Homeಮುಖಪುಟತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ಮಹಿಳೆಯರನ್ನು ಅವರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ?

- Advertisement -
- Advertisement -

“ಸೀರೆ ಅಲ್ಲ, ಗೌನೂ ಅಲ್ಲ ಉಟ್ಟ ಬಟ್ಟೆಲೇನೈತೇ, ನೋಡೋದ್ರಾಗೆ ಎಲ್ಲ ಐತೆ, ನಿಮ್ಮ ಬುದ್ಧಿ ಇಲ್ಲ ಸುದ್ದಿ” ಎಂದು ‘ಪುಷ್ಪ’ ಸಿನಿಮಾದ ‘ಹೂಂ ಅಂತೀಯಾ’ ಹಾಡಿನಲ್ಲಿ ಹೇಳಲಾಗಿತ್ತು. ಈ ಹಾಡಿಗೆ ಹೆಜ್ಜೆ ಹಾಕಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಸುಮಂತಾ ರುತ್‌ಪ್ರಭು ಅವರೀಗ, ತೊಟ್ಟ ಬಟ್ಟೆಯ ಕುರಿತ ಆಕ್ಷೇಪಗಳಿಗೆ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ತಾನು ಧರಿಸಿದ ಬಟ್ಟೆಯ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಎದುರಿಸಿದ ದಕ್ಷಿಣ ಭಾರತದ ಹೆಸರಾಂತ ನಟಿ ಸಮಂತಾ ರುತ್ ಪ್ರಭು, “ಹೆಣ್ಣು ಮಕ್ಕಳು ಧರಿಸುವ ಉಡುಪಿನ ಆಧಾರದಲ್ಲಿ ಅವರನ್ನು ಅಳೆಯಬೇಡಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮುನ್ನ ಸಮಂತಾ ರುತ್ ಪ್ರಭು ತನ್ನ ಹಲವು ಸುಂದರ ಫೋಟೊಗಳನ್ನು ತೆಗೆದು Instagram ನಲ್ಲಿ ಪೋಸ್ಟ್‌ ಮಾಡಿದ್ದರು. ಕಪ್ಪು ಮತ್ತು ಪಚ್ಚೆ ಹಸಿರು ಬಣ್ಣದ, ನೆಲದವರೆಗೂ ತಾಗುವಂತಹ ಗೌನ್ ಧರಿಸಿ ಫೋಟೊಗೆ ಪೋಸ್ ನೀಡಿದ್ದರು. ಆ ಫೋಟೊಗಳನ್ನು Instagramನಲ್ಲಿ ಹಂಚಿಕೊಳ್ಳುವಾಗ “ನನ್ನ ಅತ್ಯಂತ ನೆಚ್ಚಿನ ನೋಟಗಳಲ್ಲಿ ಒಂದು” ಎಂದು ಬರೆದಿದ್ದರು. ಆದರೆ ಕೆಲವರು ಅದನ್ನೂ ಟೀಕಿಸಿ ಟ್ರೋಲ್ ಮಾಡಿದ್ದರು.

 

View this post on Instagram

 

A post shared by Samantha (@samantharuthprabhuoffl)

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಮಂತಾ “ಮಹಿಳೆಯರನ್ನು ಅವರು ಧರಿಸುವ ಬಟ್ಟೆ, ಅವರ ಜನಾಂಗ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ನೋಟ, ಚರ್ಮದ ಬಣ್ಣ… ಇತ್ಯಾದಿಗಳನ್ನು ಆಧರಿಸಿ ಅಳೆಯಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಅವರು ಧರಿಸುವ ಬಟ್ಟೆಗಳನ್ನು ಆಧರಿಸಿ ಅಳೆಯುವುದು ಯಾರೇ ಆದರೂ ತಕ್ಷಣವೇ ಮಾಡಬಹುದಾದ ಸುಲಭದ ಕೆಲಸವಾಗಿದೆ. ಒಬ್ಬ ಮಹಿಳೆಯಾಗಿ, ಈ ರೀತಿ ಅಳೆಯುವುದರ ಅರ್ಥವೇನೆಂಬುದನ್ನು ನಾನು ಪ್ರತ್ಯಕ್ಷವಾಗಿ ತಿಳಿದುಕೊಂಡಿದ್ದೇನೆ” ಎಂದು ಹೇಳಿದ್ದಾರೆ.

