Homeಕರ್ನಾಟಕರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

"ನಾನು ಒಬ್ಬ ನಟಿ, ಮಿಗಿಲಾಗಿ ಒಬ್ಬ ಮಹಿಳೆ. ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ" ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಅಪರಿಚಿತನಿಗೆ ಕ್ಲಾಸ್‌ ತೆಗೆದುಕೊಂಡಿರುವ ಆಡಿಯೊ ಹಂಚಿಕೊಂಡಿದ್ದಾರೆ.

- Advertisement -
- Advertisement -

ಅರ್ಧ ರಾತ್ರಿಯಲ್ಲಿ ಬರುತ್ತಿರುವ ಅಪರಿಚಿತರ ಕರೆಗಳಿಂದ ಬಹುಭಾಷಾ ನಟಿ ಸಂಜನಾ ಗಲ್ರಾನಿ ಬೇಸತ್ತಿದ್ದಾರೆ. “ನಾನೊಬ್ಬ ನಟಿ, ಅದಕ್ಕಿಂತ ಮಿಗಿಲಾಗಿ ನಾನು ಮಹಿಳೆ” ಎಂದು ನಟಿ ತಿಳಿಸಿದ್ದಾರೆ.

“ಸ್ನೇಹಿತರೇ, ನಾನು ಸಂಜನಾ ಗಲ್ರಾನಿ, ನಾನೊಬ್ಬ ನಟಿ. ಆದರೆ ಅದಕ್ಕಿಂತ ಹೆಚ್ಚಾಗಿ ನಾನು ಮಹಿಳೆ. ಕುಟುಂಬವನ್ನು ಹೊಂದಿರುವ ಮಹಿಳೆ. ನನಗೆ ರಾತ್ರಿ 1ರಿಂದ 2 ಗಂಟೆಯ ಸಮಯದಲ್ಲಿ ಬೇರೆ ಬೇರೆ ನಂಬರ್‌ಗಳಿಂದ ಕರೆಗಳು ಬರುತ್ತಲೇ ಇವೆ” ಎಂದು ಹೇಳಿದ್ದಾರೆ.

“ನಿನ್ನೆ ರಾತ್ರಿ ಶನಿವಾರ ಕುಡಿದು ಕೆಲವರು ಕರೆ ಮಾಡಿದ್ದಾರೆ. ಶನಿವಾರವಷ್ಟೇ ಅಲ್ಲ, ಪ್ರತಿದಿನ ನಾನು ಅಪರಿಚಿತ ನಂಬರ್‌ಗಳನ್ನು ಬ್ಲಾಕ್ ಮಾಡುತ್ತಲೇ ಇದ್ದೇನೆ. ಮತ್ತು ಮತ್ತೆ ಹೊಸ ಸಂಖ್ಯೆಗಳಿಂದ ನನಗೆ ಕರೆಗಳು ಬರುತ್ತಿವೆ” ಎಂದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

“ಅಸಹಾಯಕತೆ, ತೊಂದರೆ ಮತ್ತು ಹತಾಶೆಯನ್ನು ನಾನು ಅನುಭವಿಸುತ್ತೇನೆ. ನನ್ನ ತಪ್ಪೇನು? ನಾನು ಎಷ್ಟು ಮೊಬೈಲ್ ಸಂಖ್ಯೆಗಳನ್ನು ಬದಲಾಯಿಸಬೇಕು, ಯಾರಾದರೂ ಈ ವ್ಯಕ್ತಿಗೆ ಪಾಠ ಕಲಿಸಬಹುದೇ? ನಾನು ಮಾನಸಿಕ ಶಾಂತಿ ಬಯಸುತ್ತಿದ್ದೇನೆ” ಎಂಬ ಬರಹವನ್ನು ಹಂಚಿಕೊಂಡಿದ್ದಾರೆ.

ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ. ನಂಬರ್‌ಗಳನ್ನು ಬದಲಿಸಿದ್ದರಿಂದ ನನ್ನ ವೃತ್ತಿಗೆ ಸಂಬಂಧಿಸಿದ ಸಂಪರ್ಕಗಳ ಮೇಲೂ ಪರಿಣಾಮ ಬೀರುತ್ತಿದೆ. ರಾತ್ರಿ 2.00 ಗಂಟೆಯಲ್ಲಿ ಕರೆ ಮಾಡಿ ಕಿರುಕುಳ ನೀಡುತ್ತಿರುವ ಅಪರಿಚಿತ ವ್ಯಕ್ತಿ ತನ್ನ ಸಂಖ್ಯೆಯನ್ನು ಶಾಶ್ವತವಾಗಿ ಬದಲಾಯಿಸಲು ಹಾಗೂ ಆತನ ಕಿರುಕುಳವನ್ನು ತಡೆಯಲು ನಾನು ಬಯಸುತ್ತೇನೆ. ನನಗೆ ಮಾತ್ರವಲ್ಲ. ಬೇರೆ ಯಾವ ಮಹಿಳೆಗೂ ತೊಂದರೆ ಕೊಡಬಾರದು ಎಂದು ಕೋರಿದ್ದಾರೆ.

