Homeಮುಖಪುಟತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ಮಹಿಳೆಯರನ್ನು ಅವರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ?

- Advertisement -
- Advertisement -

“ಸೀರೆ ಅಲ್ಲ, ಗೌನೂ ಅಲ್ಲ ಉಟ್ಟ ಬಟ್ಟೆಲೇನೈತೇ, ನೋಡೋದ್ರಾಗೆ ಎಲ್ಲ ಐತೆ, ನಿಮ್ಮ ಬುದ್ಧಿ ಇಲ್ಲ ಸುದ್ದಿ” ಎಂದು ‘ಪುಷ್ಪ’ ಸಿನಿಮಾದ ‘ಹೂಂ ಅಂತೀಯಾ’ ಹಾಡಿನಲ್ಲಿ ಹೇಳಲಾಗಿತ್ತು. ಈ ಹಾಡಿಗೆ ಹೆಜ್ಜೆ ಹಾಕಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಸುಮಂತಾ ರುತ್‌ಪ್ರಭು ಅವರೀಗ, ತೊಟ್ಟ ಬಟ್ಟೆಯ ಕುರಿತ ಆಕ್ಷೇಪಗಳಿಗೆ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ತಾನು ಧರಿಸಿದ ಬಟ್ಟೆಯ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಎದುರಿಸಿದ ದಕ್ಷಿಣ ಭಾರತದ ಹೆಸರಾಂತ ನಟಿ ಸಮಂತಾ ರುತ್ ಪ್ರಭು, “ಹೆಣ್ಣು ಮಕ್ಕಳು ಧರಿಸುವ ಉಡುಪಿನ ಆಧಾರದಲ್ಲಿ ಅವರನ್ನು ಅಳೆಯಬೇಡಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮುನ್ನ ಸಮಂತಾ ರುತ್ ಪ್ರಭು ತನ್ನ ಹಲವು ಸುಂದರ ಫೋಟೊಗಳನ್ನು ತೆಗೆದು Instagram ನಲ್ಲಿ ಪೋಸ್ಟ್‌ ಮಾಡಿದ್ದರು. ಕಪ್ಪು ಮತ್ತು ಪಚ್ಚೆ ಹಸಿರು ಬಣ್ಣದ, ನೆಲದವರೆಗೂ ತಾಗುವಂತಹ ಗೌನ್ ಧರಿಸಿ ಫೋಟೊಗೆ ಪೋಸ್ ನೀಡಿದ್ದರು. ಆ ಫೋಟೊಗಳನ್ನು Instagramನಲ್ಲಿ ಹಂಚಿಕೊಳ್ಳುವಾಗ “ನನ್ನ ಅತ್ಯಂತ ನೆಚ್ಚಿನ ನೋಟಗಳಲ್ಲಿ ಒಂದು” ಎಂದು ಬರೆದಿದ್ದರು. ಆದರೆ ಕೆಲವರು ಅದನ್ನೂ ಟೀಕಿಸಿ ಟ್ರೋಲ್ ಮಾಡಿದ್ದರು.

 

View this post on Instagram

 

A post shared by Samantha (@samantharuthprabhuoffl)

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಮಂತಾ “ಮಹಿಳೆಯರನ್ನು ಅವರು ಧರಿಸುವ ಬಟ್ಟೆ, ಅವರ ಜನಾಂಗ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ನೋಟ, ಚರ್ಮದ ಬಣ್ಣ… ಇತ್ಯಾದಿಗಳನ್ನು ಆಧರಿಸಿ ಅಳೆಯಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಅವರು ಧರಿಸುವ ಬಟ್ಟೆಗಳನ್ನು ಆಧರಿಸಿ ಅಳೆಯುವುದು ಯಾರೇ ಆದರೂ ತಕ್ಷಣವೇ ಮಾಡಬಹುದಾದ ಸುಲಭದ ಕೆಲಸವಾಗಿದೆ. ಒಬ್ಬ ಮಹಿಳೆಯಾಗಿ, ಈ ರೀತಿ ಅಳೆಯುವುದರ ಅರ್ಥವೇನೆಂಬುದನ್ನು ನಾನು ಪ್ರತ್ಯಕ್ಷವಾಗಿ ತಿಳಿದುಕೊಂಡಿದ್ದೇನೆ” ಎಂದು ಹೇಳಿದ್ದಾರೆ.