“ನಾವೀಗ 2022 ರ ಇಸವಿಯಲ್ಲಿದ್ದೇವೆ. ಅಂತಿಮವಾಗಿ ಮಹಿಳೆಯರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅವರನ್ನು ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ? ಇನ್ನೊಬ್ಬರನ್ನು ಅಳೆಯುವುದರ ಬದಲು ನಮ್ಮನ್ನು ನಾವು ನೋಡಿಕೊಳ್ಳಲು ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬಹುದೇ? ನಮ್ಮ ವಿಚಾರಗಳನ್ನು ಬೇರೆಯವರ ಮೇಲೆ ಹೇರುವುದು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ನಾವು ಒಬ್ಬ ವ್ಯಕ್ತಿಯನ್ನು ಅಳೆಯುವ ಮತ್ತು ಅರ್ಥಮಾಡಿಕೊಳ್ಳುವ ವಿಧಾನವನ್ನು ಮರುರೂಪಿಸಬಹುದೆ?” ಎಂದು ಸಮಂತಾ ಬರೆದಿದ್ದಾರೆ.

 

View this post on Instagram

 

A post shared by Samantha (@samantharuthprabhuoffl)

ನಟಿ ಸಮಂತಾರವರು ನಾಗಚೈತನ್ಯರಿಂದ ವಿಚ್ಚೇದನ ಪಡೆದ ಮೇಲೆ ಸಾಕಷ್ಟು ಆನ್‌ಲೈನ್ ಟ್ರೋಲ್‌ಗಳನ್ನು ಎದುರಿಸಬೇಕಾಗಿದೆ. ಅವರು ವಿಚ್ಛೇದನ ಪಡೆದುದ್ದೇ ತಪ್ಪು ಎನ್ನುವ ರೀತಿಯಲ್ಲಿ ಕೆಲವರು ಮಾತನಾಡಿದ್ದರು. ಇನ್ನು ಸಾಕಷ್ಟು ಹೆಸರು ಗಳಿಸಿದ ಪುಷ್ಪ ಸಿನಿಮಾದಲ್ಲಿ ಸಮಂತಾ ಹಾಡೊಂದಕ್ಕೆ ನೃತ್ಯ ಮಾಡಿದ್ದಕ್ಕೂ ಅವರನ್ನು ಟ್ರೋಲ್ ಮಾಡಲಾಗಿತ್ತು.

ಸ್ನೇಹಿತೆಯೊಂದಿಗೆ ಸ್ವಿಮ್ ಸೂಟ್ ನಲ್ಲಿರುವ ಫೋಟೊ ಹಂಚಿಕೊಂಡಿದ್ದಕ್ಕೆ ಸಹ ನಿಮಗ್ಯಾಕೆ ಇದೆಲ್ಲಾ, ನೆಟ್ಟಗೆ ಬಟ್ಟೆ ಹಾಕಲು ಆಗೊಲ್ವೆ ಎಂದು ಟೀಕಿಸಲಾಯಿತು. ಈಗ ಅವರ ಸುಂದರ ಫೋಟೋಗೂ ಕೆಲ ಪುರುಷರು ಕ್ಯಾತೆ ತೆಗೆದಿದ್ದಾರೆ. ತಿನ್ನುವ ಆಹಾರ, ಉಡುಗೆ ಮತ್ತು ಜೀವನ ಶೈಲಿ ಪ್ರತಿಯೊಬ್ಬರ ವೈಯಕ್ತಿಕ ಹಕ್ಕಾಗಿದೆ. ಅದರಿಂದ ಬೇರೆಯವರಿಗೆ ಯಾವ ರೀತಿಯಲ್ಲಿಯೂ ತೊಂದರೆಯಾಗುವುದಿಲ್ಲ. ಆದರೂ ಇನ್ನೊಬ್ಬರ ಉಡುಪು-ಜೀವನ ಶೈಲಿಯ ಬಗ್ಗೆ ಕೆಲವರು ಏಕೆ ದಾಳಿ ಮಾಡುತ್ತಾರೆ? ಇಂಥವರಿಗೆ ನಟಿ ಸಮಂತಾ ಪ್ರಭು ಬಹಳ ಪ್ರಬುದ್ಧತೆಯಿಂದ ಉತ್ತರಿಸಿದ್ದಾರೆ. ಟ್ರೋಲ್ ಮಾಡಿದವರು ಇದನ್ನು ಈಗಲಾದರೂ ಅರ್ಥ ಮಾಡಿಕೊಳ್ಳುವರೆ?


ಇದನ್ನೂ ಓದಿ; ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...