Homeಮುಖಪುಟತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ಮಹಿಳೆಯರನ್ನು ಅವರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ?

- Advertisement -
- Advertisement -

“ಸೀರೆ ಅಲ್ಲ, ಗೌನೂ ಅಲ್ಲ ಉಟ್ಟ ಬಟ್ಟೆಲೇನೈತೇ, ನೋಡೋದ್ರಾಗೆ ಎಲ್ಲ ಐತೆ, ನಿಮ್ಮ ಬುದ್ಧಿ ಇಲ್ಲ ಸುದ್ದಿ” ಎಂದು ‘ಪುಷ್ಪ’ ಸಿನಿಮಾದ ‘ಹೂಂ ಅಂತೀಯಾ’ ಹಾಡಿನಲ್ಲಿ ಹೇಳಲಾಗಿತ್ತು. ಈ ಹಾಡಿಗೆ ಹೆಜ್ಜೆ ಹಾಕಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಸುಮಂತಾ ರುತ್‌ಪ್ರಭು ಅವರೀಗ, ತೊಟ್ಟ ಬಟ್ಟೆಯ ಕುರಿತ ಆಕ್ಷೇಪಗಳಿಗೆ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ತಾನು ಧರಿಸಿದ ಬಟ್ಟೆಯ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಎದುರಿಸಿದ ದಕ್ಷಿಣ ಭಾರತದ ಹೆಸರಾಂತ ನಟಿ ಸಮಂತಾ ರುತ್ ಪ್ರಭು, “ಹೆಣ್ಣು ಮಕ್ಕಳು ಧರಿಸುವ ಉಡುಪಿನ ಆಧಾರದಲ್ಲಿ ಅವರನ್ನು ಅಳೆಯಬೇಡಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮುನ್ನ ಸಮಂತಾ ರುತ್ ಪ್ರಭು ತನ್ನ ಹಲವು ಸುಂದರ ಫೋಟೊಗಳನ್ನು ತೆಗೆದು Instagram ನಲ್ಲಿ ಪೋಸ್ಟ್‌ ಮಾಡಿದ್ದರು. ಕಪ್ಪು ಮತ್ತು ಪಚ್ಚೆ ಹಸಿರು ಬಣ್ಣದ, ನೆಲದವರೆಗೂ ತಾಗುವಂತಹ ಗೌನ್ ಧರಿಸಿ ಫೋಟೊಗೆ ಪೋಸ್ ನೀಡಿದ್ದರು. ಆ ಫೋಟೊಗಳನ್ನು Instagramನಲ್ಲಿ ಹಂಚಿಕೊಳ್ಳುವಾಗ “ನನ್ನ ಅತ್ಯಂತ ನೆಚ್ಚಿನ ನೋಟಗಳಲ್ಲಿ ಒಂದು” ಎಂದು ಬರೆದಿದ್ದರು. ಆದರೆ ಕೆಲವರು ಅದನ್ನೂ ಟೀಕಿಸಿ ಟ್ರೋಲ್ ಮಾಡಿದ್ದರು.

 

View this post on Instagram

 

A post shared by Samantha (@samantharuthprabhuoffl)

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಮಂತಾ “ಮಹಿಳೆಯರನ್ನು ಅವರು ಧರಿಸುವ ಬಟ್ಟೆ, ಅವರ ಜನಾಂಗ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ನೋಟ, ಚರ್ಮದ ಬಣ್ಣ… ಇತ್ಯಾದಿಗಳನ್ನು ಆಧರಿಸಿ ಅಳೆಯಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಅವರು ಧರಿಸುವ ಬಟ್ಟೆಗಳನ್ನು ಆಧರಿಸಿ ಅಳೆಯುವುದು ಯಾರೇ ಆದರೂ ತಕ್ಷಣವೇ ಮಾಡಬಹುದಾದ ಸುಲಭದ ಕೆಲಸವಾಗಿದೆ. ಒಬ್ಬ ಮಹಿಳೆಯಾಗಿ, ಈ ರೀತಿ ಅಳೆಯುವುದರ ಅರ್ಥವೇನೆಂಬುದನ್ನು ನಾನು ಪ್ರತ್ಯಕ್ಷವಾಗಿ ತಿಳಿದುಕೊಂಡಿದ್ದೇನೆ” ಎಂದು ಹೇಳಿದ್ದಾರೆ.

