Homeಕರ್ನಾಟಕನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಅವರದೇ ಚಾನೆಲ್‌‌ನಲ್ಲಿ ನಟಿ ಹನುಮಕ್ಕನವರ್‌‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ

- Advertisement -
- Advertisement -

ನಟಿ ಸಂಜನಾ ಗರ್ಲಾನಿ ಅವರು ಖಾಸಗಿ ಸುದ್ದಿ ವಾಹಿನಿ ಸುವರ್ಣ ಚಾನೆಲ್ ಆಂಕರ್‌‌ ಅಜಿತ್ ಹನುಮಕ್ಕನವರ್‌ ಅವರಿಗೆ, ಅವರದೇ ವಾಹಿನಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ಜನರು ನಟಿ ಸಂಜನಾ ಗಲ್ರಾನಿ ಅವರ ವಾದ ಸರಣಿಯನ್ನು ಅಭಿನಂದಿಸಿದ್ದಾರೆ.

ಸುವರ್ಣ ಚಾನೆಲ್ ಆಂಕರ್‌ ಅಜಿತ್ ಹನುಮಕ್ಕನವರ್‌ ಅವರು, ಕಾರು ಡ್ರೈವರ್‌ ಅವರೊಂದಿಗೆ ನಟಿ ಸಂಜನಾ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಕಾರ್ಯಕ್ರಮವೊಂದನ್ನು ನಡೆಸಿದ್ದರು. ಈ ಬಗ್ಗೆ ಸ್ಪಷ್ಟನೆಗಾಗಿ ಸಂಜನಾ ಅವರಿಗೆ ಸುವರ್ಣ ವಾಹಿನಿ ಕರೆ ಮಾಡಿತ್ತು. ಅವರ ಕರೆ ಸ್ವೀಕರಿಸುತ್ತಲೆ ಸಂಜನಾ, “ನಿಮ್ಮ ಚಾನೆಲ್‌ ಅವರು ನನ್ನೊಂದಿಗೆ ಮಾತನಾಡಲು ವಿನಂತಿ ಮಾಡಿದ್ದರು. ಆದರೆ ನಾನು ಮಾತನಾಡುವುದಕ್ಕೆ ಮೊದಲೇ ನನ್ನ ಬಗ್ಗೆ ತೀರ್ಮಾನ ತೆಗೆದುಕೊಂಡು ಬಿಟ್ಟಿದ್ದೀರಾ” ಎಂದು ಕಾರ್ಯಕ್ರಮಕ್ಕೆ ನೀಡಿರುವ ಶೀರ್ಷಿಕೆಯನ್ನು ಉಲ್ಲೇಖಿಸಿ ಹೇಳಿದ್ದರು.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ಕಾರ್ಯಕ್ರಮಕ್ಕೆ ‘ಕಿರಿಕ್ ಸಂಜನಾ’ ಎಂದು ಶೀರ್ಷಿಕೆ ನೀಡಲಾಗಿತ್ತು.

ಶೀರ್ಷಿಕೆಯ ಬಗ್ಗೆ ನಟಿ ಪ್ರಶ್ನಿಸಿದ್ದಕ್ಕೆ ಉದ್ದಟತನದಿಂದ ವರ್ತಿಸಿದ ಅಜಿತ್ ಅವರು, ಇನ್ನೇನು ಶೀರ್ಷಿಕೆ ನೀಡಬೇಕಿತ್ತು ಎಂದು ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಉತ್ತರಿಸಿದ ಸಂಜನಾ ಅವರು ತಮಗೆ ಆಗಿರುವ ಅನ್ಯಾಯದ ಬಗ್ಗೆ ಅಲ್ಲಿ ಹೇಳಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅಜಿತ್, ಸಂಜನಾರನ್ನು ಮಾತನಾಡಲು ಬಿಡದೆ, ಅವರ ಮಾತನ್ನು ತಿರುಚುವ ಪ್ರಯತ್ನ ಮಾಡಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಜನಾ, “ಮೊದಲನೆಯದಾಗಿ, ಮಾತನಾಡಲು ಒಂದು ರೀತಿಯಿರುತ್ತದೆ. ನೀವು ನಿಮ್ಮ ವಾದಕ್ಕೆ ಮಸಾಲೆ ಹಾಕಿಬಿಟ್ಟು ಈಗಾಗಲೆ ಒಂದು ತೀರ್ಮಾನಕ್ಕೆ ಬಂದುಬಿಟ್ಟಿದ್ದೀರಿ. ಇಷ್ಟೆಲ್ಲಾ ಆದ ನಂತರ ನನಗೆ ಯಾಕೆ ಫೋನ್ ಮಾಡಿ ಸ್ಪಷ್ಟನೆ ಕೇಳುತ್ತಿದ್ದೀರಾ?” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಅಜಿತ್, ಅಲ್ಲಿ ಏನು ನಡೆದಿದೆ ಎಂದು ಗೊತ್ತಾಗಬೇಕಲ್ವಾ ಎಂದು ಹೇಳಿದ್ದಾರೆ.

