Homeಕರ್ನಾಟಕನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್

ಅವರದೇ ಚಾನೆಲ್‌‌ನಲ್ಲಿ ನಟಿ ಹನುಮಕ್ಕನವರ್‌‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ

- Advertisement -
- Advertisement -

ನಟಿ ಸಂಜನಾ ಗರ್ಲಾನಿ ಅವರು ಖಾಸಗಿ ಸುದ್ದಿ ವಾಹಿನಿ ಸುವರ್ಣ ಚಾನೆಲ್ ಆಂಕರ್‌‌ ಅಜಿತ್ ಹನುಮಕ್ಕನವರ್‌ ಅವರಿಗೆ, ಅವರದೇ ವಾಹಿನಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು ಜನರು ನಟಿ ಸಂಜನಾ ಗಲ್ರಾನಿ ಅವರ ವಾದ ಸರಣಿಯನ್ನು ಅಭಿನಂದಿಸಿದ್ದಾರೆ.

ಸುವರ್ಣ ಚಾನೆಲ್ ಆಂಕರ್‌ ಅಜಿತ್ ಹನುಮಕ್ಕನವರ್‌ ಅವರು, ಕಾರು ಡ್ರೈವರ್‌ ಅವರೊಂದಿಗೆ ನಟಿ ಸಂಜನಾ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಕಾರ್ಯಕ್ರಮವೊಂದನ್ನು ನಡೆಸಿದ್ದರು. ಈ ಬಗ್ಗೆ ಸ್ಪಷ್ಟನೆಗಾಗಿ ಸಂಜನಾ ಅವರಿಗೆ ಸುವರ್ಣ ವಾಹಿನಿ ಕರೆ ಮಾಡಿತ್ತು. ಅವರ ಕರೆ ಸ್ವೀಕರಿಸುತ್ತಲೆ ಸಂಜನಾ, “ನಿಮ್ಮ ಚಾನೆಲ್‌ ಅವರು ನನ್ನೊಂದಿಗೆ ಮಾತನಾಡಲು ವಿನಂತಿ ಮಾಡಿದ್ದರು. ಆದರೆ ನಾನು ಮಾತನಾಡುವುದಕ್ಕೆ ಮೊದಲೇ ನನ್ನ ಬಗ್ಗೆ ತೀರ್ಮಾನ ತೆಗೆದುಕೊಂಡು ಬಿಟ್ಟಿದ್ದೀರಾ” ಎಂದು ಕಾರ್ಯಕ್ರಮಕ್ಕೆ ನೀಡಿರುವ ಶೀರ್ಷಿಕೆಯನ್ನು ಉಲ್ಲೇಖಿಸಿ ಹೇಳಿದ್ದರು.

ಇದನ್ನೂ ಓದಿ: ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ಕಾರ್ಯಕ್ರಮಕ್ಕೆ ‘ಕಿರಿಕ್ ಸಂಜನಾ’ ಎಂದು ಶೀರ್ಷಿಕೆ ನೀಡಲಾಗಿತ್ತು.

ಶೀರ್ಷಿಕೆಯ ಬಗ್ಗೆ ನಟಿ ಪ್ರಶ್ನಿಸಿದ್ದಕ್ಕೆ ಉದ್ದಟತನದಿಂದ ವರ್ತಿಸಿದ ಅಜಿತ್ ಅವರು, ಇನ್ನೇನು ಶೀರ್ಷಿಕೆ ನೀಡಬೇಕಿತ್ತು ಎಂದು ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಉತ್ತರಿಸಿದ ಸಂಜನಾ ಅವರು ತಮಗೆ ಆಗಿರುವ ಅನ್ಯಾಯದ ಬಗ್ಗೆ ಅಲ್ಲಿ ಹೇಳಿದ್ದಾರೆ. ಆದರೆ ಇಷ್ಟಕ್ಕೆ ಸುಮ್ಮನಾಗದ ಅಜಿತ್, ಸಂಜನಾರನ್ನು ಮಾತನಾಡಲು ಬಿಡದೆ, ಅವರ ಮಾತನ್ನು ತಿರುಚುವ ಪ್ರಯತ್ನ ಮಾಡಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಜನಾ, “ಮೊದಲನೆಯದಾಗಿ, ಮಾತನಾಡಲು ಒಂದು ರೀತಿಯಿರುತ್ತದೆ. ನೀವು ನಿಮ್ಮ ವಾದಕ್ಕೆ ಮಸಾಲೆ ಹಾಕಿಬಿಟ್ಟು ಈಗಾಗಲೆ ಒಂದು ತೀರ್ಮಾನಕ್ಕೆ ಬಂದುಬಿಟ್ಟಿದ್ದೀರಿ. ಇಷ್ಟೆಲ್ಲಾ ಆದ ನಂತರ ನನಗೆ ಯಾಕೆ ಫೋನ್ ಮಾಡಿ ಸ್ಪಷ್ಟನೆ ಕೇಳುತ್ತಿದ್ದೀರಾ?” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಅಜಿತ್, ಅಲ್ಲಿ ಏನು ನಡೆದಿದೆ ಎಂದು ಗೊತ್ತಾಗಬೇಕಲ್ವಾ ಎಂದು ಹೇಳಿದ್ದಾರೆ.

