Homeಕರ್ನಾಟಕರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

"ನಾನು ಒಬ್ಬ ನಟಿ, ಮಿಗಿಲಾಗಿ ಒಬ್ಬ ಮಹಿಳೆ. ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ" ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಅಪರಿಚಿತನಿಗೆ ಕ್ಲಾಸ್‌ ತೆಗೆದುಕೊಂಡಿರುವ ಆಡಿಯೊ ಹಂಚಿಕೊಂಡಿದ್ದಾರೆ.

- Advertisement -
- Advertisement -

ಅರ್ಧ ರಾತ್ರಿಯಲ್ಲಿ ಬರುತ್ತಿರುವ ಅಪರಿಚಿತರ ಕರೆಗಳಿಂದ ಬಹುಭಾಷಾ ನಟಿ ಸಂಜನಾ ಗಲ್ರಾನಿ ಬೇಸತ್ತಿದ್ದಾರೆ. “ನಾನೊಬ್ಬ ನಟಿ, ಅದಕ್ಕಿಂತ ಮಿಗಿಲಾಗಿ ನಾನು ಮಹಿಳೆ” ಎಂದು ನಟಿ ತಿಳಿಸಿದ್ದಾರೆ.

“ಸ್ನೇಹಿತರೇ, ನಾನು ಸಂಜನಾ ಗಲ್ರಾನಿ, ನಾನೊಬ್ಬ ನಟಿ. ಆದರೆ ಅದಕ್ಕಿಂತ ಹೆಚ್ಚಾಗಿ ನಾನು ಮಹಿಳೆ. ಕುಟುಂಬವನ್ನು ಹೊಂದಿರುವ ಮಹಿಳೆ. ನನಗೆ ರಾತ್ರಿ 1ರಿಂದ 2 ಗಂಟೆಯ ಸಮಯದಲ್ಲಿ ಬೇರೆ ಬೇರೆ ನಂಬರ್‌ಗಳಿಂದ ಕರೆಗಳು ಬರುತ್ತಲೇ ಇವೆ” ಎಂದು ಹೇಳಿದ್ದಾರೆ.

“ನಿನ್ನೆ ರಾತ್ರಿ ಶನಿವಾರ ಕುಡಿದು ಕೆಲವರು ಕರೆ ಮಾಡಿದ್ದಾರೆ. ಶನಿವಾರವಷ್ಟೇ ಅಲ್ಲ, ಪ್ರತಿದಿನ ನಾನು ಅಪರಿಚಿತ ನಂಬರ್‌ಗಳನ್ನು ಬ್ಲಾಕ್ ಮಾಡುತ್ತಲೇ ಇದ್ದೇನೆ. ಮತ್ತು ಮತ್ತೆ ಹೊಸ ಸಂಖ್ಯೆಗಳಿಂದ ನನಗೆ ಕರೆಗಳು ಬರುತ್ತಿವೆ” ಎಂದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

“ಅಸಹಾಯಕತೆ, ತೊಂದರೆ ಮತ್ತು ಹತಾಶೆಯನ್ನು ನಾನು ಅನುಭವಿಸುತ್ತೇನೆ. ನನ್ನ ತಪ್ಪೇನು? ನಾನು ಎಷ್ಟು ಮೊಬೈಲ್ ಸಂಖ್ಯೆಗಳನ್ನು ಬದಲಾಯಿಸಬೇಕು, ಯಾರಾದರೂ ಈ ವ್ಯಕ್ತಿಗೆ ಪಾಠ ಕಲಿಸಬಹುದೇ? ನಾನು ಮಾನಸಿಕ ಶಾಂತಿ ಬಯಸುತ್ತಿದ್ದೇನೆ” ಎಂಬ ಬರಹವನ್ನು ಹಂಚಿಕೊಂಡಿದ್ದಾರೆ.

ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ. ನಂಬರ್‌ಗಳನ್ನು ಬದಲಿಸಿದ್ದರಿಂದ ನನ್ನ ವೃತ್ತಿಗೆ ಸಂಬಂಧಿಸಿದ ಸಂಪರ್ಕಗಳ ಮೇಲೂ ಪರಿಣಾಮ ಬೀರುತ್ತಿದೆ. ರಾತ್ರಿ 2.00 ಗಂಟೆಯಲ್ಲಿ ಕರೆ ಮಾಡಿ ಕಿರುಕುಳ ನೀಡುತ್ತಿರುವ ಅಪರಿಚಿತ ವ್ಯಕ್ತಿ ತನ್ನ ಸಂಖ್ಯೆಯನ್ನು ಶಾಶ್ವತವಾಗಿ ಬದಲಾಯಿಸಲು ಹಾಗೂ ಆತನ ಕಿರುಕುಳವನ್ನು ತಡೆಯಲು ನಾನು ಬಯಸುತ್ತೇನೆ. ನನಗೆ ಮಾತ್ರವಲ್ಲ. ಬೇರೆ ಯಾವ ಮಹಿಳೆಗೂ ತೊಂದರೆ ಕೊಡಬಾರದು ಎಂದು ಕೋರಿದ್ದಾರೆ.

