Homeಕರ್ನಾಟಕಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚನೆಗೆ ಸಿಎಂಗೆ ಪತ್ರ ಬರೆದ ನಟಿ ಸಂಜನಾ ಗಲ್ರಾನಿ

ಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚನೆಗೆ ಸಿಎಂಗೆ ಪತ್ರ ಬರೆದ ನಟಿ ಸಂಜನಾ ಗಲ್ರಾನಿ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ಮಹಿಳಾ ನಟರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತೆಡೆಯಲು ‘ಆಂತರಿಕ ಸಮಿತಿ’ಗೆ ಚಿತ್ರನಿರ್ಮಾಪಕರು ಮತ್ತು ನಟರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ನಟಿ ಸಂಜನಾ ಗಲ್ರಾನಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ‘ಮಹಿಳೆಯರಿಗೆಂದೆ ಹೊಸ ಸಮಿತಿ ರಚನೆ’ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.ಸ್ಯಾಂಡಲ್‌ವುಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಿಎಂ ಅವರಿಗೆ ಬರೆದಿರುವ ಪತ್ರದಲ್ಲಿ, ಸಂಜನಾ ಗಲ್ರಾನಿ ಫೌಂಡೇಶನ್‌ ಮೂಲಕ, ಚಲನಚಿತ್ರೋದ್ಯಮದಲ್ಲಿ ಮಹಿಳಾ ಶೋಷಣೆಯನ್ನು ತಡೆಗಟ್ಟಲು ಕಡ್ಡಾಯವಾಗಿ ತೆಗೆದುಕೊಳ್ಳಬೇಕಾದ ಕೆಲವು ಪ್ರಮುಖ ಸುರಕ್ಷತಾ ಕ್ರಮಗಳನ್ನು ಪ್ರಾರಂಭಿಸಲು ಮತ್ತು ಮಹಿಳೆಯ ಹೊಸ ಸಮಿತಿ ರಚನೆಗೆ ವಿನಂತಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಜೊತೆಗೆ ಸರ್ಕಾರದ ಮಟ್ಟದಲ್ಲೂ ಕನ್ನಡ ಚಿತ್ರರಂಗದ ಮಹಿಳಾ ಕಲಾವಿದರಿಗೆ ವಿಶೇಷ ಅನುದಾನ ಹಾಗೂ ‘ಸ್ಯಾಂಡಲ್‌ವುಡ್ ವುಮೆನ್ ಆರ್ಟಿಸ್ಟ್‌ ಅಸೋಸಿಯೇಷನ್(SWSS) ರಚನೆಯಾದರೆ ಸರ್ಕಾರದ ಮಟ್ಟದಲ್ಲಿ ಅದಕ್ಕೆ ಮಾನ್ಯತೆ ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

“ಚಿತ್ರರಂಗದ ಮಹಿಳೆಯರ ನೇತೃತ್ವದಲ್ಲಿ ಮಹಿಳಾ ಕಲಾವಿದರ ಸಂಘದ ವಿಭಾಗವನ್ನು ರಚಿಸಬೇಕು ಮತ್ತು ಪ್ರಸ್ತುತ ಇರುವ ಕಲಾವಿದರ ಸಂಘದ ವಿಸ್ತರಣೆಯಾಗಿ ಮಹಿಳಾ ನಟಿಯರಿಗೆ ಮೂಲಭೂತಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ಅದು ಸಕ್ರಿಯವಾಗಿರಬೇಕು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂಓದಿ: ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

ಇತರ ಚಲನಚಿತ್ರೋದ್ಯಮಗಳಲ್ಲಿ ನಡೆಯುತ್ತಿರುವ ಮಹಿಳಾ ಶೋಷಣೆಯ ಪ್ರಸಂಗಗಳ ಸರಣಿಯನ್ನು ಗಮನಿಸಿ, “ನಮ್ಮ ಕನ್ನಡ ಚಿತ್ರೋದ್ಯಮ” ದಲ್ಲಿ ಪ್ರಶಾಂತತೆಯನ್ನು ಕಾಪಾಡಿಕೊಳ್ಳುವ ಅಗತ್ಯವಿದ್ದು, ನಮ್ಮ ಚಿತ್ರೋದ್ಯಮ ಯಾವುದೇ ಮುಜುಗರದ ಪರಿಸ್ಥಿತಿಯಿಂದ ಮತ್ತು ಭವಿಷ್ಯದಲ್ಲಿ ಅಂತಹ ಯಾವುದೇ ಕಪ್ಪು ಚುಕ್ಕೆಗಳಿಂದ ರಕ್ಷಿಸಲು ನಿಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಸಂಜನಾ ಹೇಳಿದ್ದಾರೆ.

