HomeUncategorizedನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ತಮ್ಮ ಮೇಲಿನ ನೈತಿಕ ಪೊಲೀಸ್‌ಗಿರಿ ಆರೋಪಕ್ಕೆ ಉತ್ತರಿಸಿದ ಕವಿತಾ ರೆಡ್ಡಿ, "ಇಂತಾ ಹೇಳಿಕೆ ಸಂಪೂರ್ಣವಾಗಿ ಮೂರ್ಖತನವಾಗಿದ್ದು, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ" ಎಂದು ಹೇಳಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಆಗರ ಕೆರೆಯ ಪಕ್ಕದ ಉದ್ಯಾನವನದಲ್ಲಿ ಇಬ್ಬರು ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡಿದ್ದಾಗಿ ಆರೋಪಿಸಿ ಎಐಸಿಸಿ ಸದಸ್ಯೆ ಕವಿತಾ ರೆಡ್ಡಿ ನೇತೃತ್ವದ ಜನರ ಗುಂಪು ತಮ್ಮ ಹಲ್ಲೆ ಮಾಡಿದ್ದಾರೆ ಎಂದು ನಟಿ ಸಂಯುಕ್ತ ಹೆಗ್ಡೆ ಆರೋಪಿಸಿದ್ದಾರೆ.

ಘಟನೆಯ ವಿಡಿಯೋ ದೃಶ್ಯಾವಳಿಯನ್ನು ಸಂಯುಕ್ತ ಹೆಗ್ಡೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಲೈವ್‌ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲಿ ನೆರೆದಿದ್ದ ಜನರು ಅವರು ಡ್ರಗ್ಸ್ ಸೇವಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲದೆ ವ್ಯಕ್ತಿಯೊಬ್ಬ ಅವರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸುವುದಾಗಿ ಅವರನ್ನು ಬೆದರಿಸಿರುವುದು ಅವರ ಮತ್ತೊಂದು ವಿಡಿಯೋದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಬಂಧನ

ಕವಿತಾ ರೆಡ್ಡಿ ಕೂಡ ಪೊಲೀಸರನ್ನು ಸ್ಥಳಕ್ಕೆ ಕರೆದು ನಟಿ ಮತ್ತು ಅವರ ಸ್ನೇಹಿತರನ್ನು ಸಾರ್ವಜನಿಕವಾಗಿ  ಅಸಭ್ಯತೆಯಿಂದ ವರ್ತಿಸಿದ್ದಕ್ಕೆ ಕೇಸು ದಾಖಲಿಸಬೇಕು ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಇನ್ಸ್ಟ್ರಾಗ್ರಾಮ್ ಲೈವ್ ವಿಡಿಯೋದಲ್ಲಿ ಇದು ತುಂಬಾ ತಪ್ಪು ಎಂದು ಹೇಳಿರುವ ಸಂಯುಕ್ತ ಹೆಗ್ಡೆ, “ನಾವು ನಮ್ಮಷ್ಟಕ್ಕೆ ವ್ಯಾಯಾಮ ಮಾಡುತ್ತಿದ್ದೆವು, ಇಲ್ಲಿಗೆ ಬಂದ ಈ ಮಹಿಳೆ (ಕವಿತಾ ರೆಡ್ಡಿ) ಕ್ರೀಡಾ ಉಡುಪಿನ ಬಗ್ಗೆ ತಕರಾರು ತೆಗೆದು ನಾವು ಅಸಭ್ಯವಾಗಿ ವರ್ತಿಸುತ್ತಿದ್ದೇವೆ ಎಂದು ಹೇಳಲು ಪ್ರಾರಂಭಿಸಿದರು. ಪ್ರಸ್ತುತ ಚಿತ್ರರಂಗದಲ್ಲಿ ಡ್ರಗ್ಸ್‌ ಬಗ್ಗೆ ಚರ್ಚೆಯಾಗುತ್ತಿರುವ ಕಾರಣ ಈಗ ಇಲ್ಲಿನ ಜನರು ನಾವು ಡ್ರಗ್ಸ್‌ಗಳನ್ನು ಸೇವಿಸಿದ್ದೇವೆ ಎಂದು ಆರೋಪಿಸುತ್ತಿದ್ದಾರೆ” ಎಂದು ತಾವು ತೊಟ್ಟಿದ್ದು ಕೇವಲ ಕ್ರೀಡಾ ಉಡುಪು ಎಂದು ಸ್ಪಷ್ಟಪಡಿಸಿದರು.

