Homeಮುಖಪುಟತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ತೊಟ್ಟ ಬಟ್ಟೆಯ ಬಗ್ಗೆ ಕುಹಕವಾಡಿದವರಿಗೆ ನಟಿ ಸಮಂತಾ ಖಡಕ್‌ ಪ್ರತಿಕ್ರಿಯೆ

ಮಹಿಳೆಯರನ್ನು ಅವರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ?

- Advertisement -
- Advertisement -

“ಸೀರೆ ಅಲ್ಲ, ಗೌನೂ ಅಲ್ಲ ಉಟ್ಟ ಬಟ್ಟೆಲೇನೈತೇ, ನೋಡೋದ್ರಾಗೆ ಎಲ್ಲ ಐತೆ, ನಿಮ್ಮ ಬುದ್ಧಿ ಇಲ್ಲ ಸುದ್ದಿ” ಎಂದು ‘ಪುಷ್ಪ’ ಸಿನಿಮಾದ ‘ಹೂಂ ಅಂತೀಯಾ’ ಹಾಡಿನಲ್ಲಿ ಹೇಳಲಾಗಿತ್ತು. ಈ ಹಾಡಿಗೆ ಹೆಜ್ಜೆ ಹಾಕಿ, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದ ನಟಿ ಸುಮಂತಾ ರುತ್‌ಪ್ರಭು ಅವರೀಗ, ತೊಟ್ಟ ಬಟ್ಟೆಯ ಕುರಿತ ಆಕ್ಷೇಪಗಳಿಗೆ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ತಾನು ಧರಿಸಿದ ಬಟ್ಟೆಯ ಕಾರಣಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಎದುರಿಸಿದ ದಕ್ಷಿಣ ಭಾರತದ ಹೆಸರಾಂತ ನಟಿ ಸಮಂತಾ ರುತ್ ಪ್ರಭು, “ಹೆಣ್ಣು ಮಕ್ಕಳು ಧರಿಸುವ ಉಡುಪಿನ ಆಧಾರದಲ್ಲಿ ಅವರನ್ನು ಅಳೆಯಬೇಡಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮುಂಬೈನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮುನ್ನ ಸಮಂತಾ ರುತ್ ಪ್ರಭು ತನ್ನ ಹಲವು ಸುಂದರ ಫೋಟೊಗಳನ್ನು ತೆಗೆದು Instagram ನಲ್ಲಿ ಪೋಸ್ಟ್‌ ಮಾಡಿದ್ದರು. ಕಪ್ಪು ಮತ್ತು ಪಚ್ಚೆ ಹಸಿರು ಬಣ್ಣದ, ನೆಲದವರೆಗೂ ತಾಗುವಂತಹ ಗೌನ್ ಧರಿಸಿ ಫೋಟೊಗೆ ಪೋಸ್ ನೀಡಿದ್ದರು. ಆ ಫೋಟೊಗಳನ್ನು Instagramನಲ್ಲಿ ಹಂಚಿಕೊಳ್ಳುವಾಗ “ನನ್ನ ಅತ್ಯಂತ ನೆಚ್ಚಿನ ನೋಟಗಳಲ್ಲಿ ಒಂದು” ಎಂದು ಬರೆದಿದ್ದರು. ಆದರೆ ಕೆಲವರು ಅದನ್ನೂ ಟೀಕಿಸಿ ಟ್ರೋಲ್ ಮಾಡಿದ್ದರು.

 

View this post on Instagram

 

A post shared by Samantha (@samantharuthprabhuoffl)

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಮಂತಾ “ಮಹಿಳೆಯರನ್ನು ಅವರು ಧರಿಸುವ ಬಟ್ಟೆ, ಅವರ ಜನಾಂಗ, ಶಿಕ್ಷಣ, ಸಾಮಾಜಿಕ ಸ್ಥಾನಮಾನ, ನೋಟ, ಚರ್ಮದ ಬಣ್ಣ… ಇತ್ಯಾದಿಗಳನ್ನು ಆಧರಿಸಿ ಅಳೆಯಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಅವರು ಧರಿಸುವ ಬಟ್ಟೆಗಳನ್ನು ಆಧರಿಸಿ ಅಳೆಯುವುದು ಯಾರೇ ಆದರೂ ತಕ್ಷಣವೇ ಮಾಡಬಹುದಾದ ಸುಲಭದ ಕೆಲಸವಾಗಿದೆ. ಒಬ್ಬ ಮಹಿಳೆಯಾಗಿ, ಈ ರೀತಿ ಅಳೆಯುವುದರ ಅರ್ಥವೇನೆಂಬುದನ್ನು ನಾನು ಪ್ರತ್ಯಕ್ಷವಾಗಿ ತಿಳಿದುಕೊಂಡಿದ್ದೇನೆ” ಎಂದು ಹೇಳಿದ್ದಾರೆ.

