Homeಕರ್ನಾಟಕನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಅವರದೇ ಚಾನೆಲ್‌‌ನಲ್ಲಿ ನಟಿ ಹನುಮಕ್ಕನವರ್‌‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ

- Advertisement -
- Advertisement -

ನಟಿ ಸಂಜನಾ ಗರ್ಲಾನಿ ಅವರು ಖಾಸಗಿ ಸುದ್ದಿ ವಾಹಿನಿ ಸುವರ್ಣ ಚಾನೆಲ್ ಆಂಕರ್‌‌ ಅಜಿತ್ ಹನುಮಕ್ಕನವರ್‌ ಅವರಿಗೆ, ಅವರದೇ ವಾಹಿನಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ಜನರು ನಟಿ ಸಂಜನಾ ಗಲ್ರಾನಿ ಅವರ ವಾದ ಸರಣಿಯನ್ನು ಅಭಿನಂದಿಸಿದ್ದಾರೆ.

ಸುವರ್ಣ ಚಾನೆಲ್ ಆಂಕರ್‌ ಅಜಿತ್ ಹನುಮಕ್ಕನವರ್‌ ಅವರು, ಕಾರು ಡ್ರೈವರ್‌ ಅವರೊಂದಿಗೆ ನಟಿ ಸಂಜನಾ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಕಾರ್ಯಕ್ರಮವೊಂದನ್ನು ನಡೆಸಿದ್ದರು. ಈ ಬಗ್ಗೆ ಸ್ಪಷ್ಟನೆಗಾಗಿ ಸಂಜನಾ ಅವರಿಗೆ ಸುವರ್ಣ ವಾಹಿನಿ ಕರೆ ಮಾಡಿತ್ತು. ಅವರ ಕರೆ ಸ್ವೀಕರಿಸುತ್ತಲೆ ಸಂಜನಾ, “ನಿಮ್ಮ ಚಾನೆಲ್‌ ಅವರು ನನ್ನೊಂದಿಗೆ ಮಾತನಾಡಲು ವಿನಂತಿ ಮಾಡಿದ್ದರು. ಆದರೆ ನಾನು ಮಾತನಾಡುವುದಕ್ಕೆ ಮೊದಲೇ ನನ್ನ ಬಗ್ಗೆ ತೀರ್ಮಾನ ತೆಗೆದುಕೊಂಡು ಬಿಟ್ಟಿದ್ದೀರಾ” ಎಂದು ಕಾರ್ಯಕ್ರಮಕ್ಕೆ ನೀಡಿರುವ ಶೀರ್ಷಿಕೆಯನ್ನು ಉಲ್ಲೇಖಿಸಿ ಹೇಳಿದ್ದರು.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ಕಾರ್ಯಕ್ರಮಕ್ಕೆ ‘ಕಿರಿಕ್ ಸಂಜನಾ’ ಎಂದು ಶೀರ್ಷಿಕೆ ನೀಡಲಾಗಿತ್ತು.

ಶೀರ್ಷಿಕೆಯ ಬಗ್ಗೆ ನಟಿ ಪ್ರಶ್ನಿಸಿದ್ದಕ್ಕೆ ಉದ್ದಟತನದಿಂದ ವರ್ತಿಸಿದ ಅಜಿತ್ ಅವರು, ಇನ್ನೇನು ಶೀರ್ಷಿಕೆ ನೀಡಬೇಕಿತ್ತು ಎಂದು ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಉತ್ತರಿಸಿದ ಸಂಜನಾ ಅವರು ತಮಗೆ ಆಗಿರುವ ಅನ್ಯಾಯದ ಬಗ್ಗೆ ಅಲ್ಲಿ ಹೇಳಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅಜಿತ್, ಸಂಜನಾರನ್ನು ಮಾತನಾಡಲು ಬಿಡದೆ, ಅವರ ಮಾತನ್ನು ತಿರುಚುವ ಪ್ರಯತ್ನ ಮಾಡಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಜನಾ, “ಮೊದಲನೆಯದಾಗಿ, ಮಾತನಾಡಲು ಒಂದು ರೀತಿಯಿರುತ್ತದೆ. ನೀವು ನಿಮ್ಮ ವಾದಕ್ಕೆ ಮಸಾಲೆ ಹಾಕಿಬಿಟ್ಟು ಈಗಾಗಲೆ ಒಂದು ತೀರ್ಮಾನಕ್ಕೆ ಬಂದುಬಿಟ್ಟಿದ್ದೀರಿ. ಇಷ್ಟೆಲ್ಲಾ ಆದ ನಂತರ ನನಗೆ ಯಾಕೆ ಫೋನ್ ಮಾಡಿ ಸ್ಪಷ್ಟನೆ ಕೇಳುತ್ತಿದ್ದೀರಾ?” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಅಜಿತ್, ಅಲ್ಲಿ ಏನು ನಡೆದಿದೆ ಎಂದು ಗೊತ್ತಾಗಬೇಕಲ್ವಾ ಎಂದು ಹೇಳಿದ್ದಾರೆ.