ಘಟನೆ ನಡೆದಾಗ ಪಾರ್ಕ್‌ನಿಂದ ಹೊರ ಹೋಗಲು ಯತ್ನಿಸಿದಾಗಲು ಪಾರ್ಕ್ ಗೇಟ್‌ಗೆ ಬೀಗ ಹಾಕಿ ಅವರನ್ನು ಹೊರಹೋಗದಂತೆ ಅವರನ್ನು ತಡೆದಿದ್ದು ಸಹ ವಿಡಿಯೋದಲ್ಲಿ ಸೆರೆಯಾಗಿದೆ.

ಅಷ್ಟೇ ಅಲ್ಲದೆ ಪೊಲೀಸರೊಂದಿಗೆ, ನೀವ್ಯಾಕೆ ಸತ್ಯದ ಪರ ನಿಲ್ಲುತ್ತಿಲ್ಲ ಎಂದು ನಟಿ ಕೇಳಿರುವ ಪ್ರಶ್ನೆಗೆ, ಪೊಲೀಸ್‌ ಅಧಿಕಾರಿಯೊಬ್ಬರು ”ಇದು ತಪ್ಪು ಒಪ್ಪಿನ ಪ್ರಶ್ನೆಯಲ್ಲ, ಇಲ್ಲಿ ಜನ ಸೇರುತ್ತಿದ್ದಾರೆ. ದಯವಿಟ್ಟು ಹೊರಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಅಷ್ಟೇ ಅಲ್ಲದೆ ತನ್ನ ಗೆಳತಿ ಮೇಲೆ ಕವಿತಾ ಹಲ್ಲೆ ನಡೆಸಲು ಹೋಗಿದ್ದಾರೆ ಎಂದು ನಟಿ ಆರೋಪಿಸಿದ್ದು, ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಾಕಿದ್ದಾರೆ. ವಿಡಿಯೋದಲ್ಲಿ ಕವಿತಾ ರೆಡ್ಡಿ ಯುವತಿಯನ್ನು ದೂಡುತ್ತಿರುವುದು ದಾಖಲಾಗಿದೆ.

ನಟಿ ಘಟನೆಯ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿ ನೋವು ತೋಡಿಕೊಂಡಿದ್ದಾರೆ.

ಇಡೀ ಘಟನೆಯಲ್ಲಿ ಕೆಲವು ಜನರು ನಟಿ ಸಂಯುಕ್ತ ಹೆಗ್ಡೆ ಪರವಾಗಿ ಮಾತನಾಡಿದ್ದು ಇನ್ಸ್ಟ್ರಾಗ್ರಾಮ್ ಲೈವ್‌ನಲ್ಲಿ ದಾಖಲಾಗಿದೆ. ತನ್ನನ್ನು ತಾನು ಡಾಕ್ಟರ್‌ ಎಂದು ಪರಿಚಯ ಮಾಡಿಕೊಂಡಿರುವ ಒಬ್ಬರು “ನಟಿ ಸಂಯುಕ್ತ ಹೆಗ್ಡೆ ಬಹಳ ದಿನದಿಂದ ಇಲ್ಲಿ ವ್ಯಾಯಾಮ ಮಾಡಲು ಬರುತ್ತಾರೆ. ಅವರು ಅಸಭ್ಯವಾಗಿ ನಡೆದುಕೊಂಡಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ‌ ಜೊತೆ ಮಾತನಾಡಿದ ಕವಿತಾ ರೆಡ್ಡಿ, “ಸಾರ್ವಜನಿಕ ಪಾರ್ಕ್‌ನಲ್ಲಿ ಯುವತಿಯರು ಸಂಗೀತ ಹಾಕಿ ನೃತ್ಯ ಮಾಡಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಜನರು ಕರೆ ಮಾಡಿ ಹೇಳಿದ್ದಕ್ಕೆ ನಾನು ಅಲ್ಲಿ ತಲುಪಿದ್ದೆ. ಅಲ್ಲಿ ತಲುಪಿ ಯುವತಿಯರೊಂದಿಗೆ ಸಂಗೀತ ಹಾಕಿ ನೃತ್ಯ ಮಾಡಲು ಯಾವ ಪಾರ್ಕಿನಲ್ಲೂ ಅವಕಾಶವಿಲ್ಲ. ನೀವು ಇಲ್ಲಿಂದ ಹೊರಡಿ ಎಂದು ವಿನಂತಿಸಿದ್ದೆ. ಆದರೆ ಯುವತಿಯರು ಅದಕ್ಕೂ ಒಪ್ಪದಿದ್ದಕ್ಕೆ  ಪೊಲೀಸರಿಗೆ ಸಂಪರ್ಕಿಸಿ ಅವರ ಪೋಟೋವನ್ನು ಕ್ಲಿಕ್ಕಿಸುವಾಗ ಅದರಲ್ಲಿರುವ ಯುವತಿಯೊಬ್ಬಳು ನನಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಅದಕ್ಕಾಗಿ ನಾವು ಅವರನ್ನು ಪ್ರಶ್ನಿಸಲು ಮುಂದೆ ಹೋಗಿದ್ದೆ. ಯುವತಿಯು ಅದೇ ವಿಡಿಯೋವನ್ನು ಟ್ವಿಟ್ಟರ್‌ಗೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ತಮ್ಮ ಮೇಲಿನ ನೈತಿಕ ಪೊಲೀಸ್‌ಗಿರಿ ಆರೋಪಕ್ಕೆ ಉತ್ತರಿಸಿದ ಕವಿತಾ ರೆಡ್ಡಿ, “ಇಂತಾ ಹೇಳಿಕೆ ಸಂಪೂರ್ಣವಾಗಿ ಮೂರ್ಖತನವಾಗಿದ್ದು, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ” ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ನಟಿ ಸಂಯುಕ್ತ ಜೊತೆ ಕವಿತಾ ರೆಡ್ಡಿ ನಡೆದುಕೊಂಡಿದ್ದು ಸರಿಯಲ್ಲ ಎಂದು ಹಲವರು ಕಿಡಿಕಾರಿದ್ದಾರೆ.

