HomeUncategorizedನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ನಟಿ ಸಂಯುಕ್ತ ಹೆಗ್ಡೆ- ಕವಿತಾ ರೆಡ್ಡಿ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ತಮ್ಮ ಮೇಲಿನ ನೈತಿಕ ಪೊಲೀಸ್‌ಗಿರಿ ಆರೋಪಕ್ಕೆ ಉತ್ತರಿಸಿದ ಕವಿತಾ ರೆಡ್ಡಿ, "ಇಂತಾ ಹೇಳಿಕೆ ಸಂಪೂರ್ಣವಾಗಿ ಮೂರ್ಖತನವಾಗಿದ್ದು, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ" ಎಂದು ಹೇಳಿದ್ದಾರೆ.

- Advertisement -
- Advertisement -

ಶುಕ್ರವಾರ ಸಂಜೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಆಗರ ಕೆರೆಯ ಪಕ್ಕದ ಉದ್ಯಾನವನದಲ್ಲಿ ಇಬ್ಬರು ಸ್ನೇಹಿತರೊಂದಿಗೆ ವ್ಯಾಯಾಮ ಮಾಡುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡಿದ್ದಾಗಿ ಆರೋಪಿಸಿ ಎಐಸಿಸಿ ಸದಸ್ಯೆ ಕವಿತಾ ರೆಡ್ಡಿ ನೇತೃತ್ವದ ಜನರ ಗುಂಪು ತಮ್ಮ ಹಲ್ಲೆ ಮಾಡಿದ್ದಾರೆ ಎಂದು ನಟಿ ಸಂಯುಕ್ತ ಹೆಗ್ಡೆ ಆರೋಪಿಸಿದ್ದಾರೆ.

ಘಟನೆಯ ವಿಡಿಯೋ ದೃಶ್ಯಾವಳಿಯನ್ನು ಸಂಯುಕ್ತ ಹೆಗ್ಡೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಲೈವ್‌ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲಿ ನೆರೆದಿದ್ದ ಜನರು ಅವರು ಡ್ರಗ್ಸ್ ಸೇವಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಘೋಷಣೆ ಕೂಗಿದ್ದಾರೆ. ಅಷ್ಟೇ ಅಲ್ಲದೆ ವ್ಯಕ್ತಿಯೊಬ್ಬ ಅವರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸುವುದಾಗಿ ಅವರನ್ನು ಬೆದರಿಸಿರುವುದು ಅವರ ಮತ್ತೊಂದು ವಿಡಿಯೋದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಬಂಧನ

ಕವಿತಾ ರೆಡ್ಡಿ ಕೂಡ ಪೊಲೀಸರನ್ನು ಸ್ಥಳಕ್ಕೆ ಕರೆದು ನಟಿ ಮತ್ತು ಅವರ ಸ್ನೇಹಿತರನ್ನು ಸಾರ್ವಜನಿಕವಾಗಿ  ಅಸಭ್ಯತೆಯಿಂದ ವರ್ತಿಸಿದ್ದಕ್ಕೆ ಕೇಸು ದಾಖಲಿಸಬೇಕು ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಇನ್ಸ್ಟ್ರಾಗ್ರಾಮ್ ಲೈವ್ ವಿಡಿಯೋದಲ್ಲಿ ಇದು ತುಂಬಾ ತಪ್ಪು ಎಂದು ಹೇಳಿರುವ ಸಂಯುಕ್ತ ಹೆಗ್ಡೆ, “ನಾವು ನಮ್ಮಷ್ಟಕ್ಕೆ ವ್ಯಾಯಾಮ ಮಾಡುತ್ತಿದ್ದೆವು, ಇಲ್ಲಿಗೆ ಬಂದ ಈ ಮಹಿಳೆ (ಕವಿತಾ ರೆಡ್ಡಿ) ಕ್ರೀಡಾ ಉಡುಪಿನ ಬಗ್ಗೆ ತಕರಾರು ತೆಗೆದು ನಾವು ಅಸಭ್ಯವಾಗಿ ವರ್ತಿಸುತ್ತಿದ್ದೇವೆ ಎಂದು ಹೇಳಲು ಪ್ರಾರಂಭಿಸಿದರು. ಪ್ರಸ್ತುತ ಚಿತ್ರರಂಗದಲ್ಲಿ ಡ್ರಗ್ಸ್‌ ಬಗ್ಗೆ ಚರ್ಚೆಯಾಗುತ್ತಿರುವ ಕಾರಣ ಈಗ ಇಲ್ಲಿನ ಜನರು ನಾವು ಡ್ರಗ್ಸ್‌ಗಳನ್ನು ಸೇವಿಸಿದ್ದೇವೆ ಎಂದು ಆರೋಪಿಸುತ್ತಿದ್ದಾರೆ” ಎಂದು ತಾವು ತೊಟ್ಟಿದ್ದು ಕೇವಲ ಕ್ರೀಡಾ ಉಡುಪು ಎಂದು ಸ್ಪಷ್ಟಪಡಿಸಿದರು.

