Homeಕರ್ನಾಟಕನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಅವರದೇ ಚಾನೆಲ್‌‌ನಲ್ಲಿ ನಟಿ ಹನುಮಕ್ಕನವರ್‌‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ

- Advertisement -
- Advertisement -

ನಟಿ ಸಂಜನಾ ಗರ್ಲಾನಿ ಅವರು ಖಾಸಗಿ ಸುದ್ದಿ ವಾಹಿನಿ ಸುವರ್ಣ ಚಾನೆಲ್ ಆಂಕರ್‌‌ ಅಜಿತ್ ಹನುಮಕ್ಕನವರ್‌ ಅವರಿಗೆ, ಅವರದೇ ವಾಹಿನಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ಜನರು ನಟಿ ಸಂಜನಾ ಗಲ್ರಾನಿ ಅವರ ವಾದ ಸರಣಿಯನ್ನು ಅಭಿನಂದಿಸಿದ್ದಾರೆ.

ಸುವರ್ಣ ಚಾನೆಲ್ ಆಂಕರ್‌ ಅಜಿತ್ ಹನುಮಕ್ಕನವರ್‌ ಅವರು, ಕಾರು ಡ್ರೈವರ್‌ ಅವರೊಂದಿಗೆ ನಟಿ ಸಂಜನಾ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಕಾರ್ಯಕ್ರಮವೊಂದನ್ನು ನಡೆಸಿದ್ದರು. ಈ ಬಗ್ಗೆ ಸ್ಪಷ್ಟನೆಗಾಗಿ ಸಂಜನಾ ಅವರಿಗೆ ಸುವರ್ಣ ವಾಹಿನಿ ಕರೆ ಮಾಡಿತ್ತು. ಅವರ ಕರೆ ಸ್ವೀಕರಿಸುತ್ತಲೆ ಸಂಜನಾ, “ನಿಮ್ಮ ಚಾನೆಲ್‌ ಅವರು ನನ್ನೊಂದಿಗೆ ಮಾತನಾಡಲು ವಿನಂತಿ ಮಾಡಿದ್ದರು. ಆದರೆ ನಾನು ಮಾತನಾಡುವುದಕ್ಕೆ ಮೊದಲೇ ನನ್ನ ಬಗ್ಗೆ ತೀರ್ಮಾನ ತೆಗೆದುಕೊಂಡು ಬಿಟ್ಟಿದ್ದೀರಾ” ಎಂದು ಕಾರ್ಯಕ್ರಮಕ್ಕೆ ನೀಡಿರುವ ಶೀರ್ಷಿಕೆಯನ್ನು ಉಲ್ಲೇಖಿಸಿ ಹೇಳಿದ್ದರು.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ಕಾರ್ಯಕ್ರಮಕ್ಕೆ ‘ಕಿರಿಕ್ ಸಂಜನಾ’ ಎಂದು ಶೀರ್ಷಿಕೆ ನೀಡಲಾಗಿತ್ತು.

ಶೀರ್ಷಿಕೆಯ ಬಗ್ಗೆ ನಟಿ ಪ್ರಶ್ನಿಸಿದ್ದಕ್ಕೆ ಉದ್ದಟತನದಿಂದ ವರ್ತಿಸಿದ ಅಜಿತ್ ಅವರು, ಇನ್ನೇನು ಶೀರ್ಷಿಕೆ ನೀಡಬೇಕಿತ್ತು ಎಂದು ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಉತ್ತರಿಸಿದ ಸಂಜನಾ ಅವರು ತಮಗೆ ಆಗಿರುವ ಅನ್ಯಾಯದ ಬಗ್ಗೆ ಅಲ್ಲಿ ಹೇಳಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅಜಿತ್, ಸಂಜನಾರನ್ನು ಮಾತನಾಡಲು ಬಿಡದೆ, ಅವರ ಮಾತನ್ನು ತಿರುಚುವ ಪ್ರಯತ್ನ ಮಾಡಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಜನಾ, “ಮೊದಲನೆಯದಾಗಿ, ಮಾತನಾಡಲು ಒಂದು ರೀತಿಯಿರುತ್ತದೆ. ನೀವು ನಿಮ್ಮ ವಾದಕ್ಕೆ ಮಸಾಲೆ ಹಾಕಿಬಿಟ್ಟು ಈಗಾಗಲೆ ಒಂದು ತೀರ್ಮಾನಕ್ಕೆ ಬಂದುಬಿಟ್ಟಿದ್ದೀರಿ. ಇಷ್ಟೆಲ್ಲಾ ಆದ ನಂತರ ನನಗೆ ಯಾಕೆ ಫೋನ್ ಮಾಡಿ ಸ್ಪಷ್ಟನೆ ಕೇಳುತ್ತಿದ್ದೀರಾ?” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಅಜಿತ್, ಅಲ್ಲಿ ಏನು ನಡೆದಿದೆ ಎಂದು ಗೊತ್ತಾಗಬೇಕಲ್ವಾ ಎಂದು ಹೇಳಿದ್ದಾರೆ.