ನಟಿ ಸಂಯುಕ್ತ ಹೆಗಡೆ ಮೇಲೆ ಹಲ್ಲೆ ನಡೆಸಿದ, ವಸ್ತ್ರದ ಕಾರಣಕ್ಕೆ ಅವರ ಮೇಲೆ ದಾಳಿ ನಡೆಸಿದ ಅಷ್ಟೂ ಜನರ ಮೇಲೆ ಎಫ್ ಐಆರ್ ದಾಖಲಿಸಬೇಕು. ಕಾಂಗ್ರೆಸ್…

Posted by Naveen Soorinje on Saturday, September 5, 2020

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಗಾಯತ್ರಿ ಎಚ್.ಎನ್. ” ಪೋಸ್ಟ್ ಕಾರ್ಡ್ ವಿಕ್ರಮ್ ಹೆಗಡೆ ಕವಿತಾ ರೆಡ್ಡಿನ ಟ್ರೋಲ್ ಮಾಡ್ತಿದಾರೆ ಅನ್ನೋ ಕಾರಣಕ್ಕೆ, ಬಿಜೆಪಿಗಳು ಕಾಂಗ್ರೆಸ್ಸಿಗರನ್ನ ಕಿಚಾಯಿಸ್ತಿದಾರೆ ಅನ್ನೋ ಕಾರಣಕ್ಕೆ ಕವಿತಾ ರೆಡ್ಡಿ ಬಗ್ಗೆ ಸಾಫ್ಟ್ ಆಗಬೇಕಾದ, ಸಂಯುಕ್ತಾ ಬಗ್ಗೆ ರಾಂಗ್ ಆಗಬೇಕಾದ ಅಗತ್ಯ ಇಲ್ಲ.
ಇಂಥ ವಿಷಯಗಳಲ್ಲಿ ತಪ್ಪಾಗಿ ನಡೆದುಕೊಂಡ್ರೆ ನಮಗೆ ಮಾಳವಿಕಾನೂ ಒಂದೇ ಕವಿತಾನೂ ಒಂದೇ ಅನ್ನುವಷ್ಟು ಕ್ಲಾರಿಟಿ ನಮಗಿರಬೇಕು. ಕವಿತಾ ಬಟ್ಟೆ ಬಗ್ಗೆ ಡ್ರಗ್ ಬಗ್ಗೆ ಮಾತಾಡಿರೋದು ಯಾವ ರೀತಿಯಲ್ಲೂ ಸಮರ್ಥನೀಯ ಅಲ್ಲ. ಅವರ ಮುಖ ಉಳಿಸಲಿಕ್ಕೆ ಆಕೆಯ ಒಳ್ಳೆ ಕೆಲಸಗಳ ಪಟ್ಟಿ ಇಟ್ಟು ಸಂಯುಕ್ತಾರನ್ನು ಅಪರಾಧಿ ಮಾಡೋದು ತಪ್ಪು. ಕವಿತಾ ಅವರ ಸಾಮಾಜಿಕ ಚಟುವಟಿಕೆಗಳು ನಿಜ ಕಾಳಜಿಯಿಂದ ಮಾಡಿದ್ದಾಗಿದ್ದರೆ ಖಂಡಿತಾ ಗೌರವ ಇದೆ. ಅದು ಬೇರೆ. ಮತ್ತು ಇದು ಬೇರೆಯೇ. ಹಾಗೇ ನಾಳೆ ಸಂಯುಕ್ತ ಬಿಜೆಪಿ ಜಾಯಿನ್ ಆಗಿ ವೋಟ್ ಫಾರ್ ಮೋದಿ ಅನ್ನಬಹುದು. ಅದು ಆಕೆಯ ಹಣೆಬರಹ. ಅದು ಬೇರೆ ಮತ್ತು ಈಗಿನ ಘಟನೆ ಬೇರೆಯೇ. ಪ್ರತಿಯೊಂದನ್ನೂ ರಾಜಕೀಯವಾಗಿ ನೋಡುವ ಗೀಳು ನಾವು ಬಿಡದೆಹೋದರೆ ಉದ್ಧಾರ ಸಾಧ್ಯವಿಲ್ಲ. ಬಿಜೆಪಿಯವರು