ನಂತರ ತಮ್ಮ ಮಾತನ್ನು ಮುಂದುವರೆಸಿದ ಸಂಜನಾ, “ಮರ್ಯಾದೆ ಕೊಟ್ಟು ಮಾತನಾಡಲು ಆಗಿಲ್ಲ ಅಂದರೆ ಯಾಕೆ ನನಗೆ ಫೋನ್ ಮಾಡಿ, ಸಮಯ ಕೊಡಿ ಎಂದು ವಿನಂತಿಸುತ್ತೀರಾ?” ಎಂದು ಕೇಳಿದ್ದಾರೆ. ಇದಕ್ಕೆ ಅಜಿತ್, “ನಾವು ನಿಮ್ಮ ವರ್ಷನ್ ತಗೊಂಡಿಲ್ಲ ಎಂದು ಆರೋಪ ಬರಬಾರದು ಅಲ್ವಾ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಇದಕ್ಕೆ ಮತ್ತೇ ಆಕ್ರೋಶಗೊಂಡ ಸಂಜನಾ, “ನನ್ನ ವರ್ಷನ್ ತಗೋ ಬೇಡಿ. ಈ ರೀತಿ ಒರಟಾಗಿ ಯಾರಾದರೂ ಮಾತನಾಡುತ್ತಾರ? ಅದೂ ಕೂಡಾ ಲೈವ್ ಅಲ್ಲಿ, ಇಡೀ ಕರ್ನಾಟಕ ನೋಡ್ತಾ ಇದೆ. ಈ ತರ ಒರಟಾಗಿ ಮತ್ತು ಗಲೀಜಾಗಿ ಮಾತನಾಡುವುದು ಸರಿಯಾ?” ಎಂದು ಹೇಳಿದ್ದಾರೆ.

ಇದಕ್ಕೆ, “ಹೇಗೆ ನಡೆದುಕೊಳ್ಳಬೇಕು ಎಂದು ನನಗೆ ಪಾಠ ಮಾಡಲು ಬರಬೇಡಿ” ಎಂದು ಅಜಿತ್ ಅವರು ಮತ್ತೇ ಉದ್ಧಟತನದಿಂದ ಮಾತನಾಡಿದ್ದಾರೆ.

ಇದಕ್ಕೆ ಉತ್ತರಿಸಿದ ಸಂಜನಾ, “ನೀವು ಸಾರ್ವಜನಿಕವಾಗಿ ಹೇಗೆ ಬೇಕಾದರೂ ವರ್ತಿಸಿ. ಆದರೆ ನನ್ನೊಂದಿಗೆ ಹೀಗೆ ವರ್ತಿಸಬೇಡಿ. ಫೋನ್ ಮಾಡಿ, ‘ದಯವಿಟ್ಟು ಫೋನ್ ಅಲ್ಲಿ ಬನ್ನಿ ಮೇಡಂ’ ಅಂತ ಕೈಕಾಲ್ ಮುಗೀತೀರಾ. ಫೋನಲ್ಲಿ ಬಂದಾಗ ಕಿರಿಕ್ ಅಂತ ಹೇಳ್ತೀರಾ. ನಾಚಿಕೆ ಇಲ್ಲವೆ ನಿಮಗೆ? ಈ ಕರೆ ನನ್ನ ವಾದ ಏನೆಂದು ಕೇಳುವ ರೀತಿ ಇಲ್ಲ. ಮೊದಲಿಗೆ ಮರ್ಯಾದೆಯಾಗಿ ಮಾತನಾಡುವುದು ಕಲೀರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ, ನಮಗೆ ಎರಡೂ ಕಡೆಯ ವಾದಗಳು ಬೇಕು ಎನ್ನುದಕ್ಕಾಗಿ ನಿಮಗೆ ಕರೆ ಮಾಡಿದ್ದೇವೆ ಎಂದು ಅಜಿತ್ ಮತ್ತೇ ಹೇಳುತ್ತಾರೆ.

