Homeಕರ್ನಾಟಕರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

"ನಾನು ಒಬ್ಬ ನಟಿ, ಮಿಗಿಲಾಗಿ ಒಬ್ಬ ಮಹಿಳೆ. ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ" ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಅಪರಿಚಿತನಿಗೆ ಕ್ಲಾಸ್‌ ತೆಗೆದುಕೊಂಡಿರುವ ಆಡಿಯೊ ಹಂಚಿಕೊಂಡಿದ್ದಾರೆ.

- Advertisement -
- Advertisement -

ಅರ್ಧ ರಾತ್ರಿಯಲ್ಲಿ ಬರುತ್ತಿರುವ ಅಪರಿಚಿತರ ಕರೆಗಳಿಂದ ಬಹುಭಾಷಾ ನಟಿ ಸಂಜನಾ ಗಲ್ರಾನಿ ಬೇಸತ್ತಿದ್ದಾರೆ. “ನಾನೊಬ್ಬ ನಟಿ, ಅದಕ್ಕಿಂತ ಮಿಗಿಲಾಗಿ ನಾನು ಮಹಿಳೆ” ಎಂದು ನಟಿ ತಿಳಿಸಿದ್ದಾರೆ.

“ಸ್ನೇಹಿತರೇ, ನಾನು ಸಂಜನಾ ಗಲ್ರಾನಿ, ನಾನೊಬ್ಬ ನಟಿ. ಆದರೆ ಅದಕ್ಕಿಂತ ಹೆಚ್ಚಾಗಿ ನಾನು ಮಹಿಳೆ. ಕುಟುಂಬವನ್ನು ಹೊಂದಿರುವ ಮಹಿಳೆ. ನನಗೆ ರಾತ್ರಿ 1ರಿಂದ 2 ಗಂಟೆಯ ಸಮಯದಲ್ಲಿ ಬೇರೆ ಬೇರೆ ನಂಬರ್‌ಗಳಿಂದ ಕರೆಗಳು ಬರುತ್ತಲೇ ಇವೆ” ಎಂದು ಹೇಳಿದ್ದಾರೆ.

“ನಿನ್ನೆ ರಾತ್ರಿ ಶನಿವಾರ ಕುಡಿದು ಕೆಲವರು ಕರೆ ಮಾಡಿದ್ದಾರೆ. ಶನಿವಾರವಷ್ಟೇ ಅಲ್ಲ, ಪ್ರತಿದಿನ ನಾನು ಅಪರಿಚಿತ ನಂಬರ್‌ಗಳನ್ನು ಬ್ಲಾಕ್ ಮಾಡುತ್ತಲೇ ಇದ್ದೇನೆ. ಮತ್ತು ಮತ್ತೆ ಹೊಸ ಸಂಖ್ಯೆಗಳಿಂದ ನನಗೆ ಕರೆಗಳು ಬರುತ್ತಿವೆ” ಎಂದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

“ಅಸಹಾಯಕತೆ, ತೊಂದರೆ ಮತ್ತು ಹತಾಶೆಯನ್ನು ನಾನು ಅನುಭವಿಸುತ್ತೇನೆ. ನನ್ನ ತಪ್ಪೇನು? ನಾನು ಎಷ್ಟು ಮೊಬೈಲ್ ಸಂಖ್ಯೆಗಳನ್ನು ಬದಲಾಯಿಸಬೇಕು, ಯಾರಾದರೂ ಈ ವ್ಯಕ್ತಿಗೆ ಪಾಠ ಕಲಿಸಬಹುದೇ? ನಾನು ಮಾನಸಿಕ ಶಾಂತಿ ಬಯಸುತ್ತಿದ್ದೇನೆ” ಎಂಬ ಬರಹವನ್ನು ಹಂಚಿಕೊಂಡಿದ್ದಾರೆ.

ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ. ನಂಬರ್‌ಗಳನ್ನು ಬದಲಿಸಿದ್ದರಿಂದ ನನ್ನ ವೃತ್ತಿಗೆ ಸಂಬಂಧಿಸಿದ ಸಂಪರ್ಕಗಳ ಮೇಲೂ ಪರಿಣಾಮ ಬೀರುತ್ತಿದೆ. ರಾತ್ರಿ 2.00 ಗಂಟೆಯಲ್ಲಿ ಕರೆ ಮಾಡಿ ಕಿರುಕುಳ ನೀಡುತ್ತಿರುವ ಅಪರಿಚಿತ ವ್ಯಕ್ತಿ ತನ್ನ ಸಂಖ್ಯೆಯನ್ನು ಶಾಶ್ವತವಾಗಿ ಬದಲಾಯಿಸಲು ಹಾಗೂ ಆತನ ಕಿರುಕುಳವನ್ನು ತಡೆಯಲು ನಾನು ಬಯಸುತ್ತೇನೆ. ನನಗೆ ಮಾತ್ರವಲ್ಲ. ಬೇರೆ ಯಾವ ಮಹಿಳೆಗೂ ತೊಂದರೆ ಕೊಡಬಾರದು ಎಂದು ಕೋರಿದ್ದಾರೆ.