“ನಾವೀಗ 2022 ರ ಇಸವಿಯಲ್ಲಿದ್ದೇವೆ. ಅಂತಿಮವಾಗಿ ಮಹಿಳೆಯರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅವರನ್ನು ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ? ಇನ್ನೊಬ್ಬರನ್ನು ಅಳೆಯುವುದರ ಬದಲು ನಮ್ಮನ್ನು ನಾವು ನೋಡಿಕೊಳ್ಳಲು ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬಹುದೇ? ನಮ್ಮ ವಿಚಾರಗಳನ್ನು ಬೇರೆಯವರ ಮೇಲೆ ಹೇರುವುದು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ನಾವು ಒಬ್ಬ ವ್ಯಕ್ತಿಯನ್ನು ಅಳೆಯುವ ಮತ್ತು ಅರ್ಥಮಾಡಿಕೊಳ್ಳುವ ವಿಧಾನವನ್ನು ಮರುರೂಪಿಸಬಹುದೆ?” ಎಂದು ಸಮಂತಾ ಬರೆದಿದ್ದಾರೆ.

 

View this post on Instagram

 

A post shared by Samantha (@samantharuthprabhuoffl)

ನಟಿ ಸಮಂತಾರವರು ನಾಗಚೈತನ್ಯರಿಂದ ವಿಚ್ಚೇದನ ಪಡೆದ ಮೇಲೆ ಸಾಕಷ್ಟು ಆನ್‌ಲೈನ್ ಟ್ರೋಲ್‌ಗಳನ್ನು ಎದುರಿಸಬೇಕಾಗಿದೆ. ಅವರು ವಿಚ್ಛೇದನ ಪಡೆದುದ್ದೇ ತಪ್ಪು ಎನ್ನುವ ರೀತಿಯಲ್ಲಿ ಕೆಲವರು ಮಾತನಾಡಿದ್ದರು. ಇನ್ನು ಸಾಕಷ್ಟು ಹೆಸರು ಗಳಿಸಿದ ಪುಷ್ಪ ಸಿನಿಮಾದಲ್ಲಿ ಸಮಂತಾ ಹಾಡೊಂದಕ್ಕೆ ನೃತ್ಯ ಮಾಡಿದ್ದಕ್ಕೂ ಅವರನ್ನು ಟ್ರೋಲ್ ಮಾಡಲಾಗಿತ್ತು.

ಸ್ನೇಹಿತೆಯೊಂದಿಗೆ ಸ್ವಿಮ್ ಸೂಟ್ ನಲ್ಲಿರುವ ಫೋಟೊ ಹಂಚಿಕೊಂಡಿದ್ದಕ್ಕೆ ಸಹ ನಿಮಗ್ಯಾಕೆ ಇದೆಲ್ಲಾ, ನೆಟ್ಟಗೆ ಬಟ್ಟೆ ಹಾಕಲು ಆಗೊಲ್ವೆ ಎಂದು ಟೀಕಿಸಲಾಯಿತು. ಈಗ ಅವರ ಸುಂದರ ಫೋಟೋಗೂ ಕೆಲ ಪುರುಷರು ಕ್ಯಾತೆ ತೆಗೆದಿದ್ದಾರೆ. ತಿನ್ನುವ ಆಹಾರ, ಉಡುಗೆ ಮತ್ತು ಜೀವನ ಶೈಲಿ ಪ್ರತಿಯೊಬ್ಬರ ವೈಯಕ್ತಿಕ ಹಕ್ಕಾಗಿದೆ. ಅದರಿಂದ ಬೇರೆಯವರಿಗೆ ಯಾವ ರೀತಿಯಲ್ಲಿಯೂ ತೊಂದರೆಯಾಗುವುದಿಲ್ಲ. ಆದರೂ ಇನ್ನೊಬ್ಬರ ಉಡುಪು-ಜೀವನ ಶೈಲಿಯ ಬಗ್ಗೆ ಕೆಲವರು ಏಕೆ ದಾಳಿ ಮಾಡುತ್ತಾರೆ? ಇಂಥವರಿಗೆ ನಟಿ ಸಮಂತಾ ಪ್ರಭು ಬಹಳ ಪ್ರಬುದ್ಧತೆಯಿಂದ ಉತ್ತರಿಸಿದ್ದಾರೆ. ಟ್ರೋಲ್ ಮಾಡಿದವರು ಇದನ್ನು ಈಗಲಾದರೂ ಅರ್ಥ ಮಾಡಿಕೊಳ್ಳುವರೆ?


ಇದನ್ನೂ ಓದಿ; ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...