ನಂತರ ತಮ್ಮ ಮಾತನ್ನು ಮುಂದುವರೆಸಿದ ಸಂಜನಾ, “ಮರ್ಯಾದೆ ಕೊಟ್ಟು ಮಾತನಾಡಲು ಆಗಿಲ್ಲ ಅಂದರೆ ಯಾಕೆ ನನಗೆ ಫೋನ್ ಮಾಡಿ, ಸಮಯ ಕೊಡಿ ಎಂದು ವಿನಂತಿಸುತ್ತೀರಾ?” ಎಂದು ಕೇಳಿದ್ದಾರೆ. ಇದಕ್ಕೆ ಅಜಿತ್, “ನಾವು ನಿಮ್ಮ ವರ್ಷನ್ ತಗೊಂಡಿಲ್ಲ ಎಂದು ಆರೋಪ ಬರಬಾರದು ಅಲ್ವಾ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಇದಕ್ಕೆ ಮತ್ತೇ ಆಕ್ರೋಶಗೊಂಡ ಸಂಜನಾ, “ನನ್ನ ವರ್ಷನ್ ತಗೋ ಬೇಡಿ. ಈ ರೀತಿ ಒರಟಾಗಿ ಯಾರಾದರೂ ಮಾತನಾಡುತ್ತಾರ? ಅದೂ ಕೂಡಾ ಲೈವ್ ಅಲ್ಲಿ, ಇಡೀ ಕರ್ನಾಟಕ ನೋಡ್ತಾ ಇದೆ. ಈ ತರ ಒರಟಾಗಿ ಮತ್ತು ಗಲೀಜಾಗಿ ಮಾತನಾಡುವುದು ಸರಿಯಾ?” ಎಂದು ಹೇಳಿದ್ದಾರೆ.

ಇದಕ್ಕೆ, “ಹೇಗೆ ನಡೆದುಕೊಳ್ಳಬೇಕು ಎಂದು ನನಗೆ ಪಾಠ ಮಾಡಲು ಬರಬೇಡಿ” ಎಂದು ಅಜಿತ್ ಅವರು ಮತ್ತೇ ಉದ್ಧಟತನದಿಂದ ಮಾತನಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಸಂಜನಾ, “ನೀವು ಸಾರ್ವಜನಿಕವಾಗಿ ಹೇಗೆ ಬೇಕಾದರೂ ವರ್ತಿಸಿ. ಆದರೆ ನನ್ನೊಂದಿಗೆ ಹೀಗೆ ವರ್ತಿಸಬೇಡಿ. ಫೋನ್ ಮಾಡಿ, ‘ದಯವಿಟ್ಟು ಫೋನ್ ಅಲ್ಲಿ ಬನ್ನಿ ಮೇಡಂ’ ಅಂತ ಕೈಕಾಲ್ ಮುಗೀತೀರಾ. ಫೋನಲ್ಲಿ ಬಂದಾಗ ಕಿರಿಕ್ ಅಂತ ಹೇಳ್ತೀರಾ. ನಾಚಿಕೆ ಇಲ್ಲವೆ ನಿಮಗೆ? ಈ ಕರೆ ನನ್ನ ವಾದ ಏನೆಂದು ಕೇಳುವ ರೀತಿ ಇಲ್ಲ. ಮೊದಲಿಗೆ ಮರ್ಯಾದೆಯಾಗಿ ಮಾತನಾಡುವುದು ಕಲೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ, ನಮಗೆ ಎರಡೂ ಕಡೆಯ ವಾದಗಳು ಬೇಕು ಎನ್ನುದಕ್ಕಾಗಿ ನಿಮಗೆ ಕರೆ ಮಾಡಿದ್ದೇವೆ ಎಂದು ಅಜಿತ್ ಮತ್ತೇ ಹೇಳುತ್ತಾರೆ.