ನಂತರ ತಮ್ಮ ಮಾತನ್ನು ಮುಂದುವರೆಸಿದ ಸಂಜನಾ, “ಮರ್ಯಾದೆ ಕೊಟ್ಟು ಮಾತನಾಡಲು ಆಗಿಲ್ಲ ಅಂದರೆ ಯಾಕೆ ನನಗೆ ಫೋನ್ ಮಾಡಿ, ಸಮಯ ಕೊಡಿ ಎಂದು ವಿನಂತಿಸುತ್ತೀರಾ?” ಎಂದು ಕೇಳಿದ್ದಾರೆ. ಇದಕ್ಕೆ ಅಜಿತ್, “ನಾವು ನಿಮ್ಮ ವರ್ಷನ್ ತಗೊಂಡಿಲ್ಲ ಎಂದು ಆರೋಪ ಬರಬಾರದು ಅಲ್ವಾ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಇದಕ್ಕೆ ಮತ್ತೇ ಆಕ್ರೋಶಗೊಂಡ ಸಂಜನಾ, “ನನ್ನ ವರ್ಷನ್ ತಗೋ ಬೇಡಿ. ಈ ರೀತಿ ಒರಟಾಗಿ ಯಾರಾದರೂ ಮಾತನಾಡುತ್ತಾರ? ಅದೂ ಕೂಡಾ ಲೈವ್ ಅಲ್ಲಿ, ಇಡೀ ಕರ್ನಾಟಕ ನೋಡ್ತಾ ಇದೆ. ಈ ತರ ಒರಟಾಗಿ ಮತ್ತು ಗಲೀಜಾಗಿ ಮಾತನಾಡುವುದು ಸರಿಯಾ?” ಎಂದು ಹೇಳಿದ್ದಾರೆ.

ಇದಕ್ಕೆ, “ಹೇಗೆ ನಡೆದುಕೊಳ್ಳಬೇಕು ಎಂದು ನನಗೆ ಪಾಠ ಮಾಡಲು ಬರಬೇಡಿ” ಎಂದು ಅಜಿತ್ ಅವರು ಮತ್ತೇ ಉದ್ಧಟತನದಿಂದ ಮಾತನಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಸಂಜನಾ, “ನೀವು ಸಾರ್ವಜನಿಕವಾಗಿ ಹೇಗೆ ಬೇಕಾದರೂ ವರ್ತಿಸಿ. ಆದರೆ ನನ್ನೊಂದಿಗೆ ಹೀಗೆ ವರ್ತಿಸಬೇಡಿ. ಫೋನ್ ಮಾಡಿ, ‘ದಯವಿಟ್ಟು ಫೋನ್ ಅಲ್ಲಿ ಬನ್ನಿ ಮೇಡಂ’ ಅಂತ ಕೈಕಾಲ್ ಮುಗೀತೀರಾ. ಫೋನಲ್ಲಿ ಬಂದಾಗ ಕಿರಿಕ್ ಅಂತ ಹೇಳ್ತೀರಾ. ನಾಚಿಕೆ ಇಲ್ಲವೆ ನಿಮಗೆ? ಈ ಕರೆ ನನ್ನ ವಾದ ಏನೆಂದು ಕೇಳುವ ರೀತಿ ಇಲ್ಲ. ಮೊದಲಿಗೆ ಮರ್ಯಾದೆಯಾಗಿ ಮಾತನಾಡುವುದು ಕಲೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ, ನಮಗೆ ಎರಡೂ ಕಡೆಯ ವಾದಗಳು ಬೇಕು ಎನ್ನುದಕ್ಕಾಗಿ ನಿಮಗೆ ಕರೆ ಮಾಡಿದ್ದೇವೆ ಎಂದು ಅಜಿತ್ ಮತ್ತೇ ಹೇಳುತ್ತಾರೆ.

