Homeಕರ್ನಾಟಕರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

"ನಾನು ಒಬ್ಬ ನಟಿ, ಮಿಗಿಲಾಗಿ ಒಬ್ಬ ಮಹಿಳೆ. ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ" ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಅಪರಿಚಿತನಿಗೆ ಕ್ಲಾಸ್‌ ತೆಗೆದುಕೊಂಡಿರುವ ಆಡಿಯೊ ಹಂಚಿಕೊಂಡಿದ್ದಾರೆ.

- Advertisement -
- Advertisement -

ಅರ್ಧ ರಾತ್ರಿಯಲ್ಲಿ ಬರುತ್ತಿರುವ ಅಪರಿಚಿತರ ಕರೆಗಳಿಂದ ಬಹುಭಾಷಾ ನಟಿ ಸಂಜನಾ ಗಲ್ರಾನಿ ಬೇಸತ್ತಿದ್ದಾರೆ. “ನಾನೊಬ್ಬ ನಟಿ, ಅದಕ್ಕಿಂತ ಮಿಗಿಲಾಗಿ ನಾನು ಮಹಿಳೆ” ಎಂದು ನಟಿ ತಿಳಿಸಿದ್ದಾರೆ.

“ಸ್ನೇಹಿತರೇ, ನಾನು ಸಂಜನಾ ಗಲ್ರಾನಿ, ನಾನೊಬ್ಬ ನಟಿ. ಆದರೆ ಅದಕ್ಕಿಂತ ಹೆಚ್ಚಾಗಿ ನಾನು ಮಹಿಳೆ. ಕುಟುಂಬವನ್ನು ಹೊಂದಿರುವ ಮಹಿಳೆ. ನನಗೆ ರಾತ್ರಿ 1ರಿಂದ 2 ಗಂಟೆಯ ಸಮಯದಲ್ಲಿ ಬೇರೆ ಬೇರೆ ನಂಬರ್‌ಗಳಿಂದ ಕರೆಗಳು ಬರುತ್ತಲೇ ಇವೆ” ಎಂದು ಹೇಳಿದ್ದಾರೆ.

“ನಿನ್ನೆ ರಾತ್ರಿ ಶನಿವಾರ ಕುಡಿದು ಕೆಲವರು ಕರೆ ಮಾಡಿದ್ದಾರೆ. ಶನಿವಾರವಷ್ಟೇ ಅಲ್ಲ, ಪ್ರತಿದಿನ ನಾನು ಅಪರಿಚಿತ ನಂಬರ್‌ಗಳನ್ನು ಬ್ಲಾಕ್ ಮಾಡುತ್ತಲೇ ಇದ್ದೇನೆ. ಮತ್ತು ಮತ್ತೆ ಹೊಸ ಸಂಖ್ಯೆಗಳಿಂದ ನನಗೆ ಕರೆಗಳು ಬರುತ್ತಿವೆ” ಎಂದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

“ಅಸಹಾಯಕತೆ, ತೊಂದರೆ ಮತ್ತು ಹತಾಶೆಯನ್ನು ನಾನು ಅನುಭವಿಸುತ್ತೇನೆ. ನನ್ನ ತಪ್ಪೇನು? ನಾನು ಎಷ್ಟು ಮೊಬೈಲ್ ಸಂಖ್ಯೆಗಳನ್ನು ಬದಲಾಯಿಸಬೇಕು, ಯಾರಾದರೂ ಈ ವ್ಯಕ್ತಿಗೆ ಪಾಠ ಕಲಿಸಬಹುದೇ? ನಾನು ಮಾನಸಿಕ ಶಾಂತಿ ಬಯಸುತ್ತಿದ್ದೇನೆ” ಎಂಬ ಬರಹವನ್ನು ಹಂಚಿಕೊಂಡಿದ್ದಾರೆ.

ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ. ನಂಬರ್‌ಗಳನ್ನು ಬದಲಿಸಿದ್ದರಿಂದ ನನ್ನ ವೃತ್ತಿಗೆ ಸಂಬಂಧಿಸಿದ ಸಂಪರ್ಕಗಳ ಮೇಲೂ ಪರಿಣಾಮ ಬೀರುತ್ತಿದೆ. ರಾತ್ರಿ 2.00 ಗಂಟೆಯಲ್ಲಿ ಕರೆ ಮಾಡಿ ಕಿರುಕುಳ ನೀಡುತ್ತಿರುವ ಅಪರಿಚಿತ ವ್ಯಕ್ತಿ ತನ್ನ ಸಂಖ್ಯೆಯನ್ನು ಶಾಶ್ವತವಾಗಿ ಬದಲಾಯಿಸಲು ಹಾಗೂ ಆತನ ಕಿರುಕುಳವನ್ನು ತಡೆಯಲು ನಾನು ಬಯಸುತ್ತೇನೆ. ನನಗೆ ಮಾತ್ರವಲ್ಲ. ಬೇರೆ ಯಾವ ಮಹಿಳೆಗೂ ತೊಂದರೆ ಕೊಡಬಾರದು ಎಂದು ಕೋರಿದ್ದಾರೆ.

