Homeಕರ್ನಾಟಕರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

"ನಾನು ಒಬ್ಬ ನಟಿ, ಮಿಗಿಲಾಗಿ ಒಬ್ಬ ಮಹಿಳೆ. ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ" ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಅಪರಿಚಿತನಿಗೆ ಕ್ಲಾಸ್‌ ತೆಗೆದುಕೊಂಡಿರುವ ಆಡಿಯೊ ಹಂಚಿಕೊಂಡಿದ್ದಾರೆ.

- Advertisement -
- Advertisement -

ಅರ್ಧ ರಾತ್ರಿಯಲ್ಲಿ ಬರುತ್ತಿರುವ ಅಪರಿಚಿತರ ಕರೆಗಳಿಂದ ಬಹುಭಾಷಾ ನಟಿ ಸಂಜನಾ ಗಲ್ರಾನಿ ಬೇಸತ್ತಿದ್ದಾರೆ. “ನಾನೊಬ್ಬ ನಟಿ, ಅದಕ್ಕಿಂತ ಮಿಗಿಲಾಗಿ ನಾನು ಮಹಿಳೆ” ಎಂದು ನಟಿ ತಿಳಿಸಿದ್ದಾರೆ.

“ಸ್ನೇಹಿತರೇ, ನಾನು ಸಂಜನಾ ಗಲ್ರಾನಿ, ನಾನೊಬ್ಬ ನಟಿ. ಆದರೆ ಅದಕ್ಕಿಂತ ಹೆಚ್ಚಾಗಿ ನಾನು ಮಹಿಳೆ. ಕುಟುಂಬವನ್ನು ಹೊಂದಿರುವ ಮಹಿಳೆ. ನನಗೆ ರಾತ್ರಿ 1ರಿಂದ 2 ಗಂಟೆಯ ಸಮಯದಲ್ಲಿ ಬೇರೆ ಬೇರೆ ನಂಬರ್‌ಗಳಿಂದ ಕರೆಗಳು ಬರುತ್ತಲೇ ಇವೆ” ಎಂದು ಹೇಳಿದ್ದಾರೆ.

“ನಿನ್ನೆ ರಾತ್ರಿ ಶನಿವಾರ ಕುಡಿದು ಕೆಲವರು ಕರೆ ಮಾಡಿದ್ದಾರೆ. ಶನಿವಾರವಷ್ಟೇ ಅಲ್ಲ, ಪ್ರತಿದಿನ ನಾನು ಅಪರಿಚಿತ ನಂಬರ್‌ಗಳನ್ನು ಬ್ಲಾಕ್ ಮಾಡುತ್ತಲೇ ಇದ್ದೇನೆ. ಮತ್ತು ಮತ್ತೆ ಹೊಸ ಸಂಖ್ಯೆಗಳಿಂದ ನನಗೆ ಕರೆಗಳು ಬರುತ್ತಿವೆ” ಎಂದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

“ಅಸಹಾಯಕತೆ, ತೊಂದರೆ ಮತ್ತು ಹತಾಶೆಯನ್ನು ನಾನು ಅನುಭವಿಸುತ್ತೇನೆ. ನನ್ನ ತಪ್ಪೇನು? ನಾನು ಎಷ್ಟು ಮೊಬೈಲ್ ಸಂಖ್ಯೆಗಳನ್ನು ಬದಲಾಯಿಸಬೇಕು, ಯಾರಾದರೂ ಈ ವ್ಯಕ್ತಿಗೆ ಪಾಠ ಕಲಿಸಬಹುದೇ? ನಾನು ಮಾನಸಿಕ ಶಾಂತಿ ಬಯಸುತ್ತಿದ್ದೇನೆ” ಎಂಬ ಬರಹವನ್ನು ಹಂಚಿಕೊಂಡಿದ್ದಾರೆ.

ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ. ನಂಬರ್‌ಗಳನ್ನು ಬದಲಿಸಿದ್ದರಿಂದ ನನ್ನ ವೃತ್ತಿಗೆ ಸಂಬಂಧಿಸಿದ ಸಂಪರ್ಕಗಳ ಮೇಲೂ ಪರಿಣಾಮ ಬೀರುತ್ತಿದೆ. ರಾತ್ರಿ 2.00 ಗಂಟೆಯಲ್ಲಿ ಕರೆ ಮಾಡಿ ಕಿರುಕುಳ ನೀಡುತ್ತಿರುವ ಅಪರಿಚಿತ ವ್ಯಕ್ತಿ ತನ್ನ ಸಂಖ್ಯೆಯನ್ನು ಶಾಶ್ವತವಾಗಿ ಬದಲಾಯಿಸಲು ಹಾಗೂ ಆತನ ಕಿರುಕುಳವನ್ನು ತಡೆಯಲು ನಾನು ಬಯಸುತ್ತೇನೆ. ನನಗೆ ಮಾತ್ರವಲ್ಲ. ಬೇರೆ ಯಾವ ಮಹಿಳೆಗೂ ತೊಂದರೆ ಕೊಡಬಾರದು ಎಂದು ಕೋರಿದ್ದಾರೆ.