ನಂತರ ತಮ್ಮ ಮಾತನ್ನು ಮುಂದುವರೆಸಿದ ಸಂಜನಾ, “ಮರ್ಯಾದೆ ಕೊಟ್ಟು ಮಾತನಾಡಲು ಆಗಿಲ್ಲ ಅಂದರೆ ಯಾಕೆ ನನಗೆ ಫೋನ್ ಮಾಡಿ, ಸಮಯ ಕೊಡಿ ಎಂದು ವಿನಂತಿಸುತ್ತೀರಾ?” ಎಂದು ಕೇಳಿದ್ದಾರೆ. ಇದಕ್ಕೆ ಅಜಿತ್, “ನಾವು ನಿಮ್ಮ ವರ್ಷನ್ ತಗೊಂಡಿಲ್ಲ ಎಂದು ಆರೋಪ ಬರಬಾರದು ಅಲ್ವಾ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಇದಕ್ಕೆ ಮತ್ತೇ ಆಕ್ರೋಶಗೊಂಡ ಸಂಜನಾ, “ನನ್ನ ವರ್ಷನ್ ತಗೋ ಬೇಡಿ. ಈ ರೀತಿ ಒರಟಾಗಿ ಯಾರಾದರೂ ಮಾತನಾಡುತ್ತಾರ? ಅದೂ ಕೂಡಾ ಲೈವ್ ಅಲ್ಲಿ, ಇಡೀ ಕರ್ನಾಟಕ ನೋಡ್ತಾ ಇದೆ. ಈ ತರ ಒರಟಾಗಿ ಮತ್ತು ಗಲೀಜಾಗಿ ಮಾತನಾಡುವುದು ಸರಿಯಾ?” ಎಂದು ಹೇಳಿದ್ದಾರೆ.

ಇದಕ್ಕೆ, “ಹೇಗೆ ನಡೆದುಕೊಳ್ಳಬೇಕು ಎಂದು ನನಗೆ ಪಾಠ ಮಾಡಲು ಬರಬೇಡಿ” ಎಂದು ಅಜಿತ್ ಅವರು ಮತ್ತೇ ಉದ್ಧಟತನದಿಂದ ಮಾತನಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಸಂಜನಾ, “ನೀವು ಸಾರ್ವಜನಿಕವಾಗಿ ಹೇಗೆ ಬೇಕಾದರೂ ವರ್ತಿಸಿ. ಆದರೆ ನನ್ನೊಂದಿಗೆ ಹೀಗೆ ವರ್ತಿಸಬೇಡಿ. ಫೋನ್ ಮಾಡಿ, ‘ದಯವಿಟ್ಟು ಫೋನ್ ಅಲ್ಲಿ ಬನ್ನಿ ಮೇಡಂ’ ಅಂತ ಕೈಕಾಲ್ ಮುಗೀತೀರಾ. ಫೋನಲ್ಲಿ ಬಂದಾಗ ಕಿರಿಕ್ ಅಂತ ಹೇಳ್ತೀರಾ. ನಾಚಿಕೆ ಇಲ್ಲವೆ ನಿಮಗೆ? ಈ ಕರೆ ನನ್ನ ವಾದ ಏನೆಂದು ಕೇಳುವ ರೀತಿ ಇಲ್ಲ. ಮೊದಲಿಗೆ ಮರ್ಯಾದೆಯಾಗಿ ಮಾತನಾಡುವುದು ಕಲೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ, ನಮಗೆ ಎರಡೂ ಕಡೆಯ ವಾದಗಳು ಬೇಕು ಎನ್ನುದಕ್ಕಾಗಿ ನಿಮಗೆ ಕರೆ ಮಾಡಿದ್ದೇವೆ ಎಂದು ಅಜಿತ್ ಮತ್ತೇ ಹೇಳುತ್ತಾರೆ.