ಜೊತೆಗೆ ಆಡಿಯೊ ಕೂಡ ಶೇರ್‌ ಮಾಡಿಕೊಂಡಿರುವ ಅವರು ಅವರು, ರಾತ್ರಿ ವೇಳೆ ಕರೆ ಮಾಡಿರುವ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. “ರಾತ್ರಿ ವೇಳೆ ಏಕೆ ಕರೆ ಮಾಡುತ್ತಿದ್ದೀರಿ. ಪ್ರತಿದಿನ ಹೀಗೆ ಆಗುತ್ತಿದೆ. ಕುಡಿದು ಕರೆ ಮಾಡ್ತೀರಾ?” ಎಂದು ಸಂಜನಾ ಕೇಳುತ್ತಾರೆ. “ನಾನು ಕುಡಿಯಲ್ಲ ಮೇಡಂ, ಮಿಸ್ಸಾಗಿ ಕರೆ ಬಂದಿದೆ” ಎಂದು ವ್ಯಕ್ತಿಯು ಸಮಜಾಯಿಷಿ ನೀಡುತ್ತಾನೆ. “ಮಿಸ್ಸಾಗಿ ಹೇಗೆ ಕರೆ ಬರುತ್ತದೆ. ಪದೇ ಪದೇ ಕರೆ ಹೇಗೆ ಬರುತ್ತದೆ” ಎಂದು ಸಂಜನಾ ಪ್ರಶ್ನಿಸಿದ್ದಾರೆ. ಜೊತೆ ಆ ವ್ಯಕ್ತಿಯು ಮಾತನಾಡುತ್ತಾ ತನ್ನನ್ನು ಕ್ಯಾಬ್‌ ಡ್ರೈವರ್‌ ಎಂದು ಹೇಳಿಕೊಳ್ಳುತ್ತಾನೆ. “ನಿಮ್ಮ ಡಿ.ಎಲ್‌. ಕಳುಹಿಸಿ” ಎಂದು ಸಂಜನಾ ಕೇಳುತ್ತಾರೆ. ಜೊತೆಗೆ ಆ ವ್ಯಕ್ತಿಯು ಕ್ಷಮೆಯನ್ನು ಕೇಳುವುದನ್ನು ಈ ಆಡಿಯೊದಲ್ಲಿ ಕೇಳಬಹುದು.

ಮಹಿಳೆಯರು ಹಾಗೂ ಮಹಿಳಾ ಕಲಾವಿದರ ಮೇಲೆ ಆಗುವ ದೌರ್ಜನ್ಯಗಳನ್ನು ಮೊದಲಿನಿಂದಲೂ ಖಂಡಿಸುತ್ತ ಬಂದಿರುವ ನಟಿ ಸಂಜನಾ ಈಗ ತುಂಬು ಗರ್ಭಿಣಿಯೂ ಹೌದು. ಮಾಧ್ಯಮ ಸಂಸ್ಥೆಯೊಂದು ಇಲ್ಲಸಲ್ಲದ ಸುದ್ದಿ ಬರೆದಿದ್ದಾಗ, ಕಟುವಾಗಿಯೇ ಪ್ರತಿಕ್ರಿಯಿಸಿದ್ದ ಸಂಜನಾ ಸ್ಪೆಷಲ್‌ ಕ್ಲಾಸ್‌ ತೆಗೆದುಕೊಂಡಿದ್ದರು.

ಸಂಜನಾ ಅವರು ಹಂಚಿಕೊಂಡಿರುವ ನಂಬರ್‌ಗೆ ಕರೆ ಮಾಡಿದಾಗ, 19 ವರ್ಷದ ಯುವಕ ಕರೆ ಮಾಡಿರುವುದೆಂದು ತಿಳಿದುಬಂದಿದೆ. ಮಿಸ್ಸಾಗಿ ಕರೆ ಹೋಗಿದೆ. ಇವರು ಯಾರೆಂಬುದು ನನಗೆ ಗೊತ್ತಿಲ್ಲ. ತಪ್ಪಾಗಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾನೆ.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...