ಘಟನೆ ನಡೆದಾಗ ಪಾರ್ಕ್‌ನಿಂದ ಹೊರ ಹೋಗಲು ಯತ್ನಿಸಿದಾಗಲು ಪಾರ್ಕ್ ಗೇಟ್‌ಗೆ ಬೀಗ ಹಾಕಿ ಅವರನ್ನು ಹೊರಹೋಗದಂತೆ ಅವರನ್ನು ತಡೆದಿದ್ದು ಸಹ ವಿಡಿಯೋದಲ್ಲಿ ಸೆರೆಯಾಗಿದೆ.

ಅಷ್ಟೇ ಅಲ್ಲದೆ ಪೊಲೀಸರೊಂದಿಗೆ, ನೀವ್ಯಾಕೆ ಸತ್ಯದ ಪರ ನಿಲ್ಲುತ್ತಿಲ್ಲ ಎಂದು ನಟಿ ಕೇಳಿರುವ ಪ್ರಶ್ನೆಗೆ, ಪೊಲೀಸ್‌ ಅಧಿಕಾರಿಯೊಬ್ಬರು ”ಇದು ತಪ್ಪು ಒಪ್ಪಿನ ಪ್ರಶ್ನೆಯಲ್ಲ, ಇಲ್ಲಿ ಜನ ಸೇರುತ್ತಿದ್ದಾರೆ. ದಯವಿಟ್ಟು ಹೊರಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಅಷ್ಟೇ ಅಲ್ಲದೆ ತನ್ನ ಗೆಳತಿ ಮೇಲೆ ಕವಿತಾ ಹಲ್ಲೆ ನಡೆಸಲು ಹೋಗಿದ್ದಾರೆ ಎಂದು ನಟಿ ಆರೋಪಿಸಿದ್ದು, ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಾಕಿದ್ದಾರೆ. ವಿಡಿಯೋದಲ್ಲಿ ಕವಿತಾ ರೆಡ್ಡಿ ಯುವತಿಯನ್ನು ದೂಡುತ್ತಿರುವುದು ದಾಖಲಾಗಿದೆ.

ನಟಿ ಘಟನೆಯ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿ ನೋವು ತೋಡಿಕೊಂಡಿದ್ದಾರೆ.