ಜೊತೆಗೆ ಆಡಿಯೊ ಕೂಡ ಶೇರ್‌ ಮಾಡಿಕೊಂಡಿರುವ ಅವರು ಅವರು, ರಾತ್ರಿ ವೇಳೆ ಕರೆ ಮಾಡಿರುವ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. “ರಾತ್ರಿ ವೇಳೆ ಏಕೆ ಕರೆ ಮಾಡುತ್ತಿದ್ದೀರಿ. ಪ್ರತಿದಿನ ಹೀಗೆ ಆಗುತ್ತಿದೆ. ಕುಡಿದು ಕರೆ ಮಾಡ್ತೀರಾ?” ಎಂದು ಸಂಜನಾ ಕೇಳುತ್ತಾರೆ. “ನಾನು ಕುಡಿಯಲ್ಲ ಮೇಡಂ, ಮಿಸ್ಸಾಗಿ ಕರೆ ಬಂದಿದೆ” ಎಂದು ವ್ಯಕ್ತಿಯು ಸಮಜಾಯಿಷಿ ನೀಡುತ್ತಾನೆ. “ಮಿಸ್ಸಾಗಿ ಹೇಗೆ ಕರೆ ಬರುತ್ತದೆ. ಪದೇ ಪದೇ ಕರೆ ಹೇಗೆ ಬರುತ್ತದೆ” ಎಂದು ಸಂಜನಾ ಪ್ರಶ್ನಿಸಿದ್ದಾರೆ. ಜೊತೆ ಆ ವ್ಯಕ್ತಿಯು ಮಾತನಾಡುತ್ತಾ ತನ್ನನ್ನು ಕ್ಯಾಬ್‌ ಡ್ರೈವರ್‌ ಎಂದು ಹೇಳಿಕೊಳ್ಳುತ್ತಾನೆ. “ನಿಮ್ಮ ಡಿ.ಎಲ್‌. ಕಳುಹಿಸಿ” ಎಂದು ಸಂಜನಾ ಕೇಳುತ್ತಾರೆ. ಜೊತೆಗೆ ಆ ವ್ಯಕ್ತಿಯು ಕ್ಷಮೆಯನ್ನು ಕೇಳುವುದನ್ನು ಈ ಆಡಿಯೊದಲ್ಲಿ ಕೇಳಬಹುದು.

ಮಹಿಳೆಯರು ಹಾಗೂ ಮಹಿಳಾ ಕಲಾವಿದರ ಮೇಲೆ ಆಗುವ ದೌರ್ಜನ್ಯಗಳನ್ನು ಮೊದಲಿನಿಂದಲೂ ಖಂಡಿಸುತ್ತ ಬಂದಿರುವ ನಟಿ ಸಂಜನಾ ಈಗ ತುಂಬು ಗರ್ಭಿಣಿಯೂ ಹೌದು. ಮಾಧ್ಯಮ ಸಂಸ್ಥೆಯೊಂದು ಇಲ್ಲಸಲ್ಲದ ಸುದ್ದಿ ಬರೆದಿದ್ದಾಗ, ಕಟುವಾಗಿಯೇ ಪ್ರತಿಕ್ರಿಯಿಸಿದ್ದ ಸಂಜನಾ ಸ್ಪೆಷಲ್‌ ಕ್ಲಾಸ್‌ ತೆಗೆದುಕೊಂಡಿದ್ದರು.

ಸಂಜನಾ ಅವರು ಹಂಚಿಕೊಂಡಿರುವ ನಂಬರ್‌ಗೆ ಕರೆ ಮಾಡಿದಾಗ, 19 ವರ್ಷದ ಯುವಕ ಕರೆ ಮಾಡಿರುವುದೆಂದು ತಿಳಿದುಬಂದಿದೆ. ಮಿಸ್ಸಾಗಿ ಕರೆ ಹೋಗಿದೆ. ಇವರು ಯಾರೆಂಬುದು ನನಗೆ ಗೊತ್ತಿಲ್ಲ. ತಪ್ಪಾಗಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾನೆ.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....