Homeಕರ್ನಾಟಕರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

"ನಾನು ಒಬ್ಬ ನಟಿ, ಮಿಗಿಲಾಗಿ ಒಬ್ಬ ಮಹಿಳೆ. ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ" ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಅಪರಿಚಿತನಿಗೆ ಕ್ಲಾಸ್‌ ತೆಗೆದುಕೊಂಡಿರುವ ಆಡಿಯೊ ಹಂಚಿಕೊಂಡಿದ್ದಾರೆ.

- Advertisement -
- Advertisement -

ಅರ್ಧ ರಾತ್ರಿಯಲ್ಲಿ ಬರುತ್ತಿರುವ ಅಪರಿಚಿತರ ಕರೆಗಳಿಂದ ಬಹುಭಾಷಾ ನಟಿ ಸಂಜನಾ ಗಲ್ರಾನಿ ಬೇಸತ್ತಿದ್ದಾರೆ. “ನಾನೊಬ್ಬ ನಟಿ, ಅದಕ್ಕಿಂತ ಮಿಗಿಲಾಗಿ ನಾನು ಮಹಿಳೆ” ಎಂದು ನಟಿ ತಿಳಿಸಿದ್ದಾರೆ.

“ಸ್ನೇಹಿತರೇ, ನಾನು ಸಂಜನಾ ಗಲ್ರಾನಿ, ನಾನೊಬ್ಬ ನಟಿ. ಆದರೆ ಅದಕ್ಕಿಂತ ಹೆಚ್ಚಾಗಿ ನಾನು ಮಹಿಳೆ. ಕುಟುಂಬವನ್ನು ಹೊಂದಿರುವ ಮಹಿಳೆ. ನನಗೆ ರಾತ್ರಿ 1ರಿಂದ 2 ಗಂಟೆಯ ಸಮಯದಲ್ಲಿ ಬೇರೆ ಬೇರೆ ನಂಬರ್‌ಗಳಿಂದ ಕರೆಗಳು ಬರುತ್ತಲೇ ಇವೆ” ಎಂದು ಹೇಳಿದ್ದಾರೆ.

“ನಿನ್ನೆ ರಾತ್ರಿ ಶನಿವಾರ ಕುಡಿದು ಕೆಲವರು ಕರೆ ಮಾಡಿದ್ದಾರೆ. ಶನಿವಾರವಷ್ಟೇ ಅಲ್ಲ, ಪ್ರತಿದಿನ ನಾನು ಅಪರಿಚಿತ ನಂಬರ್‌ಗಳನ್ನು ಬ್ಲಾಕ್ ಮಾಡುತ್ತಲೇ ಇದ್ದೇನೆ. ಮತ್ತು ಮತ್ತೆ ಹೊಸ ಸಂಖ್ಯೆಗಳಿಂದ ನನಗೆ ಕರೆಗಳು ಬರುತ್ತಿವೆ” ಎಂದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

“ಅಸಹಾಯಕತೆ, ತೊಂದರೆ ಮತ್ತು ಹತಾಶೆಯನ್ನು ನಾನು ಅನುಭವಿಸುತ್ತೇನೆ. ನನ್ನ ತಪ್ಪೇನು? ನಾನು ಎಷ್ಟು ಮೊಬೈಲ್ ಸಂಖ್ಯೆಗಳನ್ನು ಬದಲಾಯಿಸಬೇಕು, ಯಾರಾದರೂ ಈ ವ್ಯಕ್ತಿಗೆ ಪಾಠ ಕಲಿಸಬಹುದೇ? ನಾನು ಮಾನಸಿಕ ಶಾಂತಿ ಬಯಸುತ್ತಿದ್ದೇನೆ” ಎಂಬ ಬರಹವನ್ನು ಹಂಚಿಕೊಂಡಿದ್ದಾರೆ.

ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ. ನಂಬರ್‌ಗಳನ್ನು ಬದಲಿಸಿದ್ದರಿಂದ ನನ್ನ ವೃತ್ತಿಗೆ ಸಂಬಂಧಿಸಿದ ಸಂಪರ್ಕಗಳ ಮೇಲೂ ಪರಿಣಾಮ ಬೀರುತ್ತಿದೆ. ರಾತ್ರಿ 2.00 ಗಂಟೆಯಲ್ಲಿ ಕರೆ ಮಾಡಿ ಕಿರುಕುಳ ನೀಡುತ್ತಿರುವ ಅಪರಿಚಿತ ವ್ಯಕ್ತಿ ತನ್ನ ಸಂಖ್ಯೆಯನ್ನು ಶಾಶ್ವತವಾಗಿ ಬದಲಾಯಿಸಲು ಹಾಗೂ ಆತನ ಕಿರುಕುಳವನ್ನು ತಡೆಯಲು ನಾನು ಬಯಸುತ್ತೇನೆ. ನನಗೆ ಮಾತ್ರವಲ್ಲ. ಬೇರೆ ಯಾವ ಮಹಿಳೆಗೂ ತೊಂದರೆ ಕೊಡಬಾರದು ಎಂದು ಕೋರಿದ್ದಾರೆ.

