Homeಮುಖಪುಟಉಜ್ಜಯಿನಿ ದೇವಾಲಯಕ್ಕೆ ನಟಿ ಸಾರಾ ಅಲಿಖಾನ್ ಭೇಟಿ; ಪ್ರಾರ್ಥನೆ ಸಲ್ಲಿಕೆ

ಉಜ್ಜಯಿನಿ ದೇವಾಲಯಕ್ಕೆ ನಟಿ ಸಾರಾ ಅಲಿಖಾನ್ ಭೇಟಿ; ಪ್ರಾರ್ಥನೆ ಸಲ್ಲಿಕೆ

- Advertisement -
- Advertisement -

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅವರು ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಬುಧವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಅವರು ‘ಭಸ್ಮ ಆರತಿ’ಯಲ್ಲಿ ಪಾಲ್ಗೊಂಡಿದ್ದರು. ಭಸ್ಮ ಆರತಿ (ಭಸ್ಮದೊಂದಿಗೆ ಅರ್ಪಣೆ) ಇಲ್ಲಿನ ಪ್ರಸಿದ್ಧ ಆಚರಣೆಯಾಗಿದೆ. ಇದನ್ನು ಬೆಳಿಗ್ಗೆ 4 ರಿಂದ 5:30ರವರೆಗೆ ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ.

ಭಸ್ಮ ಆರತಿಯಲ್ಲಿ ಪಾಲ್ಗೊಳ್ಳಲು ದೇವಾಲಯದ ಸಮಿತಿಯ ಸಂಪ್ರದಾಯವನ್ನು ಅನುಸರಿಸಿ, ಅವರು ಗುಲಾಬಿ ಬಣ್ಣದ ಸೀರೆಯನ್ನು ಧರಿಸಿದ್ದರು. ಭಸ್ಮ ಆರತಿಯ ವೇಳೆ ಮಹಿಳೆಯರು ಸೀರೆ ಉಟ್ಟಿರುವುದು ಕಡ್ಡಾಯ ಎಂದು ಇಲ್ಲಿ ನಿಯಮ ಮಾಡಲಾಗಿದೆ.

ಭಸ್ಮ ಆರತಿಯ ವೇಳೆ ದೇವಸ್ಥಾನದ ನಂದಿಹಾಳದಲ್ಲಿ ಕುಳಿತು ಪೂಜೆ ಸಲ್ಲಿಸಿದರು. ಗರ್ಭಗುಡಿಯೊಳಗೆ ಸಾರಾ ಕೂಡ ಜಲಾಭಿಷೇಕ ನೆರವೇರಿಸಿದರು.

ಅವರು ಮಹಾಕಾಳ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಇದೇ ಮೊದಲೇನಲ್ಲ, ಸಾರಾ ಇಲ್ಲಿಗೆ ಅನೇಕ ಬಾರಿ ಬಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಭೇಟಿಯ ಸಮಯದಲ್ಲಿ, ಅವರು ದೇವಾಲಯದ ಆವರಣದಲ್ಲಿರುವ ಕೋಠಿ ತೀರ್ಥಕುಂಡದಲ್ಲಿ ನಿಂತು ಭಕ್ತಿ ತೋರಿದರು.

ಮತ್ತೊಂದೆಡೆ, ದೇವಾಲಯದ ಅರ್ಚಕ ಸಂಜಯ್ ಗುರು, “ಸಾರಾ ಅಲಿಖಾನ್ ಬಾಬಾ ಮಹಾಕಾಳನಲ್ಲಿ ಅಚಲವಾದ ನಂಬಿಕೆಯನ್ನು ಹೊಂದಿದ್ದಾರೆ. ಆದ್ದರಿಂದ, ಅವಳು ಆಗಾಗ್ಗೆ ಇಲ್ಲಿಗೆ ಭೇಟಿ ನೀಡುತ್ತಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಪೋಕ್ಸೋ ಪ್ರಕರಣದಲ್ಲಿ ತಕ್ಷಣದ ಬಂಧನವು ಬಿಜೆಪಿ ಆರೋಪಿಗೆ ಅನ್ವಯಿಸುವುದಿಲ್ಲವೇ?: ಕೇಂದ್ರಕ್ಕೆ ಸಿಬಲ್ ತರಾಟೆ

ಸಾರಾ ಅಲಿಖಾನ್‌ ಮತ್ತು ವಿಕ್ಕಿ ವಿಶಾಲ್ ಅಭಿನಯದ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಜೂನ್ 2ರಂದು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ದೇವಸ್ಥಾನದೊಳಗೆ ಹಾಲು ಮತ್ತು ಪ್ರಾರ್ಥನೆ ಸಲ್ಲಿಸುತ್ತಿರುವ ಕೇದಾರನಾಥ ಮೂಲದ ನಟಿ ಆಶೀರ್ವಾದ ಪಡೆಯುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಮುಂಬವರುವ ಸಿನಿಮಾದ ಹಿನ್ನೆಲೆಯಲ್ಲಿ ಸಾರಾ ಅವರು ವಿಕ್ಕಿ ವಿಶಾಲ್ ಅವರೊಂದಿಗೆ ದೇವರ ಆಶೀರ್ವಾದ ಪಡೆಯಲು ಲಕ್ನೋದ ಹನುಮಾನ್ ಸೇತು ದೇವಸ್ಥಾನಕ್ಕೂ ಭೇಟಿ ನೀಡಿದ್ದರು. ಅವರ ದೇವಸ್ಥಾನಕ್ಕೆ ಭೇಟಿ ನೀಡಿದ ಚಿತ್ರಗಳು ವೈರಲ್ ಆಗಿವೆ. ಲಕ್ನೋದಲ್ಲಿದ್ದಾಗ ಸಾರಾ ಅವರು ಅಲ್ಲಿನ ಸ್ಥಳೀಯ ಖಾದ್ಯವನ್ನು ಸೇವಿಸಿದ್ದರು.

ಸಾರಾ ಅಲಿ ಖಾನ್ ಮತ್ತು ವಿಕ್ಕಿ ಅವರು ‘ಜರಾ ಹಟ್ಕೆ ಜರಾ ಬಚ್ಕೆ’ಯೊಂದಿಗೆ ತೆರೆ ಮೇಲೆ ಕಾಣಸಿಕೊಳ್ಳಲಿದ್ದಾರೆ. ವಿಚ್ಛೇದನಾ ಪಡೆಯಲು ಮುಂದಾಗುವ ದಂಪತಿಗಳ ಕಥೆಯನ್ನು ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಹೊಂದಿದೆ. ಇದನ್ನು ಜಿಯೋ ಸ್ಟುಡಿಯೋಸ್ ಮತ್ತು ದಿನೇಶ್ ವಿಜನ್ ನಿರ್ಮಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...