ಜೊತೆಗೆ ಆಡಿಯೊ ಕೂಡ ಶೇರ್‌ ಮಾಡಿಕೊಂಡಿರುವ ಅವರು ಅವರು, ರಾತ್ರಿ ವೇಳೆ ಕರೆ ಮಾಡಿರುವ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. “ರಾತ್ರಿ ವೇಳೆ ಏಕೆ ಕರೆ ಮಾಡುತ್ತಿದ್ದೀರಿ. ಪ್ರತಿದಿನ ಹೀಗೆ ಆಗುತ್ತಿದೆ. ಕುಡಿದು ಕರೆ ಮಾಡ್ತೀರಾ?” ಎಂದು ಸಂಜನಾ ಕೇಳುತ್ತಾರೆ. “ನಾನು ಕುಡಿಯಲ್ಲ ಮೇಡಂ, ಮಿಸ್ಸಾಗಿ ಕರೆ ಬಂದಿದೆ” ಎಂದು ವ್ಯಕ್ತಿಯು ಸಮಜಾಯಿಷಿ ನೀಡುತ್ತಾನೆ. “ಮಿಸ್ಸಾಗಿ ಹೇಗೆ ಕರೆ ಬರುತ್ತದೆ. ಪದೇ ಪದೇ ಕರೆ ಹೇಗೆ ಬರುತ್ತದೆ” ಎಂದು ಸಂಜನಾ ಪ್ರಶ್ನಿಸಿದ್ದಾರೆ. ಜೊತೆ ಆ ವ್ಯಕ್ತಿಯು ಮಾತನಾಡುತ್ತಾ ತನ್ನನ್ನು ಕ್ಯಾಬ್‌ ಡ್ರೈವರ್‌ ಎಂದು ಹೇಳಿಕೊಳ್ಳುತ್ತಾನೆ. “ನಿಮ್ಮ ಡಿ.ಎಲ್‌. ಕಳುಹಿಸಿ” ಎಂದು ಸಂಜನಾ ಕೇಳುತ್ತಾರೆ. ಜೊತೆಗೆ ಆ ವ್ಯಕ್ತಿಯು ಕ್ಷಮೆಯನ್ನು ಕೇಳುವುದನ್ನು ಈ ಆಡಿಯೊದಲ್ಲಿ ಕೇಳಬಹುದು.

ಮಹಿಳೆಯರು ಹಾಗೂ ಮಹಿಳಾ ಕಲಾವಿದರ ಮೇಲೆ ಆಗುವ ದೌರ್ಜನ್ಯಗಳನ್ನು ಮೊದಲಿನಿಂದಲೂ ಖಂಡಿಸುತ್ತ ಬಂದಿರುವ ನಟಿ ಸಂಜನಾ ಈಗ ತುಂಬು ಗರ್ಭಿಣಿಯೂ ಹೌದು. ಮಾಧ್ಯಮ ಸಂಸ್ಥೆಯೊಂದು ಇಲ್ಲಸಲ್ಲದ ಸುದ್ದಿ ಬರೆದಿದ್ದಾಗ, ಕಟುವಾಗಿಯೇ ಪ್ರತಿಕ್ರಿಯಿಸಿದ್ದ ಸಂಜನಾ ಸ್ಪೆಷಲ್‌ ಕ್ಲಾಸ್‌ ತೆಗೆದುಕೊಂಡಿದ್ದರು.

ಸಂಜನಾ ಅವರು ಹಂಚಿಕೊಂಡಿರುವ ನಂಬರ್‌ಗೆ ಕರೆ ಮಾಡಿದಾಗ, 19 ವರ್ಷದ ಯುವಕ ಕರೆ ಮಾಡಿರುವುದೆಂದು ತಿಳಿದುಬಂದಿದೆ. ಮಿಸ್ಸಾಗಿ ಕರೆ ಹೋಗಿದೆ. ಇವರು ಯಾರೆಂಬುದು ನನಗೆ ಗೊತ್ತಿಲ್ಲ. ತಪ್ಪಾಗಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾನೆ.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...