Homeಮುಖಪುಟತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ಮಹಿಳೆಯರನ್ನು ಅವರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ?

- Advertisement -
- Advertisement -

“ಸೀರೆ ಅಲ್ಲ, ಗೌನೂ ಅಲ್ಲ ಉಟ್ಟ ಬಟ್ಟೆಲೇನೈತೇ, ನೋಡೋದ್ರಾಗೆ ಎಲ್ಲ ಐತೆ, ನಿಮ್ಮ ಬುದ್ಧಿ ಇಲ್ಲ ಸುದ್ದಿ” ಎಂದು ‘ಪುಷ್ಪ’ ಸಿನಿಮಾದ ‘ಹೂಂ ಅಂತೀಯಾ’ ಹಾಡಿನಲ್ಲಿ ಹೇಳಲಾಗಿತ್ತು. ಈ ಹಾಡಿಗೆ ಹೆಜ್ಜೆ ಹಾಕಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಸುಮಂತಾ ರುತ್‌ಪ್ರಭು ಅವರೀಗ, ತೊಟ್ಟ ಬಟ್ಟೆಯ ಕುರಿತ ಆಕ್ಷೇಪಗಳಿಗೆ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ತಾನು ಧರಿಸಿದ ಬಟ್ಟೆಯ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಎದುರಿಸಿದ ದಕ್ಷಿಣ ಭಾರತದ ಹೆಸರಾಂತ ನಟಿ ಸಮಂತಾ ರುತ್ ಪ್ರಭು, “ಹೆಣ್ಣು ಮಕ್ಕಳು ಧರಿಸುವ ಉಡುಪಿನ ಆಧಾರದಲ್ಲಿ ಅವರನ್ನು ಅಳೆಯಬೇಡಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮುನ್ನ ಸಮಂತಾ ರುತ್ ಪ್ರಭು ತನ್ನ ಹಲವು ಸುಂದರ ಫೋಟೊಗಳನ್ನು ತೆಗೆದು Instagram ನಲ್ಲಿ ಪೋಸ್ಟ್‌ ಮಾಡಿದ್ದರು. ಕಪ್ಪು ಮತ್ತು ಪಚ್ಚೆ ಹಸಿರು ಬಣ್ಣದ, ನೆಲದವರೆಗೂ ತಾಗುವಂತಹ ಗೌನ್ ಧರಿಸಿ ಫೋಟೊಗೆ ಪೋಸ್ ನೀಡಿದ್ದರು. ಆ ಫೋಟೊಗಳನ್ನು Instagramನಲ್ಲಿ ಹಂಚಿಕೊಳ್ಳುವಾಗ “ನನ್ನ ಅತ್ಯಂತ ನೆಚ್ಚಿನ ನೋಟಗಳಲ್ಲಿ ಒಂದು” ಎಂದು ಬರೆದಿದ್ದರು. ಆದರೆ ಕೆಲವರು ಅದನ್ನೂ ಟೀಕಿಸಿ ಟ್ರೋಲ್ ಮಾಡಿದ್ದರು.

 

View this post on Instagram

 

A post shared by Samantha (@samantharuthprabhuoffl)

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಮಂತಾ “ಮಹಿಳೆಯರನ್ನು ಅವರು ಧರಿಸುವ ಬಟ್ಟೆ, ಅವರ ಜನಾಂಗ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ನೋಟ, ಚರ್ಮದ ಬಣ್ಣ… ಇತ್ಯಾದಿಗಳನ್ನು ಆಧರಿಸಿ ಅಳೆಯಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಅವರು ಧರಿಸುವ ಬಟ್ಟೆಗಳನ್ನು ಆಧರಿಸಿ ಅಳೆಯುವುದು ಯಾರೇ ಆದರೂ ತಕ್ಷಣವೇ ಮಾಡಬಹುದಾದ ಸುಲಭದ ಕೆಲಸವಾಗಿದೆ. ಒಬ್ಬ ಮಹಿಳೆಯಾಗಿ, ಈ ರೀತಿ ಅಳೆಯುವುದರ ಅರ್ಥವೇನೆಂಬುದನ್ನು ನಾನು ಪ್ರತ್ಯಕ್ಷವಾಗಿ ತಿಳಿದುಕೊಂಡಿದ್ದೇನೆ” ಎಂದು ಹೇಳಿದ್ದಾರೆ.