“ನಾವೀಗ 2022 ರ ಇಸವಿಯಲ್ಲಿದ್ದೇವೆ. ಅಂತಿಮವಾಗಿ ಮಹಿಳೆಯರು ಧರಿಸುವ ಮಿನಿ ಸ್ಕರ್ಟ್‌ಗಳು, ಡೀಪ್ ನೆಕ್ ಉಡುಪುಗಳ ಆಧಾರದ ಮೇಲೆ ಅವರನ್ನು ಅಳೆಯುವುದನ್ನು ನಿಲ್ಲಿಸಿ, ನಮ್ಮನ್ನು ಉತ್ತಮಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಬಹುದೇ? ಇನ್ನೊಬ್ಬರನ್ನು ಅಳೆಯುವುದರ ಬದಲು ನಮ್ಮನ್ನು ನಾವು ನೋಡಿಕೊಳ್ಳಲು ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬಹುದೇ? ನಮ್ಮ ವಿಚಾರಗಳನ್ನು ಬೇರೆಯವರ ಮೇಲೆ ಹೇರುವುದು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ನಾವು ಒಬ್ಬ ವ್ಯಕ್ತಿಯನ್ನು ಅಳೆಯುವ ಮತ್ತು ಅರ್ಥಮಾಡಿಕೊಳ್ಳುವ ವಿಧಾನವನ್ನು ಮರುರೂಪಿಸಬಹುದೆ?” ಎಂದು ಸಮಂತಾ ಬರೆದಿದ್ದಾರೆ.

 

View this post on Instagram

 

A post shared by Samantha (@samantharuthprabhuoffl)

ನಟಿ ಸಮಂತಾರವರು ನಾಗಚೈತನ್ಯರಿಂದ ವಿಚ್ಚೇದನ ಪಡೆದ ಮೇಲೆ ಸಾಕಷ್ಟು ಆನ್‌ಲೈನ್ ಟ್ರೋಲ್‌ಗಳನ್ನು ಎದುರಿಸಬೇಕಾಗಿದೆ. ಅವರು ವಿಚ್ಛೇದನ ಪಡೆದುದ್ದೇ ತಪ್ಪು ಎನ್ನುವ ರೀತಿಯಲ್ಲಿ ಕೆಲವರು ಮಾತನಾಡಿದ್ದರು. ಇನ್ನು ಸಾಕಷ್ಟು ಹೆಸರು ಗಳಿಸಿದ ಪುಷ್ಪ ಸಿನಿಮಾದಲ್ಲಿ ಸಮಂತಾ ಹಾಡೊಂದಕ್ಕೆ ನೃತ್ಯ ಮಾಡಿದ್ದಕ್ಕೂ ಅವರನ್ನು ಟ್ರೋಲ್ ಮಾಡಲಾಗಿತ್ತು.

ಸ್ನೇಹಿತೆಯೊಂದಿಗೆ ಸ್ವಿಮ್ ಸೂಟ್ ನಲ್ಲಿರುವ ಫೋಟೊ ಹಂಚಿಕೊಂಡಿದ್ದಕ್ಕೆ ಸಹ ನಿಮಗ್ಯಾಕೆ ಇದೆಲ್ಲಾ, ನೆಟ್ಟಗೆ ಬಟ್ಟೆ ಹಾಕಲು ಆಗೊಲ್ವೆ ಎಂದು ಟೀಕಿಸಲಾಯಿತು. ಈಗ ಅವರ ಸುಂದರ ಫೋಟೋಗೂ ಕೆಲ ಪುರುಷರು ಕ್ಯಾತೆ ತೆಗೆದಿದ್ದಾರೆ. ತಿನ್ನುವ ಆಹಾರ, ಉಡುಗೆ ಮತ್ತು ಜೀವನ ಶೈಲಿ ಪ್ರತಿಯೊಬ್ಬರ ವೈಯಕ್ತಿಕ ಹಕ್ಕಾಗಿದೆ. ಅದರಿಂದ ಬೇರೆಯವರಿಗೆ ಯಾವ ರೀತಿಯಲ್ಲಿಯೂ ತೊಂದರೆಯಾಗುವುದಿಲ್ಲ. ಆದರೂ ಇನ್ನೊಬ್ಬರ ಉಡುಪು-ಜೀವನ ಶೈಲಿಯ ಬಗ್ಗೆ ಕೆಲವರು ಏಕೆ ದಾಳಿ ಮಾಡುತ್ತಾರೆ? ಇಂಥವರಿಗೆ ನಟಿ ಸಮಂತಾ ಪ್ರಭು ಬಹಳ ಪ್ರಬುದ್ಧತೆಯಿಂದ ಉತ್ತರಿಸಿದ್ದಾರೆ. ಟ್ರೋಲ್ ಮಾಡಿದವರು ಇದನ್ನು ಈಗಲಾದರೂ ಅರ್ಥ ಮಾಡಿಕೊಳ್ಳುವರೆ?


ಇದನ್ನೂ ಓದಿ; ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...