Homeಮುಖಪುಟಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ನಟಿ ಶಿಲ್ಪಾ ಶೆಟ್ಟಿ ಮನವಿ

ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ನಟಿ ಶಿಲ್ಪಾ ಶೆಟ್ಟಿ ಮನವಿ

- Advertisement -
- Advertisement -

ಕೊರೊನಾ ವೈರಸ್ ಬಗ್ಗೆ ನಕಲಿ ಸುದ್ದಿಗಳ ಹರಡುತ್ತಿರುವುದರ ವಿರುದ್ದ ಹಾಗೂ ವೈದ್ಯರ ಮೇಲಿನ ದೌರ್ಜನ್ಯದ ವಿರುದ್ದ ನಟಿ ಶಿಲ್ಪಾ ಶೆಟ್ಟಿ ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಆರೋಗ್ಯ ಕಾರ್ಯಕರ್ತರ ವಿರುದ್ಧ ಆಗುತ್ತಿರುವ ಹಿಂಸಾಚಾರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರವೀನಾ ಟಂಡನ್ ಅವರ “ಜೀತೆಗಾ ಇಂಡಿಯಾ ಜೀತೇಂಗೆ ಹಮ್” ಅಭೀಯಾನದ ಭಾಗವಾಗಿ ಶಿಲ್ಪಾ ತಮ್ಮ ವಿಡಿಯೋ ಸಂದೇಶವನ್ನು ಹಂಚಿಕೊಂಡಿದ್ದಾರೆ.

ವೈದ್ಯರು, ದಾದಿಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆರೋಗ್ಯ ವೃತ್ತಿಪರರನ್ನು ಉಲ್ಲೇಖಿಸಿ “ಮಾನವೀಯತೆಯ ಹೆಸರಿನಲ್ಲಿ ನಾವು ಮಾಡಬಹುದಾದ ಕ್ರಮವವೇನೆಂದರೆ, ನಮ್ಮನ್ನು ಸುರಕ್ಷಿತವಾಗಿಡಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡುತ್ತಿರುವವರಿಗಾಗಿ ಧ್ವನಿ ಎತ್ತುವುದು” ಎಂದು ಶಿಲ್ಪಾ ಹೇಳಿದ್ದಾರೆ.

ಜೊತೆಗೆ ಕೊರೊನಾ ವೈರಸ್ ಸುಳ್ಳು ಮಾಹಿತಿಯ ಹರಡುವಿಕೆಯ ಬಗ್ಗೆ ಎಚ್ಚರವಾಗಿರುವಂತೆ ಶಿಲ್ಪಾ ಶೆಟ್ಟಿ ತನ್ನ ಇನ್ಸ್ಟ್ರಾಗ್ರಾಮ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಶಿಲ್ಪಾ ತನ್ನ ಲಾಕ್‌ಡೌನ್ ಜೀವನ ದೈನಂದಿನ ನೋಟವನ್ನು ಆಗಾಗ್ಗೆ ಹಂಚಿಕೊಳ್ಳುತ್ತಿದ್ದಾರೆ. ಇಂದು ಶಿಲ್ಪಾ “ನನ್ನ ಪ್ರೀತಿಯ, ರವೀನಾ ನನ್ನನ್ನು ನಾಮನಿರ್ದೇಶನ ಮಾಡಿದ್ದಕ್ಕಾಗಿ ಮತ್ತು ನಿಮ್ಮ ಈ ಅದ್ಭುತ ಕಾರ್ಯಕ್ರಮದಲ್ಲಿ ಭಾಗವಾಗಿಸಿದ್ದಕ್ಕಾಗಿ ಧನ್ಯವಾದಗಳು. ನನ್ನ ಎಲ್ಲ ಸಹ ನಾಗರಿಕರೆ ದಯವಿಟ್ಟು ನಮ್ಮ ಸಮುದಾಯವನ್ನು ಸುರಕ್ಷಿತವಾಗಿಡಲು ದಣಿವರಿಯಿಲ್ಲದೆ ಕೆಲಸ ಮಾಡುತ್ತಿರುವ ಯೋಧರ ಪರವಾಗಿ ನಿಂತುಕೊಳ್ಳಿ .. ಸುಳ್ಳು ವದಂತಿಗಳನ್ನು ಬಯಲು ಮಾಡಿ. ನಿಮ್ಮ ಮಟ್ಟದಲ್ಲಿ ನಕಲಿ ಸುದ್ದಿಗಳ ಹರಡುವಿಕೆಯನ್ನು ನಿಲ್ಲಿಸಬೇಕು ಎಂಬುದು ನನ್ನ ವಿನಮ್ರ ವಿನಂತಿಯಾಗಿದೆ. ಈ ಸಾಂಕ್ರಾಮಿಕ ರೋಗದ ವಿರುದ್ಧ ಒಗ್ಗಟ್ಟಾಗಿ ನಿಲ್ಲುವ ಸಮಯ ಇದು. ” ಎಂದಿದ್ದಾರೆ.