“ನಿಮಗೆ ಬೇಕಾದ್ರೆ ಬೇಕಾಗಲಿ. ನನಗೆ ನಿಮ್ಮ ಬಳಿ ಸ್ಪಷ್ಟನೆ ಕೊಡುವ ಅವಶ್ಯಕತೆ ಇಲ್ಲ. ಕಾರ್‌ ಕಂಪೆನಿ ಅವರೇ ನನ್ನೊಂದಿಗೆ ಕ್ಷಮೆ ಕೇಳಿದ್ದಾರೆ. ಮಹಿಳೆಯರೊಂದಿಗೆ ಹೇಗೆ ಮಾತನಾಡಬೇಕು ಎಂದು ಮೊದಲು ಕಲಿತುಕೊಳ್ಳಿ. ನಿಮಗೆ ನನ್ನೊಂದಿಗೆ ಈ ರೀತಿ ಮಾತನಾಡುವ ಅಧಿಕಾರ ಇಲ್ಲ. ಅದಕ್ಕೂ ಮೊದಲು ಒಬ್ಬ ಸಭ್ಯ ನಿರೂಪಕನ ಕೈಯ್ಯಲ್ಲಿ ಫೋನ್ ಮಾಡಿಸಿ. ಸಭ್ಯ ನಿರೂಪಕ ಮರ್ಯಾದೆ ಕೊಟ್ಟು ಮಾತನಾಡಿದರೆ ನಾನು ಖಂಡಿತಾ ಮಾತನಾಡುತ್ತೇನೆ” ಎಂದು ಹೇಳಿದ್ದ ಸಂಜನಾ ಅವರು ಫೋನ್ ಕಟ್ ಮಾಡಿದ್ದಾರೆ.

ಸಂಜನಾ ಅವರ ವಾದ ಸರಣಿ ಮತ್ತು ಪ್ರಸ್ತುತ ಕಾರ್ಯಕ್ರಮದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ನಟಿಯ ಮಾತುಗಳನ್ನು ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ಸಾಮಾಜಿಕ ಕಾರ್ಯಕರ್ತ ದಿನೇಶ್ ಕುಮಾರ ಅವರು, “ಟೀವಿ ಆಂಕರುಗಳು ಪ್ರತಿಕ್ರಿಯೆಗಳಿಗೆ ಫೋನ್ ಮಾಡಿದಾಗ ಕನಿಷ್ಠ ಸೌಜನ್ಯವನ್ನಾದರೂ ತೋರಿಸಬೇಕು. ಫೋನ್ ಕನೆಕ್ಟ್ ಮಾಡುವಾಗ ಅಂಗಲಾಚಿ ಬೇಡಿಕೊಳ್ಳೋದು, ಲೈವ್ ಟೆಲಿಕಾಸ್ಟ್‌ನಲ್ಲಿ ಬಾಯಿಗೆ ಬಂದಂತೆ ಮಾತಾಡೋದು ಮಾಡಿದರೆ ಯಾರಿಗಾದರೂ ಕೋಪ ಬರುತ್ತದೆ. ಇದೊಂಥರ ಉತ್ತರನ ಪೌರುಷ ಒಲೆ ಮುಂದೆ ಎಂಬಂತಾಗುತ್ತದೆ. ನಂಗೇನೋ ಸಂಜನಾ ಸರಿಯಾಗೇ ಮಾತಾಡಿದ್ದಾರೆ ಅನ್ನಿಸಿತು. ಟೀವಿ ಆಂಕರುಗಳು ತಾವೇ ಧರೆಗಿಳಿದ ದೇವರುಗಳು ಎಂಬ ಭ್ರಮೆಯಿಂದ ಹೊರಗೆ ಬರಬೇಕು. ಇಲ್ಲವಾದಲ್ಲಿ ಹೀಗೆ ಗಲೀಜಾಗಿ ಮಾತಾಡೋ ಡೀಸೆಂಟ್ ಅಲ್ಲದ ಆಂಕರ್ ಅನಿಸಿಕೊಳ್ಳಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪತ್ರಿಕಾ ಧರ್ಮ ಹಳ್ಳ ಹಿಡಿಸಿರುವ ಯುದ್ಧೋನ್ಮಾದಿ ಸಂಪಾದಕರು: ಮದ್ದೆರೆಯಬೇಕಾದ ಸಾಂಸ್ಕೃತಿಕ ಲೋಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಅಜಿತ್ ಹನುಮಕ್ಕನವರಿಗೆ ಹೀರೋ ಆಗುವ ತವಕ. ಈ ಟೀವಿಯವರಿಗೆ ಈತ ಒಂದು ನ್ಯೂಸೆನ್ಸ್ ಅನ್ನೋದು ಯಾಕೆ ಇಲ್ಲೀವರೆಗೂ ಅರ್ಥ ಆಗಿಲ್ಲ?

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...