“ನಿಮಗೆ ಬೇಕಾದ್ರೆ ಬೇಕಾಗಲಿ. ನನಗೆ ನಿಮ್ಮ ಬಳಿ ಸ್ಪಷ್ಟನೆ ಕೊಡುವ ಅವಶ್ಯಕತೆ ಇಲ್ಲ. ಕಾರ್‌ ಕಂಪೆನಿ ಅವರೇ ನನ್ನೊಂದಿಗೆ ಕ್ಷಮೆ ಕೇಳಿದ್ದಾರೆ. ಮಹಿಳೆಯರೊಂದಿಗೆ ಹೇಗೆ ಮಾತನಾಡಬೇಕು ಎಂದು ಮೊದಲು ಕಲಿತುಕೊಳ್ಳಿ. ನಿಮಗೆ ನನ್ನೊಂದಿಗೆ ಈ ರೀತಿ ಮಾತನಾಡುವ ಅಧಿಕಾರ ಇಲ್ಲ. ಅದಕ್ಕೂ ಮೊದಲು ಒಬ್ಬ ಸಭ್ಯ ನಿರೂಪಕನ ಕೈಯ್ಯಲ್ಲಿ ಫೋನ್ ಮಾಡಿಸಿ. ಸಭ್ಯ ನಿರೂಪಕ ಮರ್ಯಾದೆ ಕೊಟ್ಟು ಮಾತನಾಡಿದರೆ ನಾನು ಖಂಡಿತಾ ಮಾತನಾಡುತ್ತೇನೆ” ಎಂದು ಹೇಳಿದ್ದ ಸಂಜನಾ ಅವರು ಫೋನ್ ಕಟ್ ಮಾಡಿದ್ದಾರೆ.

ಸಂಜನಾ ಅವರ ವಾದ ಸರಣಿ ಮತ್ತು ಪ್ರಸ್ತುತ ಕಾರ್ಯಕ್ರಮದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ನಟಿಯ ಮಾತುಗಳನ್ನು ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ಸಾಮಾಜಿಕ ಕಾರ್ಯಕರ್ತ ದಿನೇಶ್ ಕುಮಾರ ಅವರು, “ಟೀವಿ ಆಂಕರುಗಳು ಪ್ರತಿಕ್ರಿಯೆಗಳಿಗೆ ಫೋನ್ ಮಾಡಿದಾಗ ಕನಿಷ್ಠ ಸೌಜನ್ಯವನ್ನಾದರೂ ತೋರಿಸಬೇಕು. ಫೋನ್ ಕನೆಕ್ಟ್ ಮಾಡುವಾಗ ಅಂಗಲಾಚಿ ಬೇಡಿಕೊಳ್ಳೋದು, ಲೈವ್ ಟೆಲಿಕಾಸ್ಟ್‌ನಲ್ಲಿ ಬಾಯಿಗೆ ಬಂದಂತೆ ಮಾತಾಡೋದು ಮಾಡಿದರೆ ಯಾರಿಗಾದರೂ ಕೋಪ ಬರುತ್ತದೆ. ಇದೊಂಥರ ಉತ್ತರನ ಪೌರುಷ ಒಲೆ ಮುಂದೆ ಎಂಬಂತಾಗುತ್ತದೆ. ನಂಗೇನೋ ಸಂಜನಾ ಸರಿಯಾಗೇ ಮಾತಾಡಿದ್ದಾರೆ ಅನ್ನಿಸಿತು. ಟೀವಿ ಆಂಕರುಗಳು ತಾವೇ ಧರೆಗಿಳಿದ ದೇವರುಗಳು ಎಂಬ ಭ್ರಮೆಯಿಂದ ಹೊರಗೆ ಬರಬೇಕು. ಇಲ್ಲವಾದಲ್ಲಿ ಹೀಗೆ ಗಲೀಜಾಗಿ ಮಾತಾಡೋ ಡೀಸೆಂಟ್ ಅಲ್ಲದ ಆಂಕರ್ ಅನಿಸಿಕೊಳ್ಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಅಜಿತ್ ಹನುಮಕ್ಕನವರಿಗೆ ಹೀರೋ ಆಗುವ ತವಕ. ಈ ಟೀವಿಯವರಿಗೆ ಈತ ಒಂದು ನ್ಯೂಸೆನ್ಸ್ ಅನ್ನೋದು ಯಾಕೆ ಇಲ್ಲೀವರೆಗೂ ಅರ್ಥ ಆಗಿಲ್ಲ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...