Homeಕರ್ನಾಟಕರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

"ನಾನು ಒಬ್ಬ ನಟಿ, ಮಿಗಿಲಾಗಿ ಒಬ್ಬ ಮಹಿಳೆ. ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ" ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಅಪರಿಚಿತನಿಗೆ ಕ್ಲಾಸ್‌ ತೆಗೆದುಕೊಂಡಿರುವ ಆಡಿಯೊ ಹಂಚಿಕೊಂಡಿದ್ದಾರೆ.

- Advertisement -
- Advertisement -

ಅರ್ಧ ರಾತ್ರಿಯಲ್ಲಿ ಬರುತ್ತಿರುವ ಅಪರಿಚಿತರ ಕರೆಗಳಿಂದ ಬಹುಭಾಷಾ ನಟಿ ಸಂಜನಾ ಗಲ್ರಾನಿ ಬೇಸತ್ತಿದ್ದಾರೆ. “ನಾನೊಬ್ಬ ನಟಿ, ಅದಕ್ಕಿಂತ ಮಿಗಿಲಾಗಿ ನಾನು ಮಹಿಳೆ” ಎಂದು ನಟಿ ತಿಳಿಸಿದ್ದಾರೆ.

“ಸ್ನೇಹಿತರೇ, ನಾನು ಸಂಜನಾ ಗಲ್ರಾನಿ, ನಾನೊಬ್ಬ ನಟಿ. ಆದರೆ ಅದಕ್ಕಿಂತ ಹೆಚ್ಚಾಗಿ ನಾನು ಮಹಿಳೆ. ಕುಟುಂಬವನ್ನು ಹೊಂದಿರುವ ಮಹಿಳೆ. ನನಗೆ ರಾತ್ರಿ 1ರಿಂದ 2 ಗಂಟೆಯ ಸಮಯದಲ್ಲಿ ಬೇರೆ ಬೇರೆ ನಂಬರ್‌ಗಳಿಂದ ಕರೆಗಳು ಬರುತ್ತಲೇ ಇವೆ” ಎಂದು ಹೇಳಿದ್ದಾರೆ.

“ನಿನ್ನೆ ರಾತ್ರಿ ಶನಿವಾರ ಕುಡಿದು ಕೆಲವರು ಕರೆ ಮಾಡಿದ್ದಾರೆ. ಶನಿವಾರವಷ್ಟೇ ಅಲ್ಲ, ಪ್ರತಿದಿನ ನಾನು ಅಪರಿಚಿತ ನಂಬರ್‌ಗಳನ್ನು ಬ್ಲಾಕ್ ಮಾಡುತ್ತಲೇ ಇದ್ದೇನೆ. ಮತ್ತು ಮತ್ತೆ ಹೊಸ ಸಂಖ್ಯೆಗಳಿಂದ ನನಗೆ ಕರೆಗಳು ಬರುತ್ತಿವೆ” ಎಂದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

“ಅಸಹಾಯಕತೆ, ತೊಂದರೆ ಮತ್ತು ಹತಾಶೆಯನ್ನು ನಾನು ಅನುಭವಿಸುತ್ತೇನೆ. ನನ್ನ ತಪ್ಪೇನು? ನಾನು ಎಷ್ಟು ಮೊಬೈಲ್ ಸಂಖ್ಯೆಗಳನ್ನು ಬದಲಾಯಿಸಬೇಕು, ಯಾರಾದರೂ ಈ ವ್ಯಕ್ತಿಗೆ ಪಾಠ ಕಲಿಸಬಹುದೇ? ನಾನು ಮಾನಸಿಕ ಶಾಂತಿ ಬಯಸುತ್ತಿದ್ದೇನೆ” ಎಂಬ ಬರಹವನ್ನು ಹಂಚಿಕೊಂಡಿದ್ದಾರೆ.

ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ. ನಂಬರ್‌ಗಳನ್ನು ಬದಲಿಸಿದ್ದರಿಂದ ನನ್ನ ವೃತ್ತಿಗೆ ಸಂಬಂಧಿಸಿದ ಸಂಪರ್ಕಗಳ ಮೇಲೂ ಪರಿಣಾಮ ಬೀರುತ್ತಿದೆ. ರಾತ್ರಿ 2.00 ಗಂಟೆಯಲ್ಲಿ ಕರೆ ಮಾಡಿ ಕಿರುಕುಳ ನೀಡುತ್ತಿರುವ ಅಪರಿಚಿತ ವ್ಯಕ್ತಿ ತನ್ನ ಸಂಖ್ಯೆಯನ್ನು ಶಾಶ್ವತವಾಗಿ ಬದಲಾಯಿಸಲು ಹಾಗೂ ಆತನ ಕಿರುಕುಳವನ್ನು ತಡೆಯಲು ನಾನು ಬಯಸುತ್ತೇನೆ. ನನಗೆ ಮಾತ್ರವಲ್ಲ. ಬೇರೆ ಯಾವ ಮಹಿಳೆಗೂ ತೊಂದರೆ ಕೊಡಬಾರದು ಎಂದು ಕೋರಿದ್ದಾರೆ.