ಈ ಹೊತ್ತು ಸಂಯುಕ್ತಾನ ಸಪೋರ್ಟ್ ಮಾಡಿದರೆ, ನಗೆಪಾಟಲಿಗೆ ಈಡಾಗುತ್ತಾರೆ ಹೊರತು ಮತ್ತೇನಲ್ಲ. ಆ ತಲೆಬಿಸಿ ಬಿಟ್ಟು, ನಾಜೂಕು ಸೋಗಲಾಡಿತನ ತೋರದೆ, ವಿಷಯದ ಕುರಿತು ಸ್ಪಷ್ಟವಾಗಿರೋಣ” ಎಂದಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ಮಾಧ್ಯಮಗಳ ವರ್ತನೆಯನ್ನು ಖಂಡಿಸಿ, “ಸುಡುಗಾಡು ನ್ಯೂಸ್ ಚಾನಲ್`ಗಳ ಹೆಡ್ಲೈನ್ ಗಮನಿಸಿ: “ಮತ್ತೆ ಸಂಯುಕ್ತಾ ಹೆಗಡೆ ಕಿರಿಕ್”, “ವಿವಾದ ಸೃಷ್ಟಿಸಿದ ಸಂಯುಕ್ತಾ ಹೆಗಡೆ”, “ಸಂಯುಕ್ತಾ ಹೆಗಡೆ ರಗಳೆ”.ಯಾಕ್ ಹೇಳಿ? ಹುಡ್ಗಿಯ ಚೆಂದ ಚೆಂದ ಫೋಟೋ ಹಾಕಿ ಜೊಲ್ ಪಾರ್ಟಿಗಳನ್ನ ಸ್ಕ್ರೀನ್ ಮುಂದೆ ಕೂರಿಸೋದು ಒಂದಾದ್ರೆ, ಮೂರೊತ್ತೂ ಚಾನಲ್`ಗಳ ಪ್ಯಾನಲ್ಲಲ್ಲಿ ಕೂತು ಸೆಲ್ಫ್ ಪ್ರಮೋಶನ್`ಗೆ ಒದ್ದಾಡೋ ಕವಿತಾ ರೆಡ್ಡಿಗೆ ಅಲ್ಪ ಕಾಣಿಕೆ ಕೊಡೋ ಐಡಿಯಾ ಮತ್ತೊಂದು. ಮತ್ಲಬೀ ದುನಿಯಾ, ಮಾನಗೆಟ್ಟ ಮಿಡಿಯಾ” ಎಂದು ಬರೆದಿದ್ದಾರೆ.

almeida gladson ಎಂಬುವವರು ಕವಿತಾ ರೆಡ್ಡಿಯವರ ವರ್ತನೆಯನ್ನು ಖಂಡಿಸಿ, “ಯಾಕೋ ಇವತ್ತು ಕವಿತಾ ರೆಡ್ಡಿಯವರಲ್ಲಿ ಪ್ರಮೋದ್ ಮುತಾಲಿಕರನ್ನು ಕಂಡೆ. ಯಾವ ವ್ಯತ್ಯಾಸವೂ ಇಲ್ಲ” ಎಂದು ಪೋಸ್ಟ್ ಮಾಡಿದ್ದಾರೆ.

ಆದರ್ಶ್ ಅಯ್ಯರ್ ಎಂಬುವವರು, “ನಾನು ನಿಮ್ಮೊಂದಿಗೆ ಸಿಎಎ ವಿರುದ್ಧದ ಹೊರಾಟದಲ್ಲಿ ಭಾಗಿಯಾಗಿದ್ದೆ. ಆದರೆ ನೀವೂ ಒಬ್ಬ ಮಹಿಳೆಯಾಗಿ ಇನ್ನೊಂದು ಮಹಿಳೆಯನ್ನು ಹೀಗೆ ಸಾರ್ವಜನಿಕವಾಗಿ ನಿಂದಿಸಿರುವುದು ಸರಿಯಲ್ಲ” ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...