೋಟೊಗಳನ್ನು ತೆಗೆದು Instagram ನಲ್ಲಿ ಪೋಸ್ಟ್‌ ಮಾಡಿದ್ದರು. ಕಪ್ಪು ಮತ್ತು ಪಚ್ಚೆ ಹಸಿರು ಬಣ್ಣದ, ನೆಲದವರೆಗೂ ತಾಗುವಂತಹ ಗೌನ್ ಧರಿಸಿ ಫೋಟೊಗೆ ಪೋಸ್ ನೀಡಿದ್ದರು. ಆ ಫೋಟೊಗಳನ್ನು Instagramನಲ್ಲಿ ಹಂಚಿಕೊಳ್ಳುವಾಗ “ನನ್ನ ಅತ್ಯಂತ ನೆಚ್ಚಿನ ನೋಟಗಳಲ್ಲಿ ಒಂದು” ಎಂದು ಬರೆದಿದ್ದರು. ಆದರೆ ಕೆಲವರು ಅದನ್ನೂ ಟೀಕಿಸಿ ಟ್ರೋಲ್ ಮಾಡಿದ್ದರು.

 

View this post on Instagram

 

A post shared by Samantha (@samantharuthprabhuoffl)

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಮಂತಾ “ಮಹಿಳೆಯರನ್ನು ಅವರು ಧರಿಸುವ ಬಟ್ಟೆ, ಅವರ ಜನಾಂಗ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ನೋಟ, ಚರ್ಮದ ಬಣ್ಣ… ಇತ್ಯಾದಿಗಳನ್ನು ಆಧರಿಸಿ ಅಳೆಯಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಅವರು ಧರಿಸುವ ಬಟ್ಟೆಗಳನ್ನು ಆಧರಿಸಿ ಅಳೆಯುವುದು ಯಾರೇ ಆದರೂ ತಕ್ಷಣವೇ ಮಾಡಬಹುದಾದ ಸುಲಭದ ಕೆಲಸವಾಗಿದೆ. ಒಬ್ಬ ಮಹಿಳೆಯಾಗಿ, ಈ ರೀತಿ ಅಳೆಯುವುದರ ಅರ್ಥವೇನೆಂಬುದನ್ನು ನಾನು ಪ್ರತ್ಯಕ್ಷವಾಗಿ ತಿಳಿದುಕೊಂಡಿದ್ದೇನೆ” ಎಂದು ಹೇಳಿದ್ದಾರೆ.

“ನಾವೀಗ 2022 ರ ಇಸವಿಯಲ್ಲಿದ್ದೇವೆ. ಅಂತಿಮವಾಗಿ ಮಹಿಳೆಯರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅವರನ್ನು ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ? ಇನ್ನೊಬ್ಬರನ್ನು ಅಳೆಯುವುದರ ಬದಲು ನಮ್ಮನ್ನು ನಾವು ನೋಡಿಕೊಳ್ಳಲು ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬಹುದೇ? ನಮ್ಮ ವಿಚಾರಗಳನ್ನು ಬೇರೆಯವರ ಮೇಲೆ ಹೇರುವುದು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ನಾವು ಒಬ್ಬ ವ್ಯಕ್ತಿಯನ್ನು ಅಳೆಯುವ ಮತ್ತು ಅರ್ಥಮಾಡಿಕೊಳ್ಳುವ ವಿಧಾನವನ್ನು ಮರುರೂಪಿಸಬಹುದೆ?” ಎಂದು ಸಮಂತಾ ಬರೆದಿದ್ದಾರೆ.

 

View this post on Instagram

 

A post shared by Samantha (@samantharuthprabhuoffl)

ನಟಿ ಸಮಂತಾರವರು ನಾಗಚೈತನ್ಯರಿಂದ ವಿಚ್ಚೇದನ ಪಡೆದ ಮೇಲೆ ಸಾಕಷ್ಟು ಆನ್‌ಲೈನ್ ಟ್ರೋಲ್‌ಗಳನ್ನು ಎದುರಿಸಬೇಕಾಗಿದೆ. ಅವರು ವಿಚ್ಛೇದನ ಪಡೆದುದ್ದೇ ತಪ್ಪು ಎನ್ನುವ ರೀತಿಯಲ್ಲಿ ಕೆಲವರು ಮಾತನಾಡಿದ್ದರು. ಇನ್ನು ಸಾಕಷ್ಟು ಹೆಸರು ಗಳಿಸಿದ ಪುಷ್ಪ ಸಿನಿಮಾದಲ್ಲಿ ಸಮಂತಾ ಹಾಡೊಂದಕ್ಕೆ ನೃತ್ಯ ಮಾಡಿದ್ದಕ್ಕೂ ಅವರನ್ನು ಟ್ರೋಲ್ ಮಾಡಲಾಗಿತ್ತು.

ಸ್ನೇಹಿತೆಯೊಂದಿಗೆ ಸ್ವಿಮ್ ಸೂಟ್ ನಲ್ಲಿರುವ ಫೋಟೊ ಹಂಚಿಕೊಂಡಿದ್ದಕ್ಕೆ ಸಹ ನಿಮಗ್ಯಾಕೆ ಇದೆಲ್ಲಾ, ನೆಟ್ಟಗೆ ಬಟ್ಟೆ ಹಾಕಲು ಆಗೊಲ್ವೆ ಎಂದು ಟೀಕಿಸಲಾಯಿತು. ಈಗ ಅವರ ಸುಂದರ ಫೋಟೋಗೂ ಕೆಲ ಪುರುಷರು ಕ್ಯಾತೆ ತೆಗೆದಿದ್ದಾರೆ. ತಿನ್ನುವ ಆಹಾರ, ಉಡುಗೆ ಮತ್ತು ಜೀವನ ಶೈಲಿ ಪ್ರತಿಯೊಬ್ಬರ ವೈಯಕ್ತಿಕ ಹಕ್ಕಾಗಿದೆ. ಅದರಿಂದ ಬೇರೆಯವರಿಗೆ ಯಾವ ರೀತಿಯಲ್ಲಿಯೂ ತೊಂದರೆಯಾಗುವುದಿಲ್ಲ. ಆದರೂ ಇನ್ನೊಬ್ಬರ ಉಡುಪು-ಜೀವನ ಶೈಲಿಯ ಬಗ್ಗೆ ಕೆಲವರು ಏಕೆ ದಾಳಿ ಮಾಡುತ್ತಾರೆ? ಇಂಥವರಿಗೆ ನಟಿ ಸಮಂತಾ ಪ್ರಭು ಬಹಳ ಪ್ರಬುದ್ಧತೆಯಿಂದ ಉತ್ತರಿಸಿದ್ದಾರೆ. ಟ್ರೋಲ್ ಮಾಡಿದವರು ಇದನ್ನು ಈಗಲಾದರೂ ಅರ್ಥ ಮಾಡಿಕೊಳ್ಳುವರೆ?


ಇದನ್ನೂ ಓದಿ; ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...