ಜೊತೆಗೆ ಆಡಿಯೊ ಕೂಡ ಶೇರ್‌ ಮಾಡಿಕೊಂಡಿರುವ ಅವರು ಅವರು, ರಾತ್ರಿ ವೇಳೆ ಕರೆ ಮಾಡಿರುವ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. “ರಾತ್ರಿ ವೇಳೆ ಏಕೆ ಕರೆ ಮಾಡುತ್ತಿದ್ದೀರಿ. ಪ್ರತಿದಿನ ಹೀಗೆ ಆಗುತ್ತಿದೆ. ಕುಡಿದು ಕರೆ ಮಾಡ್ತೀರಾ?” ಎಂದು ಸಂಜನಾ ಕೇಳುತ್ತಾರೆ. “ನಾನು ಕುಡಿಯಲ್ಲ ಮೇಡಂ, ಮಿಸ್ಸಾಗಿ ಕರೆ ಬಂದಿದೆ” ಎಂದು ವ್ಯಕ್ತಿಯು ಸಮಜಾಯಿಷಿ ನೀಡುತ್ತಾನೆ. “ಮಿಸ್ಸಾಗಿ ಹೇಗೆ ಕರೆ ಬರುತ್ತದೆ. ಪದೇ ಪದೇ ಕರೆ ಹೇಗೆ ಬರುತ್ತದೆ” ಎಂದು ಸಂಜನಾ ಪ್ರಶ್ನಿಸಿದ್ದಾರೆ. ಜೊತೆ ಆ ವ್ಯಕ್ತಿಯು ಮಾತನಾಡುತ್ತಾ ತನ್ನನ್ನು ಕ್ಯಾಬ್‌ ಡ್ರೈವರ್‌ ಎಂದು ಹೇಳಿಕೊಳ್ಳುತ್ತಾನೆ. “ನಿಮ್ಮ ಡಿ.ಎಲ್‌. ಕಳುಹಿಸಿ” ಎಂದು ಸಂಜನಾ ಕೇಳುತ್ತಾರೆ. ಜೊತೆಗೆ ಆ ವ್ಯಕ್ತಿಯು ಕ್ಷಮೆಯನ್ನು ಕೇಳುವುದನ್ನು ಈ ಆಡಿಯೊದಲ್ಲಿ ಕೇಳಬಹುದು.

ಮಹಿಳೆಯರು ಹಾಗೂ ಮಹಿಳಾ ಕಲಾವಿದರ ಮೇಲೆ ಆಗುವ ದೌರ್ಜನ್ಯಗಳನ್ನು ಮೊದಲಿನಿಂದಲೂ ಖಂಡಿಸುತ್ತ ಬಂದಿರುವ ನಟಿ ಸಂಜನಾ ಈಗ ತುಂಬು ಗರ್ಭಿಣಿಯೂ ಹೌದು. ಮಾಧ್ಯಮ ಸಂಸ್ಥೆಯೊಂದು ಇಲ್ಲಸಲ್ಲದ ಸುದ್ದಿ ಬರೆದಿದ್ದಾಗ, ಕಟುವಾಗಿಯೇ ಪ್ರತಿಕ್ರಿಯಿಸಿದ್ದ ಸಂಜನಾ ಸ್ಪೆಷಲ್‌ ಕ್ಲಾಸ್‌ ತೆಗೆದುಕೊಂಡಿದ್ದರು.

ಸಂಜನಾ ಅವರು ಹಂಚಿಕೊಂಡಿರುವ ನಂಬರ್‌ಗೆ ಕರೆ ಮಾಡಿದಾಗ, 19 ವರ್ಷದ ಯುವಕ ಕರೆ ಮಾಡಿರುವುದೆಂದು ತಿಳಿದುಬಂದಿದೆ. ಮಿಸ್ಸಾಗಿ ಕರೆ ಹೋಗಿದೆ. ಇವರು ಯಾರೆಂಬುದು ನನಗೆ ಗೊತ್ತಿಲ್ಲ. ತಪ್ಪಾಗಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾನೆ.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....