ಇಡೀ ಘಟನೆಯಲ್ಲಿ ಕೆಲವು ಜನರು ನಟಿ ಸಂಯುಕ್ತ ಹೆಗ್ಡೆ ಪರವಾಗಿ ಮಾತನಾಡಿದ್ದು ಇನ್ಸ್ಟ್ರಾಗ್ರಾಮ್ ಲೈವ್‌ನಲ್ಲಿ ದಾಖಲಾಗಿದೆ. ತನ್ನನ್ನು ತಾನು ಡಾಕ್ಟರ್‌ ಎಂದು ಪರಿಚಯ ಮಾಡಿಕೊಂಡಿರುವ ಒಬ್ಬರು “ನಟಿ ಸಂಯುಕ್ತ ಹೆಗ್ಡೆ ಬಹಳ ದಿನದಿಂದ ಇಲ್ಲಿ ವ್ಯಾಯಾಮ ಮಾಡಲು ಬರುತ್ತಾರೆ. ಅವರು ಅಸಭ್ಯವಾಗಿ ನಡೆದುಕೊಂಡಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ‌ ಜೊತೆ ಮಾತನಾಡಿದ ಕವಿತಾ ರೆಡ್ಡಿ, “ಸಾರ್ವಜನಿಕ ಪಾರ್ಕ್‌ನಲ್ಲಿ ಯುವತಿಯರು ಸಂಗೀತ ಹಾಕಿ ನೃತ್ಯ ಮಾಡಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಜನರು ಕರೆ ಮಾಡಿ ಹೇಳಿದ್ದಕ್ಕೆ ನಾನು ಅಲ್ಲಿ ತಲುಪಿದ್ದೆ. ಅಲ್ಲಿ ತಲುಪಿ ಯುವತಿಯರೊಂದಿಗೆ ಸಂಗೀತ ಹಾಕಿ ನೃತ್ಯ ಮಾಡಲು ಯಾವ ಪಾರ್ಕಿನಲ್ಲೂ ಅವಕಾಶವಿಲ್ಲ. ನೀವು ಇಲ್ಲಿಂದ ಹೊರಡಿ ಎಂದು ವಿನಂತಿಸಿದ್ದೆ. ಆದರೆ ಯುವತಿಯರು ಅದಕ್ಕೂ ಒಪ್ಪದಿದ್ದಕ್ಕೆ  ಪೊಲೀಸರಿಗೆ ಸಂಪರ್ಕಿಸಿ ಅವರ ಪೋಟೋವನ್ನು ಕ್ಲಿಕ್ಕಿಸುವಾಗ ಅದರಲ್ಲಿರುವ ಯುವತಿಯೊಬ್ಬಳು ನನಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಅದಕ್ಕಾಗಿ ನಾವು ಅವರನ್ನು ಪ್ರಶ್ನಿಸಲು ಮುಂದೆ ಹೋಗಿದ್ದೆ. ಯುವತಿಯು ಅದೇ ವಿಡಿಯೋವನ್ನು ಟ್ವಿಟ್ಟರ್‌ಗೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ತಮ್ಮ ಮೇಲಿನ ನೈತಿಕ ಪೊಲೀಸ್‌ಗಿರಿ ಆರೋಪಕ್ಕೆ ಉತ್ತರಿಸಿದ ಕವಿತಾ ರೆಡ್ಡಿ, “ಇಂತಾ ಹೇಳಿಕೆ ಸಂಪೂರ್ಣವಾಗಿ ಮೂರ್ಖತನವಾಗಿದ್ದು, ಸಾರ್ವಜನಿಕವಾಗಿ ಬಟ್ಟೆ ಬಿಚ್ಚಿ ಅಸಭ್ಯವಾಗಿ ನಡೆದುಕೊಂಡಿದ್ದನ್ನು ಪ್ರಶ್ನಿಸಿದ್ದೇನೆ ಹಾಗೂ ಪೋಲಿಸರಿಗೆ ದೂರು ನೀಡಿದ್ದೇನೆ” ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ನಟಿ ಸಂಯುಕ್ತ ಜೊತೆ ಕವಿತಾ ರೆಡ್ಡಿ ನಡೆದುಕೊಂಡಿದ್ದು ಸರಿಯಲ್ಲ ಎಂದು ಹಲವರು ಕಿಡಿಕಾರಿದ್ದಾರೆ.