“ನಿಮಗೆ ಬೇಕಾದ್ರೆ ಬೇಕಾಗಲಿ. ನನಗೆ ನಿಮ್ಮ ಬಳಿ ಸ್ಪಷ್ಟನೆ ಕೊಡುವ ಅವಶ್ಯಕತೆ ಇಲ್ಲ. ಕಾರ್‌ ಕಂಪೆನಿ ಅವರೇ ನನ್ನೊಂದಿಗೆ ಕ್ಷಮೆ ಕೇಳಿದ್ದಾರೆ. ಮಹಿಳೆಯರೊಂದಿಗೆ ಹೇಗೆ ಮಾತನಾಡಬೇಕು ಎಂದು ಮೊದಲು ಕಲಿತುಕೊಳ್ಳಿ. ನಿಮಗೆ ನನ್ನೊಂದಿಗೆ ಈ ರೀತಿ ಮಾತನಾಡುವ ಅಧಿಕಾರ ಇಲ್ಲ. ಅದಕ್ಕೂ ಮೊದಲು ಒಬ್ಬ ಸಭ್ಯ ನಿರೂಪಕನ ಕೈಯ್ಯಲ್ಲಿ ಫೋನ್ ಮಾಡಿಸಿ. ಸಭ್ಯ ನಿರೂಪಕ ಮರ್ಯಾದೆ ಕೊಟ್ಟು ಮಾತನಾಡಿದರೆ ನಾನು ಖಂಡಿತಾ ಮಾತನಾಡುತ್ತೇನೆ” ಎಂದು ಹೇಳಿದ್ದ ಸಂಜನಾ ಅವರು ಫೋನ್ ಕಟ್ ಮಾಡಿದ್ದಾರೆ.

ಸಂಜನಾ ಅವರ ವಾದ ಸರಣಿ ಮತ್ತು ಪ್ರಸ್ತುತ ಕಾರ್ಯಕ್ರಮದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ನಟಿಯ ಮಾತುಗಳನ್ನು ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ಸಾಮಾಜಿಕ ಕಾರ್ಯಕರ್ತ ದಿನೇಶ್ ಕುಮಾರ ಅವರು, “ಟೀವಿ ಆಂಕರುಗಳು ಪ್ರತಿಕ್ರಿಯೆಗಳಿಗೆ ಫೋನ್ ಮಾಡಿದಾಗ ಕನಿಷ್ಠ ಸೌಜನ್ಯವನ್ನಾದರೂ ತೋರಿಸಬೇಕು. ಫೋನ್ ಕನೆಕ್ಟ್ ಮಾಡುವಾಗ ಅಂಗಲಾಚಿ ಬೇಡಿಕೊಳ್ಳೋದು, ಲೈವ್ ಟೆಲಿಕಾಸ್ಟ್‌ನಲ್ಲಿ ಬಾಯಿಗೆ ಬಂದಂತೆ ಮಾತಾಡೋದು ಮಾಡಿದರೆ ಯಾರಿಗಾದರೂ ಕೋಪ ಬರುತ್ತದೆ. ಇದೊಂಥರ ಉತ್ತರನ ಪೌರುಷ ಒಲೆ ಮುಂದೆ ಎಂಬಂತಾಗುತ್ತದೆ. ನಂಗೇನೋ ಸಂಜನಾ ಸರಿಯಾಗೇ ಮಾತಾಡಿದ್ದಾರೆ ಅನ್ನಿಸಿತು. ಟೀವಿ ಆಂಕರುಗಳು ತಾವೇ ಧರೆಗಿಳಿದ ದೇವರುಗಳು ಎಂಬ ಭ್ರಮೆಯಿಂದ ಹೊರಗೆ ಬರಬೇಕು. ಇಲ್ಲವಾದಲ್ಲಿ ಹೀಗೆ ಗಲೀಜಾಗಿ ಮಾತಾಡೋ ಡೀಸೆಂಟ್ ಅಲ್ಲದ ಆಂಕರ್ ಅನಿಸಿಕೊಳ್ಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಅಜಿತ್ ಹನುಮಕ್ಕನವರಿಗೆ ಹೀರೋ ಆಗುವ ತವಕ. ಈ ಟೀವಿಯವರಿಗೆ ಈತ ಒಂದು ನ್ಯೂಸೆನ್ಸ್ ಅನ್ನೋದು ಯಾಕೆ ಇಲ್ಲೀವರೆಗೂ ಅರ್ಥ ಆಗಿಲ್ಲ?

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...