ಜೊತೆಗೆ ಆಡಿಯೊ ಕೂಡ ಶೇರ್‌ ಮಾಡಿಕೊಂಡಿರುವ ಅವರು ಅವರು, ರಾತ್ರಿ ವೇಳೆ ಕರೆ ಮಾಡಿರುವ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. “ರಾತ್ರಿ ವೇಳೆ ಏಕೆ ಕರೆ ಮಾಡುತ್ತಿದ್ದೀರಿ. ಪ್ರತಿದಿನ ಹೀಗೆ ಆಗುತ್ತಿದೆ. ಕುಡಿದು ಕರೆ ಮಾಡ್ತೀರಾ?” ಎಂದು ಸಂಜನಾ ಕೇಳುತ್ತಾರೆ. “ನಾನು ಕುಡಿಯಲ್ಲ ಮೇಡಂ, ಮಿಸ್ಸಾಗಿ ಕರೆ ಬಂದಿದೆ” ಎಂದು ವ್ಯಕ್ತಿಯು ಸಮಜಾಯಿಷಿ ನೀಡುತ್ತಾನೆ. “ಮಿಸ್ಸಾಗಿ ಹೇಗೆ ಕರೆ ಬರುತ್ತದೆ. ಪದೇ ಪದೇ ಕರೆ ಹೇಗೆ ಬರುತ್ತದೆ” ಎಂದು ಸಂಜನಾ ಪ್ರಶ್ನಿಸಿದ್ದಾರೆ. ಜೊತೆ ಆ ವ್ಯಕ್ತಿಯು ಮಾತನಾಡುತ್ತಾ ತನ್ನನ್ನು ಕ್ಯಾಬ್‌ ಡ್ರೈವರ್‌ ಎಂದು ಹೇಳಿಕೊಳ್ಳುತ್ತಾನೆ. “ನಿಮ್ಮ ಡಿ.ಎಲ್‌. ಕಳುಹಿಸಿ” ಎಂದು ಸಂಜನಾ ಕೇಳುತ್ತಾರೆ. ಜೊತೆಗೆ ಆ ವ್ಯಕ್ತಿಯು ಕ್ಷಮೆಯನ್ನು ಕೇಳುವುದನ್ನು ಈ ಆಡಿಯೊದಲ್ಲಿ ಕೇಳಬಹುದು.

ಮಹಿಳೆಯರು ಹಾಗೂ ಮಹಿಳಾ ಕಲಾವಿದರ ಮೇಲೆ ಆಗುವ ದೌರ್ಜನ್ಯಗಳನ್ನು ಮೊದಲಿನಿಂದಲೂ ಖಂಡಿಸುತ್ತ ಬಂದಿರುವ ನಟಿ ಸಂಜನಾ ಈಗ ತುಂಬು ಗರ್ಭಿಣಿಯೂ ಹೌದು. ಮಾಧ್ಯಮ ಸಂಸ್ಥೆಯೊಂದು ಇಲ್ಲಸಲ್ಲದ ಸುದ್ದಿ ಬರೆದಿದ್ದಾಗ, ಕಟುವಾಗಿಯೇ ಪ್ರತಿಕ್ರಿಯಿಸಿದ್ದ ಸಂಜನಾ ಸ್ಪೆಷಲ್‌ ಕ್ಲಾಸ್‌ ತೆಗೆದುಕೊಂಡಿದ್ದರು.

ಸಂಜನಾ ಅವರು ಹಂಚಿಕೊಂಡಿರುವ ನಂಬರ್‌ಗೆ ಕರೆ ಮಾಡಿದಾಗ, 19 ವರ್ಷದ ಯುವಕ ಕರೆ ಮಾಡಿರುವುದೆಂದು ತಿಳಿದುಬಂದಿದೆ. ಮಿಸ್ಸಾಗಿ ಕರೆ ಹೋಗಿದೆ. ಇವರು ಯಾರೆಂಬುದು ನನಗೆ ಗೊತ್ತಿಲ್ಲ. ತಪ್ಪಾಗಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾನೆ.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...