ನಟಿ ಸಂಯುಕ್ತ ಹೆಗಡೆ ಮೇಲೆ ಹಲ್ಲೆ ನಡೆಸಿದ, ವಸ್ತ್ರದ ಕಾರಣಕ್ಕೆ ಅವರ ಮೇಲೆ ದಾಳಿ ನಡೆಸಿದ ಅಷ್ಟೂ ಜನರ ಮೇಲೆ ಎಫ್ ಐಆರ್ ದಾಖಲಿಸಬೇಕು. ಕಾಂಗ್ರೆಸ್…

Posted by Naveen Soorinje on Saturday, September 5, 2020

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಗಾಯತ್ರಿ ಎಚ್.ಎನ್. ” ಪೋಸ್ಟ್ ಕಾರ್ಡ್ ವಿಕ್ರಮ್ ಹೆಗಡೆ ಕವಿತಾ ರೆಡ್ಡಿನ ಟ್ರೋಲ್ ಮಾಡ್ತಿದಾರೆ ಅನ್ನೋ ಕಾರಣಕ್ಕೆ, ಬಿಜೆಪಿಗಳು ಕಾಂಗ್ರೆಸ್ಸಿಗರನ್ನ ಕಿಚಾಯಿಸ್ತಿದಾರೆ ಅನ್ನೋ ಕಾರಣಕ್ಕೆ ಕವಿತಾ ರೆಡ್ಡಿ ಬಗ್ಗೆ ಸಾಫ್ಟ್ ಆಗಬೇಕಾದ, ಸಂಯುಕ್ತಾ ಬಗ್ಗೆ ರಾಂಗ್ ಆಗಬೇಕಾದ ಅಗತ್ಯ ಇಲ್ಲ.
ಇಂಥ ವಿಷಯಗಳಲ್ಲಿ ತಪ್ಪಾಗಿ ನಡೆದುಕೊಂಡ್ರೆ ನಮಗೆ ಮಾಳವಿಕಾನೂ ಒಂದೇ ಕವಿತಾನೂ ಒಂದೇ ಅನ್ನುವಷ್ಟು ಕ್ಲಾರಿಟಿ ನಮಗಿರಬೇಕು. ಕವಿತಾ ಬಟ್ಟೆ ಬಗ್ಗೆ ಡ್ರಗ್ ಬಗ್ಗೆ ಮಾತಾಡಿರೋದು ಯಾವ ರೀತಿಯಲ್ಲೂ ಸಮರ್ಥನೀಯ ಅಲ್ಲ. ಅವರ ಮುಖ ಉಳಿಸಲಿಕ್ಕೆ ಆಕೆಯ ಒಳ್ಳೆ ಕೆಲಸಗಳ ಪಟ್ಟಿ ಇಟ್ಟು ಸಂಯುಕ್ತಾರನ್ನು ಅಪರಾಧಿ ಮಾಡೋದು ತಪ್ಪು. ಕವಿತಾ ಅವರ ಸಾಮಾಜಿಕ ಚಟುವಟಿಕೆಗಳು ನಿಜ ಕಾಳಜಿಯಿಂದ ಮಾಡಿದ್ದಾಗಿದ್ದರೆ ಖಂಡಿತಾ ಗೌರವ ಇದೆ. ಅದು ಬೇರೆ. ಮತ್ತು ಇದು ಬೇರೆಯೇ. ಹಾಗೇ ನಾಳೆ ಸಂಯುಕ್ತ ಬಿಜೆಪಿ ಜಾಯಿನ್ ಆಗಿ ವೋಟ್ ಫಾರ್ ಮೋದಿ ಅನ್ನಬಹುದು. ಅದು ಆಕೆಯ ಹಣೆಬರಹ. ಅದು ಬೇರೆ ಮತ್ತು ಈಗಿನ ಘಟನೆ ಬೇರೆಯೇ. ಪ್ರತಿಯೊಂದನ್ನೂ ರಾಜಕೀಯವಾಗಿ ನೋಡುವ ಗೀಳು ನಾವು ಬಿಡದೆಹೋದರೆ ಉದ್ಧಾರ ಸಾಧ್ಯವಿಲ್ಲ. ಬಿಜೆಪಿಯವರು ಈ ಹೊತ್ತು ಸಂಯುಕ್ತಾನ ಸಪೋರ್ಟ್ ಮಾಡಿದರೆ, ನಗೆಪಾಟಲಿಗೆ ಈಡಾಗುತ್ತಾರೆ ಹೊರತು ಮತ್ತೇನಲ್ಲ. ಆ ತಲೆಬಿಸಿ ಬಿಟ್ಟು, ನಾಜೂಕು ಸೋಗಲಾಡಿತನ ತೋರದೆ, ವಿಷಯದ ಕುರಿತು ಸ್ಪಷ್ಟವಾಗಿರೋಣ” ಎಂದಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ಮಾಧ್ಯಮಗಳ ವರ್ತನೆಯನ್ನು ಖಂಡಿಸಿ, “ಸುಡುಗಾಡು ನ್ಯೂಸ್ ಚಾನಲ್`ಗಳ ಹೆಡ್ಲೈನ್ ಗಮನಿಸಿ: “ಮತ್ತೆ ಸಂಯುಕ್ತಾ ಹೆಗಡೆ ಕಿರಿಕ್”, “ವಿವಾದ ಸೃಷ್ಟಿಸಿದ ಸಂಯುಕ್ತಾ ಹೆಗಡೆ”, “ಸಂಯುಕ್ತಾ ಹೆಗಡೆ ರಗಳೆ”.ಯಾಕ್ ಹೇಳಿ? ಹುಡ್ಗಿಯ ಚೆಂದ ಚೆಂದ ಫೋಟೋ ಹಾಕಿ ಜೊಲ್ ಪಾರ್ಟಿಗಳನ್ನ ಸ್ಕ್ರೀನ್ ಮುಂದೆ ಕೂರಿಸೋದು ಒಂದಾದ್ರೆ, ಮೂರೊತ್ತೂ ಚಾನಲ್`ಗಳ ಪ್ಯಾನಲ್ಲಲ್ಲಿ ಕೂತು ಸೆಲ್ಫ್ ಪ್ರಮೋಶನ್`ಗೆ ಒದ್ದಾಡೋ ಕವಿತಾ ರೆಡ್ಡಿಗೆ ಅಲ್ಪ ಕಾಣಿಕೆ ಕೊಡೋ ಐಡಿಯಾ ಮತ್ತೊಂದು. ಮತ್ಲಬೀ ದುನಿಯಾ, ಮಾನಗೆಟ್ಟ ಮಿಡಿಯಾ” ಎಂದು ಬರೆದಿದ್ದಾರೆ.