“ನಾವೀಗ 2022 ರ ಇಸವಿಯಲ್ಲಿದ್ದೇವೆ. ಅಂತಿಮವಾಗಿ ಮಹಿಳೆಯರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅವರನ್ನು ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ? ಇನ್ನೊಬ್ಬರನ್ನು ಅಳೆಯುವುದರ ಬದಲು ನಮ್ಮನ್ನು ನಾವು ನೋಡಿಕೊಳ್ಳಲು ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬಹುದೇ? ನಮ್ಮ ವಿಚಾರಗಳನ್ನು ಬೇರೆಯವರ ಮೇಲೆ ಹೇರುವುದು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ನಾವು ಒಬ್ಬ ವ್ಯಕ್ತಿಯನ್ನು ಅಳೆಯುವ ಮತ್ತು ಅರ್ಥಮಾಡಿಕೊಳ್ಳುವ ವಿಧಾನವನ್ನು ಮರುರೂಪಿಸಬಹುದೆ?” ಎಂದು ಸಮಂತಾ ಬರೆದಿದ್ದಾರೆ.

 

View this post on Instagram

 

A post shared by Samantha (@samantharuthprabhuoffl)

ನಟಿ ಸಮಂತಾರವರು ನಾಗಚೈತನ್ಯರಿಂದ ವಿಚ್ಚೇದನ ಪಡೆದ ಮೇಲೆ ಸಾಕಷ್ಟು ಆನ್‌ಲೈನ್ ಟ್ರೋಲ್‌ಗಳನ್ನು ಎದುರಿಸಬೇಕಾಗಿದೆ. ಅವರು ವಿಚ್ಛೇದನ ಪಡೆದುದ್ದೇ ತಪ್ಪು ಎನ್ನುವ ರೀತಿಯಲ್ಲಿ ಕೆಲವರು ಮಾತನಾಡಿದ್ದರು. ಇನ್ನು ಸಾಕಷ್ಟು ಹೆಸರು ಗಳಿಸಿದ ಪುಷ್ಪ ಸಿನಿಮಾದಲ್ಲಿ ಸಮಂತಾ ಹಾಡೊಂದಕ್ಕೆ ನೃತ್ಯ ಮಾಡಿದ್ದಕ್ಕೂ ಅವರನ್ನು ಟ್ರೋಲ್ ಮಾಡಲಾಗಿತ್ತು.

ಸ್ನೇಹಿತೆಯೊಂದಿಗೆ ಸ್ವಿಮ್ ಸೂಟ್ ನಲ್ಲಿರುವ ಫೋಟೊ ಹಂಚಿಕೊಂಡಿದ್ದಕ್ಕೆ ಸಹ ನಿಮಗ್ಯಾಕೆ ಇದೆಲ್ಲಾ, ನೆಟ್ಟಗೆ ಬಟ್ಟೆ ಹಾಕಲು ಆಗೊಲ್ವೆ ಎಂದು ಟೀಕಿಸಲಾಯಿತು. ಈಗ ಅವರ ಸುಂದರ ಫೋಟೋಗೂ ಕೆಲ ಪುರುಷರು ಕ್ಯಾತೆ ತೆಗೆದಿದ್ದಾರೆ. ತಿನ್ನುವ ಆಹಾರ, ಉಡುಗೆ ಮತ್ತು ಜೀವನ ಶೈಲಿ ಪ್ರತಿಯೊಬ್ಬರ ವೈಯಕ್ತಿಕ ಹಕ್ಕಾಗಿದೆ. ಅದರಿಂದ ಬೇರೆಯವರಿಗೆ ಯಾವ ರೀತಿಯಲ್ಲಿಯೂ ತೊಂದರೆಯಾಗುವುದಿಲ್ಲ. ಆದರೂ ಇನ್ನೊಬ್ಬರ ಉಡುಪು-ಜೀವನ ಶೈಲಿಯ ಬಗ್ಗೆ ಕೆಲವರು ಏಕೆ ದಾಳಿ ಮಾಡುತ್ತಾರೆ? ಇಂಥವರಿಗೆ ನಟಿ ಸಮಂತಾ ಪ್ರಭು ಬಹಳ ಪ್ರಬುದ್ಧತೆಯಿಂದ ಉತ್ತರಿಸಿದ್ದಾರೆ. ಟ್ರೋಲ್ ಮಾಡಿದವರು ಇದನ್ನು ಈಗಲಾದರೂ ಅರ್ಥ ಮಾಡಿಕೊಳ್ಳುವರೆ?


ಇದನ್ನೂ ಓದಿ; ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...