“ನಾವೀಗ 2022 ರ ಇಸವಿಯಲ್ಲಿದ್ದೇವೆ. ಅಂತಿಮವಾಗಿ ಮಹಿಳೆಯರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅವರನ್ನು ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ? ಇನ್ನೊಬ್ಬರನ್ನು ಅಳೆಯುವುದರ ಬದಲು ನಮ್ಮನ್ನು ನಾವು ನೋಡಿಕೊಳ್ಳಲು ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬಹುದೇ? ನಮ್ಮ ವಿಚಾರಗಳನ್ನು ಬೇರೆಯವರ ಮೇಲೆ ಹೇರುವುದು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ನಾವು ಒಬ್ಬ ವ್ಯಕ್ತಿಯನ್ನು ಅಳೆಯುವ ಮತ್ತು ಅರ್ಥಮಾಡಿಕೊಳ್ಳುವ ವಿಧಾನವನ್ನು ಮರುರೂಪಿಸಬಹುದೆ?” ಎಂದು ಸಮಂತಾ ಬರೆದಿದ್ದಾರೆ.

 

View this post on Instagram

 

A post shared by Samantha (@samantharuthprabhuoffl)

ನಟಿ ಸಮಂತಾರವರು ನಾಗಚೈತನ್ಯರಿಂದ ವಿಚ್ಚೇದನ ಪಡೆದ ಮೇಲೆ ಸಾಕಷ್ಟು ಆನ್‌ಲೈನ್ ಟ್ರೋಲ್‌ಗಳನ್ನು ಎದುರಿಸಬೇಕಾಗಿದೆ. ಅವರು ವಿಚ್ಛೇದನ ಪಡೆದುದ್ದೇ ತಪ್ಪು ಎನ್ನುವ ರೀತಿಯಲ್ಲಿ ಕೆಲವರು ಮಾತನಾಡಿದ್ದರು. ಇನ್ನು ಸಾಕಷ್ಟು ಹೆಸರು ಗಳಿಸಿದ ಪುಷ್ಪ ಸಿನಿಮಾದಲ್ಲಿ ಸಮಂತಾ ಹಾಡೊಂದಕ್ಕೆ ನೃತ್ಯ ಮಾಡಿದ್ದಕ್ಕೂ ಅವರನ್ನು ಟ್ರೋಲ್ ಮಾಡಲಾಗಿತ್ತು.

ಸ್ನೇಹಿತೆಯೊಂದಿಗೆ ಸ್ವಿಮ್ ಸೂಟ್ ನಲ್ಲಿರುವ ಫೋಟೊ ಹಂಚಿಕೊಂಡಿದ್ದಕ್ಕೆ ಸಹ ನಿಮಗ್ಯಾಕೆ ಇದೆಲ್ಲಾ, ನೆಟ್ಟಗೆ ಬಟ್ಟೆ ಹಾಕಲು ಆಗೊಲ್ವೆ ಎಂದು ಟೀಕಿಸಲಾಯಿತು. ಈಗ ಅವರ ಸುಂದರ ಫೋಟೋಗೂ ಕೆಲ ಪುರುಷರು ಕ್ಯಾತೆ ತೆಗೆದಿದ್ದಾರೆ. ತಿನ್ನುವ ಆಹಾರ, ಉಡುಗೆ ಮತ್ತು ಜೀವನ ಶೈಲಿ ಪ್ರತಿಯೊಬ್ಬರ ವೈಯಕ್ತಿಕ ಹಕ್ಕಾಗಿದೆ. ಅದರಿಂದ ಬೇರೆಯವರಿಗೆ ಯಾವ ರೀತಿಯಲ್ಲಿಯೂ ತೊಂದರೆಯಾಗುವುದಿಲ್ಲ. ಆದರೂ ಇನ್ನೊಬ್ಬರ ಉಡುಪು-ಜೀವನ ಶೈಲಿಯ ಬಗ್ಗೆ ಕೆಲವರು ಏಕೆ ದಾಳಿ ಮಾಡುತ್ತಾರೆ? ಇಂಥವರಿಗೆ ನಟಿ ಸಮಂತಾ ಪ್ರಭು ಬಹಳ ಪ್ರಬುದ್ಧತೆಯಿಂದ ಉತ್ತರಿಸಿದ್ದಾರೆ. ಟ್ರೋಲ್ ಮಾಡಿದವರು ಇದನ್ನು ಈಗಲಾದರೂ ಅರ್ಥ ಮಾಡಿಕೊಳ್ಳುವರೆ?


ಇದನ್ನೂ ಓದಿ; ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...