“ನಿಮಗೆ ಬೇಕಾದ್ರೆ ಬೇಕಾಗಲಿ. ನನಗೆ ನಿಮ್ಮ ಬಳಿ ಸ್ಪಷ್ಟನೆ ಕೊಡುವ ಅವಶ್ಯಕತೆ ಇಲ್ಲ. ಕಾರ್‌ ಕಂಪೆನಿ ಅವರೇ ನನ್ನೊಂದಿಗೆ ಕ್ಷಮೆ ಕೇಳಿದ್ದಾರೆ. ಮಹಿಳೆಯರೊಂದಿಗೆ ಹೇಗೆ ಮಾತನಾಡಬೇಕು ಎಂದು ಮೊದಲು ಕಲಿತುಕೊಳ್ಳಿ. ನಿಮಗೆ ನನ್ನೊಂದಿಗೆ ಈ ರೀತಿ ಮಾತನಾಡುವ ಅಧಿಕಾರ ಇಲ್ಲ. ಅದಕ್ಕೂ ಮೊದಲು ಒಬ್ಬ ಸಭ್ಯ ನಿರೂಪಕನ ಕೈಯ್ಯಲ್ಲಿ ಫೋನ್ ಮಾಡಿಸಿ. ಸಭ್ಯ ನಿರೂಪಕ ಮರ್ಯಾದೆ ಕೊಟ್ಟು ಮಾತನಾಡಿದರೆ ನಾನು ಖಂಡಿತಾ ಮಾತನಾಡುತ್ತೇನೆ” ಎಂದು ಹೇಳಿದ್ದ ಸಂಜನಾ ಅವರು ಫೋನ್ ಕಟ್ ಮಾಡಿದ್ದಾರೆ.

ಸಂಜನಾ ಅವರ ವಾದ ಸರಣಿ ಮತ್ತು ಪ್ರಸ್ತುತ ಕಾರ್ಯಕ್ರಮದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ನಟಿಯ ಮಾತುಗಳನ್ನು ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ಸಾಮಾಜಿಕ ಕಾರ್ಯಕರ್ತ ದಿನೇಶ್ ಕುಮಾರ ಅವರು, “ಟೀವಿ ಆಂಕರುಗಳು ಪ್ರತಿಕ್ರಿಯೆಗಳಿಗೆ ಫೋನ್ ಮಾಡಿದಾಗ ಕನಿಷ್ಠ ಸೌಜನ್ಯವನ್ನಾದರೂ ತೋರಿಸಬೇಕು. ಫೋನ್ ಕನೆಕ್ಟ್ ಮಾಡುವಾಗ ಅಂಗಲಾಚಿ ಬೇಡಿಕೊಳ್ಳೋದು, ಲೈವ್ ಟೆಲಿಕಾಸ್ಟ್‌ನಲ್ಲಿ ಬಾಯಿಗೆ ಬಂದಂತೆ ಮಾತಾಡೋದು ಮಾಡಿದರೆ ಯಾರಿಗಾದರೂ ಕೋಪ ಬರುತ್ತದೆ. ಇದೊಂಥರ ಉತ್ತರನ ಪೌರುಷ ಒಲೆ ಮುಂದೆ ಎಂಬಂತಾಗುತ್ತದೆ. ನಂಗೇನೋ ಸಂಜನಾ ಸರಿಯಾಗೇ ಮಾತಾಡಿದ್ದಾರೆ ಅನ್ನಿಸಿತು. ಟೀವಿ ಆಂಕರುಗಳು ತಾವೇ ಧರೆಗಿಳಿದ ದೇವರುಗಳು ಎಂಬ ಭ್ರಮೆಯಿಂದ ಹೊರಗೆ ಬರಬೇಕು. ಇಲ್ಲವಾದಲ್ಲಿ ಹೀಗೆ ಗಲೀಜಾಗಿ ಮಾತಾಡೋ ಡೀಸೆಂಟ್ ಅಲ್ಲದ ಆಂಕರ್ ಅನಿಸಿಕೊಳ್ಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಅಜಿತ್ ಹನುಮಕ್ಕನವರಿಗೆ ಹೀರೋ ಆಗುವ ತವಕ. ಈ ಟೀವಿಯವರಿಗೆ ಈತ ಒಂದು ನ್ಯೂಸೆನ್ಸ್ ಅನ್ನೋದು ಯಾಕೆ ಇಲ್ಲೀವರೆಗೂ ಅರ್ಥ ಆಗಿಲ್ಲ?

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....