ಕನ್ನಡ ಚಿತ್ರರಂಗದ ಮಹಿಳಾ ಸಂಘ ರಚನೆಯಾದರೆ ಅದಕ್ಕೆ ಕೆಲವು ನಿಯಮಗಳನ್ನು ಕೂಡಾ ಸಂಜನಾ ಅವರು ಪ್ರಸ್ತಾಪಸಿದ್ದಾರೆ. “ಪ್ರತಿಯೊಬ್ಬ ಹೊಸ ನಟ ಮತ್ತು ನಟಿಯರು ತಮ್ಮ ಮೊದಲ ಚಿತ್ರಕ್ಕೆ ಸಹಿ ಹಾಕಿದ೦ತೆಯೇ ಕಲಾವಿದರ ಸಂಘಕ್ಕೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳುಬೇಕು. ಅವರಿಗೆ ಕನ್ನಡ ಚಿತ್ರರಂಗದ ನೋಂದಾಯಿತ ಕಲಾವಿದರಾಗಿ ತಮ್ಮ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಬೇಕು” ಎಂದು ಅವರು ಹೇಳಿದ್ದಾರೆ.

“ಚಿತ್ರಕ್ಕೆ ಸಹಿ ಮಾಡುವ ಪ್ರತಿಯೊಬ್ಬ ಕಲಾವಿದರು ಕಲಾವಿದರ ಸಂಘಕ್ಕೆ ಬ೦ದು ಸೈನ್‌ ಅಪ್‌ ಮಾಡವುದು ಮತ್ತು SWAA ಕಮಿಟಿ ನಿಯಮ ಪುಸ್ತಕವನ್ನು ನೀಡಿ ಅವರಿಗೆ ಕರ್ತವ್ಯ, ಬಾಧ್ಯತೆ ಗಳನ್ನು ತಿಳಿ ಹೇಳಬೇಕು. ಇದರಿಂದಾಗಿ ಪ್ರತಿಯೊಬ್ಬ ಮಹಿಳೆಯೂ SWAAಯಿಂದ ನಟಿಯಾಗಿ ಅವಳ ಸಾಮಾಜಿಕ ಹಕ್ಕುಗಳು ಮತ್ತು ಬಾಧ್ಯತ್ಯೆಗಳ ಬಗ್ಗೆ ತಿಳಿದುಕೊಳ್ಳಬಹುದು” ಎಂದು ಹೇಳಿದ್ದಾರೆ.

ಇದನ್ನೂಓದಿ: ಬೆಂಗಳೂರು | ನಡುರಸ್ತೆಯಲ್ಲಿ ಯುವಕನ್ನು ಬೆತ್ತಲೆಗೊಳಿಸಿದ ರೌಡಿ ಶೀಟರ್!

“ಹೊಸದಾಗಿ ಸ್ಥಾಪಿಸಲಾದ SWAA ಯಾವುದೇ ಸಮಯದಲ್ಲಿ ನಟಿಯರು ಎದುರಿಸುವ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಸುಲಭವಾಗಿ ಲಭ್ಯವಿರಬೇಕು. ಅಲ್ಲದೆ, ಎಲ್ಲಾ ನಿಯಮಗಳನ್ನು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ನಿಯಮ ಪುಸ್ತಕದ ರೂಪದಲ್ಲಿ ಲಿಖಿತವಾಗಿ ನೀಡಬೇಕು. ಕಲಾವಿದರ ಸಂಘದಲ್ಲಿ ನಟರ ನೋಂದಣೆಗೆ ಸಂಬಂಧಿಸಿದ ನಿಯಮ ಪುಸ್ತಕವನ್ನು ಹಸ್ತಾಂತರಿಸುವುದು SWAA ಜವಾಬ್ದಾರಿಯಾಗಿರಬೇಕು.” ಎಂದು ಸಲಹೆ ನೀಡಿದ್ದಾರೆ.ಸ್ಯಾಂಡಲ್‌ವುಡ್‌