ಜೊತೆಗೆ ಆಡಿಯೊ ಕೂಡ ಶೇರ್‌ ಮಾಡಿಕೊಂಡಿರುವ ಅವರು ಅವರು, ರಾತ್ರಿ ವೇಳೆ ಕರೆ ಮಾಡಿರುವ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. “ರಾತ್ರಿ ವೇಳೆ ಏಕೆ ಕರೆ ಮಾಡುತ್ತಿದ್ದೀರಿ. ಪ್ರತಿದಿನ ಹೀಗೆ ಆಗುತ್ತಿದೆ. ಕುಡಿದು ಕರೆ ಮಾಡ್ತೀರಾ?” ಎಂದು ಸಂಜನಾ ಕೇಳುತ್ತಾರೆ. “ನಾನು ಕುಡಿಯಲ್ಲ ಮೇಡಂ, ಮಿಸ್ಸಾಗಿ ಕರೆ ಬಂದಿದೆ” ಎಂದು ವ್ಯಕ್ತಿಯು ಸಮಜಾಯಿಷಿ ನೀಡುತ್ತಾನೆ. “ಮಿಸ್ಸಾಗಿ ಹೇಗೆ ಕರೆ ಬರುತ್ತದೆ. ಪದೇ ಪದೇ ಕರೆ ಹೇಗೆ ಬರುತ್ತದೆ” ಎಂದು ಸಂಜನಾ ಪ್ರಶ್ನಿಸಿದ್ದಾರೆ. ಜೊತೆ ಆ ವ್ಯಕ್ತಿಯು ಮಾತನಾಡುತ್ತಾ ತನ್ನನ್ನು ಕ್ಯಾಬ್‌ ಡ್ರೈವರ್‌ ಎಂದು ಹೇಳಿಕೊಳ್ಳುತ್ತಾನೆ. “ನಿಮ್ಮ ಡಿ.ಎಲ್‌. ಕಳುಹಿಸಿ” ಎಂದು ಸಂಜನಾ ಕೇಳುತ್ತಾರೆ. ಜೊತೆಗೆ ಆ ವ್ಯಕ್ತಿಯು ಕ್ಷಮೆಯನ್ನು ಕೇಳುವುದನ್ನು ಈ ಆಡಿಯೊದಲ್ಲಿ ಕೇಳಬಹುದು.

ಮಹಿಳೆಯರು ಹಾಗೂ ಮಹಿಳಾ ಕಲಾವಿದರ ಮೇಲೆ ಆಗುವ ದೌರ್ಜನ್ಯಗಳನ್ನು ಮೊದಲಿನಿಂದಲೂ ಖಂಡಿಸುತ್ತ ಬಂದಿರುವ ನಟಿ ಸಂಜನಾ ಈಗ ತುಂಬು ಗರ್ಭಿಣಿಯೂ ಹೌದು. ಮಾಧ್ಯಮ ಸಂಸ್ಥೆಯೊಂದು ಇಲ್ಲಸಲ್ಲದ ಸುದ್ದಿ ಬರೆದಿದ್ದಾಗ, ಕಟುವಾಗಿಯೇ ಪ್ರತಿಕ್ರಿಯಿಸಿದ್ದ ಸಂಜನಾ ಸ್ಪೆಷಲ್‌ ಕ್ಲಾಸ್‌ ತೆಗೆದುಕೊಂಡಿದ್ದರು.

ಸಂಜನಾ ಅವರು ಹಂಚಿಕೊಂಡಿರುವ ನಂಬರ್‌ಗೆ ಕರೆ ಮಾಡಿದಾಗ, 19 ವರ್ಷದ ಯುವಕ ಕರೆ ಮಾಡಿರುವುದೆಂದು ತಿಳಿದುಬಂದಿದೆ. ಮಿಸ್ಸಾಗಿ ಕರೆ ಹೋಗಿದೆ. ಇವರು ಯಾರೆಂಬುದು ನನಗೆ ಗೊತ್ತಿಲ್ಲ. ತಪ್ಪಾಗಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾನೆ.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...