ಜೊತೆಗೆ ಆಡಿಯೊ ಕೂಡ ಶೇರ್‌ ಮಾಡಿಕೊಂಡಿರುವ ಅವರು ಅವರು, ರಾತ್ರಿ ವೇಳೆ ಕರೆ ಮಾಡಿರುವ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. “ರಾತ್ರಿ ವೇಳೆ ಏಕೆ ಕರೆ ಮಾಡುತ್ತಿದ್ದೀರಿ. ಪ್ರತಿದಿನ ಹೀಗೆ ಆಗುತ್ತಿದೆ. ಕುಡಿದು ಕರೆ ಮಾಡ್ತೀರಾ?” ಎಂದು ಸಂಜನಾ ಕೇಳುತ್ತಾರೆ. “ನಾನು ಕುಡಿಯಲ್ಲ ಮೇಡಂ, ಮಿಸ್ಸಾಗಿ ಕರೆ ಬಂದಿದೆ” ಎಂದು ವ್ಯಕ್ತಿಯು ಸಮಜಾಯಿಷಿ ನೀಡುತ್ತಾನೆ. “ಮಿಸ್ಸಾಗಿ ಹೇಗೆ ಕರೆ ಬರುತ್ತದೆ. ಪದೇ ಪದೇ ಕರೆ ಹೇಗೆ ಬರುತ್ತದೆ” ಎಂದು ಸಂಜನಾ ಪ್ರಶ್ನಿಸಿದ್ದಾರೆ. ಜೊತೆ ಆ ವ್ಯಕ್ತಿಯು ಮಾತನಾಡುತ್ತಾ ತನ್ನನ್ನು ಕ್ಯಾಬ್‌ ಡ್ರೈವರ್‌ ಎಂದು ಹೇಳಿಕೊಳ್ಳುತ್ತಾನೆ. “ನಿಮ್ಮ ಡಿ.ಎಲ್‌. ಕಳುಹಿಸಿ” ಎಂದು ಸಂಜನಾ ಕೇಳುತ್ತಾರೆ. ಜೊತೆಗೆ ಆ ವ್ಯಕ್ತಿಯು ಕ್ಷಮೆಯನ್ನು ಕೇಳುವುದನ್ನು ಈ ಆಡಿಯೊದಲ್ಲಿ ಕೇಳಬಹುದು.

ಮಹಿಳೆಯರು ಹಾಗೂ ಮಹಿಳಾ ಕಲಾವಿದರ ಮೇಲೆ ಆಗುವ ದೌರ್ಜನ್ಯಗಳನ್ನು ಮೊದಲಿನಿಂದಲೂ ಖಂಡಿಸುತ್ತ ಬಂದಿರುವ ನಟಿ ಸಂಜನಾ ಈಗ ತುಂಬು ಗರ್ಭಿಣಿಯೂ ಹೌದು. ಮಾಧ್ಯಮ ಸಂಸ್ಥೆಯೊಂದು ಇಲ್ಲಸಲ್ಲದ ಸುದ್ದಿ ಬರೆದಿದ್ದಾಗ, ಕಟುವಾಗಿಯೇ ಪ್ರತಿಕ್ರಿಯಿಸಿದ್ದ ಸಂಜನಾ ಸ್ಪೆಷಲ್‌ ಕ್ಲಾಸ್‌ ತೆಗೆದುಕೊಂಡಿದ್ದರು.

ಸಂಜನಾ ಅವರು ಹಂಚಿಕೊಂಡಿರುವ ನಂಬರ್‌ಗೆ ಕರೆ ಮಾಡಿದಾಗ, 19 ವರ್ಷದ ಯುವಕ ಕರೆ ಮಾಡಿರುವುದೆಂದು ತಿಳಿದುಬಂದಿದೆ. ಮಿಸ್ಸಾಗಿ ಕರೆ ಹೋಗಿದೆ. ಇವರು ಯಾರೆಂಬುದು ನನಗೆ ಗೊತ್ತಿಲ್ಲ. ತಪ್ಪಾಗಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾನೆ.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...