SWAAಗೆ ಇರಬೇಕಾದ ನಿಯಮಗಳ ಬಗ್ಗೆ ಕೂಡಾ ಅವರು ಸಲಹೆ ನೀಡಿದ್ದು, “ರಾತ್ರಿ ಅಥವಾ ಹಗಲಿನ ಶೂಟಿಂಗ್‌ ಸಮಯದಲ್ಲಿ ನಟಿಯರು ತಮ್ಮ ಕುಟುಂಬದ ಒಬ್ಬ ವ್ಯಕ್ತಿಯನ್ನು ಯಾವುದೇ ಸ್ಥಳೀಯ ಅಥವಾ ಹೊರಗಿನ ಶೂಟಿಂಗ್‌ ಸ್ಥಳಕ್ಕೆ ಜೊತೆಯಲ್ಲಿ ಕರೆದೊಯ್ಯುವುದನ್ನು ಕಡ್ಡಾಯಗೊಳಿಸಬೇಕು. ಜೊತೆಗೆ ಈ ಕುಟುಂಬದ ಸದಸ್ಯರಿಗೆ ಸಾರಿಗೆ ಶುಲ್ಕವನ್ನು ಒದಗಿಸಬೇಕು.” ಎಂದು ಅವರು ಹೇಳಿದ್ದಾರೆ.

“ನಟಿಯರಿಗೆ ಶೂಟಿಂಗ್‌ ಸ್ಥಳದಲ್ಲಿ ತಮ್ಮ ಬಟ್ಟೆಗಳನ್ನು ಬದಲಾಯಿಸಲು ಕಾರವಾನ್‌ನಂತಹ ಖಾಸಗಿ ಸ್ಥಳವನ್ನು ಒದಗಿಸಬೇಕು ಅಥವಾ ಮಹಿಳಾ ಕಲಾವಿದರಿಗೆ ಮೂಲಭೂತ ಸೌಕರ್ಯಕ್ಕಾಗಿ ಕನಿಷ್ಠ ವೈಯಕ್ತಿಕ ಕೊಠಡಿಯನ್ನು ಒದಗಿಸಬೇಕು.” ಎಂದು ಅವರು ಆಗ್ರಹಿಸಿದ್ದಾರೆ.

ಸಂಜನಾ ಗಲ್ರಾನಿ ಅವರು ಮುಖ್ಯಮಂತ್ರಿ ಅವರಿಗೆ ಬರೆದ ಪತ್ರದ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಗೃಹ ಸಚಿವ ಜಿ. ಪರಮೇಶ್ವರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌, ಡಿಜಿಐಜಿ ಅಲೋಕ್‌ ಮೋಹನ್‌, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌, ನಿರ್ದೇಶಕರ ಸಂಘದ ಅಧ್ಯಕ್ಷ ಎನ್‌ ಆರ್‌ ಕೆ ವಿಶ್ವನಾಥ್‌, ಕಲಾವಿದರ ಸಂಘದ ಅಧ್ಯಕ್ಷ/ ಕಾರ್ಯದರ್ಶಿ – ರಾಕ್ಲೈನ್‌ ವೆಂಕಟೇಶ್‌, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌ ಎಂ ಸುರೇಶ್‌ ಸೇರಿದಂತೆ ಚಿತರಂಗಕ್ಕೆ ಸಂಬಂಧಪಟ್ಟವರೆಲ್ಲರಿಗೂ ವ್ಯವಸ್ಥೆಯಲ್ಲಿ ಬದಲಾವಣೆ ಮತ್ತು ಮಹಿಳಾ ರಕ್ಷಣೆಗೆ ಮನವಿ ಮಾಡಿದ್ದಾರೆ.

ವಿಡಿಯೊ ನೋಡಿ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಾಮಕುಮಾರ್ ಅವರ ಮಾತುಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...