almeida gladson ಎಂಬುವವರು ಕವಿತಾ ರೆಡ್ಡಿಯವರ ವರ್ತನೆಯನ್ನು ಖಂಡಿಸಿ, “ಯಾಕೋ ಇವತ್ತು ಕವಿತಾ ರೆಡ್ಡಿಯವರಲ್ಲಿ ಪ್ರಮೋದ್ ಮುತಾಲಿಕರನ್ನು ಕಂಡೆ. ಯಾವ ವ್ಯತ್ಯಾಸವೂ ಇಲ್ಲ” ಎಂದು ಪೋಸ್ಟ್ ಮಾಡಿದ್ದಾರೆ.

ಆದರ್ಶ್ ಅಯ್ಯರ್ ಎಂಬುವವರು, “ನಾನು ನಿಮ್ಮೊಂದಿಗೆ ಸಿಎಎ ವಿರುದ್ಧದ ಹೊರಾಟದಲ್ಲಿ ಭಾಗಿಯಾಗಿದ್ದೆ. ಆದರೆ ನೀವೂ ಒಬ್ಬ ಮಹಿಳೆಯಾಗಿ ಇನ್ನೊಂದು ಮಹಿಳೆಯನ್ನು ಹೀಗೆ ಸಾರ್ವಜನಿಕವಾಗಿ ನಿಂದಿಸಿರುವುದು ಸರಿಯಲ್ಲ” ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...