ಸಂದೇಶವನ್ನು ಹರಡಲು ಶಿಲ್ಪಾ ತನ್ನ ಸಹೋದರಿ ಶಮಿತಾ ಶೆಟ್ಟಿ, ಚಲನಚಿತ್ರ ನಿರ್ಮಾಪಕ ಫರಾ ಖಾನ್ ಮತ್ತು ನಟ ಅಭಿಮನ್ಯು ದಸ್ಸಾನಿಯನ್ನು ನಾಮಕರಣ ಮಾಡಿದರು.

View this post on Instagram

Thank you my dear, @officialraveenatandon for nominating me and making me a part of this amazing initiative of yours. To all my fellow citizens, please look out and stand up for the warriors who are tirelessly working round the clock to keep our community safe. It’s a humble request to please treat these heroes with respect, debunk myths & false rumours, and stop the spread of fake news at your own levels. Let’s do our bit too! It’s time to stand united against this pandemic. I nominate @shamitashetty_official @farahkhankunder and @abhimanyud to take this cause forward. . . . . . #SwasthRahoMastRaho #JeetegaIndia #JeetengeHum #IndiaFightsCorona #COVID19 #StayHomeStaySafe

A post shared by Shilpa Shetty Kundra (@theshilpashetty) on

ಈ ರೀತಿಯ ಕಾರ್ಯದಲ್ಲಿ ಕೈಜೋಡಿಸುವಂತೆ ರವೀನಾ, ಶಿಲ್ಪಾ ಶೆಟ್ಟಿಯ ಜೊತೆ ಸೋನು ಸೂದ್ ಅವರನ್ನು ಕೂಡಾ ನಾಮಕರಣ ಮಾಡಿದ್ದರು. ಈ ಮಧ್ಯೆ ಹ್ಯಾಪಿ ನ್ಯೂ ಇಯರ್ ನಟ ಕೊರೊನಾ ವಿರುದ್ದ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರು ಉಳಿಯಲು ತನ್ನ ಮುಂಬೈ ಹೋಟೆಲ್ ಅನ್ನು ತೆರೆದಿದ್ದಾರೆ. ತಮ್ಮ ಸಂದೇಶಗಳನ್ನು ಹಂಚಿಕೊಂಡ ರವೀನಾ, ಸೋನಾಲಿ ಕುಲಕರ್ಣಿ ಮತ್ತು ಚಲನಚಿತ್ರ ನಿರ್ಮಾಪಕ ಒನಿರ್ ಅವರನ್ನು ಕೂಡಾ ಟ್ಯಾಗ್ ಮಾಡಿದ್ದರು.


ಇದನ್ನೂ ಓದಿ: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ಹರಡಿದ 16 ಸುಳ್ಳು ಸುದ್ದಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...